Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 13:6 - ಕನ್ನಡ ಸಮಕಾಲಿಕ ಅನುವಾದ

6 ಆದರೆ ಅವರು ಇಸ್ರಾಯೇಲರನ್ನು ಪಾಪಮಾಡಲು ಪ್ರೇರೇಪಿಸಿದ ಯಾರೊಬ್ಬಾಮನ ಮನೆಯ ಪಾಪಗಳನ್ನು ಬಿಟ್ಟುಬಿಡದೆ ಅವುಗಳಲ್ಲಿ ಮುಂದುವರಿದರು. ಇದಲ್ಲದೆ ಸಮಾರ್ಯದಲ್ಲಿ ಅಶೇರ ಸ್ತಂಭ ಇನ್ನೂ ಉಳಿದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆದರೂ ಇಸ್ರಾಯೇಲರು ತಮ್ಮನ್ನು ಪಾಪಕ್ಕೆ ಪ್ರೇರೇಪಿಸಿದ ಯಾರೊಬ್ಬಾಮನ ಮನೆಯವರ ಮಾರ್ಗದಲ್ಲಿ ನಡೆದರು. ಅದನ್ನು ಬಿಡಲೇ ಇಲ್ಲ. ಸಮಾರ್ಯದಲ್ಲಿ ಅಶೇರ ವಿಗ್ರಹಸ್ತಂಭವು ಇದ್ದೇ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆದರೂ ಅವರು ತಮ್ಮನ್ನು ಪಾಪಕ್ಕೆ ಪ್ರೇರಿಸಿದ ಯಾರೊಬ್ಬಾಮನ ಮನೆಯವರ ದುರ್ಮಾರ್ಗದಲ್ಲಿ ನಡೆದರು. ಅದನ್ನು ಬಿಡಲೇ ಇಲ್ಲ. ಸಮಾರಿಯದಲ್ಲಿ ಅಶೇರ ವಿಗ್ರಹಸ್ಥಂಭವು ಇನ್ನೂ ಉಳಿದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆದರೂ ಅವರು ತಮ್ಮನ್ನು ಪಾಪಕ್ಕೆ ಪ್ರೇರಿಸಿದ ಯಾರೊಬ್ಬಾಮನ ಮನೆಯವರ ಮಾರ್ಗದಲ್ಲಿ ನಡೆದರು; ಅದನ್ನು ಬಿಡಲೇ ಇಲ್ಲ. ಸಮಾರ್ಯದಲ್ಲಿ ಅಶೇರವಿಗ್ರಹಸ್ತಂಭವು ಇದ್ದೇ ಇತ್ತು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದರೂ ಇಸ್ರೇಲರು ಪಾಪಗಳನ್ನು ಮಾಡುವಂತೆ ಪ್ರೇರೇಪಿಸಿದ ಯಾರೊಬ್ಬಾಮನ ಕುಟುಂಬದ ಪಾಪಗಳನ್ನು ಮಾಡುವುದನ್ನು ಇಸ್ರೇಲರು ನಿಲ್ಲಿಸಲಿಲ್ಲ. ಇಸ್ರೇಲರು ಯಾರೊಬ್ಬಾಮನ ಪಾಪಗಳನ್ನು ಮಾಡುತ್ತಲೇ ಹೋದರು. ಅವರು ಸಮಾರ್ಯದಲ್ಲಿ ಅಶೇರ ವಿಗ್ರಹಸ್ತಂಭವನ್ನು ನೆಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 13:6
15 ತಿಳಿವುಗಳ ಹೋಲಿಕೆ  

ಅಹಾಬನು ಅಶೇರ ವಿಗ್ರಹಸ್ತಂಭಗಳನ್ನು ನಿಲ್ಲಿಸಿದನು. ಹೀಗೆಯೇ ಅಹಾಬನು ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಕೋಪ ಉಕ್ಕುವ ಹಾಗೆ ತನಗೆ ಮುಂಚಿನ ಇಸ್ರಾಯೇಲಿನ ಅರಸುಗಳೆಲ್ಲರಿಗಿಂತ ಅಧಿಕವಾಗಿ ಕೆಟ್ಟತನ ಮಾಡಿದನು.


ಅವನು ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ, ಇಸ್ರಾಯೇಲರನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗ ಯಾರೊಬ್ಬಾಮನ ಪಾಪಗಳನ್ನು ಬಿಟ್ಟುಬಿಡದೆ, ಅವುಗಳನ್ನು ಹಿಂಬಾಲಿಸಿದನು.


ಅರಸನಾದ ಯೋಷೀಯನು ಬಾಳನಿಗೋಸ್ಕರವೂ, ಅಶೇರನಿಗೋಸ್ಕರವೂ, ಆಕಾಶದ ಸೈನ್ಯಕ್ಕೋಸ್ಕರವೂ ಉಪಯೋಗಿಸುತ್ತಿದ್ದ ಸಮಸ್ತ ಸಲಕರಣೆಗಳನ್ನು ಯೆಹೋವ ದೇವರ ಆಲಯದಿಂದ ಹೊರಗೆ ತೆಗೆದುಕೊಂಡು ಬರಬೇಕೆಂದು ಮಹಾಯಾಜಕನಾದ ಹಿಲ್ಕೀಯನಿಗೂ, ಮುಖ್ಯಯಾಜಕರಿಗೂ, ದ್ವಾರಪಾಲಕರಿಗೂ ಆಜ್ಞಾಪಿಸಿದನು. ಅರಸನು ಅವುಗಳನ್ನು ಯೆರೂಸಲೇಮಿನ ಹೊರಗೆ ಕಿದ್ರೋನ್ ಕಣಿವೆಯ ಬಯಲಿನಲ್ಲಿ ಸುಡಿಸಿ, ಅವುಗಳ ಬೂದಿಯನ್ನು ಬೇತೇಲಿಗೆ ತರುವಂತೆ ಮಾಡಿದನು.


ಹಿಜ್ಕೀಯನು ಉನ್ನತ ಪೂಜಾಸ್ಥಳಗಳನ್ನು ತೆಗೆದುಹಾಕಿ, ವಿಗ್ರಹಗಳನ್ನು ಒಡೆದುಬಿಟ್ಟು, ಅಶೇರ ಸ್ತಂಭಗಳನ್ನು ಕಡಿದುಹಾಕಿದನು. ಮೋಶೆಯು ಮಾಡಿದ ತಾಮ್ರದ ಸರ್ಪವನ್ನು ಮುರಿದುಬಿಟ್ಟನು. ಏಕೆಂದರೆ ಆ ದಿವಸಗಳವರೆಗೂ ಇಸ್ರಾಯೇಲರು ಅದಕ್ಕೆ ಧೂಪ ಸುಡುತ್ತಿದ್ದರು. ಅದನ್ನು ನೆಹುಷ್ಟಾನ್ ಎಂದು ಕರೆಯುತ್ತಿದ್ದರು.


ಇದಲ್ಲದೆ ಅವರು ತಮ್ಮ ದೇವರಾದ ಯೆಹೋವ ದೇವರ ಸಮಸ್ತ ಆಜ್ಞೆಗಳನ್ನು ಬಿಟ್ಟುಬಿಟ್ಟು, ತಮಗೆ ತಾವೇ ಎರಡು ಎರಕದ ಕರುಗಳ ಮೂರ್ತಿಗಳನ್ನು ಮಾಡಿಕೊಂಡರು. ಅವರು ಅಶೇರ ಸ್ತಂಭವನ್ನು ನಿಲ್ಲಿಸಿ, ಆಕಾಶದ ಸೈನ್ಯಕ್ಕೆಲ್ಲಾ ಅಡ್ಡಬಿದ್ದು, ಬಾಳನನ್ನು ಸೇವಿಸಿ ತಮ್ಮ ಪುತ್ರಪುತ್ರಿಯರನ್ನೂ ಬೆಂಕಿಯಲ್ಲಿ ಬಲಿಕೊಟ್ಟರು.


ಆದರೆ ಬೇತೇಲಿನಲ್ಲಿಯೂ, ದಾನಿನಲ್ಲಿಯೂ ಇರುವ ಬಂಗಾರದ ಕರುಗಳಿಂದ ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ಯೇಹುವು ತೊರೆದುಬಿಡಲಿಲ್ಲ.


ಅವನು ನೆಬಾಟನ ಮಗ ಯಾರೊಬ್ಬಾಮನ ಸಕಲ ಮಾರ್ಗಗಳಲ್ಲಿಯೂ, ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ತಮ್ಮ ವ್ಯರ್ಥವಾದವುಗಳಿಂದ ಕೋಪವನ್ನು ಎಬ್ಬಿಸಿದ ಹಾಗೆ ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ಯಾರೊಬ್ಬಾಮನ ಪಾಪದಲ್ಲಿಯೂ ನಡೆದನು.


ಅಬಿಯಾಮನು, ತನ್ನ ಪಿತೃವಾದ ದಾವೀದನ ಹೃದಯದ ಪ್ರಕಾರ, ಅವನ ಹೃದಯವು ತನ್ನ ದೇವರಾದ ಯೆಹೋವ ದೇವರ ಮುಂದೆ ಪೂರ್ಣವಾಗಿರದೆ, ತನಗೆ ಮುಂಚೆ ಇದ್ದ ತನ್ನ ತಂದೆ ಮಾಡಿದ ಸಮಸ್ತ ಪಾಪಗಳಲ್ಲಿ ನಡೆದನು.


ಅವರ ಬಲಿಪೀಠಗಳನ್ನು ಒಡೆದುಹಾಕಬೇಕು. ಅವರ ಪವಿತ್ರ ಕಲ್ಲುಕಂಬಗಳನ್ನು ಒಡೆದು, ಅಶೇರವೆಂಬ ವಿಗ್ರಹಸ್ತಂಭಗಳನ್ನು ಕಡಿದುಹಾಕಬೇಕು. ಅವರ ಕೆತ್ತಿದ ವಿಗ್ರಹಗಳನ್ನು ಬೆಂಕಿಯಿಂದ ಸುಡಬೇಕು. ನೀವು ಅವರಿಗೆ ಹೀಗೆ ಮಾಡತಕ್ಕದ್ದು.


ಯೆಹೋವ ದೇವರು ಯಾರೊಬ್ಬಾಮನ ಪಾಪಗಳ ನಿಮಿತ್ತ ಇಸ್ರಾಯೇಲರನ್ನು ಶತ್ರುಗಳಿಗೆ ಒಪ್ಪಿಸಿಬಿಡುವರು. ಏಕೆಂದರೆ ಯಾರೊಬ್ಬಾಮನೇ ಪಾಪಮಾಡಿ, ಪಾಪವನ್ನು ಮಾಡಲು ಇಸ್ರಾಯೇಲರನ್ನು ಪ್ರೇರೇಪಿಸಿದನು,” ಎಂದನು.


ಅವನು ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ, ಇಸ್ರಾಯೇಲರನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗ ಯಾರೊಬ್ಬಾಮನ ಸಮಸ್ತ ಪಾಪಗಳನ್ನು ತೊರೆದುಬಿಡದೆ, ಅವುಗಳಲ್ಲಿ ಮುಂದುವರೆದನು.


ಅವನು ತನ್ನ ತಂದೆಯಾದ ಹಿಜ್ಕೀಯನು ನಾಶಮಾಡಿದ ಉನ್ನತ ಪೂಜಾಸ್ಥಳಗಳನ್ನು ಮತ್ತೆ ಸ್ಥಾಪಿಸಿ, ಬಾಳನಿಗೆ ಬಲಿಪೀಠಗಳನ್ನು ಕಟ್ಟಿಸಿ, ಇಸ್ರಾಯೇಲಿನ ಅರಸನಾದ ಅಹಾಬನು ಮಾಡಿದ ಅಶೇರ ವಿಗ್ರಹಸ್ತಂಭಗಳನ್ನು ನಿಲ್ಲಿಸಿ, ಸಮಸ್ತ ನಕ್ಷತ್ರಮಂಡಲಕ್ಕೆ ಅಡ್ಡಬಿದ್ದು ಅವುಗಳನ್ನು ಪೂಜಿಸಿದನು.


ದುಷ್ಟನಿಗೆ ಕನಿಕರ ತೋರಿಸಿದಾಗ್ಯೂ ನೀತಿಯನ್ನು ಅವನು ಕಲಿಯಲಾರನು. ಯಥಾರ್ಥವಂತನ ದೇಶದಲ್ಲಿ ಅವನು ಅನ್ಯಾಯವನ್ನು ಆಚರಿಸುವನು ಮತ್ತು ಯೆಹೋವ ದೇವರ ಮಹತ್ವವನ್ನು ಲಕ್ಷಿಸುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು