Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 15:30 - ಕನ್ನಡ ಸಮಕಾಲಿಕ ಅನುವಾದ

30 ಇದಲ್ಲದೆ ಏಲನ ಮಗ ಹೋಶೇಯನು ರೆಮಲ್ಯನ ಮಗ ಪೆಕಹನ ವಿರುದ್ಧ ಒಳಸಂಚುಮಾಡಿ, ಇವನನ್ನು ಉಜ್ಜೀಯನ ಮಗ ಯೋತಾಮನ ಆಳ್ವಿಕೆಯ ಇಪ್ಪತ್ತನೆಯ ವರ್ಷದಲ್ಲಿ ಸಂಹರಿಸಿ, ಅವನಿಗೆ ಬದಲಾಗಿ ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಆಗ ಏಲನ ಮಗನಾದ ಹೋಶೇಯನು, ರೆಮಲ್ಯನ ಮಗನಾದ ಪೆಕಹನಿಗೆ ವಿರುದ್ಧವಾಗಿ ಒಳಸಂಚು ಮಾಡಿ, ಇವನನ್ನು ಉಜ್ಜೀಯನ ಮಗನಾದ ಯೋತಾಮನ ಆಳ್ವಿಕೆಯ ಇಪ್ಪತ್ತನೆಯ ವರ್ಷದಲ್ಲಿ ಕೊಂದು ಇವನಿಗೆ ಬದಲಾಗಿ ತಾನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಆಗ ಏಲನ ಮಗ ಹೋಶೇಯನು, ರೆಮಲ್ಯನ ಮಗ ಪೆಕಹನಿಗೆ ವಿರುದ್ಧ ಒಳಸಂಚು ಮಾಡಿ, ಇವನನ್ನು ಉಜ್ಜೀಯನ ಮಗ ಯೋತಾಮನ ಆಳ್ವಿಕೆಯ ಇಪ್ಪತ್ತನೆಯ ವರ್ಷದಲ್ಲಿ ಕೊಂದು, ಇವನ ಸ್ಥಾನದಲ್ಲಿ ತಾನೇ ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಆಗ ಏಲನ ಮಗನಾದ ಹೋಶೇಯನು ರೆಮಲ್ಯನ ಮಗನಾದ ಪೆಕಹನಿಗೆ ವಿರೋಧವಾಗಿ ಒಳಸಂಚುಮಾಡಿ ಇವನನ್ನು ಉಜ್ಜೀಯನ ಮಗನಾದ ಯೋತಾಮನ ಆಳಿಕೆಯ ಇಪ್ಪತ್ತನೆಯ ವರುಷದಲ್ಲಿ ಕೊಂದು ಇವನಿಗೆ ಬದಲಾಗಿ ತಾನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಏಲನ ಮಗನಾದ ಹೋಶೇಯನು ರೆಮಲ್ಯನ ಮಗನಾದ ಪೆಕಹನ ವಿರುದ್ಧ ಸಂಚುಗಳನ್ನು ಮಾಡಿ ಪೆಕಹನನ್ನು ಕೊಂದುಹಾಕಿದನು. ಪೆಕಹನ ನಂತರ ಹೋಶೇಯನು ಹೊಸ ರಾಜನಾದನು. ಉಜ್ಜೀಯನ ಮಗನಾದ ಯೋತಾಮನು ಯೆಹೂದದ ರಾಜನಾಗಿದ್ದ ಇಪ್ಪತ್ತನೆಯ ವರ್ಷದಲ್ಲಿ ಹೀಗಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 15:30
15 ತಿಳಿವುಗಳ ಹೋಲಿಕೆ  

ಯೆಹೂದದ ಅರಸನಾದ ಆಹಾಜನ ಆಳ್ವಿಕೆಯ ಹನ್ನೆರಡನೆಯ ವರ್ಷದಲ್ಲಿ ಏಲನ ಮಗ ಹೋಶೇಯನು ಇಸ್ರಾಯೇಲಿನ ಮೇಲೆ ಸಮಾರ್ಯದಲ್ಲಿ ಅರಸನಾಗಿ, ಒಂಬತ್ತು ವರ್ಷ ಆಳಿದನು.


ಹಾಗೆಯೇ, ಬಹಳ ದುಷ್ಟತ್ವದ ನಿಮಿತ್ತ ಬೇತೇಲಿಗೆ ಸಂಭವಿಸುವುದು. ಬೆಳಗಿನ ಜಾವದಲ್ಲಿ ಇಸ್ರಾಯೇಲಿನ ಅರಸನು ಸಂಪೂರ್ಣವಾಗಿ ನಾಶವಾಗುವನು.


ಸಮಾರ್ಯ ಹಾಗು ಅದರ ಅರಸನು ನೀರಿನ ಮೇಲಿನ ಕಡ್ಡಿಯ ಹಾಗೆ ಅಳಿದು ಹೋಗುವನು.


ಆಗ ಅವರು, “ನಮಗೆ ಅರಸನಿಲ್ಲ, ಏಕೆಂದರೆ ನಾವು ಯೆಹೋವ ದೇವರಲ್ಲಿ ಭಯಭಕ್ತಿ ಇಟ್ಟವರಲ್ಲ. ಅರಸನು ನಮಗಿದ್ದರೂ ಏನು ಮಾಡುವನು?” ಎಂದುಕೊಳ್ಳುತ್ತಾರೆ.


“ಈ ಜನರು ಮೆಲ್ಲಗೆ ಹರಿಯುವ ಸಿಲೋವದ ನೀರನ್ನು ತ್ಯಜಿಸಿ, ರೆಚೀನನನ್ನೂ ರೆಮಲ್ಯನ ಮಗನನ್ನೂ ನೆಚ್ಚಿಕೊಂಡು ಮೆರೆದಿದ್ದರಿಂದ,


ಅದೇ ಕಾಲದಲ್ಲಿ ಅರಸನಾದ ಆಹಾಜನು ಅಸ್ಸೀರಿಯದ ಅರಸರ ಬಳಿಗೆ ಕಳುಹಿಸಿ ಸಹಾಯ ಬೇಡಿಕೊಂಡನು.


ರೆಮಲ್ಯನ ಮಗ ಪೆಕಹನ ಆಳ್ವಿಕೆಯ ಹದಿನೇಳನೆಯ ವರ್ಷದಲ್ಲಿ ಯೆಹೂದದ ಅರಸನಾಗಿರುವ ಯೋತಾಮನ ಮಗ ಆಹಾಜನು ಆಳಲು ಆರಂಭಿಸಿದನು.


ಆದರೆ ಅವನ ಅಧಿಪತಿಯಾದಂಥ ರೆಮಲ್ಯನ ಮಗ ಪೆಕಹನು ಗಿಲ್ಯಾದಿನ ಐವತ್ತು ಮಂದಿಯನ್ನು ತನ್ನ ಸಂಗಡ ಕೂಡಿಸಿಕೊಂಡು ಪೆಕಹ್ಯನ ವಿರುದ್ಧ ಒಳಸಂಚುಮಾಡಿ, ಸಮಾರ್ಯದಲ್ಲಿರುವ ಅರಮನೆಯ ಗರ್ಭಗೃಹದಲ್ಲಿ ಪೆಕಹ್ಯನನ್ನು ಮತ್ತು ಅರ್ಗೋಬ್, ಅರ್ಯೇ ಎಂಬವರನ್ನು ಕೊಂದುಹಾಕಿದನು. ಅನಂತರ, ಪೆಕಹ್ಯನಿಗೆ ಬದಲಾಗಿ ಪೆಕಹನು ಅರಸನಾದನು.


ಯಾಬೇಷನ ಮಗ ಶಲ್ಲೂಮನು ಜೆಕರ್ಯನ ಮೇಲೆ ಒಳಸಂಚುಮಾಡಿ, ಜನರ ಮುಂದೆ ಅವನನ್ನು ಹೊಡೆದು, ಕೊಂದುಹಾಕಿ, ಅವನಿಗೆ ಬದಲಾಗಿ ಅರಸನಾದನು.


ಇಸ್ರಾಯೇಲಿನ ಅರಸನಾದ ಪೆಕಹನ ಕಾಲದಲ್ಲಿ ಅಸ್ಸೀರಿಯದ ಅರಸನಾದ ತಿಗ್ಲತ್ಪಿಲೆಸೆರನು ಬಂದು, ಇಯ್ಯೋನ್, ಆಬೇಲ್ ಬೇತ್ ಮಾಕಾ, ಯಾನೋಹ, ಕೆದೆಷ್, ಹಾಚೋರ್, ಗಿಲ್ಯಾದ್, ಗಲಿಲಾಯ ಮತ್ತು ನಫ್ತಾಲಿಯ ಎಲ್ಲಾ ಭೂಮಿಯನ್ನು ವಶಮಾಡಿಕೊಂಡು, ಜನರನ್ನು ಸೆರೆಯಾಗಿ ಅಸ್ಸೀರಿಯಾ ದೇಶಕ್ಕೆ ಒಯ್ದನು.


ಪೆಕಹನ ಇತರ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ ಇಸ್ರಾಯೇಲಿನ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.


ಹೌದು, ಆ ಮಗುವು ಕೆಟ್ಟದ್ದನ್ನು ನಿರಾಕರಿಸಿ ಒಳ್ಳೆಯದನ್ನು ಆರಿಸಿಕೊಳ್ಳುವುದಕ್ಕಿಂತ ಮುಂಚೆಯೇ, ನೀನು ಭಯಪಡುವ ಆ ಅರಸರುಗಳ ದೇಶ ನಿರ್ಜನವಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು