Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 14:25 - ಕನ್ನಡ ಸಮಕಾಲಿಕ ಅನುವಾದ

25 ಇದಲ್ಲದೆ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಗತ್‌ಹೇಫೆರಿನ ಪ್ರವಾದಿಯಾದ ಅಮಿತ್ತೈಯನ ಮಗ ಯೋನನೆಂಬ ತನ್ನ ಸೇವಕನ ಮುಖಾಂತರ ಹೇಳಿದ ವಾಕ್ಯದಂತೆ ಅವನು ಹಮಾತಿನ ಪ್ರವೇಶ ಮೊದಲುಗೊಂಡು ಅರಾಬಾ ತಗ್ಗಿನ ಸಮುದ್ರದವರೆಗೂ ಇರುವ ಇಸ್ರಾಯೇಲಿನ ಮೇರೆಯನ್ನು ತಿರುಗಿ ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಇಸ್ರಾಯೇಲರ ದೇವರಾದ ಯೆಹೋವನ ವಾಕ್ಯದ ಮೂಲಕ ತನ್ನ ಸೇವಕನೂ ಗತ್ ಹೇಫೆರಿನವನಾದ ಅಮಿತ್ತೈಯನ ಮಗನೂ ಆದ ಯೋನಾ ಎಂಬ ಪ್ರವಾದಿಯ ಮುಖಾಂತರವಾಗಿ ಮುಂತಿಳಿಸಿದಂತೆ ಹಮಾತಿನ ದಾರಿಯಿಂದ ಅರಾಬಾ ತಗ್ಗಿನ ಸಮುದ್ರದವರೆಗಿದ್ದ ಇಸ್ರಾಯೇಲರ ಮೇರೆಯನ್ನು ಪುನಃ ವಶಪಡಿಸಿಕೊಂಡವನು ಇವನೇ ಆಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಇಸ್ರಯೇಲ್ ದೇವರಾದ ಸರ್ವೇಶ್ವರ, ತನ್ನ ಸೇವಕನೂ ಗತ್ ಹೇಫೆರಿವನಾದ ಅಮಿತ್ತೈಯ ಮಗನೂ ಆದ ಯೋನಾ ಎಂಬ ಪ್ರವಾದಿಯ ಮುಖಾಂತರ ಮುಂತಿಳಿಸಿದಂತೆ, ಹಮಾತಿನ ದಾರಿಯಿಂದ ಅರಾಬಾ ತಗ್ಗಿನ ಸಮುದ್ರದವರೆಗಿದ್ದ ಇಸ್ರಯೇಲರ ಮೇರೆಯನ್ನು ತಿರುಗಿ ತೆಗೆದುಕೊಂಡವನು ಇವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಇಸ್ರಾಯೇಲ್‍ದೇವರಾದ ಯೆಹೋವನು ತನ್ನ ಸೇವಕನೂ ಗತ್‍ಹೇಫೆರಿನವನಾದ ಅವಿುತ್ತೈಯ ಮಗನೂ ಆದ ಯೋನಾ ಎಂಬ ಪ್ರವಾದಿಯ ಮುಖಾಂತರವಾಗಿ ಮುಂತಿಳಿಸಿದಂತೆ ಹಮಾತಿನ ದಾರಿಯಿಂದ ಅರಾಬಾ ತಗ್ಗಿನ ಸಮುದ್ರದವರೆಗಿದ್ದ ಇಸ್ರಾಯೇಲ್ಯರ ಮೇರೆಯನ್ನು ತಿರಿಗಿ ತೆಗೆದುಕೊಂಡವನು ಇವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಲೆಬೊಹಮಾತಿನಿಂದ ಅರಾಬ ಸಮುದ್ರದವರೆಗೆ ಹಬ್ಬಿದ ಇಸ್ರೇಲರ ದೇಶವನ್ನು ಯಾರೊಬ್ಬಾಮನು ಮತ್ತೆ ವಶಪಡಿಸಿಕೊಂಡನು. ಇಸ್ರೇಲರ ಯೆಹೋವನು ತನ್ನ ಸೇವಕನೂ ಅಮಿತ್ತೈನ ಮಗನೂ ಗತ್‌ಹೇಫೆರಿನ ಪ್ರವಾದಿಯೂ ಆದ ಯೋನಾ ಎಂಬವನ ಮೂಲಕ ಮೊದಲೇ ತಿಳಿಸಿದ್ದಂತೆ ಇದು ಸಂಭವಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 14:25
16 ತಿಳಿವುಗಳ ಹೋಲಿಕೆ  

ಅದಲ್ಲದೆ ಪಶ್ಚಿಮದಲ್ಲಿ ಅವರ ಪ್ರದೇಶ ಅರಾಬಾದ ಯೊರ್ದನ್ ನದಿಯವರೆಗೆ ಹರಡಿತ್ತು, ಅದರಲ್ಲಿ ಕಿನ್ನೆರೆತ್ ಮೊದಲ್ಗೊಂಡು ಪೂರ್ವದಲ್ಲಿರುವ ಪಿಸ್ಗಾದ ಕೆಳಗಿರುವ ಉಪ್ಪಿನ ಸಮುದ್ರವಾದ ಬಯಲು ಸಮುದ್ರದವರೆಗೆ ವ್ಯಾಪಿಸಿತ್ತು.


ಯೆಹೋವ ದೇವರ ವಾಕ್ಯವು ಅಮಿತ್ತೈಯನ ಮಗ ಯೋನನಿಗೆ ಬಂದಿತು:


ಅದೇ ಕಾಲದಲ್ಲಿ ಸೊಲೊಮೋನನೂ, ಅವನ ಸಂಗಡ ಲೆಬೊ ಹಮಾತಿನ ಪ್ರದೇಶ ಮೊದಲುಗೊಂಡು ಈಜಿಪ್ಟಿನ ನದಿಯವರೆಗೆ ಇರುವ ಮಹಾ ಜನಾಂಗವಾಗಿ ಕೂಡಿಬಂದಿದ್ದ ಸಮಸ್ತ ಇಸ್ರಾಯೇಲರೂ ತಮ್ಮ ದೇವರಾದ ಯೆಹೋವ ದೇವರ ಮುಂದೆ ಏಳೇಳು ದಿನಗಳು ಅಂದರೆ ಹದಿನಾಲ್ಕು ದಿವಸ ಹಬ್ಬವನ್ನು ಆಚರಿಸಿದರು.


ಅಲ್ಲಿಂದ ಪೂರ್ವದಿಕ್ಕಿನಲ್ಲಿ ಮುಂದುವರೆದು ಗತ್‌ಹೇಫೆರನ್ನು ಮತ್ತು ಎತ್‌ಕಾಚೀನನ್ನು ದಾಟಿ, ರಿಮ್ಮೋನವರೆಗೂ ಹೋಗಿ ನೇಯಗೆ ತಿರುಗುತ್ತದೆ.


ಆಗ ಅವರು ಏರಿಹೋಗಿ ಚಿನ್ ಎಂಬ ಮರುಭೂಮಿಯಿಂದ ಹಮಾತಿನ ಕಡೆಯಲ್ಲಿರುವ ರೆಹೋಬಿನವರೆಗೂ ದೇಶವನ್ನು ಸಂಚರಿಸಿ ನೋಡಿದರು.


ವ್ಯಭಿಚಾರಿಯಾದ ಈ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡುಕುತ್ತದೆ, ಆದರೆ ಪ್ರವಾದಿ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವ ಸೂಚಕಕಾರ್ಯವೂ ಇದಕ್ಕೆ ಸಿಕ್ಕುವುದಿಲ್ಲ,” ಎಂದು ಹೇಳಿ, ಯೇಸು ಅವರನ್ನು ಬಿಟ್ಟು ಹೊರಟು ಹೋದರು.


ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಸ್ರಾಯೇಲಿನ ಮನೆತನದವರೇ, ಜನಾಂಗವನ್ನು ನಿಮಗೆ ವಿರೋಧವಾಗಿ ಎಬ್ಬಿಸುವೆನು. ಲೆಬೊ ಹಮಾತಿನ ಪ್ರದೇಶದಿಂದ ಅರಾಬಾ ತಗ್ಗಿನ ನದಿಯವರೆಗೂ ನಿಮ್ಮನ್ನು ಹಿಂಸಿಸುವರು.


ಆಗ ಯೆಹೋವಾಹಾಜನ ಮಗ ಯೋವಾಷನು ಯುದ್ಧದಲ್ಲಿ ತನ್ನ ತಂದೆ ಯೆಹೋವಾಹಾಜನ ಕೈಯಿಂದ ಹಜಾಯೇಲನು ತೆಗೆದುಕೊಂಡಿದ್ದ ಪಟ್ಟಣಗಳನ್ನು ಅವನ ಮಗ ಬೆನ್ಹದದನ ಕೈಯಿಂದ ತಿರುಗಿ ತೆಗೆದುಕೊಂಡನು. ಯೋವಾಷನು ಅವನನ್ನು ಮೂರು ಸಾರಿ ಸೋಲಿಸಿ, ಇಸ್ರಾಯೇಲಿನ ಪಟ್ಟಣಗಳನ್ನು ತಿರುಗಿ ತೆಗೆದುಕೊಂಡನು.


ಆ ದಿವಸಗಳಲ್ಲಿ ಯೆಹೋವ ದೇವರು ಇಸ್ರಾಯೇಲನ್ನು ತಗ್ಗಿಸಲು ಆರಂಭಿಸಿದರು. ಹಜಾಯೇಲನು ಬಂದು ಇಸ್ರಾಯೇಲಿನ ಸಮಸ್ತ ಮೇರೆಗಳಲ್ಲಿ ಅವರನ್ನು ಸಂಹರಿಸಿದನು.


ಇವರೆಲ್ಲರು ಉಪ್ಪಿನ ಸಮುದ್ರವಾಗಿರುವ ಸಿದ್ದೀಮ್ ತಗ್ಗಿನಲ್ಲಿ ಒಟ್ಟಾಗಿ ಕೂಡಿಬಂದರು.


ಯೆಹೋವ ದೇವರು ಇಸ್ರಾಯೇಲರಿಗೆ ಒಬ್ಬ ವಿಮೋಚಕನನ್ನು ಕೊಟ್ಟಿದ್ದರಿಂದ, ಅವರು ಅರಾಮ್ಯರ ಕೈಯಿಂದ ತಪ್ಪಿಸಿಕೊಂಡು ಹೋದರು. ಆಗ ಇಸ್ರಾಯೇಲರು ಮುಂಚಿನ ಹಾಗೆ ತಮ್ಮ ಮನೆಗಳಲ್ಲಿ ವಾಸವಾಗಿದ್ದರು.


ಆದರೆ ಅವನು ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು. ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗ ಯಾರೊಬ್ಬಾಮನ ಪಾಪಗಳನ್ನೆಲ್ಲಾ ಅವನು ತೊರೆದುಬಿಡಲಿಲ್ಲ.


ನೀವು ಖಡ್ಗದಿಂದ ನಾಶವಾಗುವಿರಿ. ನಾನು ಇಸ್ರಾಯೇಲಿನ ಮೇರೆಯಲ್ಲಿ ನ್ಯಾಯತೀರಿಸುವೆನು. ಆಗ ನಾನೇ ಯೆಹೋವ ದೇವರೆಂದು ನಿಮಗೆ ತಿಳಿಯುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು