Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 15:16 - ಕನ್ನಡ ಸಮಕಾಲಿಕ ಅನುವಾದ

16 ಆ ಸಮಯದಲ್ಲಿ ಮೆನಹೇಮನು ತಿರ್ಚದಿಂದ ತಿಪ್ಸಹು ಪಟ್ಟಣಕ್ಕೆ ಹೋದಾಗ ಅಲ್ಲಿಯವರು ತಮ್ಮ ಊರುಬಾಗಿಲುಗಳನ್ನು ತನಗೆ ತೆರೆಯದೆ ಇದ್ದುದರಿಂದ ಎಲ್ಲರನ್ನೂ, ಅದರ ಮೇರೆಗಳಲ್ಲಿದ್ದವರೆಲ್ಲರನ್ನೂ ಸಂಹರಿಸಿದನು. ತಿಪ್ಸಹವನ್ನು ಹಾಳು ಮಾಡಿ, ಎಲ್ಲಾ ಗರ್ಭಿಣಿಯರ ಹೊಟ್ಟೆಗಳನ್ನು ಸೀಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಮೆನಹೇಮನು ತಿರ್ಚದಿಂದ ತಿಪ್ಸಹುವಿಗೆ ಹೋದಾಗ ಅಲ್ಲಿಯವರು ತಮ್ಮ ಊರುಬಾಗಿಲನ್ನು ಅವನಿಗೆ ತೆರೆಯಲಿಲ್ಲ, ಆದುದರಿಂದ ಅವನು ಆ ಊರನ್ನು ಅದಕ್ಕೆ ಸೇರಿದ ಪ್ರದೇಶವನ್ನೂ ಹಾಳುಮಾಡಿ ಅದರ ನಿವಾಸಿಗಳನ್ನು ಸಂಹರಿಸಿದನು. ಅದರಲ್ಲಿದ್ದ ಎಲ್ಲಾ ಗರ್ಭಿಣಿಗಳ ಹೊಟ್ಟೆಯನ್ನು ಸೀಳಿಹಾಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಮೆನಹೇಮನು ತಿರ್ಚದಿಂದ ತಿಪ್ಸಹುವಿಗೆ ಹೋದಾಗ ಅಲ್ಲಿಯವರು ತಮ್ಮ ಊರುಬಾಗಿಲನ್ನು ಅವನಿಗೆ ತೆರೆಯಲಿಲ್ಲ. ಆದುದರಿಂದ ಅವನು ಅದನ್ನೂ ಅದಕ್ಕೆ ಸೇರಿದ ಪ್ರದೇಶವನ್ನೂ ಹಾಳುಮಾಡಿದನು. ಅದರ ನಿವಾಸಿಗಳನ್ನು ಸಂಹರಿಸಿದನು. ಅದರಲ್ಲಿದ್ದ ಎಲ್ಲಾ ಗರ್ಭಿಣಿಯರ ಹೊಟ್ಟೆ ಸೀಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಮೆನಹೇಮನು ತಿರ್ಚದಿಂದ ತಿಪ್ಸಹುವಿಗೆ ಹೋದಾಗ ಅಲ್ಲಿಯವರು ತಮ್ಮ ಊರುಬಾಗಲನ್ನು ಅವನಿಗೆ ತೆರೆದುಕೊಡಲಿಲ್ಲವಾದದರಿಂದ ಅವನು ಅದನ್ನೂ ಅದಕ್ಕೆ ಸೇರಿದ ಪ್ರದೇಶವನ್ನೂ ಹಾಳುಮಾಡಿ ಅದರ ನಿವಾಸಿಗಳನ್ನು ಸಂಹರಿಸಿದನು; ಅದರಲ್ಲಿದ್ದ ಎಲ್ಲಾ ಗರ್ಭಿಣಿಗಳ ಹೊಟ್ಟೆಸೀಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಶಲ್ಲೂಮನು ಸತ್ತನಂತರ, ಮೆನಹೇಮನು ತಿಪ್ಸಹುವನ್ನು ಮತ್ತು ಅದರ ಸುತ್ತಲಿನ ಪ್ರದೇಶವನ್ನು ಸೋಲಿಸಿದನು. ಜನರು ನಗರದ ಬಾಗಿಲನ್ನು ಅವನಿಗೆ ತೆರೆಯಲು ನಿರಾಕರಿಸಿದರು. ಆದ್ದರಿಂದ ಮೆನಹೇಮನು ಅವರನ್ನು ಸೋಲಿಸಿ ಆ ನಗರದಲ್ಲಿದ್ದ ಗರ್ಭಿಣಿ ಸ್ತ್ರೀಯರ ಹೊಟ್ಟೆಗಳನ್ನು ಸೀಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 15:16
6 ತಿಳಿವುಗಳ ಹೋಲಿಕೆ  

ಆಗ ಹಜಾಯೇಲನು, “ನನ್ನ ಒಡೆಯನು ಅಳುವುದೇಕೆ?” ಎಂದನು. ಅದಕ್ಕವನು, “ಏಕೆಂದರೆ ಇಸ್ರಾಯೇಲರಿಗೆ ನೀನು ಮಾಡಲು ಹೋಗುವ ಕೇಡು ನನಗೆ ತಿಳಿದದೆ. ನೀನು ಅವರ ಕೋಟೆಗಳಿಗೆ ಬೆಂಕಿ ಹತ್ತಿಸಿ, ಅವರ ಯೌವನಸ್ಥರನ್ನು ಖಡ್ಗದಿಂದ ಕೊಂದು, ಅವರ ಕೂಸುಗಳನ್ನು ತುಂಡು ತುಂಡುಗಳಾಗಿ ಮಾಡಿ, ಅವರ ಗರ್ಭಿಣಿ ಸ್ತ್ರೀಯರನ್ನು ಸೀಳಿಬಿಡುವೆ,” ಎಂದ ಉತ್ತರಕೊಟ್ಟನು.


ಸಮಾರ್ಯವು ತನ್ನ ದೇವರಿಗೆ ತಿರುಗಿಬಿದ್ದದರಿಂದ, ತನ್ನ ದೋಷಫಲವನ್ನು ಅನುಭವಿಸಲೇಬೇಕು. ಅದರ ಜನರು ಖಡ್ಗದಿಂದ ಹತರಾಗುವರು, ವೈರಿಗಳು ಅವಳ ಮಕ್ಕಳನ್ನು ಬಂಡೆಗೆ ಅಪ್ಪಳಿಸುವರು. ಗರ್ಭಿಣಿಯರ ಹೊಟ್ಟೆಯನ್ನು ಸೀಳುವರು.”


ಯೂಫ್ರೇಟೀಸ್ ನದಿಯ ಈಚೆಯಲ್ಲಿ ತಿಪ್ಸಹು ಮೊದಲುಗೊಂಡು ಗಾಜದವರೆಗೂ, ನದಿಯ ಈಚೆಯಲ್ಲಿರುವ ಸಮಸ್ತ ಅರಸರ ಮೇಲೆ ಅವನು ಅಧಿಕಾರಿಯಾಗಿದ್ದನು. ಇದಲ್ಲದೆ ಅವನಿಗೆ ಸುತ್ತಲಿರುವ ಸಮಸ್ತ ದಿಕ್ಕಿನಲ್ಲಿ ಅವನಿಗೆ ಸಮಾಧಾನವಿತ್ತು.


ಯೆಹೋವ ದೇವರು ಹೀಗೆ ಹೇಳುತ್ತಾರೆ: “ಅಮ್ಮೋನಿನ ಮಕ್ಕಳು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ತಮ್ಮ ಮೇರೆಯನ್ನು ವಿಸ್ತಾರ ಮಾಡುವುದಕ್ಕಾಗಿ, ಗಿಲ್ಯಾದಿನ ಗರ್ಭಿಣಿಯರನ್ನು ಸೀಳಿಬಿಟ್ಟಿದ್ದಾರೆ.


ಶಲ್ಲೂಮನ ಇತರ ಕ್ರಿಯೆಗಳೂ ಅವನು ಮಾಡಿದ ಒಳಸಂಚೂ ಇಸ್ರಾಯೇಲಿನ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.


ಆಗ ಅಬೀಮೆಲೆಕನು ಆ ಗೋಪುರಕ್ಕೆ ಬಂದು, ಅದರ ವಿರುದ್ಧ ಯುದ್ಧಮಾಡಿ, ಗೋಪುರದ ಬಾಗಿಲನ್ನು ಸುಟ್ಟು ಬಿಡುವುದಕ್ಕೆ ಅದರ ಬಳಿಗೆ ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು