Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 11:2 - ಕನ್ನಡ ಸಮಕಾಲಿಕ ಅನುವಾದ

2 ಆದರೆ ಅರಸನಾದ ಯೆಹೋರಾಮನ ಮಗಳೂ ಅಹಜ್ಯನ ಸಹೋದರಿಯೂ ಆದ ಯೆಹೋಷೆಬಳು ಹತರಾಗುವುದಕ್ಕಿದ್ದ ಅರಸನ ಮಕ್ಕಳ ಮಧ್ಯದಿಂದ ಅಹಜ್ಯನ ಮಗನಾದ ಯೋವಾಷನನ್ನು ಕದ್ದುಕೊಂಡು ಹೋಗಿ ಅವನು ಹತನಾಗದ ಹಾಗೆ ಅವನನ್ನೂ ಅವನ ದಾದಿಯನ್ನೂ ಅತಲ್ಯಳಿಗೆ ಕಾಣದ ಹಾಗೆ ಮಲಗುವ ಕೋಣೆಯಲ್ಲಿ ಬಚ್ಚಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆದರೆ ಅರಸನಾದ ಯೆಹೋರಾಮನ ಮಗಳೂ, ಅಹಜ್ಯನ ತಂಗಿಯೂ ಆದ ಯೆಹೋಷೆಬಳೆಂಬಾಕೆಯು ಯಾರಿಗೂ ತಿಳಿಯದಂತೆ ತನ್ನ ಅಣ್ಣನ ಮಗನಾದ ಯೆಹೋವಾಷನನ್ನು ಅತಲ್ಯಳಿಂದ ಹತರಾಗಿದ್ದ ರಾಜಪುತ್ರರ ಮಧ್ಯದಿಂದ ಅವನ ದಾದಿಯರೊಡನೆ ಅವನನ್ನು ತೆಗೆದುಕೊಂಡು ಹೋಗಿ, ಮಲಗುವ ಕೋಣೆಯಲ್ಲಿ ಅಡಗಿಸಿಟ್ಟಳು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆದರೆ ಅರಸ ಯೆಹೋರಾಮನ ಮಗಳೂ ಅಹಜ್ಯನ ತಂಗಿಯೂ ಆದ ಯೆಹೋಷೆಬ ಎಂಬಾಕೆ, ಯಾರಿಗೂ ತಿಳಿಯದಂತೆ ತನ್ನ ಅಣ್ಣನ ಮಗ ಯೆಹೋವಾಷನನ್ನು, ಹತವಾಗುವುದಕ್ಕಿದ್ದ ರಾಜಪುತ್ರರ ಮಧ್ಯೆಯಿಂದ, ಅವನ ದಾದಿಯೊಡನೆ ತೆಗೆದುಕೊಂಡು ಹೋಗಿ, ಮಲಗುವ ಕೋಣೆಯಲ್ಲಿ ಅಡಗಿಸಿಬಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆದರೆ ಅರಸನಾದ ಯೆಹೋರಾಮನ ಮಗಳೂ ಅಹಜ್ಯನ ತಂಗಿಯೂ ಆದ ಯೆಹೋಷೆಬಳೆಂಬಾಕೆಯು ಯಾರಿಗೂ ತಿಳಿಯದಂತೆ ತನ್ನ ಅಣ್ಣನ ಮಗನಾದ ಯೆಹೋವಾಷನನ್ನು ಹತವಾಗುವದಕ್ಕಿದ್ದ ರಾಜಪುತ್ರರ ಮಧ್ಯದಿಂದ ಅವನ ದಾದಿಯೊಡನೆ ತೆಗೆದುಕೊಂಡು ಹೋಗಿ ಮಲಗುವ ಕೋಣೆಯಲ್ಲಿ ಅಡಗಿಸಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೆಹೋಷೆಬಳು ರಾಜನಾದ ಯೋರಾಮನ ಮಗಳಾಗಿದ್ದಳು ಮತ್ತು ಅಹಜ್ಯನ ಸೋದರಿಯಾಗಿದ್ದಳು. ಯೆಹೋವಾಷನು ರಾಜನ ಮಕ್ಕಳಲ್ಲಿ ಒಬ್ಬನಾಗಿದ್ದನು. ಅತಲ್ಯಳು ಇತರ ಮಕ್ಕಳನ್ನು ಕೊಲ್ಲುವಾಗ ಯೆಹೋಷೆಬಳು ಯೆಹೋವಾಷನನ್ನು ತೆಗೆದುಕೊಂಡು ಹೋದಳು. ಅವಳು ಯೆಹೋವಾಷನನ್ನು ಮತ್ತು ಅವನ ದಾದಿಯನ್ನು ತನ್ನ ಮಲಗುವ ಕೊಠಡಿಯಲ್ಲಿ ಅಡಗಿಸಿದಳು. ಯೆಹೋವಾಷನನ್ನು ಅವನ ದಾದಿಯು ಮತ್ತು ಯೆಹೋಷೆಬಳು ಅತಲ್ಯಳಿಂದ ತಪ್ಪಿಸಿ ಅಡಗಿಸಿಟ್ಟರು. ಈ ರೀತಿ ಯೆಹೋವಾಷನನ್ನು ಕೊಲ್ಲಲಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 11:2
24 ತಿಳಿವುಗಳ ಹೋಲಿಕೆ  

ಅವನು ನನಗೆ ಹೇಳಿದ್ದೇನೆಂದರೆ, “ದಕ್ಷಿಣಕ್ಕೆ ಅಭಿಮುಖವಾಗಿರುವ ಈ ಕೊಠಡಿ ದೇವಾಲಯದ ಮೇಲ್ವಿಚಾರಣೆಯನ್ನು ನೋಡಿಕೊಳ್ಳುವ ಯಾಜಕರದು.


“ನೀನು ರೇಕಾಬನ ಮನೆತನದವರ ಬಳಿಗೆ ಹೋಗಿ, ಅವರ ಸಂಗಡ ಮಾತನಾಡು. ಅವರನ್ನು ಯೆಹೋವ ದೇವರ ಆಲಯದ ಒಂದು ಕೋಣೆಯೊಳಕ್ಕೆ ಕರೆದು, ದ್ರಾಕ್ಷಾರಸವನ್ನು ಕುಡಿಯುವುದಕ್ಕೆ ಕೊಡು.”


ಆಗ ಮಾತ್ರ ನಾನು ಯಾಕೋಬನ ಸಂತಾನದವರನ್ನು ತ್ಯಜಿಸುತ್ತಿದ್ದೆ. ಅಬ್ರಹಾಮ, ಇಸಾಕ, ಯಾಕೋಬ ಇವರ ಸಂತತಿಯನ್ನು ಆಳತಕ್ಕ ಒಡೆಯನನ್ನು ದಾಸ ದಾವೀದನ ವಂಶದಿಂದ ಆರಿಸದೆ, ಆ ವಂಶವನ್ನು ನಿರಾಕರಿಸುತ್ತಿದ್ದೆ. ಆದರೆ ಈಗ ಗುಲಾಮಗಿರಿಯಿಂದ ಅವರನ್ನು ಬಿಡುಗಡೆಮಾಡುವೆನು. ಅವರಿಗೆ ಕರುಣೆಯನ್ನು ತೋರಿಸಿಯೇ ತೋರಿಸುವೆನು.’ ”


ಆಗುವುದಾದರೆ ಮಾತ್ರ ನನ್ನ ದಾಸ ದಾವೀದನೊಂದಿಗೆ ನನ್ನ ಪರಿಚಾರಕರಾದ ಲೇವಿ ಕುಲದ ಯಾಜಕರೊಂದಿಗೆ ನಾನು ಮಾಡಿದ ಒಡಂಬಡಿಕೆ ನಿಂತುಹೋಗುವುದು ಮತ್ತು ದಾವೀದನ ಸಿಂಹಾಸನವನ್ನು ಏರಿ ಆಳತಕ್ಕ ಅವನ ಸಂತಾನದವನು ಒಬ್ಬನೂ ಇಲ್ಲವಾಗುವನು.


ಯೆಹೋವ ದೇವರಾದ ನಾನು ಹೇಳುವುದೇನೆಂದರೆ: ‘ದಾವೀದನು ಎಂದಿಗೂ ಇಸ್ರಾಯೇಲ್ ಸಿಂಹಾಸನದಲ್ಲಿ ಕುಳಿತುಕೊಳ್ಳಲು ಒಬ್ಬ ವ್ಯಕ್ತಿಯನ್ನು ಹೊಂದಲು ವಿಫಲನಾಗುವುದಿಲ್ಲ


“ಈ ಪಟ್ಟಣವನ್ನು ನನಗೋಸ್ಕರವೂ ನನ್ನ ಸೇವಕನಾದ ದಾವೀದನಿಗೋಸ್ಕರವೂ ಕಾಪಾಡಿ ಅದನ್ನು ರಕ್ಷಿಸುವೆನು.”


ಯೆಹೋವ ದೇವರಿಗೆ ವಿರೋಧವಾಗಿ ಯಾವ ಜ್ಞಾನವೂ, ವಿವೇಕವೂ, ಯೋಜನೆಯೂ ಇಲ್ಲ.


ಆದರೆ ಅರಸನಾದ ಯೆಹೋರಾಮನ ಮಗಳಾದ ಯೆಹೋಷಬತಳು, ಹತರಾಗುವುದಕ್ಕಿದ್ದ ಅರಸನ ಮಕ್ಕಳ ಮಧ್ಯದಿಂದ ಅಹಜ್ಯನ ಮಗನಾದ ಯೋವಾಷನನ್ನು ಕದ್ದುಕೊಂಡು ಹೋಗಿ ಅವನನ್ನೂ ಅವನ ದಾದಿಯನ್ನೂ ಮಲಗುವ ಕೋಣೆಯಲ್ಲಿ ಬಚ್ಚಿಟ್ಟಳು. ಹೀಗೆಯೇ ಅರಸನಾದ ಯೆಹೋರಾಮನ ಪುತ್ರಿಯರಾಗಿರುವ ಯಾಜಕನಾದ ಯೆಹೋಯಾದಾವನ ಹೆಂಡತಿಯಾಗಿರುವ ಅಹಜ್ಯನ ಸಹೋದರಿಯಾದ ಯೆಹೋಷಬತಳು, ಅತಲ್ಯಳು ಅವನನ್ನು ಕೊಲ್ಲದ ಹಾಗೆ ಬಚ್ಚಿಟ್ಟಳು.


ಯೋವಾಷ್ ಅರಸನಾದಾಗ ಏಳು ವರ್ಷದವನಾಗಿದ್ದನು.


ಆದರೂ ಯೆಹೋವ ದೇವರು ಯೆಹೂದದ ರಾಜ್ಯವನ್ನು ನಾಶಮಾಡಲಿಲ್ಲ. “ನಿನ್ನ ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವುದಿಲ್ಲ,” ಎಂಬುದಾಗಿ ತಮ್ಮ ದಾಸನಾದ ದಾವೀದನಿಗೆ ಪ್ರಮಾಣ ಮಾಡಿದ ಕಾರಣ ಉಳಿಸಿದರು.


ಅಹಾಬನ ಮಗನೂ ಇಸ್ರಾಯೇಲರ ಅರಸನೂ ಆದ ಯೋರಾಮನ ಆಳ್ವಿಕೆಯ ಐದನೆಯ ವರ್ಷದಲ್ಲಿ, ಯೆಹೂದದ ರಾಜನಾದ ಯೆಹೋಷಾಫಾಟನ ಮಗ ಯೆಹೋರಾಮನು ಆಳತೊಡಗಿದನು.


ಅವನು 2.2 ಮೀಟರ್ ಎತ್ತರವಾದ ಕೊಠಡಿಗಳನ್ನು ಆಲಯದ ಬಳಿಯಲ್ಲಿ ಸುತ್ತಲು ಕಟ್ಟಿಸಿದನು. ಅವು ಆಲಯದ ಮೇಲೆ ಇರಿಸಿದ ದೇವದಾರು ತೊಲೆಗಳ ಮೇಲೆ ನಿಂತಿದ್ದವು.


ಮಧ್ಯ ಕೊಠಡಿಯ ಬಾಗಿಲು ಆಲಯದ ದಕ್ಷಿಣ ಭಾಗದಲ್ಲಿ ಇತ್ತು. ಅಲ್ಲಿಂದ ಮಧ್ಯ ಕೊಠಡಿಗೂ, ಮಧ್ಯ ಕೊಠಡಿಯಿಂದ ಮೂರನೆಯ ಕೊಠಡಿಗೂ ಹತ್ತಲು ಸುರುಳಿಯಾಕಾರದ ಮೆಟ್ಟಲುಗಳಿದ್ದವು.


ನೈಲ್ ನದಿಯಲ್ಲಿ ಕಪ್ಪೆಗಳು ತುಂಬಿಹೋಗುವುವು. ಅವು ನಿನ್ನ ಅರಮನೆಯಲ್ಲಿಯೂ ನೀನು ಮಲಗುವ ಕೊಠಡಿಯಲ್ಲಿಯೂ ನಿನ್ನ ಹಾಸಿಗೆಯ ಮೇಲೂ ನಿನ್ನ ಸೇವಕರ ಮನೆಗಳಲ್ಲಿಯೂ ನಿನ್ನ ಜನರ ಮೇಲೆಯೂ ನಿನ್ನ ಒಲೆಗಳಲ್ಲಿಯೂ ನಿನ್ನ ಹಿಟ್ಟು ನಾದುವ ಹರಿವಾಣಗಳಲ್ಲಿಯೂ ಕಾಣಿಸಿಕೊಳ್ಳುವುವು.


ಅವನು ಒಫ್ರದಲ್ಲಿರುವ ತನ್ನ ತಂದೆಯ ಮನೆಗೆ ಹೋಗಿ, ತನ್ನ ಸಹೋದರರಾದ ಯೆರುಬ್ಬಾಳನ ಎಪ್ಪತ್ತು ಮಂದಿ ಪುತ್ರರನ್ನು ಒಂದು ಬಂಡೆಯ ಮೇಲೆ ಕೊಂದುಹಾಕಿದನು. ಆದರೆ ಯೆರುಬ್ಬಾಳನ ಚಿಕ್ಕ ಮಗ ಯೋತಾಮನು ಒಬ್ಬನೇ ಉಳಿದನು. ಏಕೆಂದರೆ ಅವನು ಅಡಗಿಕೊಂಡನು.


ಹೀಗೆ ಅವನು ಯೆಹೋಷೆಬಳ ಸಂಗಡ ಆರು ವರ್ಷ ಯೆಹೋವ ದೇವರ ಆಲಯದಲ್ಲಿ ಗುಪ್ತವಾಗಿದ್ದನು, ಈ ಆರು ವರ್ಷ ಅತಲ್ಯಳು ದೇಶವನ್ನು ಆಳುತ್ತಾ ಇದ್ದಳು.


ಯೇಹುವಿನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಯೋವಾಷನು ಅರಸನಾಗಿ, ಯೆರೂಸಲೇಮಿನಲ್ಲಿ ನಲವತ್ತು ವರ್ಷ ಆಳಿದನು. ಅವನ ತಾಯಿಯ ಹೆಸರು ಚಿಬ್ಯಳು. ಅವಳು ಬೇರ್ಷೆಬ ಊರಿನವಳು.


ಆದರೆ ಆ ಸಮಯದಲ್ಲಿ ಇನ್ನೂ ಬಾಲಕನಾದ ಹದಾದನು ತನ್ನ ತಂದೆಯ ಕೆಲವು ಸೇವಕರಾದ ಎದೋಮ್ಯರ ಸಂಗಡ ಈಜಿಪ್ಟಿಗೆ ಓಡಿಹೋಗಬೇಕೆಂದು ಹೊರಟನು.


ಇವನ ಮಗನು ಯೆಹೋರಾಮನು; ಇವನ ಮಗನು ಅಹಜ್ಯನು; ಇವನ ಮಗನು ಯೋವಾಷನು.


ಆದರೆ ಅರಸನು ರಾಜಪುತ್ರ ಯೆರಹ್ಮೇಲನಿಗೂ, ಅಜ್ರಿಯೇಲನ ಮಗನಾದ ಸೆರಾಯನಿಗೂ, ಅಬ್ದೆಯೇಲನ ಮಗ ಶೆಲೆಮ್ಯನಿಗೂ, ಲೇಖಕನಾದ ಬಾರೂಕನನ್ನೂ, ಪ್ರವಾದಿಯಾದ ಯೆರೆಮೀಯನನ್ನೂ ಹಿಡಿಯಬೇಕೆಂದು ಆಜ್ಞಾಪಿಸಿದನು. ಆದರೆ ಯೆಹೋವ ದೇವರು ಅವರನ್ನು ಅಡಗಿಸಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು