Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 10:25 - ಕನ್ನಡ ಸಮಕಾಲಿಕ ಅನುವಾದ

25 ಅವನು ದಹನಬಲಿಯನ್ನು ಅರ್ಪಿಸಿ ತೀರಿಸಿದ ತರುವಾಯ, ಯೇಹುವು ಕಾವಲುಗಾರರಿಗೂ, ಅಧಿಪತಿಗಳಿಗೂ, “ನೀವು ಒಳಗೆ ಹೋಗಿ ಯಾವನೂ ಹೊರಗೆ ಬಾರದ ಹಾಗೆ ಅವರನ್ನು ಸಂಹರಿಸಿರಿ,” ಎಂದನು. ಹಾಗೆಯೇ ಅವರು ಒಳಗೆ ಹೋಗಿ ಅವರನ್ನು ಖಡ್ಗದಿಂದ ಸಂಹರಿಸಿ ಅವರ ಶವಗಳನ್ನು ಹೊರಗೆ ಹಾಕಿದ ತರುವಾಯ, ಬಾಳನ ಗರ್ಭಗುಡಿಯನ್ನು ಪ್ರವೇಶಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಸರ್ವಾಂಗಹೋಮವನ್ನು ಅರ್ಪಿಸಿದ ಕೂಡಲೆ ಯೇಹುವು ಕಾವಲುಗಾರರಿಗೂ, ಸೇನಾಧಿಪತಿಗಳಿಗೂ, “ಒಳಗೆ ಹೋಗಿ ಅವರೆಲ್ಲರನ್ನೂ ಸಂಹರಿಸಿರಿ. ಒಬ್ಬನೂ ತಪ್ಪಿಸಿಕೊಳ್ಳಬಾರದು” ಎಂದು ಆಜ್ಞಾಪಿಸಿದನು. ಅವರು ಒಳಗೆ ಹೋಗಿ ಅವರನ್ನು ಕತ್ತಿಯಿಂದ ಕೊಂದು ಅವರ ಶವಗಳನ್ನು ಹೊರಗೆ ಹಾಕಿ ಬಾಳ್ ದೇವತೆಯ ದೇವಸ್ಥಾನಕ್ಕೆ ಸೇರಿದ ಪಟ್ಟಣವನ್ನು ಪ್ರವೇಶಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ದಹನಬಲಿಯನ್ನು ಅರ್ಪಿಸಿದ ಕೂಡಲೆ ಯೇಹುವು ಕಾವಲುಗಾರರಿಗೂ ಸೇನಾಪತಿಗಳಿಗೂ, “ಒಳಗೆ ಹೋಗಿ ಅವರನ್ನೆಲ್ಲಾ ಸಂಹರಿಸಿರಿ; ಒಬ್ಬನೂ ತಪ್ಪಿಸಿಕೊಳ್ಳಕೂಡದು,” ಎಂದು ಹೇಳಿದನು. ಅವರು ಒಳಗೆ ಹೋಗಿ ಅವರನ್ನು ಕತ್ತಿಯಿಂದ ಕೊಂದು ಅವರ ಶವಗಳನ್ನು ಹೊರಗೆ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಸರ್ವಾಂಗಹೋಮವನ್ನು ಅರ್ಪಿಸಿದ ಕೂಡಲೆ ಯೇಹುವು ಕಾವಲುಗಾರರಿಗೂ ಸೇನಾಪತಿಗಳಿಗೂ - ಒಳಗೆ ಹೋಗಿ ಅವರನ್ನೆಲ್ಲಾ ಸಂಹರಿಸಿರಿ; ಒಬ್ಬನೂ ತಪ್ಪಿಸಿಕೊಳ್ಳಕೂಡದು ಎಂದು ಹೇಳಿದನು. ಅವರು ಒಳಗೆ ಹೋಗಿ ಅವರನ್ನು ಕತ್ತಿಯಿಂದ ಕೊಂದು ಅವರ ಶವಗಳನ್ನು ಹೊರಗೆ ಹಾಕಿ ಬಾಳನ ದೇವಸ್ಥಾನಕ್ಕೆ ಸೇರಿದ ಕೇರಿಯನ್ನು ಪ್ರವೇಶಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಯೇಹುವು ಸರ್ವಾಂಗಹೋಮಗಳನ್ನು ಅರ್ಪಿಸಿದ ತಕ್ಷಣ, ಕಾವಲುಗಾರರಿಗೂ ಸೇನಾಧಿಪತಿಗಳಿಗೂ, “ಒಳಕೋಣೆಗೆ ಹೋಗಿ ಬಾಳನ ಆರಾಧಕರನ್ನೆಲ್ಲ ಕೊಂದುಹಾಕಿ! ಜೀವಸಹಿತ ಯಾರೂ ಆಲಯದಿಂದ ಹೊರಕ್ಕೆ ಬರಲು ಬಿಡಬೇಡಿ!” ಎಂದು ಹೇಳಿದನು. ಸೇನಾಧಿಪತಿಗಳು ಚೂಪಾದ ಖಡ್ಗದಿಂದ ಬಾಳನ ಭಕ್ತರನ್ನೆಲ್ಲ ಕೊಂದುಹಾಕಿದರು. ಬಾಳನ ಭಕ್ತರ ದೇಹಗಳನ್ನು ಕಾವಲುಗಾರರು ಮತ್ತು ಸೇನಾಧಿಪತಿಗಳು ಹೊರಕ್ಕೆ ಎಸೆದರು. ನಂತರ ಆ ಕಾವಲುಗಾರರು ಮತ್ತು ಸೇನಾಧಿಪತಿಗಳು ಬಾಳನ ಆಲಯದ ಒಳಕೋಣೆಯನ್ನು ಪ್ರವೇಶಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 10:25
10 ತಿಳಿವುಗಳ ಹೋಲಿಕೆ  

ಆಗ ಎಲೀಯನು ಅವರಿಗೆ, “ನೀವು ಬಾಳನ ಪ್ರವಾದಿಗಳನ್ನು ಹಿಡಿಯಿರಿ. ಅವರಲ್ಲಿ ಒಬ್ಬನೂ ತಪ್ಪಿಸಿಕೊಳ್ಳದೆ ಇರಲಿ,” ಎಂದನು. ಇವರು ಅವರನ್ನು ಹಿಡಿದರು. ಎಲೀಯನು ಅವರನ್ನು ಕೀಷೋನು ಹಳ್ಳದ ಬಳಿಗೆ ತೆಗೆದುಕೊಂಡುಹೋಗಿ ಅಲ್ಲಿ ಅವರನ್ನು ಕೊಂದುಹಾಕಿದನು.


ಆಗ ಅವನು ಅವರಿಗೆ, “ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ಪ್ರತಿಯೊಬ್ಬನು ತನ್ನ ಖಡ್ಗವನ್ನು ಪಕ್ಕದಲ್ಲಿ ಕಟ್ಟಿಕೊಂಡು ಪಾಳೆಯದಲ್ಲೆಲ್ಲಾ ಒಂದು ದ್ವಾರದಿಂದ ಇನ್ನೊಂದು ದ್ವಾರಕ್ಕೆ ಹೋಗಿ ಹೋಗುತ್ತಾ ಬರುತ್ತಾ ತನ್ನ ಸಹೋದರನನ್ನೂ, ತನ್ನ ಜೊತೆಗಾರನನ್ನೂ ಮತ್ತು ನೆರೆಹೊರೆಯವನೆಂದು ಲಕ್ಷಿಸದೆ ಕೊಲ್ಲಲಿ,’ ” ಎಂದು ಹೇಳಿದನು.


“ಯೆಹೋವ ದೇವರು ಹೊರತಾಗಿ ಮತ್ತೊಬ್ಬ ದೇವರಿಗೆ ಯಜ್ಞ ಅರ್ಪಿಸುವವನು ಸಂಪೂರ್ಣವಾಗಿ ನಾಶವಾಗಬೇಕು.


ಅರಸನು ತನ್ನ ಬಳಿಯಲ್ಲಿ ನಿಂತಿರುವ ಕಾಲಾಳಿಗೆ, “ನೀವು ತಿರುಗಿಕೊಂಡು ಯೆಹೋವ ದೇವರ ಯಾಜಕರನ್ನು ಕೊಂದುಹಾಕಿರಿ. ಏಕೆಂದರೆ ಅವರ ಕೈ ದಾವೀದನಿಗೆ ಸಹಾಯಕವಾಗಿದೆ. ಅವನು ಓಡಿ ಹೋಗುವುದನ್ನು ಅವರು ತಿಳಿದಿದ್ದು, ಅದನ್ನು ನನಗೆ ತಿಳಿಸದೆ ಹೋದರು,” ಎಂದನು. ಆದರೆ ಅರಸನ ಸೇವಕರು ಯೆಹೋವ ದೇವರ ಯಾಜಕರ ಮೇಲೆ ತಮ್ಮ ಕೈಯನ್ನು ಚಾಚಲೊಲ್ಲದೆ ಹೋದರು.


ಅಲ್ಲಿದ್ದ ಉನ್ನತ ಪೂಜಾಸ್ಥಳಗಳ ಯಾಜಕರನ್ನೆಲ್ಲಾ ಬಲಿಪೀಠಗಳ ಮೇಲೆ ಕೊಂದುಹಾಕಿ, ಅವುಗಳ ಮೇಲೆ ಮನುಷ್ಯರ ಎಲುಬುಗಳನ್ನು ಸುಟ್ಟು, ಯೋಷೀಯನು ಯೆರೂಸಲೇಮಿಗೆ ತಿರುಗಿಬಂದನು.


ದೇಶದ ಜನರೆಲ್ಲರೂ ಬಾಳನ ದೇವಸ್ಥಾನಕ್ಕೆ ಹೋಗಿ ಅದನ್ನು ಕೆಡವಿಹಾಕಿ, ಅದರ ಬಲಿಪೀಠಗಳನ್ನೂ, ವಿಗ್ರಹಗಳನ್ನೂ ಸಂಪೂರ್ಣವಾಗಿ ತುಂಡುತುಂಡಾಗಿ ಒಡೆದುಬಿಟ್ಟು, ಬಲಿಪೀಠಗಳ ಮುಂದೆ ಬಾಳನ ಯಾಜಕನಾದ ಮತ್ತಾನನನ್ನು ಕೊಂದುಹಾಕಿದರು. ಆಗ ಯಾಜಕನಾದ ಯೆಹೋಯಾದಾವನು ಯೆಹೋವ ದೇವರ ಆಲಯಕ್ಕೆ ಕಾವಲುಗಾರರನ್ನು ನೇಮಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು