Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 18:12 - ಕನ್ನಡ ಸಮಕಾಲಿಕ ಅನುವಾದ

12 ಏಕೆಂದರೆ ಅವರು ತಮ್ಮ ದೇವರಾದ ಯೆಹೋವ ದೇವರ ಮಾತನ್ನು ಕೇಳದೆ, ಅವರ ಒಡಂಬಡಿಕೆಯನ್ನೂ, ಯೆಹೋವ ದೇವರ ಸೇವಕನಾದ ಮೋಶೆಯು ಆಜ್ಞಾಪಿಸಿದ್ದ ಸಮಸ್ತವನ್ನೂ ಮೀರಿದರು. ಅವರು ದೇವರ ಆಜ್ಞೆಗಳಿಗೆ ಕಿವಿಗೊಡಲಿಲ್ಲ, ಅವುಗಳಂತೆ ನಡೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಏಕೆಂದರೆ ಅವರು ತಮ್ಮ ದೇವರಾದ ಯೆಹೋವನ ಮಾತನ್ನು ಕೇಳದೆ ಆತನ ಒಡಂಬಡಿಕೆಯನ್ನು ಮೀರಿ, ಆತನ ಸೇವಕನಾದ ಮೋಶೆಯ ಆಜ್ಞೆಗಳಿಗೆ ವಿಧೇಯರಾಗಿ ನಡೆಯಲಿಲ್ಲ. ದೇವರ ಆಜ್ಞೆಗಳಿಗೆ ಕಿವಿಗೊಡದೇ ಅವುಗಳಂತೆ ನಡೆಯದೇ ಇದ್ದುದರಿಂದಲೇ ಹೀಗಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಇಸ್ರಯೇಲರು ತಮ್ಮ ದೇವರಾದ ಸರ್ವೇಶ್ವರನ ಮಾತನ್ನು ಕೇಳದೆಹೋದದ್ದೂ ಅವರ ನಿಬಂಧನೆಯನ್ನು ಉಲ್ಲಂಘಿಸಿದ್ದೂ ಅವರ ದಾಸ ಮೋಶೆಯ ಆಜ್ಞೆಗಳಿಗೆ ಅವಿಧೇಯರಾಗಿ ನಡೆದದ್ದೂ ಇದಕ್ಕೆ ಕಾರಣಗಳಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅವರು ತಮ್ಮ ದೇವರಾದ ಯೆಹೋವನ ಮಾತನ್ನು ಕೇಳದೆಹೋದದ್ದೂ ಆತನ ನಿಬಂಧನೆಯನ್ನು ಉಲ್ಲಂಘಿಸಿದ್ದೂ ಆತನ ಸೇವಕನಾದ ಮೋಶೆಯ ಆಜ್ಞೆಗಳಿಗೆ ಅವಿಧೇಯರಾಗಿ ನಡೆದದ್ದೂ ಇದಕ್ಕೆ ಕಾರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಇಸ್ರೇಲರು ತಮ್ಮ ದೇವರಾದ ಯೆಹೋವನಿಗೆ ಅವಿಧೇಯರಾದದ್ದೂ ಆತನ ಒಡಂಬಡಿಕೆಯನ್ನು ಉಲ್ಲಂಘಿಸಿದ್ದೂ ಆತನ ಸೇವಕನಾದ ಮೋಶೆಯ ಆಜ್ಞೆಗಳಿಗೆ ಅವಿಧೇಯರಾದದ್ದೂ ಇದಕ್ಕೆ ಕಾರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 18:12
29 ತಿಳಿವುಗಳ ಹೋಲಿಕೆ  

ಏಕೆಂದರೆ ದೇವರ ಮನೆಯಲ್ಲಿ ಪ್ರಾರಂಭವಾಗತಕ್ಕ ನ್ಯಾಯತೀರ್ಪಿನ ಸಮಯವು ಬಂದಿದೆ. ಅದು ಮೊದಲು ನಮ್ಮಲ್ಲಿ ಪ್ರಾರಂಭವಾದರೆ ದೇವರ ಸುವಾರ್ತೆಗೆ ಅವಿಧೇಯರಾದವರ ಅಂತ್ಯವು ಏನಾಗಿರಬಹುದು?


ಮತ್ತು, “ಜನರು ಎಡವಲು ಕಾರಣವಾಗುವ ಕಲ್ಲೂ ಅವರು ಬಿದ್ದುಹೋಗುವಂತೆ ಮಾಡುವ ಬಂಡೆಯೂ ಆಗಿರುತ್ತದೆ,” ಅವರು ವಾಕ್ಯಕ್ಕೆ ಅವಿಧೇಯರಾದ್ದರಿಂದ ಆ ಕಲ್ಲನ್ನು ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರು ನೇಮಕವಾದರು.


ಕರ್ತ ಯೇಸುವಿನ ದಾಸನು ಜಗಳವಾಡದೆ ಎಲ್ಲರ ವಿಷಯದಲ್ಲಿ ದಯೆಯುಳ್ಳವನೂ ಬೋಧಿಸುವುದರಲ್ಲಿ ಪ್ರವೀಣನೂ ಸಹನೆಯುಳ್ಳವನೂ ಆಗಿರಬೇಕು.


ಅವರು ದೇವರನ್ನು ಅರಿಯದವರಿಗೂ ನಮಗೆ ಕರ್ತ ಆಗಿರುವ ಯೇಸುವಿನ ಸುವಾರ್ತೆಗೆ ಅವಿಧೇಯರಾದವರಿಗೂ ಪ್ರತೀಕಾರ ಮಾಡುವರು.


ಆಗ ಅವರು ಯೆಹೋವ ದೇವರಿಗೆ ಮೊರೆಯಿಡುವರು; ಆದರೆ ಅವರು ಅವರಿಗೆ ಉತ್ತರ ಕೊಡುವುದಿಲ್ಲ. ಅವರು ಕೆಟ್ಟ ಕ್ರಿಯೆಗಳನ್ನು ಮಾಡಿದ ಪ್ರಕಾರವೇ, ಆ ಕಾಲದಲ್ಲಿ ಅವರಿಗೆ ತಮ್ಮ ಮುಖವನ್ನು ಮರೆಮಾಡುವರು.


ಆದರೆ ನಾನು ಇದನ್ನು ಅವರಿಗೆ, “ನನ್ನ ಶಬ್ದಕ್ಕೆ ವಿಧೇಯರಾಗಿರಿ. ಆಗ ನಾನು ನಿಮ್ಮ ದೇವರಾಗಿರುವೆನು; ನೀವು ನನ್ನ ಜನರಾಗಿರುವಿರಿ; ನಿಮಗೆ ಒಳ್ಳೆಯದಾಗುವಂತೆ ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಮಾರ್ಗಗಳಲ್ಲಿ ನಡೆಯಿರಿ,” ಎಂದು ಆಜ್ಞಾಪಿಸಿ ಹೇಳಿದೆನು.


ಆಗ ನಾನು ಕಂಡದ್ದೇನೆಂದರೆ, ಭ್ರಷ್ಟಳಾದ ಇಸ್ರಾಯೇಲು ವ್ಯಭಿಚಾರ ಮಾಡಿದ ಎಲ್ಲಾ ಕಾರಣಗಳ ನಿಮಿತ್ತ ನಾನು ಅವಳನ್ನು ಬಿಟ್ಟುಬಿಟ್ಟು, ತ್ಯಾಗ ಪತ್ರವನ್ನು ಕೊಟ್ಟಿದ್ದಾಗ್ಯೂ ಅವಳ ವಂಚನೆಯುಳ್ಳ ಸಹೋದರಿಯಾದ ಯೆಹೂದಳು ಭಯಪಡದೆ, ತಾನು ಕೂಡ ಹೋಗಿ ವೇಶ್ಯೆತನ ಮಾಡಿದಳು.


ನೀವು ಒಪ್ಪಿ ವಿಧೇಯರಾದರೆ ದೇಶದ ಸತ್ಫಲವನ್ನು ಸವಿಯುವಿರಿ.


ಮೂಢರು ತಮ್ಮ ದ್ರೋಹದಿಂದಲೂ ಕೆಲವರು ತಮ್ಮ ಅಕ್ರಮಗಳಿಂದಲೂ ಶ್ರಮೆ ಪಡುತ್ತಾರೆ.


ಅವರು ನಿಮ್ಮ ಸ್ವರವನ್ನು ಕೇಳದೆಯೂ, ನೀವು ಅವರ ನಡುವೆ ಮಾಡಿದ ಅದ್ಭುತಕಾರ್ಯಗಳನ್ನು ಜ್ಞಾಪಕಮಾಡದೆ ಹೋದರು. ಅವರು ತಮ್ಮ ಹೃದಯವನ್ನು ಕಠಿಣ ಮಾಡಿಕೊಂಡು, ನಿಮಗೆ ಎದುರುಬಿದ್ದು, ತಮ್ಮ ದಾಸತ್ವಕ್ಕೆ ತಿರುಗಿ ಹೋಗುವಹಾಗೆ ನಾಯಕನನ್ನು ನೇಮಿಸಿಕೊಂಡರು. ಆದರೆ ನೀವು ಮನ್ನಿಸುವ ದೇವರಾಗಿಯೂ, ಕೃಪಾಪೂರ್ಣರೂ, ಅನುಕಂಪವುಳ್ಳವರೂ, ದೀರ್ಘಶಾಂತರೂ, ಪ್ರೀತಿಯಲ್ಲಿ ಸಮೃದ್ಧರೂ ಆಗಿರುವುದರಿಂದ ಅವರನ್ನು ಕೈಬಿಡಲಿಲ್ಲ.


“ಆದರೆ ನೀವಾಗಲಿ, ನಿಮ್ಮ ಮಕ್ಕಳಾಗಲಿ ನಾನು ನಿಮಗೆ ಕೊಟ್ಟಿರುವ ಆಜ್ಞೆಗಳನ್ನೂ, ಕಟ್ಟಳೆಗಳನ್ನೂ ಕೈಗೊಂಡು ನಡೆಯದೆ ನನ್ನಿಂದ ದೂರಹೋಗಿ, ಅನ್ಯದೇವರುಗಳನ್ನು ಸೇವಿಸಿ, ಅವುಗಳಿಗೆ ಅಡ್ಡಬಿದ್ದರೆ,


ಯೆಹೋವ ದೇವರ ಸೇವಕನಾದ ಮೋಶೆಯ ಮರಣದ ತರುವಾಯ, ನೂನನ ಮಗ ಮತ್ತು ಮೋಶೆಯ ಸೇವಕ ಆಗಿರುವ ಯೆಹೋಶುವನಿಗೆ ಯೆಹೋವ ದೇವರು:


ಯೆಹೋವ ದೇವರ ಮಾತಿನ ಹಾಗೆ ಅವರ ದಾಸನಾದ ಮೋಶೆಯು ಅಲ್ಲಿ ಮೋವಾಬಿನ ದೇಶದಲ್ಲಿ ಮರಣಹೊಂದಿದನು.


ಆ ದಿವಸದಲ್ಲಿ ನಾನು ಅವರ ಮೇಲೆ ಕೋಪಗೊಂಡು ಅವರನ್ನು ಬಿಟ್ಟುಬಿಟ್ಟು, ನನ್ನ ಮುಖವನ್ನು ಅವರಿಗೆ ಮರೆಮಾಡುವೆನು. ವಿರೋಧಿಗಳು ಅವರನ್ನು ನುಂಗಿಬಿಡುವರು. ಬಹಳ ಕೇಡುಗಳೂ, ಇಕ್ಕಟ್ಟುಗಳೂ ಅವರಿಗೆ ಸಂಭವಿಸುವುದು. ಆ ದಿವಸದಲ್ಲಿ ಅವರು, ‘ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದ ಕಾರಣ ನಮಗೆ ಕೇಡುಗಳು,’ ಎಂದು ಹೇಳುವರು.


ನಿಮ್ಮ ದೇವರಾದ ಯೆಹೋವ ದೇವರ ಆಜ್ಞೆಗಳಿಗೆ ವಿಧೇಯರಾಗದೆ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಮಾರ್ಗಕ್ಕೆ ಓರೆಯಾದರೆ, ನೀವು ತಿಳಿಯದ ಬೇರೆ ದೇವರುಗಳನ್ನು ಹಿಂಬಾಲಿಸಿದರೆ, ನಿಮಗೆ ಶಾಪವು ತಗಲುವುದು.


ನೀವು ನಿಮ್ಮ ಯೆಹೋವ ದೇವರ ಮಾತಿಗೆ ವಿಧೇಯರಾಗದ ಕಾರಣ ಅವರು ನಿಮ್ಮ ಮುಂದೆ ನಾಶಮಾಡುವ ಇತರ ಜನಾಂಗಗಳ ಹಾಗೆಯೇ ನೀವೂ ನಾಶವಾಗಿಹೋಗುವಿರಿ.


ಆದರೆ ನನ್ನ ಸೇವಕನಾದ ಮೋಶೆಯು ಹಾಗಲ್ಲ. ಅವನು ನನ್ನ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದಾನೆ.


ಯೆಹೋವ ದೇವರು, “ನಾನು ಅವರಿಗೆ ಆಜ್ಞಾಪಿಸಿದ ಎಲ್ಲದರ ಪ್ರಕಾರ ಮತ್ತು ನನ್ನ ಸೇವಕನಾದ ಮೋಶೆಯು ಅವರಿಗೆ ಆಜ್ಞಾಪಿಸಿದ ಸಮಸ್ತ ನಿಯಮದ ಪ್ರಕಾರ ಕೈಗೊಂಡು ನಡೆಯುವುದರಲ್ಲಿ ಅವರು ಜಾಗರೂಕರಾಗಿದ್ದರೆ, ನಾನು ಅವರ ಪಿತೃಗಳಿಗೆ ಕೊಟ್ಟ ದೇಶದಿಂದ ಪುನಃ ಇಸ್ರಾಯೇಲರು ಅಲೆದಾಡುವಂತೆ ಮಾಡುವುದಿಲ್ಲ,” ಎಂದು ಹೇಳಿದ್ದರು.


ಅವರು ದೇವರ ಒಡಂಬಡಿಕೆಯನ್ನು ಕೈಗೊಳ್ಳಲಿಲ್ಲ. ದೇವರ ನಿಯಮದಲ್ಲಿ ನಡೆಯಲೊಲ್ಲದೆ ಇದ್ದರು.


ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಸ್ರಾಯೇಲಿನವರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವರು ನಿರಪರಾಧಿಗಳನ್ನು ಬೆಳ್ಳಿಗೆ ಮತ್ತು ಬಡವರನ್ನು ಒಂದು ಜೋಡಿ ಕೆರಗಳಿಗೆ ಮಾರಿದರು.


ಆಗ ಯೆಹೋವ ದೇವರು ಮೋಶೆಗೆ, “ನೀನು ಮೃತನಾಗಿ, ನಿನ್ನ ಪಿತೃಗಳ ಸಂಗಡ ಸೇರುವಿ. ಈ ಜನರು ದೇವದ್ರೋಹಿಗಳಾಗಿ, ಅವರು ಪ್ರವೇಶಿಸುವ ದೇಶದ ಅನ್ಯದೇವರುಗಳನ್ನು ಅನುಸರಿಸಿ ಪೂಜೆ ಮಾಡಿ, ನನ್ನನ್ನು ಬಿಟ್ಟು ನಾನು ಅವರ ಸಂಗಡ ಮಾಡಿದ ಒಡಂಬಡಿಕೆಯನ್ನು ಮೀರುವರು.


ಆದ್ದರಿಂದ ಅವರ ಹೃದಯದ ದುರಾಶೆಗೆ ಅವರನ್ನು ನಾನು ಒಪ್ಪಿಸಿದೆನು; ಅವರು ತಮ್ಮ ಆಲೋಚನೆಗಳಂತೆ ನಡೆದುಕೊಂಡರು.


ನಾನೇ ಯೆಹೋವ ದೇವರೆಂದು ನೀವು ತಿಳಿದುಕೊಳ್ಳುವಿರಿ. ಏಕೆಂದರೆ ನೀವು ನನ್ನ ನಿಯಮಗಳಂತೆ ನಡೆಯಲಿಲ್ಲ. ನನ್ನ ನ್ಯಾಯವಿಧಿಗಳನ್ನು ಪಾಲಿಸಲಿಲ್ಲ. ಆದರೆ ನಿಮ್ಮ ಸುತ್ತಲಿರುವ ಇತರ ಜನಾಂಗಗಳ ಆಚಾರಗಳ ಪ್ರಕಾರ ಮಾಡಿದ್ದೀರಿ.”


ನಾವು ಪಾಪಮಾಡಿದ್ದೇವೆ ಮತ್ತು ಅಕ್ರಮಗಳನ್ನು ಮಾಡಿದ್ದೇವೆ. ಕೆಟ್ಟವರಾಗಿ ನಡೆದಿದ್ದೇವೆ ಮತ್ತು ತಿರುಗಿಬಿದ್ದಿದ್ದೇವೆ. ನಿಮ್ಮ ಕಟ್ಟಳೆಗಳನ್ನು ಮತ್ತು ನ್ಯಾಯಗಳನ್ನು ತೊರೆದುಬಿಟ್ಟಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು