Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 17:21 - ಕನ್ನಡ ಸಮಕಾಲಿಕ ಅನುವಾದ

21 ದೇವರು ಇಸ್ರಾಯೇಲನ್ನು ದಾವೀದನ ಸಂತಾನದಿಂದ ವಿಭಾಗಿಸಿದಾಗ, ಅವರು ನೆಬಾಟನ ಮಗ ಯಾರೊಬ್ಬಾಮನನ್ನು ಅರಸನನ್ನಾಗಿ ಮಾಡಿಕೊಂಡರು. ಆಗ ಯಾರೊಬ್ಬಾಮನು ಇಸ್ರಾಯೇಲನ್ನು ಯೆಹೋವ ದೇವರ ಮಾರ್ಗದಿಂದ ತಪ್ಪಿಸಿ, ಮಹಾ ಪಾಪಮಾಡಲು ಪ್ರೇರೇಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆತನು ಇಸ್ರಾಯೇಲರ ರಾಜ್ಯವನ್ನು ದಾವೀದ ಸಂತಾನದವರ ಕೈಯಿಂದ ಕಿತ್ತುಕೊಂಡ ನಂತರ ಇಸ್ರಾಯೇಲರು ನೆಬಾಟನ ಮಗನಾದ ಯಾರೊಬ್ಬಾಮನನ್ನು ಅರಸನನ್ನಾಗಿ ಮಾಡಿಕೊಂಡರು. ಅವನು ಅವರನ್ನು ಯೆಹೋವನ ಭಕ್ತಿಯಿಂದ ಬೀಳಿಸಿ ಮಹಾ ಪಾಪಕ್ಕೆ ಒಳಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಇಸ್ರಯೇಲ್ ರಾಜ್ಯವನ್ನು ದಾವೀದ ಸಂತಾನದವರ ಕೈಯಿಂದ ಕಿತ್ತುಕೊಂಡ ನಂತರ, ಇಸ್ರಯೇಲರು ನೆಬಾಟನ ಮಗ ಯಾರೊಬ್ಬಾಮನನ್ನು ಅರಸನನ್ನಾಗಿ ಮಾಡಿಕೊಂಡರು. ಅವನು ಅವರನ್ನು ಸರ್ವೇಶ್ವರನ ಭಕ್ತಿಮಾರ್ಗದಿಂದ ತಪ್ಪಿಸಿ ಮಹಾಪಾಪಕ್ಕೆ ಒಳಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆತನು ಇಸ್ರಾಯೇಲ್ ರಾಜ್ಯವನ್ನು ದಾವೀದಸಂತಾನದವರ ಕೈಯಿಂದ ಕಿತ್ತುಕೊಂಡನಂತರ ಇಸ್ರಾಯೇಲ್ಯರು ನೆಬಾಟನ ಮಗನಾದ ಯಾರೊಬ್ಬಾಮನನ್ನು ಅರಸನನ್ನಾಗಿ ಮಾಡಿಕೊಳ್ಳಲು ಅವನು ಅವರನ್ನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಯೆಹೋವನು ಇಸ್ರೇಲನ್ನು ದಾವೀದನ ವಂಶಾವಳಿಯಿಂದ ಕಿತ್ತುಹಾಕಿದನು. ಇಸ್ರೇಲರು ನೆಬಾಟನ ಮಗನಾದ ಯಾರೊಬ್ಬಾಮನನ್ನು ತಮ್ಮ ರಾಜನನ್ನಾಗಿಸಿಕೊಂಡರು. ಯಾರೊಬ್ಬಾಮನು ಇಸ್ರೇಲರನ್ನು ಯೆಹೋವನಿಂದ ದೂರಮಾಡಿದನು. ಇಸ್ರೇಲರು ಮಹಾಪಾಪಗಳನ್ನು ಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 17:21
19 ತಿಳಿವುಗಳ ಹೋಲಿಕೆ  

ಆದಕಾರಣ ಯೆಹೋವ ದೇವರು ಸೊಲೊಮೋನನಿಗೆ, “ನೀನು ಹೀಗೆ ನಡೆದು ನಾನು ನಿನಗೆ ಆಜ್ಞಾಪಿಸಿದ ನನ್ನ ಒಡಂಬಡಿಕೆಯನ್ನೂ, ನನ್ನ ಕಟ್ಟಳೆಗಳನ್ನೂ ಕೈಗೊಳ್ಳದೆ ಹೋದುದರಿಂದ ನಿಶ್ಚಯವಾಗಿ ನಾನು ರಾಜ್ಯವನ್ನು ನಿನ್ನಿಂದ ಕಸಿದುಕೊಂಡು ಅದನ್ನು ನಿನ್ನ ಸೇವಕನಿಗೆ ಕೊಡುವೆನು.


ಯಾರೊಬ್ಬಾಮನಿಗೆ ಈ ಹತ್ತು ತುಂಡುಗಳನ್ನು ನೀನು ತೆಗೆದುಕೋ. ಇಸ್ರಾಯೇಲಿನ ದೇವರಾದ ಯೆಹೋವ ದೇವರು, “ಇಗೋ, ನಾನು ಸೊಲೊಮೋನನ ಕೈಯಿಂದ ರಾಜ್ಯವನ್ನು ಹರಿದು ತೆಗೆದುಕೊಂಡು, ಹತ್ತು ಗೋತ್ರಗಳನ್ನು ನಿನಗೆ ಕೊಡುವೆನು.


ಯೆಹೋವ ದೇವರು ಯಾರೊಬ್ಬಾಮನ ಪಾಪಗಳ ನಿಮಿತ್ತ ಇಸ್ರಾಯೇಲರನ್ನು ಶತ್ರುಗಳಿಗೆ ಒಪ್ಪಿಸಿಬಿಡುವರು. ಏಕೆಂದರೆ ಯಾರೊಬ್ಬಾಮನೇ ಪಾಪಮಾಡಿ, ಪಾಪವನ್ನು ಮಾಡಲು ಇಸ್ರಾಯೇಲರನ್ನು ಪ್ರೇರೇಪಿಸಿದನು,” ಎಂದನು.


ಅದಕ್ಕೆ ಯೇಸು, “ಪರಲೋಕದಿಂದ ನಿನಗೆ ಕೊಟ್ಟ ಹೊರತು ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಿನ ಪಾಪವಿದೆ,” ಎಂದು ಉತ್ತರಕೊಟ್ಟರು.


ಯೆಹೋವ ದೇವರು ನಿನ್ನ ಮೇಲೆಯೂ, ನಿನ್ನ ಜನರ ಮೇಲೆಯೂ, ನಿನ್ನ ತಂದೆಯ ಮನೆಯ ಮೇಲೆಯೂ ಯೆಹೂದದಿಂದ ಎಫ್ರಾಯೀಮು ಅಗಲಿದ ದಿನದಿಂದ ಅಂದರೆ ಅಸ್ಸೀರಿಯದ ಅರಸನ ಕಾಲದಿಂದಲೂ ಬಾರದೆ ಇದ್ದ ದಿವಸಗಳನ್ನು ಬರಮಾಡುವರು.”


ನನ್ನ ಅನ್ಯಾಯವು ಬಹು ಘೋರವಾಗಿದ್ದರೂ ನಿಮ್ಮ ಹೆಸರಿನ ನಿಮಿತ್ತ ಯೆಹೋವ ದೇವರೇ ನನ್ನನ್ನು ಮನ್ನಿಸಿರಿ.


ಉನ್ನತ ಸ್ಥಳಗಳಿಗೋಸ್ಕರವೂ ದೆವ್ವಗಳಿಗೋಸ್ಕರವೂ, ಯಾರೊಬ್ಬಾಮನು ಮಾಡಿದ ಕರುಗಳ ಮೂರ್ತಿಪೂಜೆಗಾಗಿ ತಾನೇ ಯಾಜಕರನ್ನು ನೇಮಿಸಿದ್ದರಿಂದ,


ಇದಲ್ಲದೆ ಅವನು ಕೋಟೆಗಳನ್ನು ಬಲಪಡಿಸಿ, ಅವುಗಳಲ್ಲಿ ನಾಯಕರನ್ನೂ, ಆಹಾರ, ಎಣ್ಣೆ, ದ್ರಾಕ್ಷಾರಸ ಇರುವ ಉಗ್ರಾಣಗಳನ್ನೂ ಇಟ್ಟನು.


ದಾವೀದನ ಮನೆಯಿಂದ ರಾಜ್ಯವನ್ನು ವಿಭಾಗಿಸಿ ನಿನಗೆ ಕೊಟ್ಟೆನು. ಆದರೆ ನನ್ನ ಆಜ್ಞೆಗಳನ್ನು ಕೈಗೊಂಡು, ನನ್ನ ದೃಷ್ಟಿಯಲ್ಲಿ ಮೆಚ್ಚಿಕೆಯಾದದ್ದನ್ನು ಮಾಡಿ, ತನ್ನ ಸಂಪೂರ್ಣ ಹೃದಯದಿಂದ ನನ್ನನ್ನು ಹಿಂಬಾಲಿಸಿದ ನನ್ನ ಸೇವಕನಾದ ದಾವೀದನ ಹಾಗೆ ನೀನು ಇರಲಿಲ್ಲ.


ನನ್ನ ಮಕ್ಕಳೇ, ಹಾಗೆ ಮಾಡಬೇಡಿರಿ. ಏಕೆಂದರೆ ಯೆಹೋವ ದೇವರ ಜನರಲ್ಲಿ ನೀವು ಮಾಡಿರುವ ಕಾರ್ಯಗಳ ವರ್ತಮಾನವು ಹರಡಿದ್ದು ಒಳ್ಳೆಯದಲ್ಲ.


ಈ ಯುವಕರ ಪಾಪವು ಯೆಹೋವ ದೇವರ ದೃಷ್ಟಿಯಲ್ಲಿ ಅಧಿಕವಾಗಿತ್ತು. ಏಕೆಂದರೆ ಅವರು ಯೆಹೋವ ದೇವರ ನೈವೇದ್ಯವನ್ನು ತುಚ್ಛವಾಗಿ ಕಂಡರು.


ಮೋಶೆಯು ಆರೋನನಿಗೆ, “ಈ ಜನರ ಮೇಲೆ ದೊಡ್ಡ ಪಾಪವನ್ನು ನೀನು ಬರಮಾಡುವಂತೆ ಅವರು ನಿನಗೆ ಏನು ಮಾಡಿದರು?” ಎಂದು ಕೇಳಿದನು.


ಅಬೀಮೆಲೆಕನು ಅಬ್ರಹಾಮನನ್ನು ಕರೆದು ಅವನಿಗೆ, “ನೀನು ನಮಗೆ ಮಾಡಿದ್ದೇನು? ನೀನು ನನ್ನ ಮೇಲೆಯೂ ನನ್ನ ರಾಜ್ಯದ ಮೇಲೆಯೂ ದೊಡ್ಡ ಪಾಪವನ್ನು ಬರಮಾಡುವಂತೆ ನಿನಗೆ ನಾನು ಏನು ಅಪರಾಧ ಮಾಡಿದ್ದೇನೆ? ನೀನು ನನಗೆ ಮಾಡಬಾರದ ಕೆಲಸಗಳನ್ನು ಮಾಡಿದ್ದೀಯೆ,” ಎಂದನು.


ಯಾರೊಬ್ಬಾಮನ ಮನೆಯವರನ್ನು ಭೂಮಿಯಿಂದ ಸಂಹರಿಸುವುದಕ್ಕೂ, ನಾಶಮಾಡುವುದಕ್ಕೂ ಈ ಪಾಪವು ಅವರಿಗೆ ಕಾರಣವಾಯಿತು.


ಇಸ್ರಾಯೇಲರು ಯಾರೊಬ್ಬಾಮನು ಮಾಡಿದ ಸಮಸ್ತ ಪಾಪಗಳಲ್ಲಿ ನಡೆದರು. ಅವುಗಳನ್ನು ತೊರೆದುಬಿಡಲಿಲ್ಲ.


ಆದರೂ ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳಿಗೆ ಅವನು ಅಂಟಿಕೊಂಡು ಅವುಗಳನ್ನು ಬಿಟ್ಟು ತೊಲಗದೆ ಇದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು