Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 11:16 - ಕನ್ನಡ ಸಮಕಾಲಿಕ ಅನುವಾದ

16 ಆಗ ಅವರು ಅವಳನ್ನು ಅಧೀನಕ್ಕೆ ತೆಗೆದುಕೊಂಡು, ಕುದುರೆಗಳು ಅರಸನ ಮನೆಯೊಳಕ್ಕೆ ಬರುವ ಮಾರ್ಗದಲ್ಲಿ ಅವಳನ್ನು ಕೊಂದುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅವರು ಆಕೆಯನ್ನು ಹಿಡಿದು ಕುದುರೆಗಳ ಬಾಗಿಲಿನಿಂದ ರಾಜನ ಅರಮನೆಗೆ ಕರೆದೊಯ್ದು ಅಲ್ಲಿ ಹತ್ಯೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅವರು ಆಕೆಯನ್ನು ಹಿಡಿದು ಕುದುರೆಗಳ ಬಾಗಿಲಿನಿಂದ ಅರಮನೆಗೆ ಒಯ್ದು ಅಲ್ಲಿ ಹತಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅವರು ಆಕೆಯನ್ನು ಹಿಡಿದು ಕುದುರೆಗಳ ಬಾಗಲಿನಿಂದ ಅರಮನೆಗೆ ಒಯ್ದು ಅಲ್ಲಿ ಹತಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆದ್ದರಿಂದ ಸೈನಿಕರು ಅವಳನ್ನು ಹಿಡಿದುಕೊಂಡು ಹೊರಗೆ ಕರೆದೊಯ್ದರು, ಆಕೆಯು ಕುದುರೆಗಳ ಪ್ರವೇಶದ್ವಾರದ ಮೂಲಕ ಅರಮನೆಗೆ ಹೋದಳು. ಸೈನಿಕರು ಅತಲ್ಯಳನ್ನು ಅಲ್ಲಿ ಕೊಂದುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 11:16
10 ತಿಳಿವುಗಳ ಹೋಲಿಕೆ  

“ಯಾರಾದರೂ ಮನುಷ್ಯರ ರಕ್ತವನ್ನು ಸುರಿಸುತ್ತಾರೋ, ಅವರ ರಕ್ತವನ್ನು ಮನುಷ್ಯರೇ ಸುರಿಸುವರು. ಏಕೆಂದರೆ ದೇವರು ತಮ್ಮ ಸ್ವರೂಪದಲ್ಲಿಯೇ ಮನುಷ್ಯರನ್ನು ಸೃಷ್ಟಿಸಿದರು.


ಕರುಣೆ ತೋರಿಸದೆ ಇರುವವರಿಗೆ ಕರುಣೆಯಿಲ್ಲದ ನ್ಯಾಯತೀರ್ಪಾಗುವುದು. ಕರುಣೆವುಳ್ಳವರೋ ನ್ಯಾಯತೀರ್ಪಿನ ಮೇಲೆಯೇ ವಿಜಯವನ್ನು ಸಾಧಿಸುವರು.


ನೀವು ಇತರರ ಬಗ್ಗೆ ಕೊಡುವ ತೀರ್ಪಿನ ಪ್ರಕಾರವೇ ನಿಮಗೂ ತೀರ್ಪಾಗುವುದು, ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡಲಾಗುವುದು.


ಆಗ ಅವರು ಅವಳನ್ನು ಅಧೀನಕ್ಕೆ ತೆಗೆದುಕೊಂಡು, ಅರಮನೆಯ ಬಳಿಯಲ್ಲಿ ಕುದುರೆ ಬಾಗಿಲಿನ ಪ್ರವೇಶದಲ್ಲಿ ಬಂದಾಗ ಅಲ್ಲಿ ಅವಳನ್ನು ಕೊಂದುಹಾಕಿದರು.


ಆಗ ಅದೋನೀಬೆಜೆಕನು, “ನಾನು ಕೈಕಾಲುಗಳ ಹೆಬ್ಬೆರಳುಗಳನ್ನು ಕತ್ತರಿಸಿಬಿಟ್ಟ ಎಪ್ಪತ್ತು ಮಂದಿ ಅರಸರು, ನನ್ನ ಮೇಜಿನ ಕೆಳಗೆ ಬೀಳುವ ಚೂರುಗಳನ್ನು ಕೂಡಿಸಿಕೊಂಡು ತಿನ್ನುತ್ತಿದ್ದರು. ನಾನು ಅವರಿಗೆ ಮಾಡಿದಂತೆಯೇ, ದೇವರು ನನಗೆ ಮಾಡಿದ್ದಾರೆ,” ಎಂದನು. ಅವರು ಅವನನ್ನು ಯೆರೂಸಲೇಮಿಗೆ ತೆಗೆದುಕೊಂಡು ಬಂದರು. ಅಲ್ಲಿ ಅವನು ಮರಣಹೊಂದಿದನು.


“ ‘ಯಾರಾದರೂ ಮನುಷ್ಯನನ್ನು ಕೊಂದರೆ, ನಿಶ್ಚಯವಾಗಿ ಮರಣಕ್ಕೆ ಒಳಪಡಬೇಕು.


ಆಗ ಯಾಜಕನಾದ ಯೆಹೋಯಾದಾವನು ಸೈನ್ಯದ ಮೇಲೆ ಇರುವ ಶತಾಧಿಪತಿಗಳಿಗೆ, “ಅವಳನ್ನು ಯೆಹೋವ ದೇವರ ಆಲಯದಲ್ಲಿ ಕೊಲ್ಲಬೇಡಿರಿ, ಎರಡು ಸಾಲು ಸಿಪಾಯಿಗಳು ಅವಳನ್ನು ನಡುವೆ ಸಾಗಿಸಿಕೊಂಡು ಹೋಗಿ ಹೊರಗೆ ತಳ್ಳಲಿ ಮತ್ತು ಅವಳನ್ನು ಹಿಂಬಾಲಿಸುವಂಥವರನ್ನು ಖಡ್ಗದಿಂದ ಕೊಂದುಹಾಕಿರಿ,” ಎಂದು ಆಜ್ಞಾಪಿಸಿದನು.


ಯಾಜಕರು ಕುದುರೆ ಬಾಗಿಲಿನ ಆಚೆ ದಿನ್ನೆಯ ಮೇಲಿರುವ ಗೋಡೆಯಲ್ಲಿ ತಮ್ಮ ತಮ್ಮ ಮನೆಗಳ ಎದುರಿನ ಭಾಗಗಳನ್ನು ಜೀರ್ಣೋದ್ಧಾರ ಮಾಡಿದರು.


ಹೆಣ ಹೂಣುವ ಮತ್ತು ಬೂದಿ ತುಂಬುವ ಕಣಿವೆಯಿಂದ, ಕಿದ್ರೋನ್ ಹಳ್ಳ, ಪೂರ್ವದಿಕ್ಕಿನ ಕುದುರೆ ಬಾಗಿಲಮೂಲೆ, ಇವುಗಳವರೆಗಿರುವ ಪ್ರದೇಶವೆಲ್ಲವೂ ಯೆಹೋವ ದೇವರಿಗೆ ಪರಿಶುದ್ಧವಾಗಿರುವುವು. ಈ ಪಟ್ಟಣವು ಇನ್ನೆಂದಿಗೂ ನಿರ್ಮೂಲವಾಗದು, ನಾಶವಾಗದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು