Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 17:32 - ಕನ್ನಡ ಸಮಕಾಲಿಕ ಅನುವಾದ

32 ಅವರು ಯೆಹೋವ ದೇವರಿಗೆ ಆರಾಧನೆ ಸಲ್ಲಿಸಿದರು. ಆದರೂ ತಮ್ಮಲ್ಲಿರುವ ಪೂಜಾಸ್ಥಳಗಳ ಯಾಜಕರನ್ನು ನೇಮಿಸಿಕೊಂಡರು. ಇವರು ಪೂಜಾಸ್ಥಳಗಳ ಮೇಲಿರುವ ಮಂದಿರಗಳಲ್ಲಿ ಅವರಿಗೋಸ್ಕರ ಬಲಿಗಳನ್ನು ಅರ್ಪಿಸುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಅವರು ಯೆಹೋವನ ಭಕ್ತರಾಗಿದ್ದರೂ ಮನಸ್ಸಿಗೆ ಬಂದವರನ್ನು ಉನ್ನತ ಪೂಜಾಸ್ಥಳಗಳ ಯಾಜಕರನ್ನಾಗಿ ನೇಮಿಸಿಕೊಂಡು ಅವರ ಮುಖಾಂತರವಾಗಿ ಪೂಜಾಸ್ಥಳದ ಗುಡಿಗಳಲ್ಲಿ ಆರಾಧನೆ ನಡಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಅವರು ಸರ್ವೇಶ್ವರನ ಭಕ್ತರಾಗಿದ್ದರೂ ತಮ್ಮಲ್ಲೆ ಯಾರ್ಯಾರನ್ನೋ ಉನ್ನತ ಪೂಜಾಸ್ಥಳಗಳ ಯಾಜಕರನ್ನಾಗಿ ನೇಮಿಸಿಕೊಂಡು, ಅವರ ಮುಖಾಂತರ ಪೂಜಾಸ್ಥಳದ ಗುಡಿಗಳಲ್ಲಿ ಆರಾಧನೆ ನಡೆಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಅವರು ಯೆಹೋವನ ಭಕ್ತರಾಗಿ ಕನಿಷ್ಠಜನರಲ್ಲಿ ಕೆಲವರನ್ನು ಪೂಜಾಸ್ಥಳಗಳ ಯಾಜಕರನ್ನಾಗಿ ನೇವಿುಸಿಕೊಂಡು ಅವರ ಮುಖಾಂತರವಾಗಿ ಪೂಜಾಸ್ಥಳದ ಗುಡಿಗಳಲ್ಲಿ ಆರಾಧನೆ ನಡಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಆದರೆ ಅವರು ಯೆಹೋವನಲ್ಲಿಯೂ ಭಕ್ತಿಯನ್ನಿಟ್ಟಿದ್ದರು. ಅವರು ಉನ್ನತಸ್ಥಳಗಳಿಗೆ ಯಾಜಕರನ್ನು ಜನರಲ್ಲಿಯೇ ಆಯ್ಕೆ ಮಾಡಿಕೊಂಡರು. ಆ ಯಾಜಕರು ಜನರಿಗಾಗಿ ಉನ್ನತಸ್ಥಳಗಳಲ್ಲಿನ ದೇವಾಲಯಗಳಲ್ಲಿ ಯಜ್ಞವನ್ನು ಅರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 17:32
11 ತಿಳಿವುಗಳ ಹೋಲಿಕೆ  

ಅವನು ಉನ್ನತ ಸ್ಥಳಗಳಲ್ಲಿ ಪೂಜಾಸ್ಥಳಗಳನ್ನು ಕಟ್ಟಿಸಿ, ಲೇವಿಯರಲ್ಲದ ಸಾಮಾನ್ಯ ಜನರನ್ನು ಯಾಜಕರನ್ನಾಗಿ ನೇಮಿಸಿದನು.


ಆದರೆ ಪ್ರತಿ ಜನಾಂಗದವರೂ, ತಾವು ವಾಸಿಸಿದ ಪಟ್ಟಣಗಳಲ್ಲಿ ತಮಗೆ ದೇವರುಗಳನ್ನು ಮಾಡಿ, ಸಮಾರ್ಯದವರು ಮಾಡಿದ ಪೂಜಾಸ್ಥಳಗಳ ಮಂದಿರಗಳಲ್ಲಿ ಅವುಗಳನ್ನು ಇರಿಸಿದರು.


ಮಾಳಿಗೆಗಳ ಮೇಲೆ ತಲೆಬಾಗಿಸಿ ಆಕಾಶದ ನಕ್ಷತ್ರಗಣಕ್ಕೆ ಆರಾಧಿಸುವವರನ್ನೂ ಯೆಹೋವ ದೇವರ ಮೇಲೆಯೂ ಮಲ್ಕಾಮನ ಮೇಲೆಯೂ ಆಣೆ ಇಟ್ಟುಕೊಳ್ಳುವವರನ್ನೂ


ಇಸ್ರಾಯೇಲಿನ ಅರಸರು ಸಮಾರ್ಯದ ಪಟ್ಟಣಗಳಲ್ಲಿ ಮಾಡಿದ ಯೆಹೋವ ದೇವರ ಕೋಪಕ್ಕೆ ಕಾರಣವಾಗಿದ್ದ ಉನ್ನತ ಪೂಜಾಸ್ಥಳಗಳನ್ನು ಯೋಷೀಯನು ಕೆಡವಿಹಾಕಿ, ಬೇತೇಲಿನಲ್ಲಿ ತಾನು ಮಾಡಿದಂತೆ ಅವುಗಳಿಗೆ ಮಾಡಿದನು.


ಈ ಕಾರ್ಯದ ತರುವಾಯ ಯಾರೊಬ್ಬಾಮನು ತನ್ನ ಕೆಟ್ಟ ಮಾರ್ಗವನ್ನು ಬಿಟ್ಟು ತಿರುಗದೆ, ಪೂಜಾ ಸ್ಥಳಗಳಿಗೆ ಕನಿಷ್ಠ ಜನರಿಂದ ಪುನಃ ಯಾಜಕರನ್ನು ನೇಮಿಸಿದನು. ಯಾವನಿಗೆ ಮನಸ್ಸಿತ್ತೋ ಅವನನ್ನು ಇವನು ಪ್ರತಿಷ್ಠೆ ಮಾಡಿಸಿದ್ದರಿಂದ, ಪೂಜಾಸ್ಥಳಗಳ ಯಾಜಕರಲ್ಲಿ ಅವನು ಒಬ್ಬನಾಗುವನು.


ವೃದ್ಧ ಪ್ರವಾದಿಯು ಅವನನ್ನು ಹೂಳಿಟ್ಟ ತರುವಾಯ, ಅವನು ತನ್ನ ಮಕ್ಕಳಿಗೆ, “ನಾನು ಸತ್ತಾಗ ದೇವರ ಮನುಷ್ಯನನ್ನು ಹೂಳಿಟ್ಟ ಸಮಾಧಿಯಲ್ಲಿ ನನ್ನನ್ನು ಹೂಳಿಡಿರಿ. ನನ್ನ ಎಲುಬುಗಳನ್ನು ಅವನ ಎಲುಬುಗಳ ಬಳಿಯಲ್ಲಿ ಇಡಿರಿ.


ಆದರೆ ಅವರು ಅಲ್ಲಿ ವಾಸಿಸಲು ಆರಂಭಿಸಿದಾಗ, ಯೆಹೋವ ದೇವರಿಗೆ ಭಯಪಡದ ಕಾರಣ, ಯೆಹೋವ ದೇವರು ಅವರ ಮಧ್ಯದಲ್ಲಿ ಸಿಂಹಗಳನ್ನು ಕಳುಹಿಸಿದರು. ಅವು ಅವರಲ್ಲಿ ಕೆಲವರನ್ನು ಕೊಂದುಹಾಕಿದವು.


ಅವರು ಯೆಹೋವ ದೇವರಿಗೆ ಆರಾಧನೆ ಮಾಡಿದರು. ಆದರೂ ಅವರು ಬಿಟ್ಟುಬಂದ ದೇಶಗಳ ಪದ್ಧತಿಯ ಪ್ರಕಾರ ತಮ್ಮ ಕುಲದೇವತೆಗಳನ್ನು ಸಹ ಸೇವಿಸಿದರು.


ಅವರು ಜೆರುಬ್ಬಾಬೆಲನ ಬಳಿಗೂ, ಕುಟುಂಬಗಳ ಮುಖ್ಯಸ್ಥರ ಬಳಿಗೂ ಬಂದು ಅವರಿಗೆ, “ನಾವು ನಿಮ್ಮ ಹಾಗೆ ನಿಮ್ಮ ದೇವರನ್ನು ಹುಡುಕುತ್ತೇವೆ. ನಮ್ಮನ್ನು ಇಲ್ಲಿಗೆ ಬರಮಾಡಿದ ಅಸ್ಸೀರಿಯದ ಅರಸನಾದ ಏಸರ್‌ಹದ್ದೋನ್ ಎಂಬವನ ದಿವಸಗಳು ಮೊದಲುಗೊಂಡು, ಅವರಿಗೆ ನಾವೂ ಬಲಿಯನ್ನು ಅರ್ಪಿಸುತ್ತಾ ಇದ್ದೇವೆ, ಕಟ್ಟುವುದರಲ್ಲಿ ನಾವು ಸಹಾಯ ಮಾಡುತ್ತೇವೆ,” ಎಂದರು.


ಹೀಗೆ ಅವನು ತನ್ನ ಸ್ವಂತ ಹೃದಯದಲ್ಲಿ ಯೋಚಿಸಿದ ತಿಂಗಳಲ್ಲಿ ಎಂಟನೆಯ ತಿಂಗಳ ಹದಿನೈದನೆಯ ದಿವಸದಲ್ಲಿ ಅವನು ಬೇತೇಲಿನಲ್ಲಿ ಕಟ್ಟಿಸಿದ ಪೀಠದ ಮೇಲೆ ಬಲಿಗಳನ್ನರ್ಪಿಸಿ, ಇಸ್ರಾಯೇಲರಿಗೆ ಹಬ್ಬವನ್ನು ನೇಮಿಸಿದನು. ಇದಲ್ಲದೆ ತಾನೇ ಪೀಠದ ಮೇಲೆ ಬಲಿಗಳನ್ನರ್ಪಿಸಿ ಧೂಪವನ್ನು ಸುಟ್ಟನು.


ಇವರು ಯೆಹೋವ ದೇವರಿಗೆ ಇಂದಿನವರೆಗೂ ಭಯಪಡದೆ, ತಮ್ಮ ಕೆತ್ತಿದ ವಿಗ್ರಹಗಳನ್ನು ಸೇವಿಸಿದರು. ಇವರ ಪಿತೃಗಳು ಮಾಡಿದ ಹಾಗೆ, ಇವರೂ, ಇವರ ಮಕ್ಕಳೂ, ಇವರ ಮೊಮ್ಮಕ್ಕಳೂ ಮಾಡುತ್ತಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು