Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 10:23 - ಕನ್ನಡ ಸಮಕಾಲಿಕ ಅನುವಾದ

23 ಆಗ ಯೇಹುವೂ, ರೇಕಾಬನ ಮಗ ಯೆಹೋನಾದಾಬನೂ ಬಾಳನ ದೇವಸ್ಥಾನದಲ್ಲಿ ಪ್ರವೇಶಿಸಿದರು. ಯೇಹುವು, “ಬಾಳನನ್ನು ಸೇವಿಸುವವರ ಹೊರತು ಅವರ ಸಂಗಡ ಯೆಹೋವ ದೇವರ ಸೇವಕರಲ್ಲಿ ಒಬ್ಬನೂ ಇರದ ಹಾಗೆ ಪರಿಶೋಧಿಸಿ ನೋಡಿರಿ,” ಎಂದು ಬಾಳನನ್ನು ಸೇವಿಸುವವರಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅನಂತರ ಯೇಹುವು ರೇಕಾಬನ ಮಗನಾದ ಯೆಹೋನಾದಾಬನೊಡನೆ ದೇವಸ್ಥಾನವನ್ನು ಪ್ರವೇಶಿಸಿ ಬಾಳ್ ದೇವತೆಯನ್ನು ಸೇವಿಸುವ ಭಕ್ತರಿಗೆ, “ಯೆಹೋವನ ಭಕ್ತರು ನಿಮ್ಮ ಮಧ್ಯದಲ್ಲಿ ಬಂದಿರುತ್ತಾರೋ? ವಿಚಾರಿಸಿ ನೋಡಿರಿ. ಬಾಳ್ ದೇವತೆಯ ಭಕ್ತರು ಮಾತ್ರ ಇಲ್ಲಿರಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅನಂತರ ಯೇಹುವು ರೇಕಾಬನ ಮಗ ಯೆಹೋನಾದಾಬನೊಡನೆ ದೇವಸ್ಥಾನವನ್ನು ಪ್ರವೇಶಿಸಿ ಬಾಳ್ ದೇವತೆಯ ಭಕ್ತರಿಗೆ, “ಸರ್ವೇಶ್ವರನ ಭಕ್ತರು ನಿಮ್ಮ ಮಧ್ಯೆ ಬಂದಿರುತ್ತಾರೋ ವಿಚಾರಿಸಿ ನೋಡಿ; ಬಾಳನ ಭಕ್ತರು ಮಾತ್ರ ಇಲ್ಲಿರಬೇಕು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅನಂತರ ಯೇಹುವು ರೇಕಾಬನ ಮಗನಾದ ಯೆಹೋನಾದಾಬನೊಡನೆ ದೇವಸ್ಥಾನವನ್ನು ಪ್ರವೇಶಿಸಿ ಬಾಳನ ಭಕ್ತರಿಗೆ - ಯೆಹೋವನ ಭಕ್ತರು ನಿಮ್ಮ ಮಧ್ಯದಲ್ಲಿ ಬಂದಿರುತ್ತಾರೋ ವಿಚಾರಿಸಿ ನೋಡಿರಿ; ಬಾಳನ ಭಕ್ತರು ಮಾತ್ರ ಅಲ್ಲಿರಬೇಕು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆಗ ಯೇಹು ಮತ್ತು ರೇಕಾಬನ ಮಗನಾದ ಯೆಹೋನಾದಾಬನು ಬಾಳನ ಆಲಯದೊಳಕ್ಕೆ ಹೋದರು. ಯೇಹು ಬಾಳನ ಭಕ್ತರಿಗೆ, “ಯೆಹೋವನ ಸೇವಕರು ಯಾರೂ ನಿಮ್ಮೊಡನೆ ಇಲ್ಲವೆಂಬುದನ್ನು ಸುತ್ತಲೂ ನೋಡಿ ಖಚಿತಪಡಿಸಿಕೊಳ್ಳಿ. ಬಾಳನ ಭಕ್ತರಾದ ಜನರು ಮಾತ್ರ ಇಲ್ಲಿದ್ದಾರೆಂಬುದನ್ನು ಖಚಿತಪಡಿಸಿಕೊಳ್ಳಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 10:23
7 ತಿಳಿವುಗಳ ಹೋಲಿಕೆ  

ಮನುಷ್ಯಪುತ್ರನು ತನ್ನ ದೂತರನ್ನು ಕಳುಹಿಸುವನು. ಅವರು ಪಾಪಕ್ಕೆ ಆತಂಕವಾದ ಎಲ್ಲವನ್ನೂ, ಕೇಡುಮಾಡುವ ಎಲ್ಲರನ್ನೂ ಆತನ ರಾಜ್ಯದೊಳಗಿಂದ ಕೂಡಿಸಿ,


ಸುಗ್ಗಿಯ ಕಾಲದವರೆಗೆ ಎರಡೂ ಜೊತೆಯಲ್ಲಿ ಬೆಳೆಯಲಿ. ಸುಗ್ಗಿಯ ಕಾಲದಲ್ಲಿ ನಾನು ಕೊಯ್ಯುವವರಿಗೆ: ಮೊದಲು ಕಳೆಯನ್ನು ಕೂಡಿಸಿ ಅವುಗಳನ್ನು ಸುಡುವುದಕ್ಕೆ ಬೇರೆ ಕಟ್ಟಿಡಿರಿ, ಗೋಧಿಯನ್ನು ನನ್ನ ಕಣಜದಲ್ಲಿ ಕೂಡಿಸಿರಿ ಎಂದು ಹೇಳುವೆನು,’ ಅಂದನು.”


ಆದರೆ ಸೌಲನ ಮಗನಿಗೆ ಸೇನಾಪತಿಗಳು ಇಬ್ಬರಿದ್ದರು. ಒಬ್ಬನ ಹೆಸರು ಬಾಣನು. ಮತ್ತೊಬ್ಬನ ಹೆಸರು ರೇಕಾಬನು. ಇವರು ಬೆನ್ಯಾಮೀನ್ ಗೋತ್ರದಲ್ಲಿ ಬೇರೋತ್ ಗ್ರಾಮದವನಾದ ರಿಮ್ಮೋನನ ಮಕ್ಕಳು. ಏಕೆಂದರೆ ಬೇರೋತ್ ಬೆನ್ಯಾಮೀನ್ಯರಿಗೆ ಸೇರಿದ ಗ್ರಾಮ.


ಆಗ ಅವನು ವಸ್ತ್ರಗಳ ಮನೆಯ ಮೇಲಧಿಕಾರಿಗೆ, “ಬಾಳನನ್ನು ಸೇವಿಸುವ ಸಮಸ್ತರಿಗೋಸ್ಕರ ವಸ್ತ್ರಗಳನ್ನು ತೆಗೆದುಕೊಂಡು ಬಾ,” ಎಂದು ಹೇಳಿದ್ದರಿಂದ, ಅವನು ಅವರಿಗೋಸ್ಕರ ವಸ್ತ್ರಗಳನ್ನು ತೆಗೆದುಕೊಂಡು ಬಂದನು.


ಅವರು ಬಲಿಗಳನ್ನೂ, ದಹನಬಲಿಗಳನ್ನೂ ಅರ್ಪಿಸಲು ಒಳಗೆ ಪ್ರವೇಶಿಸಿದ ತರುವಾಯ, ಯೇಹುವು ಹೊರಗೆ ಎಂಬತ್ತು ಮಂದಿಯನ್ನು ಇರಿಸಿಕೊಂಡು ಅವರಿಗೆ, “ನಾನು ನಿಮ್ಮ ಕೈಗೆ ಒಪ್ಪಿಸಿದ ಮನುಷ್ಯರಲ್ಲಿ ಯಾವನಾದರೂ ತಪ್ಪಿಸಿಕೊಂಡುಹೋದರೆ, ಅವನ ಪ್ರಾಣಕ್ಕೆ ನಿಮ್ಮ ಪ್ರಾಣ ಈಡಾಗಿರುವುದು,” ಎಂದನು.


ಆದರೆ ಅವರು, “ನಾವು ದ್ರಾಕ್ಷಾರಸ ಕುಡಿಯುವುದಿಲ್ಲ; ಏಕೆಂದರೆ ನಮ್ಮ ಪೂರ್ವಜನಾದ ರೇಕಾಬನ ಮಗ ಯೋನಾದಾಬನು ನಮಗೆ ಈ ಆಜ್ಞೆಯನ್ನು ಕೊಟ್ಟನು. ಅದು ಏನೆಂದರೆ ನೀವಾದರೂ, ನಿಮ್ಮ ಮಕ್ಕಳಾದರೂ ಎಂದೆಂದಿಗೂ ದ್ರಾಕ್ಷಾರಸವನ್ನು ಕುಡಿಯಬೇಡಿರಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು