Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 10:9 - ಕನ್ನಡ ಸಮಕಾಲಿಕ ಅನುವಾದ

9 ಮರುದಿನ ಬೆಳಿಗ್ಗೆ ಯೇಹು ಹೊರಗೆ ಬಂದು, ಸಕಲ ಜನರ ಮುಂದೆ ನಿಂತು, “ನೀವು ನಿರಪರಾಧಿಗಳು. ನಾನು ನನ್ನ ಯಜಮಾನನ ಮೇಲೆ ಒಳಸಂಚುಮಾಡಿ, ಅವನನ್ನು ಕೊಂದುಹಾಕಿದೆನು. ಆದರೆ ಇವರೆಲ್ಲರನ್ನು ಸಂಹರಿಸಿದವರ‍್ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಮರುದಿನ ಬೆಳಿಗ್ಗೆ ಯೇಹುವು ಅವುಗಳ ಹತ್ತಿರ ಹೋಗಿ ಎಲ್ಲಾ ಜನರ ಎದುರಿಗೆ ನಿಂತು ಅವರಿಗೆ, “ನೀವು ನಿರಪರಾಧಿಗಳು, ನಾನಾದರೋ ನನ್ನ ಯಜಮಾನನಿಗೆ ವಿರೋಧವಾಗಿ ಒಳಸಂಚು ಮಾಡಿ ಅವನನ್ನು ಕೊಂದವನು, ಆದರೆ ಇವರನ್ನೆಲ್ಲಾ ಹತಿಸಿದವರಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಮರುದಿನ ಬೆಳಿಗ್ಗೆ ಅವನು ಅವುಗಳ ಹತ್ತಿರ ಹೋಗಿ ಎಲ್ಲಾ ಜನರ ಎದುರಿಗೆ ನಿಂತು, “ನೀವು ನಿರಪರಾಧಿಗಳು; ನಾನಾದರೋ ನನ್ನ ಯಜಮಾನನಿಗೆ ವಿರೋಧವಾಗಿ ಒಳಸಂಚುಮಾಡಿ ಅವನನ್ನು ಕೊಂದವನು; ಆದರೆ ಇವರನ್ನೆಲ್ಲಾ ಹತಿಸಿದವರಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಮರುದಿನ ಬೆಳಿಗ್ಗೆ ಅವನು ಅವುಗಳ ಹತ್ತಿರ ಹೋಗಿ ಎಲ್ಲಾ ಜನರ ಎದುರಿಗೆ ನಿಂತು ಅವರಿಗೆ - ನೀವು ನಿರಪರಾಧಿಗಳು; ನಾನಾದರೋ ನನ್ನ ಯಜಮಾನನಿಗೆ ವಿರೋಧವಾಗಿ ಒಳಸಂಚುಮಾಡಿ ಅವನನ್ನು ಕೊಂದವನು; ಆದರೆ ಇವರನ್ನೆಲ್ಲಾ ಹತಿಸಿದವರಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಮುಂಜಾನೆ, ಯೇಹು ಹೊರಗೆ ಬಂದು ಜನರ ಮುಂದೆ ನಿಂತು ಅವರಿಗೆ, “ನೀವು ನಿರಪರಾಧಿಗಳು. ನಾನಾದರೋ ನನ್ನ ಒಡೆಯನ ಮೇಲೆ ಒಳಸಂಚು ಮಾಡಿದವನು. ನಾನು ಅವನನ್ನು ಕೊಂದೆನು. ಆದರೆ ಅಹಾಬನ ಮಕ್ಕಳನ್ನೆಲ್ಲ ಕೊಂದವರು ಯಾರು? ನೀವು ಅವರನ್ನು ಕೊಂದಿದ್ದೀರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 10:9
7 ತಿಳಿವುಗಳ ಹೋಲಿಕೆ  

ಆಗ ಯೆಹೋವ ದೇವರು ಹೋಶೇಯನಿಗೆ, “ಈ ಮಗುವಿಗೆ ಇಜ್ರೆಯೇಲ್ ಎಂದು ಹೆಸರಿಡು. ಏಕೆಂದರೆ ಶೀಘ್ರದಲ್ಲಿಯೇ ನಾನು ಇಜ್ರೆಯೇಲ್ ಕಣಿವೆಯಲ್ಲಿ ರಕ್ತವನ್ನು ಸುರಿಸಿದ ಯೇಹುವಿನ ಮನೆತನದವರ ಮೇಲೆ ಮುಯ್ಯಿತೀರಿಸಿಕೊಳ್ಳುವೆನು. ಇಸ್ರಾಯೇಲ್ ರಾಜ್ಯವನ್ನು ಅಂತ್ಯಗೊಳಿಸುವೆನು.


“ಯೆರೂಸಲೇಮಿನ ನಿವಾಸಿಗಳೇ, ಯೆಹೂದದ ಮನುಷ್ಯರೇ, ನನಗೂ ನನ್ನ ದ್ರಾಕ್ಷಿ ತೋಟಕ್ಕೂ ನ್ಯಾಯತೀರಿಸಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ನಾನು ಇಲ್ಲಿದ್ದೇನೆ. ಯೆಹೋವ ದೇವರ ಮುಂದೆಯೂ, ಅವರ ಅಭಿಷಿಕ್ತನ ಮುಂದೆಯೂ ನನಗೆ ವಿರೋಧವಾಗಿ ಸಾಕ್ಷಿ ಕೊಡಿರಿ. ನಾನು ಯಾರ ಎತ್ತನ್ನಾದರೂ, ಕತ್ತೆಯನ್ನಾದರೂ ತೆಗೆದುಕೊಂಡೆನೋ? ಯಾರಿಗಾದರೂ ವಂಚನೆ ಮಾಡಿದೆನೋ? ಯಾರನ್ನಾದರೂ ಹಿಂಸಿಸಿದೆನೋ? ಯಾರಿಂದಲಾದರೂ ಕಣ್ಣಿಗೆ ಮರೆಮಾಡುವ ಲಂಚವನ್ನು ತೆಗೆದುಕೊಂಡೆನೋ? ಹೀಗಿದ್ದರೆ ಹೇಳಿರಿ, ತಿರುಗಿಕೊಡುತ್ತೇನೆ,” ಎಂದನು.


ಆಗ ಯೇಹುವು ಅವರಿಗೆ ಎರಡನೆಯ ಸಾರಿ ಪತ್ರವನ್ನು ಬರೆದು, “ನೀವು ನನ್ನವರಾಗಿದ್ದು ನನ್ನ ಮಾತು ಕೇಳುವವರಾಗಿದ್ದರೆ, ನಾಳೆ ಇಷ್ಟು ಹೊತ್ತಿಗೆ ಇಜ್ರೆಯೇಲ್ ಪಟ್ಟಣಕ್ಕೆ ನಿಮ್ಮ ಯಜಮಾನನ ಪುತ್ರರ ತಲೆಗಳನ್ನು ತೆಗೆದುಕೊಂಡು ನನ್ನ ಬಳಿಗೆ ಬನ್ನಿರಿ,” ಎಂದು ಹೇಳಿದನು. ಆದರೆ ಅರಸನ ಮಕ್ಕಳಾದ ಎಪ್ಪತ್ತು ಮಂದಿ ಮನುಷ್ಯರು ಪಟ್ಟಣದ ಪ್ರಮುಖರ ಬಳಿಯಲ್ಲಿ ಇದ್ದರು. ಅವರು ಅವರನ್ನು ಪೋಷಿಸುತ್ತಿದ್ದರು.


ಆಗ ಆ ಸೇವಕನು ಬಂದು ಯೇಹುವಿಗೆ, “ರಾಜಪುತ್ರರ ತಲೆಗಳನ್ನು ತೆಗೆದುಕೊಂಡು ಬಂದಿದ್ದಾರೆ,” ಎಂದು ತಿಳಿಸಿದನು. ಅದಕ್ಕೆ ಯೇಹು, “ಉದಯಕಾಲದವರೆಗೂ ಅವುಗಳನ್ನು ಹೆಬ್ಬಾಗಿಲಿನಲ್ಲಿ ಎರಡು ರಾಶಿಗಳಾಗಿ ಹಾಕಿರಿ,” ಎಂದು ಆಜ್ಞಾಪಿಸಿದನು.


ಅವನ ಸೇವಕರಾದ ಶಿಮೆಯಾತನ ಮಗ ಯೋಜಾಬಾದ್ ಮತ್ತು ಶೋಮೇರನ ಮಗ ಯೆಹೋಜಾಬಾದ್ ಎಂಬವರು ಅರಸನನ್ನು ಕೊಂದರು. ಯೋವಾಷನ ಜನರು ಅವನ ಶವವನ್ನು ದಾವೀದನ ಪಟ್ಟಣದಲ್ಲಿ ಅವನ ಪಿತೃಗಳ ಬಳಿಯಲ್ಲಿ ಸಮಾಧಿಮಾಡಿದರು. ಅವನ ಮಗ ಅಮಚ್ಯನು ಅವನಿಗೆ ಬದಲಾಗಿ ಅರಸನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು