Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 12:16 - ಕನ್ನಡ ಸಮಕಾಲಿಕ ಅನುವಾದ

16 ಆದರೆ ಪ್ರಾಯಶ್ಚಿತ್ತ ಬಲಿಯ ಹಣವನ್ನು, ಪಾಪ ಪರಿಹಾರದ ಬಲಿಯ ಹಣವನ್ನು ಯೆಹೋವ ದೇವರ ಆಲಯಕ್ಕೆ ತೆಗೆದುಕೊಂಡು ಬರಲಿಲ್ಲ, ಅದು ಯಾಜಕರದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅಪರಾಧ ಪ್ರಾಯಶ್ಚಿತ್ತಕ್ಕಾಗಿಯೂ, ದೋಷಪರಿಹಾರಕ್ಕಾಗಿಯೂ ತರಲ್ಪಟ್ಟ ಹಣವು ಯಾಜಕರ ಪಾಲಿಗೆ ಸೇರುತ್ತಿತ್ತು. ಅದು ಯೆಹೋವನ ಆಲಯಕ್ಕೆ ಸೇರುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅಪರಾಧಪ್ರಾಯಶ್ಚಿತ್ತಕ್ಕಾಗಿ ಹಾಗು ದೋಷಪರಿಹಾರಕ್ಕಾಗಿ ತರಲಾದ ಹಣ ಯಾಜಕರ ಭಾಗವಾಗಿತ್ತು. ಅದು ಸರ್ವೇಶ್ವರನ ಆಲಯಕ್ಕೆ ಸೇರುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅಪರಾಧ ಪ್ರಾಯಶ್ಚಿತ್ತಕ್ಕಾಗಿಯೂ ದೋಷಪರಿಹಾರಕ್ಕಾಗಿಯೂ ತರಲ್ಪಟ್ಟ ಹಣವು ಯಾಜಕರ ಭಾಗವಾಗಿತ್ತು; ಅದು ಯೆಹೋವನ ಆಲಯಕ್ಕೆ ಸೇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಜನರು ತಮ್ಮ ಅಪರಾಧ ಪ್ರಾಯಶ್ಚಿತ್ತ ಮತ್ತು ದೋಷಪರಿಹಾರದ ಸಮಯದಲ್ಲಿ ಹಣವನ್ನು ಕೊಟ್ಟರು. ಆದರೆ ಅಂತಹ ಹಣವನ್ನು ಕೆಲಸಗಾರರ ವೇತನಕ್ಕೆ ಉಪಯೋಗಿಸಲಿಲ್ಲ. ಆ ಹಣವು ಯಾಜಕರಿಗೆ ಸೇರಿದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 12:16
9 ತಿಳಿವುಗಳ ಹೋಲಿಕೆ  

“ ‘ಪಾಪ ಪರಿಹಾರದ ಬಲಿಯ ಹಾಗೆಯೇ ಪ್ರಾಯಶ್ಚಿತ್ತದ ಬಲಿಯೂ ಆಗಿದೆ. ಅವುಗಳಿಗೆ ಇರುವುದು ಒಂದೇ ನಿಯಮ, ಅವುಗಳಿಂದ ಪ್ರಾಯಶ್ಚಿತ್ತ ಮಾಡುವ ಯಾಜಕನೇ ಅವುಗಳನ್ನು ತೆಗೆದುಕೊಳ್ಳಬೇಕು.


ಅವರು ತಮ್ಮ ಕೈಯನ್ನು ಪಾಪದ ಬಲಿಯ ಮೇಲಿಟ್ಟು, ಆ ಪಾಪ ಪರಿಹಾರದ ಬಲಿಯನ್ನು ದಹನಬಲಿಯ ಸ್ಥಳದಲ್ಲಿ ವಧಿಸಬೇಕು.


ಅವನು ತನ್ನ ಕೈಯನ್ನು ಆ ಹೋತದ ತಲೆಯ ಮೇಲೆ ಇಟ್ಟು, ಯೆಹೋವ ದೇವರ ಮುಂದೆ ದಹನಬಲಿಯನ್ನು ವಧಿಸುವ ಸ್ಥಳದಲ್ಲಿ ಅದನ್ನು ವಧಿಸಬೇಕು. ಅದು ಪಾಪ ಪರಿಹಾರದ ಬಲಿಯಾಗಿರುವುದು.


ಅವರು ನನ್ನ ಜನರ ಪಾಪವನ್ನು ತಿನ್ನುತ್ತಾರೆ. ಅವರು ದುಷ್ಟತನದ ಮೇಲೆ ಅವರ ಮನಸ್ಸನ್ನು ಇಡುತ್ತಾರೆ.


ಇಸ್ರಾಯೇಲರು ಯೆಹೋವ ದೇವರಿಗೆ ನೈವೇದ್ಯ ಮಾಡುವ ಪರಿಶುದ್ಧವಾದ ಬಲಿಗಳನ್ನೆಲ್ಲಾ ನಿನಗೂ ನಿನ್ನ ಪುತ್ರಪುತ್ರಿಯರಿಗೂ ಕ್ರಮ ಪ್ರಕಾರವಾದ ಭಾಗವಾಗಿ ಕೊಟ್ಟಿದ್ದೇನೆ. ಇದು ಯೆಹೋವ ದೇವರ ಮುಂದೆ ನಿನಗೂ ನಿನ್ನ ಸಂಗಡ ಇರುವ ನಿನ್ನ ಸಂತತಿಗೂ ಶಾಶ್ವತವಾದ ಉಪ್ಪಿನ ಒಡಂಬಡಿಕೆಯಾಗಿರಬೇಕು,” ಎಂದರು.


ಆಗ ನಾನು ಯಾಜಕನಾದ ಶೆಲೆಮ್ಯನನ್ನೂ, ಲೇಖಕನಾದ ಚಾದೋಕನನ್ನೂ, ಲೇವಿಯರಲ್ಲಿರುವ ಪೆದಾಯನನ್ನೂ ಅವರಿಗೆ ಸಹಾಯವಾಗಿ ಮತ್ತನ್ಯನ ಮಗನಾದ ಜಕ್ಕೂರನ ಮಗ ಹಾನಾನನನ್ನೂ ಬೊಕ್ಕಸಗಳ ಮೇಲೆ ನೇಮಿಸಿದೆನು. ಅವರು ನಂಬಿಗಸ್ತರೆಂದು ಹೆಸರುಗೊಂಡವರು. ತಮ್ಮ ಸಹೋದರರಿಗೆ ಹಂಚಿ ಕೊಡುವುದು ಅವರ ಕೆಲಸವಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು