Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 14:26 - ಕನ್ನಡ ಸಮಕಾಲಿಕ ಅನುವಾದ

26 ಇಸ್ರಾಯೇಲಿನಲ್ಲಿ ಪ್ರತಿಯೊಬ್ಬರೂ ಸ್ವತಂತ್ರನಾಗಿರಲಿ, ಗುಲಾಮನಾಗಿರಲಿ, ಎಲ್ಲರು ಎಷ್ಟು ಕಷ್ಟದಲ್ಲಿದ್ದಾರೆಂಬುದನ್ನು ಯೆಹೋವ ದೇವರು ನೋಡಿದರು. ಅವರಿಗೆ ಸಹಾಯ ಮಾಡುವವರು ಯಾರೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಇಸ್ರಾಯೇಲರು ಯೆಹೋವನಿಗೆ ಅವಿಧೇಯರಾಗಿ ಘೋರಕಷ್ಟವನ್ನು ಅನುಭವಿಸುತ್ತಿದ್ದರು. ಅವರಲ್ಲಿ ಸ್ವತಂತ್ರರೂ, ಪರತಂತ್ರರೂ ನಾಶವಾಗುತ್ತಿದ್ದರೆ, ಅವರನ್ನು ರಕ್ಷಿಸುವವನು ಒಬ್ಬನೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 “ಇಸ್ರಯೇಲರು ಘೋರಕಷ್ಟವನ್ನು ಅನುಭವಿಸುತ್ತಿರುತ್ತಾರೆ. ಅವರಲ್ಲಿದ್ದ ಸ್ವತಂತ್ರರೂ ಪರತಂತ್ರರೂ ನಾಶವಾಗಿದ್ದಾರೆ, ಅವರನ್ನು ರಕ್ಷಿಸುವವನು ಒಬ್ಬನೂ ಇಲ್ಲ,” ಎಂಬುದನ್ನು ಸರ್ವೇಶ್ವರ ನೋಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಇಸ್ರಾಯೇಲ್ಯರು ಘೋರಕಷ್ಟವನ್ನು ಅನುಭವಿಸುತ್ತಿರುತ್ತಾರೆ, ಅವರಲ್ಲಿದ್ದ ಸ್ವತಂತ್ರರೂ ಪರತಂತ್ರರೂ ನಾಶವಾಗಿದ್ದಾರೆ, ಅವರನ್ನು ರಕ್ಷಿಸುವವನು ಒಬ್ಬನೂ ಇಲ್ಲ ಎಂಬದನ್ನು ಯೆಹೋವನು ನೋಡಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಇಸ್ರೇಲಿನ ಸ್ವತಂತ್ರರಾದ ಜನರೂ ಗುಲಾಮರೂ ಬಾಧೆಪಡುತ್ತಿರುವುದನ್ನು ಯೆಹೋವನು ನೋಡಿದನು. ಇಸ್ರೇಲರಿಗೆ ಸಹಾಯ ಮಾಡುವವರು ಯಾರೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 14:26
14 ತಿಳಿವುಗಳ ಹೋಲಿಕೆ  

ಏಕೆಂದರೆ ಯೆಹೋವ ದೇವರು ತಮ್ಮ ಜನರಿಗೆ ನ್ಯಾಯತೀರಿಸುವರು. ದೇವರು ತಮ್ಮ ಸೇವಕರ ಬಲ ಹೋಯಿತೆಂದೂ, ಗುಲಾಮರಾಗಲಿ, ಸ್ವತಂತ್ರರಾಗಲಿ ಉಳಿಯಲಿಲ್ಲವೆಂದೂ ನೋಡಿದಾಗ, ತಮ್ಮ ಸೇವಕರಿಗೋಸ್ಕರ ಕರುಣಿಸುವರು.


ಆಗ ಯೆಹೋವಾಹಾಜನು ಯೆಹೋವ ದೇವರನ್ನು ಬೇಡಿಕೊಂಡದ್ದರಿಂದ ಯೆಹೋವ ದೇವರು ಅವನ ಮೊರೆಯನ್ನು ಕೇಳಿದರು. ಅರಾಮ್ಯರ ಅರಸನು ಇಸ್ರಾಯೇಲರನ್ನು ಬಾಧೆಪಡಿಸಿದ್ದನ್ನು ಅವರು ಕಂಡು,


ಆಗ ಯೆಹೋವ ದೇವರು, “ಈಜಿಪ್ಟಿನಲ್ಲಿರುವ ನನ್ನ ಜನರ ವ್ಯಥೆಯನ್ನು ವಾಸ್ತವವಾಗಿಯೂ ಕಂಡಿದ್ದೇನೆ. ಬಿಟ್ಟೀ ಮಾಡಿಸುವವರ ವಿಷಯದಲ್ಲಿ ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನು ಬಲ್ಲೆನು.


ಅವರಿಗೆ ಬಂದ ಎಲ್ಲಾ ಇಕ್ಕಟ್ಟಿನಲ್ಲಿ ಆತನಿಗೆ ಇಕ್ಕಟ್ಟಾಯಿತು. ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು. ತನ್ನ ಪ್ರೀತಿಯಲ್ಲಿಯೂ, ತನ್ನ ಕನಿಕರದಲ್ಲಿಯೂ ಆತನೇ ಅವರನ್ನು ವಿಮೋಚಿಸಿದನು. ಪೂರ್ವಕಾಲದ ದಿವಸಗಳಲ್ಲೆಲ್ಲಾ ಅವರನ್ನು ಎತ್ತಿಕೊಂಡು ಹೊತ್ತುಕೊಂಡನು.


‘ನಾನು ನಿನ್ನ ಮೇಲೆ ಕೇಡನ್ನು ಬರಮಾಡಿ, ನಿನ್ನ ಸಂತತಿಯನ್ನು ತೆಗೆದುಹಾಕಿ, ಅಹಾಬನಿಗೆ ಒಬ್ಬ ಗಂಡು ಮಗುವನ್ನಾದರೂ ಉಳಿಸದೆ ಇಸ್ರಾಯೇಲಿನಲ್ಲಿ ಎಲ್ಲರನ್ನು ತೆಗೆದುಹಾಕಿಬಿಡುವೆನು.


“ ‘ಆದ್ದರಿಂದ ನಾನು ಯಾರೊಬ್ಬಾಮನ ಮನೆಯ ಮೇಲೆ ಕೇಡನ್ನು ಬರಮಾಡಿ, ಯಾರೊಬ್ಬಾಮನ ಕಡೆಯಿಂದ ಸಮಸ್ತ ಗಂಡಸರನ್ನೂ, ಇಸ್ರಾಯೇಲಿನಲ್ಲಿ ಉಳಿದು ಬಚ್ಚಿಟ್ಟುಕೊಂಡವರನ್ನೂ ಕಡಿದುಬಿಟ್ಟು, ಅದು ತೀರುವವರೆಗೆ ಮನುಷ್ಯನು ರಸವನ್ನು ಹೇಗೆ ತೆಗೆದು ಹಾಕುತ್ತಾನೋ, ಹಾಗೆಯೇ ನಾನು ಯಾರೊಬ್ಬಾಮನ ಮನೆಯ ಉಳುವಿಕೆಯನ್ನು ತೆಗೆದುಹಾಕುತ್ತೇನೆ.


ಅವರು ಅನ್ಯದೇವರುಗಳನ್ನು ತಮ್ಮ ಮಧ್ಯದಲ್ಲಿಂದ ತೊರೆದುಬಿಟ್ಟು, ಯೆಹೋವ ದೇವರನ್ನು ಸೇವಿಸಿದರು. ಆಗ ಯೆಹೋವ ದೇವರು ಇಸ್ರಾಯೇಲಿನ ಕಷ್ಟಕ್ಕೋಸ್ಕರ ಮನಸ್ಸಿನಲ್ಲಿ ಬಹಳ ನೊಂದುಕೊಂಡರು.


ಈಗ ಇಸ್ರಾಯೇಲರ ಕೂಗು ನನಗೆ ಮುಟ್ಟಿದೆ. ಈಜಿಪ್ಟಿನವರು ಅವರಿಗೆ ಕೊಡುತ್ತಿರುವ ಉಪದ್ರವವನ್ನು ನಾನು ನೋಡಿದ್ದೇನೆ.


ಅಹಾಬನ ಮನೆಯೆಲ್ಲಾ ನಾಶವಾಗುವುದು. ಇಸ್ರಾಯೇಲಿನಲ್ಲಿ ಉಳಿದಿರುವ ಅಹಾಬನ ಗಂಡಸರಲ್ಲಿ ಸ್ವತಂತ್ರರಾಗಲಿ, ಗುಲಾಮರಾಗಲಿ ಎಲ್ಲರನ್ನೂ ತೆಗೆದುಹಾಕುವೆನು.


ನನ್ನಿಂದ ದೂರವಾಗಿರಬೇಡಿರಿ, ಏಕೆಂದರೆ ಇಕ್ಕಟ್ಟು ಸಮೀಪವಾಗಿದೆ, ಸಹಾಯಕರು ನನಗೆ ಯಾರೂ ಇಲ್ಲ.


ಆದರೆ ಯೆಹೋವ ದೇವರು ಅಬ್ರಹಾಮನ, ಇಸಾಕನ, ಯಾಕೋಬನ ಸಂಗಡ ಒಡಂಬಡಿಕೆಯನ್ನು ಮಾಡಿದ್ದರಿಂದ ಇಸ್ರಾಯೇಲರಿಗೆ ಕೃಪೆತೋರಿಸಿ ಅವರ ಮೇಲೆ ಅನುಕಂಪಗೊಂಡರು. ಅವರನ್ನು ನಾಶಮಾಡಲು, ಆತನು ಅವರನ್ನು ತನ್ನಿಂದ ತೊರೆದುಬಿಡಲು ಅವರನ್ನು ತನ್ನ ಸಮ್ಮುಖದಿಂದ ಹೊರಡಿಸಲು ಮನಸ್ಸು ಮಾಡಲಿಲ್ಲ.


ದೇವರು ಅವರ ಹೃದಯವನ್ನು ಕಷ್ಟದಿಂದ ತಗ್ಗಿಸಿದಾಗ ಸಹಾಯಕನಿಲ್ಲದೆ ಕೆಳಗೆ ಬಿದ್ದರು.


“ಗೋಡೆಯನ್ನು ಕಟ್ಟಿ ನಾಡನ್ನು ನಾನು ಹಾಳುಮಾಡದಂತೆ ನಾಡಿನ ಪರವಾಗಿ ಪೌಳಿಗೋಡೆಯ ಬಿರುಕಿನಲ್ಲಿ ನಿಲ್ಲುವ ಒಬ್ಬ ಮನುಷ್ಯನನ್ನು ಅವರೊಳಗೆ ನಾನು ಹುಡುಕಿದೆನು. ಆದರೆ ಯಾರೂ ಸಿಕ್ಕಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು