Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 17:39 - ಕನ್ನಡ ಸಮಕಾಲಿಕ ಅನುವಾದ

39 ನಿಮ್ಮ ದೇವರಾಗಿರುವ ಯೆಹೋವ ದೇವರಿಗೆ ಭಯಪಡಿರಿ. ಆಗ ಅವರು ನಿಮ್ಮನ್ನು ನಿಮ್ಮ ಶತ್ರುಗಳ ಕೈಯೊಳಗಿಂದ ವಿಮೋಚನೆ ಮಾಡುವರು,” ಎಂದು ಹೇಳಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಆದರೆ, ನಿಮ್ಮ ದೇವರಾದ ಯೆಹೋವನಲ್ಲಿ ನೀವು ಭಯಭಕ್ತಿಯುಳ್ಳವರಾಗಿರಬೇಕು. ಆಗ ಆತನು ನಿಮ್ಮನ್ನು ಎಲ್ಲಾ ಶತ್ರುಗಳ ಕೈಗೆ ಸಿಕ್ಕದಂತೆ ಕಾಪಾಡುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ನಿಮ್ಮ ದೇವರಾಗಿರುವ ಸರ್ವೇಶ್ವರನಾದ ನನ್ನಲ್ಲಿ ಭಯಭಕ್ತಿಯುಳ್ಳವರಾಗಿರಬೇಕು; ಆಗ ನಿಮ್ಮನ್ನು ಯಾವ ಶತ್ರುಗಳ ಕೈಗೂ ಸಿಕ್ಕದಂತೆ ತಪ್ಪಿಸುವೆನು,” ಎಂದು ಹೇಳಿ ಅವರೊಡನೆ ಒಡಂಬಡಿಕೆ ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ನಿಮ್ಮ ದೇವರಾಗಿರುವ ಯೆಹೋವನಾದ ನನ್ನಲ್ಲಿ ಭಯಭಕ್ತಿಯುಳ್ಳವರಾಗಿರಬೇಕು; ಆಗ ನಿಮ್ಮನ್ನು ಎಲ್ಲಾ ಶತ್ರುಗಳ ಕೈಗೆ ಸಿಕ್ಕದಂತೆ ತಪ್ಪಿಸುವೆನು ಎಂದು ಹೇಳಿ ಅವರೊಡನೆ ಒಡಂಬಡಿಕೆ ಮಾಡಿಕೊಂಡನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ನೀವು ನಿಮ್ಮ ದೇವರಾದ ಯೆಹೋವನನ್ನು ಮಾತ್ರ ಆರಾಧಿಸಬೇಕು. ಆಗ ಆತನು ನಿಮ್ಮನ್ನು ನಿಮ್ಮ ಶತ್ರುಗಳಿಂದ ರಕ್ಷಿಸುತ್ತಾನೆ” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 17:39
12 ತಿಳಿವುಗಳ ಹೋಲಿಕೆ  

ದೇವರಲ್ಲಿ ಭಯಭಕ್ತಿಯುಳ್ಳವರ ಮೇಲೆ, ಅವರ ಕರುಣೆಯು ತಲತಲಾಂತರಗಳಿಗೂ ಇರುವುದು.


ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾಗದವರಿಗೆ ಹೆದರಬೇಡಿರಿ. ಆದರೆ ಆತ್ಮ ಮತ್ತು ದೇಹ ಎರಡನ್ನೂ ನರಕದಲ್ಲಿ ನಾಶಮಾಡಬಲ್ಲ ದೇವರಿಗೆ ಭಯಪಡಿರಿ.


ಓ ಜನಾಂಗಗಳ ಅರಸರಾದವರೇ, ನಿಮಗೆ ಭಯಪಡದವನ್ಯಾರು? ಏಕೆಂದರೆ, ನಿಮಗೆ ಅದು ಸಲ್ಲತಕ್ಕದ್ದು. ಏಕೆಂದರೆ, ಜನಾಂಗಗಳ ಎಲ್ಲಾ ಜ್ಞಾನಿಗಳಲ್ಲಿಯೂ, ಅವುಗಳ ಎಲ್ಲಾ ರಾಜ್ಯಗಳಲ್ಲಿಯೂ ನಿಮ್ಮ ಹಾಗೆ ಯಾರೂ ಇಲ್ಲ.


ಆದ್ದರಿಂದ ನೀವು ಬಾಧಿಸುವ ವಿರೋಧಿಗಳ ಕೈಗೆ ಅವರನ್ನು ಒಪ್ಪಿಸಿದಿರಿ. ಆದರೆ ತಮ್ಮ ಇಕ್ಕಟ್ಟಿನ ಕಾಲದಲ್ಲಿ ಅವರು ನಿಮಗೆ ಮೊರೆಯಿಟ್ಟಾಗ, ನೀವು ಪರಲೋಕದಿಂದ ಕೇಳಿ, ನಿಮ್ಮ ಮಹಾ ಕರುಣೆಯ ಪ್ರಕಾರ ಅವರ ವೈರಿಗಳ ಕೈಯಿಂದ ರಕ್ಷಿಸುವುದಕ್ಕೆ ರಕ್ಷಕರನ್ನು ಅವರಿಗೆ ಕಳುಹಿಸಿದಿರಿ.


ಆದರೆ ಮಹಾಶಕ್ತಿಯಿಂದಲೂ, ಚಾಚಿದ ಭುಜಪರಾಕ್ರಮದಿಂದಲೂ ಈಜಿಪ್ಟ್ ದೇಶದಿಂದ ನಿಮ್ಮನ್ನು ಬರಮಾಡಿದ ಯೆಹೋವ ದೇವರಿಗೆ ನೀವು ಭಯಪಟ್ಟು, ಅವರೊಬ್ಬರಿಗೇ ಅಡ್ಡಬಿದ್ದು, ಬಲಿ ಅರ್ಪಿಸಿರಿ.


ಆದರೆ ನೀವು ಯೆಹೋವ ದೇವರಿಗೆ ಭಯಪಟ್ಟು, ನಿಮ್ಮ ಪೂರ್ಣಹೃದಯದಿಂದ ನಂಬಿಗಸ್ತರಾಗಿ ಅವರನ್ನು ಸೇವಿಸಿರಿ. ಏಕೆಂದರೆ ಅವರು ನಿಮಗೋಸ್ಕರ ಎಂಥ ಮಹತ್ತಾದ ಕಾರ್ಯಗಳನ್ನು ಮಾಡಿದರೆಂದು ಆಲೋಚಿಸಿರಿ.


ಇದನ್ನು, ನಾವು ನಮ್ಮ ಶತ್ರುಗಳಿಂದಲೂ ನಮ್ಮನ್ನು ದ್ವೇಷಮಾಡುವವರ ಕೈಯಿಂದಲೂ ರಕ್ಷಣೆ ಹೊಂದುವಂತೆಯೂ


ನಾನು ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ನೀವು ಮರೆಯದೆ, ಇತರ ದೇವರುಗಳಿಗೆ ಭಯಪಡದೆ,


ಆದರೆ ಜನರು ಕೇಳದೆ ತಮ್ಮ ಪೂರ್ವದ ಪದ್ಧತಿಯ ಹಾಗೆ ಮಾಡಿದರು.


ಆಗ ಸಮುಯೇಲನು ಇಸ್ರಾಯೇಲ್ ಮನೆಯವರಿಗೆಲ್ಲಾ ಮಾತನಾಡಿ, “ನೀವು ನಿಮ್ಮ ಪೂರ್ಣಹೃದಯದಿಂದ ಯೆಹೋವ ದೇವರ ಕಡೆಗೆ ತಿರುಗಿ, ನಿಮ್ಮಲ್ಲಿರುವ ಅನ್ಯದೇವರುಗಳನ್ನೂ, ಅಷ್ಟೋರೆತನ್ನೂ ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಿ, ನಿಮ್ಮ ಹೃದಯವನ್ನು ಯೆಹೋವ ದೇವರಿಗೆ ಸಿದ್ಧಮಾಡಿ, ಅವರೊಬ್ಬರನ್ನೇ ಸೇವಿಸಿದರೆ ಅವರು ನಿಮ್ಮನ್ನು ಫಿಲಿಷ್ಟಿಯರ ಕೈಗಳೊಳಗಿಂದ ತಪ್ಪಿಸುವರು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು