Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 17:6 - ಕನ್ನಡ ಸಮಕಾಲಿಕ ಅನುವಾದ

6 ಹೋಶೇಯನ ಒಂಬತ್ತನೆಯ ವರ್ಷದಲ್ಲಿ ಅಸ್ಸೀರಿಯದ ಅರಸನು ಸಮಾರ್ಯವನ್ನು ವಶಪಡಿಸಿಕೊಂಡನು. ಅವನು ಇಸ್ರಾಯೇಲನ್ನು ಅಸ್ಸೀರಿಯ ದೇಶಕ್ಕೆ ಸೆರೆಯಾಗಿ ಒಯ್ದು ಹಲಹ ಪ್ರಾಂತದಲ್ಲಿಯೂ, ಹಾಬೋರ್ ನದಿಯಿರುವ ಗೋಜಾನ್ ಪ್ರಾಂತದಲ್ಲಿಯೂ ಮತ್ತು ಮೇದ್ಯರ ಪಟ್ಟಣಗಳಲ್ಲಿಯೂ ಇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಹೋಶೇಯನ ಆಳ್ವಿಕೆಯ ಒಂಭತ್ತನೆಯ ವರ್ಷದಲ್ಲಿ, ಅಶ್ಶೂರದ ಅರಸನು ಸಮಾರ್ಯವನ್ನು ವಶಪಡಿಸಿಕೊಂಡು, ಎಲ್ಲಾ ಇಸ್ರಾಯೇಲರನ್ನು ಅಶ್ಶೂರ್ ದೇಶಕ್ಕೆ ಸೆರೆಯಾಗಿ ಒಯ್ದನು. ಅವರನ್ನು ಹಲಹು ಪ್ರಾಂತ್ಯದಲ್ಲಿಯೂ, ಹಾಬೋರ್ ಹೊಳೆಯಿರುವ ಗೋಜಾನ್ ಪ್ರಾಂತ್ಯದಲ್ಲಿಯೂ, ಮೇದ್ಯರ ಪಟ್ಟಣಗಳಲ್ಲಿಯೂ ಇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅದು ಹೋಶೇಯನ ಆಳ್ವಿಕೆಯ ಒಂಬತ್ತನೆಯ ವರ್ಷದಲ್ಲಿ ಅವನ ಸ್ವಾಧೀನವಾಯಿತು. ಅವನು ಎಲ್ಲಾ ಇಸ್ರಯೇಲರನ್ನು ಅಸ್ಸೀರಿಯ ದೇಶಕ್ಕೆ ಒಯ್ದು ಹಲಹು ಎಂಬ ಪ್ರಾಂತ್ಯದಲ್ಲಿ, ಹಾಬೋರ್ ನದಿಯಿರುವ ಗೋಜಾನ್ ಪ್ರಾಂತ್ಯದಲ್ಲಿ ಹಾಗು ಮೇದ್ಯರ ಪಟ್ಟಣಗಳಲ್ಲಿ ಇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅದು ಹೋಶೇಯನ ಆಳಿಕೆಯ ಒಂಭತ್ತನೆಯ ವರುಷದಲ್ಲಿ ಅವನ ಸ್ವಾಧೀನವಾಗಲು ಅವನು ಎಲ್ಲಾ ಇಸ್ರಾಯೇಲ್ಯರನ್ನು ಅಶ್ಶೂರ್‍ದೇಶಕ್ಕೆ ಒಯ್ದು ಹಲಹು ಪ್ರಾಂತದಲ್ಲಿಯೂ ಹಾಬೋರ್ ಹೊಳೆಯಿರುವ ಗೋಜಾನ್ ಪ್ರಾಂತದಲ್ಲಿಯೂ ಮೇದ್ಯರ ಪಟ್ಟಣಗಳಲ್ಲಿಯೂ ಇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಹೋಶೇಯನು ಇಸ್ರೇಲಿನ ರಾಜನಾಗಿದ್ದ ಒಂಭತ್ತನೆಯ ವರ್ಷದಲ್ಲಿ ಅಶ್ಶೂರದ ರಾಜನು ಸಮಾರ್ಯವನ್ನು ಸ್ವಾಧೀನಪಡಿಸಿಕೊಂಡನು. ಅಶ್ಶೂರದ ರಾಜನು ಇಸ್ರೇಲರನ್ನು ಸೆರೆಯಾಳುಗಳನ್ನಾಗಿ ಒಯ್ದು ಹಲಹು ಪ್ರಾಂತ್ಯದಲ್ಲಿಯೂ ಹಾಬೋರ್ ಹೊಳೆಯಿರುವ ಗೋಜಾನ್ ಪ್ರಾಂತ್ಯದಲ್ಲಿಯೂ ಮೇದ್ಯರ ನಗರಗಳಲ್ಲಿಯೂ ಇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 17:6
39 ತಿಳಿವುಗಳ ಹೋಲಿಕೆ  

ಸಮಾರ್ಯವು ತನ್ನ ದೇವರಿಗೆ ತಿರುಗಿಬಿದ್ದದರಿಂದ, ತನ್ನ ದೋಷಫಲವನ್ನು ಅನುಭವಿಸಲೇಬೇಕು. ಅದರ ಜನರು ಖಡ್ಗದಿಂದ ಹತರಾಗುವರು, ವೈರಿಗಳು ಅವಳ ಮಕ್ಕಳನ್ನು ಬಂಡೆಗೆ ಅಪ್ಪಳಿಸುವರು. ಗರ್ಭಿಣಿಯರ ಹೊಟ್ಟೆಯನ್ನು ಸೀಳುವರು.”


ಆದಕಾರಣ ಇಸ್ರಾಯೇಲಿನ ದೇವರು ಅಸ್ಸೀರಿಯದ ಅರಸನಾದ ಪೂಲನ ಆತ್ಮವನ್ನೂ ಅಸ್ಸೀರಿಯದ ಅರಸನಾದ ತಿಗ್ಲತ್ಪಿಲೆಸರನ ಆತ್ಮವನ್ನೂ ಪ್ರೇರಿಸಿದ್ದರಿಂದ, ಅವರು ಅವರನ್ನು ಸೆರೆಯಾಗಿ ಒಯ್ದರು. ಆ ರೂಬೇನ್ಯರನ್ನೂ, ಗಾದ್ಯರನ್ನೂ, ಮನಸ್ಸೆಯ ಅರ್ಧ ಗೋತ್ರದವರನ್ನೂ ಹಲಹ, ಹಾಬೋರ್, ಹಾರ, ಎಂಬ ಪ್ರಾಂತಗಳಿಗೂ ಗೋಜಾನ್ ನದಿಯ ಪ್ರದೇಶಗಳಿಗೂ ತೆಗೆದುಕೊಂಡು ಹೋದರು. ಅವರು ಇಂದಿನವರೆಗೂ ಅಲ್ಲಿಯೇ ಇದ್ದಾರೆ.


ಇದಲ್ಲದೆ ಯೆಹೋವ ದೇವರು ನಿಮ್ಮನ್ನು ಭೂಮಿಯ ಈ ಮೇರೆಯಿಂದ ಆ ಮೇರೆಯವರೆಗೂ ಎಲ್ಲಾ ಜನಾಂಗಗಳಲ್ಲಿ ಚದರಿಸುವರು. ಅಲ್ಲಿ ನೀವೂ ನಿಮ್ಮ ಪಿತೃಗಳು ತಿಳಿಯದಂಥ ಮರವೂ ಕಲ್ಲೂ ಆಗಿರುವಂಥ ಬೇರೆ ದೇವರುಗಳನ್ನು ಆರಾಧಿಸುವಿರಿ.


ಆದ್ದರಿಂದ ದಮಸ್ಕದ ಆಚೆ ನಿಮ್ಮನ್ನು ಸೆರೆಯಾಳುಗಳಾಗಿ ಕಳುಹಿಸುವೆ, ಎಂದು ಸರ್ವಶಕ್ತರಾದ ದೇವರೆಂದು ಹೆಸರುಗೊಂಡ ಯೆಹೋವ ದೇವರು ಹೇಳುತ್ತಾರೆ.


ಘೋರ ದರ್ಶನವು ನನಗೆ ತಿಳಿಯಬಂದಿದೆ: ಬಾಧಕನು ಬಾಧಿಸುತ್ತಿದ್ದಾನೆ. ಸೂರೆಗಾರನು ಸೂರೆಮಾಡುತ್ತಿದ್ದಾನೆ. ಏಲಾಮೇ, ಏಳು! ಮೇದ್ಯವೇ ಮುತ್ತಿಗೆ ಹಾಕು, ಅದರ ನಿಟ್ಟುಸಿರನ್ನೆಲ್ಲಾ ನಿಲ್ಲಿಸಿಬಿಟ್ಟಿದ್ದೇನೆ.


ಇಗೋ, ಬೆಳ್ಳಿಯನ್ನು ಲಕ್ಷಿಸದೆ, ಬಂಗಾರದಲ್ಲಿ ಆನಂದಿಸದೆ ಇರುವ ಮೇದ್ಯರನ್ನು ಅವರಿಗೆ ವಿರೋಧವಾಗಿ ನಾನು ಎಬ್ಬಿಸುವೆನು.


ಯೆಹೋವ ದೇವರು ನಿಮ್ಮನ್ನೂ, ನೀವು ನಿಮ್ಮ ಮೇಲೆ ನೇಮಿಸಿಕೊಳ್ಳುವ ಅರಸನನ್ನೂ, ನೀವೂ, ನಿಮ್ಮ ಪಿತೃಗಳೂ ಅರಿಯದ ಜನಾಂಗದ ಬಳಿಗೆ ಹೋಗುವಂತೆ ಮಾಡುವರು. ಅಲ್ಲಿ ಮರವೂ, ಕಲ್ಲೂ ಆಗಿರುವ ಬೇರೆ ದೇವರುಗಳನ್ನೂ ನೀವು ಪೂಜಿಸುವಿರಿ.


ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಯೊರ್ದನನ್ನು ದಾಟಿ ಹೋಗುವ ದೇಶದಲ್ಲಿ ಬಹುಕಾಲ ಬಾಳದೆ, ನಾಶವಾಗಿಹೋಗುವಿರಿ ಎಂದು ಈ ಹೊತ್ತು ನಿಮಗೆ ಖಂಡಿತವಾಗಿ ತಿಳಿಸುತ್ತೇನೆ.


ಜನಾಂಗಗಳೊಳಗೆ ನಾಶವಾಗುವಿರಿ. ನಿಮ್ಮ ಶತ್ರುಗಳ ದೇಶವು ನಿಮ್ಮನ್ನು ತಿಂದುಬಿಡುವುದು.


ಆಗ ಯೆಹೋವ ದೇವರು, “ ‘ಅವನ ಹೆಸರನ್ನು ಲೋ ಅಮ್ಮಿ ಎಂದು ಕರೆ. ಏಕೆಂದರೆ ನೀವು ನನ್ನ ಜನರಲ್ಲ, ನಾನು ನಿಮ್ಮ ದೇವರಾಗಿರುವುದಿಲ್ಲ,’ ಎಂದು ಹೇಳಿದರು.


ಗೋಮೆರಳು ಪುನಃ ಗರ್ಭಿಣಿಯಾಗಿ ಹೆಣ್ಣು ಮಗುವನ್ನು ಹೆತ್ತಳು. ಆಗ ಯೆಹೋವ ದೇವರು ಹೋಶೇಯನಿಗೆ, “ಅವಳನ್ನು ‘ಲೋರುಹಾಮಾ’ ಎಂಬ ಹೆಸರಿನಿಂದ ಕರೆ. ಏಕೆಂದರೆ ನಾನು ಇನ್ನು ಮೇಲೆ ಇಸ್ರಾಯೇಲಿನ ಮನೆತನದವರಿಗೆ ಪ್ರೀತಿ ತೋರಿಸುವುದೇ ಇಲ್ಲ, ಅವರನ್ನು ಯಾವ ರೀತಿಯೂ ಕ್ಷಮಿಸುವದಿಲ್ಲ.


“ಫರ್ಸಿನ್ ಎಂದರೆ ನಿನ್ನ ರಾಜ್ಯವು ವಿಭಿನ್ನವಾಗಿ ಮೇದ್ಯರಿಗೂ, ಪಾರಸಿಯರಿಗೂ ಕೊಡಲಾಗಿದೆ,” ಎಂಬದಾಗಿ ಅರಿಕೆಮಾಡಿದನು.


ನನ್ನ ಪಿತೃಗಳು ಹಾಳುಮಾಡಿದ ಗೋಜಾನ್, ಹಾರಾನ್, ರೆಜೆಫ್ ಮುಂತಾದ ದೇವರುಗಳು ಅವರನ್ನು ಬಿಡುಗಡೆ ಮಾಡಲಿಲ್ಲ. ತೆಲ್ ಅಸ್ಸಾರ್ ಎಂಬಲ್ಲಿದ್ದ ಏದೆನಿನ ಜನರನ್ನು ಈ ದೇವರುಗಳು ಅವರನ್ನು ರಕ್ಷಿಸಲು ಸಾಧ್ಯವಾಯಿತೇ?


ಯೆಫೆತನ ಪುತ್ರರು: ಗೋಮೆರ್, ಮಾಗೋಗ್, ಮಾದಯ್, ಯಾವಾನ್ ತೂಬಲ್, ಮೆಷೆಕ್ ಮತ್ತು ತೀರಾಸ್.


ಇಸ್ರಾಯೇಲಿನ ಅರಸನಾದ ಪೆಕಹನ ಕಾಲದಲ್ಲಿ ಅಸ್ಸೀರಿಯದ ಅರಸನಾದ ತಿಗ್ಲತ್ಪಿಲೆಸೆರನು ಬಂದು, ಇಯ್ಯೋನ್, ಆಬೇಲ್ ಬೇತ್ ಮಾಕಾ, ಯಾನೋಹ, ಕೆದೆಷ್, ಹಾಚೋರ್, ಗಿಲ್ಯಾದ್, ಗಲಿಲಾಯ ಮತ್ತು ನಫ್ತಾಲಿಯ ಎಲ್ಲಾ ಭೂಮಿಯನ್ನು ವಶಮಾಡಿಕೊಂಡು, ಜನರನ್ನು ಸೆರೆಯಾಗಿ ಅಸ್ಸೀರಿಯಾ ದೇಶಕ್ಕೆ ಒಯ್ದನು.


ಏಕೆಂದರೆ ಯುದ್ಧವು ದೇವರಿಂದ ಉಂಟಾದ ಕಾರಣ, ಅನೇಕ ಜನರು ಹತರಾದರು. ಇವರು ಸೆರೆಯಾಗಿ ಹೋಗುವ ಕಾಲದವರೆಗೂ ಅವರ ಸ್ಥಳದಲ್ಲಿ ವಾಸವಾಗಿದ್ದರು.


ಮೇದ್ಯರ ದೇಶದಲ್ಲಿರುವ ಅಹ್ಮೆತಾ ರಾಜಧಾನಿಯಲ್ಲಿ ಜ್ಞಾಪಕಾರ್ಥದ ಒಂದು ಸುರುಳಿ ಸಿಕ್ಕಿತು. ಅದರಲ್ಲಿ ಹೀಗೆ ಬರೆಯಲಾಗಿತ್ತು:


ಕಲ್ನೋ, ಕರ್ಕೆಮೀಷಿನ ಹಾಗಲ್ಲವೋ? ಹಮಾತ್ ಅರ್ಪಾದಿನ ಹಾಗಲ್ಲವೇ? ಸಮಾರ್ಯವು ದಮಸ್ಕದ ಹಾಗಲ್ಲವೋ?


ಹಮಾತ್, ಅರ್ಪಾದ್, ಸೆಫರ್ವಯಿಮಿನ ದೇವರುಗಳು ಎಲ್ಲಿ? ಅವರು ಸಮಾರ್ಯವನ್ನು ನನ್ನ ಕೈಯಿಂದ ಬಿಡಿಸಿಕೊಂಡರೋ?


“ಯೆಹೋವ ದೇವರೇ, ಅಸ್ಸೀರಿಯದ ಅರಸರು ಸಕಲ ಜನಾಂಗಗಳನ್ನೂ ಅವರ ದೇಶಗಳನ್ನೂ ಹಾಳು ಮಾಡಿ, ಅವರ ದೇವತೆಗಳನ್ನು ಬೆಂಕಿಯಲ್ಲಿ ಹಾಕಿದ್ದು ನಿಜ.


ಇಸ್ರಾಯೇಲನ್ನು ಕಬಳಿಸಲಾಗಿದೆ. ಅವರು ಜನಾಂಗಗಳಲ್ಲಿ ಬೇಡವಾದ ಪಾತ್ರೆಯ ಹಾಗೆ ಇದ್ದಾರೆ.


ಆದ್ದರಿಂದ ಯೆಹೋವ ದೇವರು ಹೇಳುವುದೇನೆಂದರೆ: “ ‘ನಿನ್ನ ಹೆಂಡತಿ ಪಟ್ಟಣದಲ್ಲಿ ವ್ಯಭಿಚಾರಿಣಿಯಾಗುವಳು. ನಿನ್ನ ಪುತ್ರ ಪುತ್ರಿಯರೂ ಖಡ್ಗದಿಂದ ಬೀಳುವರು. ನಿನ್ನ ದೇಶವನ್ನು ಅಳೆಯಲಾಗುತ್ತದೆ ಮತ್ತು ವಿಭಾಗಿಸಲಾಗುತ್ತದೆ. ನೀನು ಅಪವಿತ್ರವಾದ ದೇಶದಲ್ಲಿ ಸಾಯುವಿ. ಇಸ್ರಾಯೇಲ್ ನಿಶ್ಚಯವಾಗಿ ತನ್ನ ದೇಶದಿಂದ ಸೆರೆಯಾಗಿ ಕರೆದೊಯ್ಯಲಾಗುವುದು.’ ”


“ಪಾಪ ಮಾಡದವನು ಯಾವನೂ ಇಲ್ಲವಲ್ಲಾ. ಆದ್ದರಿಂದ ಅವರು ನಿಮಗೆ ವಿರೋಧವಾಗಿ ಪಾಪಮಾಡಲು, ನೀವು ಅವರ ಮೇಲೆ ಕೋಪಿಸಿಕೊಂಡು ದೂರವಾದರೂ, ಸಮೀಪವಾದರೂ ಶತ್ರುವಿನ ದೇಶಕ್ಕೆ ಅವರು ಸೆರೆಯಾಗಿ ಹೋಗುವಂತೆ ನೀವು ಅವರನ್ನು ಶತ್ರುವಿನ ಕೈಯಲ್ಲಿ ಒಪ್ಪಿಸಿದರೆ,


ಯೆಹೋವ ದೇವರು ಪ್ರವಾದಿಗಳಾದ ತಮ್ಮ ಸೇವಕರ ಮುಖಾಂತರ ಎಚ್ಚರಿಸಿದ ಹಾಗೆ, ಇಸ್ರಾಯೇಲನ್ನು ದೇವರು ತಮ್ಮ ಸಮ್ಮುಖದಿಂದ ತೆಗೆದುಹಾಕಿದರು. ಹೀಗೆ ಇಸ್ರಾಯೇಲರು ಬಹು ಕಾಲದವರೆಗೂ ತಮ್ಮ ದೇಶದಿಂದ ಅಸ್ಸೀರಿಯ ದೇಶಕ್ಕೆ ಸೆರೆಯಾಗಿ ಇರಬೇಕಾಯಿತು. ಅವರು ಇಂದಿನವರೆಗೂ ಅಲ್ಲಿಯೇ ಇದ್ದಾರೆ.


ಹಮಾತ್, ಅರ್ಪಾದ್ ದೇವರುಗಳು ಎಲ್ಲಿ? ಸೆಫರ್ವಯಿಮ್, ಹೇನ, ಇವ್ವಗಳ ದೇವರುಗಳು ಎಲ್ಲಿ? ಅವರು ಸಮಾರ್ಯವನ್ನು ನನ್ನ ಕೈಯಿಂದ ಬಿಡಿಸಿಕೊಂಡರೋ?


ನಾನು ಯೆರೂಸಲೇಮಿನ ಮೇಲೆ ಸಮಾರ್ಯದ ವಿರುದ್ಧ ಬಳಸಿದ ನೂಲನ್ನೂ, ಅಹಾಬನ ಮನೆಯ ವಿರುದ್ಧ ಬಳಸಿದ ಮಟ್ಟಗೋಲನ್ನೂ ಚಾಚಿ, ಒಬ್ಬನು ತಟ್ಟೆಯನ್ನು ಒರೆಸಿದಂತೆ ಅದನ್ನು ಒರೆಸಿ ತಲೆಕೆಳಗಾಗಿ ಹಾಕುವ ಹಾಗೆ ನಾನು ಯೆರೂಸಲೇಮನ್ನು ಅಳಿಸಿಬಿಡುವೆನು.


“ಆದಕಾರಣ ನಮ್ಮ ದೇವರೇ, ಪ್ರೀತಿಯ ಒಡಂಬಡಿಕೆಯನ್ನು ಕೈಗೊಳ್ಳುವಂಥ ಮಹಾ ಪರಾಕ್ರಮವುಳ್ಳ ಭಯಭಕ್ತಿಗೆ ಕಾರಣರಾದ ದೇವರೇ, ಅಸ್ಸೀರಿಯದ ಅರಸರ ಕಾಲ ಮೊದಲ್ಗೊಂಡು ಇಂದಿನವರೆಗೆ ನಮ್ಮ ಮೇಲೆಯೂ, ನಮ್ಮ ಅರಸರ ಮೇಲೆಯೂ, ನಮ್ಮ ಪ್ರಧಾನರ ಮೇಲೆಯೂ, ನಮ್ಮ ಯಾಜಕರ ಮೇಲೆಯೂ, ನಮ್ಮ ಪ್ರವಾದಿಗಳ ಮೇಲೆಯೂ, ನಮ್ಮ ಪಿತೃಗಳ ಮೇಲೆಯೂ, ನಿಮ್ಮ ಸಮಸ್ತ ಜನರ ಮೇಲೆಯೂ ಬಂದ ಇವೆಲ್ಲಾ ಕಷ್ಟಸಂಕಟಗಳು ನಿಮಗೆ ಅಲ್ಪವಾಗಿ ಕಾಣದಿರಲಿ.


ಏಕೆಂದರೆ ಆ ಮಗುವು, ‘ಅಪ್ಪಾ’ ಅಥವಾ ‘ಅಮ್ಮಾ’ ಎಂದು ಕೂಗಬಲ್ಲವನಾಗುವುದಕ್ಕಿಂತ ಮುಂಚೆ ಅಸ್ಸೀರಿಯದ ಅರಸನು ದಮಸ್ಕದ ಆಸ್ತಿಯನ್ನೂ ಸಮಾರ್ಯದ ಸೂರೆಯನ್ನೂ ತೆಗೆದುಕೊಂಡು ಹೋಗುವನು” ಎಂದರು.


ಆ ದಿವಸದಲ್ಲಿ ಯಾಕೋಬ್ಯರ ವೈಭವ ತಗ್ಗುವುದು. ಅವರ ಕೊಬ್ಬು ಕರಗುವುದು.


ಸ್ವಲ್ಪ ಕಾಲವಾದ ನಂತರ ನಾನು ಬಂದು ನಿಮ್ಮನ್ನು ಧಾನ್ಯ, ದ್ರಾಕ್ಷಾರಸ, ಆಹಾರ, ದ್ರಾಕ್ಷಿತೋಟ, ಇವು ಸಮೃದ್ಧಿಯಾಗಿರುವ ನಿಮ್ಮ ದೇಶಕ್ಕೆ ಸಮಾನವಾಗಿರುವ ಇನ್ನೊಂದು ದೇಶಕ್ಕೆ ಕರೆದುಕೊಂಡು ಹೋಗುವೆನು.


“ಇಸ್ರಾಯೇಲನು ಚದರಿಹೋದ ಕುರಿಯಾಗಿದ್ದನು; ಸಿಂಹಗಳು ಅವನನ್ನು ಓಡಿಸಿಬಿಟ್ಟವು; ಮೊದಲು ಅಸ್ಸೀರಿಯನ ಅರಸನು ಅವನನ್ನು ತಿಂದುಬಿಟ್ಟನು. ಕಡೆಯಲ್ಲಿ ಬಾಬಿಲೋನಿನ ಅರಸನಾದ ಈ ನೆಬೂಕದ್ನೆಚ್ಚರನು ಅವನ ಎಲುಬುಗಳನ್ನು ಮುರಿದಿದ್ದಾನೆ.”


ಆಗ ಯೆಹೋವ ದೇವರು ಹೋಶೇಯನಿಗೆ, “ಈ ಮಗುವಿಗೆ ಇಜ್ರೆಯೇಲ್ ಎಂದು ಹೆಸರಿಡು. ಏಕೆಂದರೆ ಶೀಘ್ರದಲ್ಲಿಯೇ ನಾನು ಇಜ್ರೆಯೇಲ್ ಕಣಿವೆಯಲ್ಲಿ ರಕ್ತವನ್ನು ಸುರಿಸಿದ ಯೇಹುವಿನ ಮನೆತನದವರ ಮೇಲೆ ಮುಯ್ಯಿತೀರಿಸಿಕೊಳ್ಳುವೆನು. ಇಸ್ರಾಯೇಲ್ ರಾಜ್ಯವನ್ನು ಅಂತ್ಯಗೊಳಿಸುವೆನು.


ಅವರು ಯೆಹೋವ ದೇವರ ದೇಶದಲ್ಲಿ ನೆಲೆಸುವುದಿಲ್ಲ. ಆದರೆ ಎಫ್ರಾಯೀಮು ಈಜಿಪ್ಟಿಗೆ ಹಿಂದಿರುಗುವುದು. ಅವರು ಅಸ್ಸೀರಿಯದಲ್ಲಿ ಅಶುದ್ಧವಾದವುಗಳನ್ನು ತಿನ್ನುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು