Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 1:16 - ಕನ್ನಡ ಸಮಕಾಲಿಕ ಅನುವಾದ

16 ಅರಸನಿಗೆ, “ಯೆಹೋವ ದೇವರ ವಾಕ್ಯವನ್ನು ವಿಚಾರಿಸಲು ಇಸ್ರಾಯೇಲಿನಲ್ಲಿ ದೇವರಿಲ್ಲವೆಂಬ ಹಾಗೆ ನೀನು ಎಕ್ರೋನಿನ ದೇವರಾದ ಬಾಳ್ ಜೆಬೂಬನ್ನು ವಿಚಾರಿಸಲು ದೂತರನ್ನು ಕಳುಹಿಸಿದ ಕಾರಣ, ‘ನೀನು ಏರಿದ ಮಂಚದಿಂದ ಇಳಿಯದೆ ನಿಶ್ಚಯವಾಗಿ ಸಾಯುವೆ,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಂತರ ಎಲೀಯನು ಅರಸನಿಗೆ, “ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವುದಕ್ಕೆ ದೂತರನ್ನು ಕಳುಹಿಸಿದ್ದೇನು? ಅಂಥ ವಿಚಾರ ಮಾಡುವುದಕ್ಕೆ ಇಸ್ರಾಯೇಲರಲ್ಲಿ ದೇವರಿಲ್ಲವೋ? ನೀನು ಹೀಗೆ ಮಾಡಿದ್ದರಿಂದ ಹತ್ತಿದ ಮಂಚದಿಂದ ಇಳಿಯದೆ ಸಾಯಲೇಬೇಕು ಎಂಬುದಾಗಿ ಯೆಹೋವನು ಅನ್ನುತ್ತಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅರಸನಿಗೆ, “ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವುದಕ್ಕೆ ದೂತರನ್ನು ಕಳುಹಿಸಿದ್ದೇಕೆ? ಇಸ್ರಯೇಲರಲ್ಲಿ ದೇವರಿಲ್ಲವೆ? ಹೀಗೆ ಮಾಡಿದ್ದರಿಂದ ನೀವು ಹಿಡಿದ ಹಾಸಿಗೆಯಿಂದ ಏಳದೆ ಸಾಯಲೇಬೇಕು ಎಂಬುದಾಗಿ ಸರ್ವೇಶ್ವರ ಹೇಳಿದ್ದಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವದಕ್ಕೆ ದೂತರನ್ನು ಕಳುಹಿಸಿದ್ದೇನು? ಅಂಥ ವಿಚಾರಮಾಡುವದಕ್ಕೆ ಇಸ್ರಾಯೇಲ್ಯರಲ್ಲಿ ದೇವರಿಲ್ಲವೋ? ನೀನು ಹೀಗೆ ಮಾಡಿದ್ದರಿಂದ ಹತ್ತಿದ ಮಂಚದಿಂದಿಳಿಯದೆ ಸಾಯಲೇಬೇಕು ಎಂಬದಾಗಿ ಯೆಹೋವನು ಅನ್ನುತ್ತಾನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಎಲೀಯನು ಅಹಜ್ಯನಿಗೆ, “ಇಸ್ರೇಲಿನಲ್ಲಿ ದೇವರಿದ್ದಾನೆ. ಹೀಗಿರುವಾಗ ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ಪ್ರಶ್ನೆಗಳನ್ನು ಕೇಳಲು ಸಂದೇಶಕರನ್ನು ಏಕೆ ಕಳುಹಿಸಿದೆ? ನೀನು ಈ ಕಾರ್ಯವನ್ನು ಮಾಡಿದ್ದರಿಂದ ನಿನ್ನ ಹಾಸಿಗೆಯಿಂದ ನೀನು ಮೇಲಕ್ಕೇಳುವುದಿಲ್ಲ. ನೀನು ಅಲ್ಲೇ ಸಾಯುವೆ! ಎಂಬುದಾಗಿ ಯೆಹೋವನು ಅನ್ನುತ್ತಾನೆ.” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 1:16
13 ತಿಳಿವುಗಳ ಹೋಲಿಕೆ  

“ಯೆಹೋವ ದೇವರಿಗೆ ಒಂದು ಸ್ಥಳವನ್ನೂ, ಯಾಕೋಬನ ದೇವರಿಗೆ ನಿವಾಸವನ್ನೂ ಕಟ್ಟುವವರೆಗೆ ನಿಶ್ಚಯವಾಗಿ,


ಅದರಂತೆ ಗೇಹಜಿಯು ನಾಮಾನನ ಹಿಂದೆ ಹೋದನು. ನಾಮಾನನು ತನ್ನ ಹಿಂದೆ ಓಡಿ ಬರುವವನನ್ನು ಕಂಡಾಗ, ಅವನನ್ನು ಎದುರುಗೊಳ್ಳಲು ರಥದಿಂದ ಇಳಿದು ಅವನಿಗೆ, “ಎಲ್ಲಾ ಕ್ಷೇಮವೋ?” ಎಂದನು.


ಅದಕ್ಕೆ ಮೀಕಾಯನು, “ನೀನು ಸಮಾಧಾನದಿಂದ ನಿಜವಾಗಿ ಬಂದರೆ, ಯೆಹೋವ ದೇವರು ನನ್ನ ಮುಖಾಂತರ ಮಾತನಾಡಿಲ್ಲ, ಎಂದು ಹೇಳಿ; ಜನರೇ ನೀವೆಲ್ಲರೂ ನನ್ನ ಮಾತನ್ನು ಗಮನದಲ್ಲಿಡಿರಿ!” ಎಂದು ಕೂಗಿ ಹೇಳಿದನು.


ಅವರು ಅರಸನಿಗೆ, “ಒಬ್ಬ ಮನುಷ್ಯನು ನಮಗೆ ಎದುರಾಗಿ ಬಂದು, ‘ನೀವು ನಿಮ್ಮನ್ನು ಕಳುಹಿಸಿದ ಅರಸನ ಬಳಿಗೆ ಹಿಂದಿರುಗಿ ಹೋಗಿ, ಯೆಹೋವ ದೇವರು ಹೇಳುವುದು ಏನೆಂದರೆ: ಇಸ್ರಾಯೇಲಿನಲ್ಲಿ ದೇವರು ಇಲ್ಲವೆ? ನೀನು ಎಕ್ರೋನಿನ ದೇವರಾದ ಬಾಳ್ ಜೆಬೂಬನನ್ನು ವಿಚಾರಿಸಲು ಜನರನ್ನು ಕಳುಹಿಸಿರುತ್ತೀ? ಇದರ ನಿಮಿತ್ತ, ನೀನು ಏರಿದ ಮಂಚದಿಂದ ಇಳಿಯದೆ, ನಿಶ್ಚಯವಾಗಿ ಸಾಯುವೆ,’ ಎಂಬುದಾಗಿ ಅವನಿಗೆ ಹೇಳಿರಿ, ಎಂದು ತಿಳಿಸಿದನು,” ಎಂದರು.


ಆದ್ದರಿಂದ ನೀನು ಅವರ ಸಂಗಡ ಮಾತನಾಡಿ ಹೀಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಸ್ರಾಯೇಲಿನ ಮನೆತನದವರ ಪ್ರತಿಯೊಬ್ಬನೂ ತಮ್ಮ ವಿಗ್ರಹಗಳನ್ನು ತಮ್ಮ ಹೃದಯಗಳಲ್ಲಿ ನೆಲೆಗೊಳಿಸಿ, ತಮ್ಮ ಅಕ್ರಮದ ವಿಘ್ನಗಳನ್ನು ತಮ್ಮ ಮುಂದೆ ಇಟ್ಟುಕೊಂಡು ಪ್ರವಾದಿಯ ಬಳಿಗೆ ಬರುವ ಅವನಿಗೆ ಯೆಹೋವ ದೇವರಾದ ನಾನು ಅವರ ವಿಗ್ರಹಗಳ ಸಮೂಹಕ್ಕೆ ತಕ್ಕ ಹಾಗೆ ಉತ್ತರಕೊಡುವೆನು.


ಆಗ ಅರಸನು ಹಜಾಯೇಲನಿಗೆ, “ನೀನು ಕೈಯಲ್ಲಿ ಕಾಣಿಕೆಯನ್ನು ತೆಗೆದುಕೊಂಡುಹೋಗಿ ದೇವರ ಮನುಷ್ಯನನ್ನು ಎದುರುಗೊಂಡು, ಈ ವ್ಯಾಧಿಯಿಂದ ನಾನು ಗುಣವಾಗುವೆನೋ? ಎಂದು ಅವನಿಂದ ಯೆಹೋವ ದೇವರನ್ನು ವಿಚಾರಿಸು,” ಎಂದನು.


ಅದಕ್ಕೆ ಎಲೀಷನು, “ನೀನು ಹೋಗಿ ಅವನಿಗೆ, ನಿಜವಾಗಿಯೂ ಸ್ವಸ್ಥನಾಗುವೆ, ಎಂದು ಹೇಳು. ಆದರೆ ಅವನು ಸಾಯುವನೆಂದು ಯೆಹೋವ ದೇವರು ನನಗೆ ತೋರಿಸಿದ್ದಾರೆ,” ಎಂದನು.


ಆ ದಿವಸಗಳಲ್ಲಿ ಹಿಜ್ಕೀಯನು ರೋಗದಿಂದ ಮರಣಾವಸ್ಥೆಯಲ್ಲಿದ್ದನು. ಆಗ ಆಮೋಚನ ಮಗನಾದ ಪ್ರವಾದಿ ಯೆಶಾಯನು ಅವನ ಬಳಿಗೆ ಬಂದು ಅವನಿಗೆ, “ನೀನು ನಿನ್ನ ಮನೆಯನ್ನು ವ್ಯವಸ್ಥೆ ಮಾಡಿಕೋ, ಏಕೆಂದರೆ ನೀನು ಬದುಕದೆ ಸಾಯುವೆ, ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದು ಹೇಳಿದನು.


ನೀತಿವಂತನ ಮಾರ್ಗಗಳಲ್ಲಿ ಅಚಲವಾಗಿರುವವನು ಜೀವ ಹೊಂದುತ್ತಾನೆ, ಕೆಟ್ಟದ್ದನ್ನು ಬೆನ್ನಟ್ಟುವವನು ತನ್ನ ಮರಣವನ್ನು ಬೆನ್ನಟ್ಟುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು