Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 17:4 - ಕನ್ನಡ ಸಮಕಾಲಿಕ ಅನುವಾದ

4 ಆದರೆ ಅಸ್ಸೀರಿಯದ ಅರಸನು ಹೋಶೇಯನಲ್ಲಿ ಒಳಸಂಚನ್ನು ಕಂಡುಹಿಡಿದನು. ಏನೆಂದರೆ, ಹೋಶೇಯನು ಅಸ್ಸೀರಿಯದ ಅರಸನಿಗೆ ವರ್ಷ ವರ್ಷಕ್ಕೂ ಕೊಡುವ ಕಪ್ಪವನ್ನು ಕೊಡದೆ, ಈಜಿಪ್ಟಿನ ಅರಸನಾದ ಸೋ ಎಂಬವನ ಬಳಿಗೆ ದೂತರನ್ನು ಕಳುಹಿಸಿದನು. ಆದ್ದರಿಂದ ಅಸ್ಸೀರಿಯದ ಅರಸನು ಅವನನ್ನು ಕಟ್ಟಿ, ಸೆರೆಮನೆಯಲ್ಲಿ ಬಂಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಕೆಲವು ವರ್ಷಗಳಾದ ನಂತರ ಅರಸನಾದ ಹೋಶೇಯನು ಪ್ರತಿವರ್ಷವೂ ಕೊಡಬೇಕಾದ ಕಪ್ಪವನ್ನು ಕೊಡದೆಹೋದುದರಿಂದಲೂ, ಐಗುಪ್ತದ ಅರಸನಾದ ಸೋ ಎಂಬುವವನ ಬಳಿಗೆ ರಾಯಭಾರಿಗಳನ್ನು ಕಳುಹಿಸಿದ್ದರಿಂದಲೂ ಅಶ್ಶೂರದ ಅರಸನು ಇವನನ್ನು ದ್ರೋಹಿಯೆಂದು ತಿಳಿದು ಬಂಧಿಸಿ ಸೆರೆಯಲ್ಲಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಕೆಲವು ವರ್ಷಗಳಾದನಂತರ, ಇವನು ಪ್ರತಿ ವರ್ಷವೂ ಕೊಡಬೇಕಾದ ಕಪ್ಪವನ್ನು ಕೊಡದೆಹೋದನು; ಅದು ಮಾತ್ರವಲ್ಲ, ಈಜಿಪ್ಟಿನ ಅರಸನಾದ ಸೋ ಎಂಬವನ ಬಳಿಗೆ ರಾಯಭಾರಿಗಳನ್ನು ಕಳುಹಿಸಿದ್ದನು. ಈ ಕಾರಣ ಅಸ್ಸೀರಿಯದ ಅರಸನು ಇವನನ್ನು ದ್ರೋಹಿಯೆಂದು ತಿಳಿದು, ಬಂಧಿಸಿ ಸೆರೆಯಲ್ಲಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಕೆಲವು ವರುಷಗಳಾದನಂತರ ಇವನು ಪ್ರತಿವರ್ಷವೂ ಕೊಡಬೇಕಾದ ಕಪ್ಪವನ್ನು ಕೊಡದೆ ಹೋದದರಿಂದಲೂ ಐಗುಪ್ತದ ಅರಸನಾದ ಸೋ ಎಂಬವನ ಬಳಿಗೆ ರಾಯಭಾರಿಗಳನ್ನು ಕಳುಹಿಸಿದದರಿಂದಲೂ ಅಶ್ಶೂರದ ಅರಸನು ಇವನನ್ನು ದ್ರೋಹಿಯೆಂದು ತಿಳಿದು ಬಂಧಿಸಿ ಸೆರೆಯಲ್ಲಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಹೋಶೇಯನು ಈಜಿಪ್ಟಿನ ರಾಜನಲ್ಲಿಗೆ ಸಂದೇಶಕರನ್ನು ಕಳುಹಿಸಿದ್ದನು. ಈಜಿಪ್ಟಿನ ರಾಜನಿಗೆ ಸೋ ಎಂಬ ಹೆಸರಿತ್ತು. ಹೋಶೇಯನು ಅಶ್ಶೂರದ ರಾಜನಿಗೆ ಪ್ರತಿವರ್ಷ ಕಪ್ಪಕಾಣಿಕಯನ್ನು ಕೊಡುತ್ತಿದ್ದನು, ಆದರೆ ಆ ವರ್ಷ ಕೊಡಲಿಲ್ಲ. ಆದರೆ ಅಶ್ಶೂರದ ರಾಜನಿಗೆ ಹೋಶೇಯನು ತನ್ನ ವಿರುದ್ಧ ಮಾಡಿರುವ ಒಳಸಂಚು ತಿಳಿದುಬಂದಿತು. ಆದ್ದರಿಂದ ಅಶ್ಶೂರದ ರಾಜನು ಹೋಶೇಯನನ್ನು ಬಂಧಿಸಿ, ಸೆರೆಯಲ್ಲಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 17:4
17 ತಿಳಿವುಗಳ ಹೋಲಿಕೆ  

‘ನಮ್ಮ ದೇವರಾದ ಯೆಹೋವ ದೇವರು ಅಸ್ಸೀರಿಯದ ಅರಸನ ಕೈಯಿಂದ ನಮ್ಮನ್ನು ಬಿಡಿಸುವರು,’ ಎಂದು ಹಿಜ್ಕೀಯನು ಹೇಳಿ, ನಿಮ್ಮನ್ನು ಹಸಿವೆ ಮತ್ತು ದಾಹದಿಂದ ಸಾಯಿಸುವುದಕ್ಕೆ ಒಪ್ಪಿಸಿಕೊಡಲು ಪ್ರೇರೇಪಿಸುತ್ತಾನಲ್ಲವೇ?


ಅವರು ಚಿದ್ಕೀಯನ ಮಕ್ಕಳನ್ನು ಅವನ ಕಣ್ಣೆದುರಿಗೇ ವಧಿಸಿದರು. ತರುವಾಯ ಅವನ ಕಣ್ಣುಗಳನ್ನು ಕೀಳಿಸಿ, ಅವನಿಗೆ ಬೇಡಿಹಾಕಿಸಿ ಅವನನ್ನು ಬಾಬಿಲೋನಿಗೆ ತೆಗೆದುಕೊಂಡು ಹೋದರು.


ಯೆಹೋವ ದೇವರ ಕೋಪದಿಂದ ಯೆರೂಸಲೇಮಿನ ಮತ್ತು ಯೆಹೂದದ ಮೇಲೆ ಇವೆಲ್ಲ ಉಂಟಾದವು. ಹೀಗೆ ಯೆಹೋವ ದೇವರು ಅವರನ್ನು ತಮ್ಮ ಸಮ್ಮುಖದಿಂದ ತಳ್ಳಿಬಿಟ್ಟರು. ಅನಂತರ ಚಿದ್ಕೀಯನು ಬಾಬಿಲೋನಿನ ಅರಸನಿಗೆ ವಿರೋಧವಾಗಿ ತಿರುಗಿಬಿದ್ದನು.


ಯೆಹೋಯಾಕೀಮನ ಆಳಿಕೆಯಲ್ಲಿ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ದೇಶವನ್ನು ದಾಳಿಮಾಡಿದನು. ಯೆಹೋಯಾಕೀಮನು ಮೂರು ವರ್ಷ ಅವನ ಸೇವಕನಾಗಿದ್ದು, ತರುವಾಯ ಅವನ ಮೇಲೆ ತಿರುಗಿಬಿದ್ದನು.


ಇಗೋ, ನೀನು ಜಜ್ಜಿದ ದಂಟಿಗೆ ಸಮಾನವಾಗಿರುವ ಈಜಿಪ್ಟಿನ ಮೇಲೆ ಭರವಸೆ ಇಟ್ಟಿರುವಿಯಷ್ಟೆ, ಅದರ ಮೇಲೆ ಮನುಷ್ಯನು ಊರಿಕೊಂಡರೆ ಅದು ಅವನ ಕೈಯನ್ನೇ ಚುಚ್ಚಿ ಗಾಯ ಮಾಡುವುದು! ಈಜಿಪ್ಟಿನ ಅರಸನಾದ ಫರೋಹನಲ್ಲಿ ಭರವಸೆ ಇಟ್ಟವರೆಲ್ಲರಿಗೂ ಇದೇ ಗತಿಯಾಗುವದು.


ಯೆಹೋವ ದೇವರು ನಿಮ್ಮನ್ನೂ, ನೀವು ನಿಮ್ಮ ಮೇಲೆ ನೇಮಿಸಿಕೊಳ್ಳುವ ಅರಸನನ್ನೂ, ನೀವೂ, ನಿಮ್ಮ ಪಿತೃಗಳೂ ಅರಿಯದ ಜನಾಂಗದ ಬಳಿಗೆ ಹೋಗುವಂತೆ ಮಾಡುವರು. ಅಲ್ಲಿ ಮರವೂ, ಕಲ್ಲೂ ಆಗಿರುವ ಬೇರೆ ದೇವರುಗಳನ್ನೂ ನೀವು ಪೂಜಿಸುವಿರಿ.


ಅಸ್ಸೀರಿಯದ ಅರಸನಾದ ಶಲ್ಮನೆಸೆರನು ಅವನ ವಿರುದ್ಧ ಬಂದದ್ದರಿಂದ, ಹೋಶೇಯನು ಅವನಿಗೆ ಸೇವಕನಾಗಿ ಅವನಿಗೆ ಕಪ್ಪವನ್ನು ಕೊಟ್ಟನು.


ಆಗ ಅಸ್ಸೀರಿಯದ ಅರಸನು ದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡು, ಸಮಾರ್ಯಕ್ಕೆ ವಿರೋಧವಾಗಿ ಬಂದು ಅದನ್ನು ಮೂರು ವರ್ಷಗಳವರೆಗೂ ಮುತ್ತಿಗೆಹಾಕಿದನು.


ಅವರು ಮಾತುಗಳನ್ನಾಡಿ ಒಡಂಬಡಿಕೆಯನ್ನು ಮಾಡುವುದಕ್ಕೆ ಸುಳ್ಳು ಪ್ರಮಾಣವನ್ನು ಮಾಡುತ್ತಾರೆ. ಆದ್ದರಿಂದ ನ್ಯಾಯತೀರ್ಪು ವಿಷದ ಕಳೆಯ ಹಾಗೆ ಹೊಲದ ಸಾಲುಗಳಲ್ಲಿ ಮೊಳೆಯುತ್ತದೆ.


ಈಗ ನಿನ್ನ ಅರಸನು ಎಲ್ಲಿ? ನಿನ್ನ ಪಟ್ಟಣಗಳೆಲ್ಲಾ ನಿನ್ನವರನ್ನು ಉದ್ಧರಿಸುವನೋ? ನನಗೆ ರಾಜ್ಯವನ್ನೂ ರಾಜ್ಯಾಧಿಕಾರಿಗಳನ್ನೂ ದಯಪಾಲಿಸು ಎಂದು ನನ್ನನ್ನು ಕೇಳಿಕೊಂಡಿಯಷ್ಟೆ. ಆ ನ್ಯಾಯಾಧಿಪತಿಗಳು ಎಲ್ಲಿ?


ಎಫ್ರಾಯೀಮು ಜನಾಂಗಗಳಿಗೆ ತಮ್ಮನ್ನು ಮಾರಿಕೊಂಡಿದ್ದರೂ ಅವರನ್ನು ನಾನು ಈಗ ಒಟ್ಟುಗೂಡಿಸುವೆನು. ಅವರು ಪ್ರಬಲ ಅರಸನ ಹಿಂಸೆಯಿಂದಾಗಿ ಕಷ್ಟಪಡುವರು.


ಯೆಹೂದರೊಂದಿಗೆ ಯೆಹೋವ ದೇವರು ಆಪಾದನೆ ಮಾಡಿ, ಯಾಕೋಬನನ್ನು ತನ್ನ ಮಾರ್ಗಗಳ ಪ್ರಕಾರ ಶಿಕ್ಷಿಸಿ, ಅವನ ಕ್ರಿಯೆಗಳ ಪ್ರಕಾರ ಮುಯ್ಯಿ ತೀರಿಸಿ, ಅವನಿಗೆ ಪ್ರತಿಫಲವನ್ನು ಕೊಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು