22 ಬಹುಶಃ ನೀವು, “ನಮ್ಮ ದೇವರಾದ ಯೆಹೋವ ದೇವರನ್ನೇ ನಂಬಿಕೊಂಡಿದ್ದೇವೆ,” ಎಂದು ಹೇಳಬಹುದು. “ಯೆರೂಸಲೇಮಿನ ಬಲಿಪೀಠದ ಮುಂದೆಯೇ ಆರಾಧನೆ ಮಾಡಬೇಕು,” ಎಂದು ಯೆಹೂದ್ಯರಿಗೆ ಮತ್ತು ಯೆರೂಸಲೇಮಿನವರಿಗೆ ಹಿಜ್ಕೀಯನು ಆಜ್ಞಾಪಿಸಿ, ಆ ಯೆಹೋವ ದೇವರ ಪೂಜಾಸ್ಥಳಗಳನ್ನೂ, ಬೇರೆ ಎಲ್ಲಾ ಬಲಿಪೀಠಗಳನ್ನೂ ಹಾಳುಮಾಡಿದನಲ್ಲವೇ?
22 ಒಂದು ವೇಳೆ ನೀವು, ‘ನಮ್ಮ ದೇವರಾದ ಯೆಹೋವನ ಮೇಲೆ ಭರವಸವಿಟ್ಟಿದ್ದೇವೆ’ ಎಂದು ಹೇಳುವುದಾದರೆ ಹಿಜ್ಕೀಯನು, ‘ಯೆರೂಸಲೇಮಿನ ಯಜ್ಞವೇದಿಯ ಮುಂದೆಯೇ ಆರಾಧನೆಮಾಡಬೇಕು’ ಎಂಬುದಾಗಿ ಯೆಹೂದ್ಯರಿಗೂ, ಯೆರೂಸಲೇಮಿನವರಿಗೂ ಆಜ್ಞಾಪಿಸಿ ಆ ಯೆಹೋವನ ಪೂಜಾಸ್ಥಳಗಳನ್ನೂ, ಎಲ್ಲಾ ಯಜ್ಞವೇದಿಗಳನ್ನೂ ಹಾಳುಮಾಡಿದ್ದಾನಲ್ಲಾ,
22 “ಬಹುಶಃ, ನೀವು ‘ನಮ್ಮ ದೇವರಾದ ಸರ್ವೇಶ್ವರನನ್ನೇ ನಂಬಿಕೊಂಡಿದ್ದೇವೆ,’ ಎಂದು ಹೇಳಬಹುದು. ಜೆರುಸಲೇಮಿನ ಬಲಿಪೀಠದ ಮುಂದೆಯೇ ಆರಾಧನೆಮಾಡಬೇಕು ಎಂದು ಯೆಹೂದ್ಯರಿಗೂ ಮತ್ತು ಜೆರುಸಲೇಮಿನವರಿಗೂ ಹಿಜ್ಕೀಯನು ಆಜ್ಞಾಪಿಸಿ ಆ ಸರ್ವೇಶ್ವರ ಸ್ವಾಮಿಯ ಪೂಜಾಸ್ಥಳಗಳನ್ನೂ ಬೇರೆ ಎಲ್ಲಾ ಬಲಿಪೀಠಗಳನ್ನೂ ಹಾಳುಮಾಡಿದನಲ್ಲವೆ?
22 ಬಹುಶಃ ನೀನು, “ನಾವು ನಮ್ಮ ದೇವರಾದ ಯೆಹೋವನಲ್ಲಿ ಭರವಸೆಯಿಟ್ಟಿದ್ದೇವೆ” ಎಂದು ಹೇಳುವೆ. ಆದರೆ ಹಿಜ್ಕೀಯನು ಯೆಹೋವನ ಉನ್ನತಸ್ಥಳಗಳನ್ನು ಮತ್ತು ಯಜ್ಞವೇದಿಕೆಯನ್ನು ನಾಶಪಡಿಸಿ ಯೆಹೂದಕ್ಕೆ ಮತ್ತು ಜೆರುಸಲೇಮಿಗೆ, “ನೀವು ಜೆರುಸಲೇಮಿನಲ್ಲಿರುವ ಯಜ್ಞವೇದಿಕೆಯ ಸನ್ನಿಧಿಯಲ್ಲಿ ಮಾತ್ರ ಆರಾಧಿಸಬೇಕು” ಎಂದು ಹೇಳಿದನೆಂಬುದು ನನಗೆ ತಿಳಿದಿದೆ.
ಇದಾದನಂತರ ಅಲ್ಲಿ ಇರುವವರಾದ ಸಮಸ್ತ ಇಸ್ರಾಯೇಲರು ಯೆಹೂದ ಪಟ್ಟಣಗಳಿಗೆ ಹೊರಟುಹೋಗಿ, ವಿಗ್ರಹಗಳನ್ನು ಮುರಿದು, ಅಶೇರ ಸ್ತಂಭಗಳನ್ನು ಕಡಿದು, ಸಮಸ್ತ ಯೆಹೂದ, ಬೆನ್ಯಾಮೀನ್, ಎಫ್ರಾಯೀಮ್, ಮನಸ್ಸೆ ದೇಶಗಳಲ್ಲಿ ಯಾವುದನ್ನೂ ಉಳಿಸಲಿಲ್ಲ, ಉನ್ನತ ಪೂಜಾಸ್ಥಳಗಳನ್ನು ಮತ್ತು ಬಲಿಪೀಠಗಳನ್ನು ಕೆಡವಿಹಾಕಿದರು. ಆಗ ಇಸ್ರಾಯೇಲರೆಲ್ಲರು ತಮ್ಮ ತಮ್ಮ ಆಸ್ತಿಪಾಸ್ತಿಯಿರುವ ಪಟ್ಟಣಗಳಿಗೆ ತಿರುಗಿ ಹೋದರು.
ಈಗ ನೀವು ಸಿದ್ಧವಾಗಿದ್ದು ತುತೂರಿ, ಕೊಳಲು, ತಂಬೂರಿ, ವೀಣೆ, ಕಿನ್ನರಿ, ನಾದಸ್ವರ ಎಲ್ಲಾ ವಿಧವಾದ ವಾದ್ಯಗಳ ಶಬ್ದವನ್ನು ಕೇಳುವ ಸಮಯದಲ್ಲಿ ನಾನು ಮಾಡಿಸಿದ ಪ್ರತಿಮೆಯನ್ನು ಆರಾಧಿಸಿದರೆ ಸರಿ, ಆರಾಧಿಸದಿದ್ದರೆ ಅದೇ ಗಳಿಗೆಯಲ್ಲಿ ಉರಿಯುವ ಬೆಂಕಿಯ ಕುಲುಮೆಯ ಮಧ್ಯದಲ್ಲಿ ಹಾಕಲಾಗುವಿರಿ. ನನ್ನ ಕೈಯಿಂದ ನಿಮ್ಮನ್ನು ಬಿಡಿಸುವ ಆ ದೇವರು ಯಾರು?” ಎಂದು ಹೇಳಿದನು.
ಬಹುಶಃ ನೀವು, “ನಮ್ಮ ದೇವರಾದ ಯೆಹೋವ ದೇವರನ್ನೇ ನಂಬಿಕೊಂಡಿದ್ದೇವೆ,” ಎಂದು ಹೇಳಬಹುದು. “ಯೆರೂಸಲೇಮಿನ ಬಲಿಪೀಠದ ಮುಂದೆಯೇ ಆರಾಧನೆ ಮಾಡಬೇಕು” ಎಂದು ಯೆಹೂದ್ಯರಿಗೆ ಮತ್ತು ಯೆರೂಸಲೇಮಿನವರಿಗೆ ಹಿಜ್ಕೀಯನು ಆಜ್ಞಾಪಿಸಿ, ಆ ಯೆಹೋವ ದೇವರ ಪೂಜಾಸ್ಥಳಗಳನ್ನೂ, ಬೇರೆ ಎಲ್ಲಾ ಬಲಿಪೀಠಗಳನ್ನೂ ಹಾಳುಮಾಡಿದನಲ್ಲವೇ?
ಈ ಹಿಜ್ಕೀಯನು ಅವನ ಪೂಜಾಸ್ಥಳಗಳನ್ನೂ, ಬಲಿಪೀಠಗಳನ್ನೂ ತೆಗೆದುಹಾಕಿ ಯೆಹೂದ್ಯರಿಗೆ ಮತ್ತು ಯೆರೂಸಲೇಮಿನವರಿಗೆ, ‘ನೀವು ಒಂದೇ ಬಲಿಪೀಠದ ಮುಂದೆ ಅಡ್ಡಬಿದ್ದು, ಅದರ ಮೇಲೆ ಧೂಪವನ್ನರ್ಪಿಸಬೇಕು,’ ಎಂದು ಹೇಳಿದ್ದಾನಲ್ಲವೇ?
“ ‘ಹಾಗಾದರೆ ಈಗ ನೀನು ಅಸ್ಸೀರಿಯದ ಅರಸನಾದ ನನ್ನ ಯಜಮಾನನೊಂದಿಗೆ ಒಪ್ಪಂದ ಮಾಡಿಕೋ, ಆಗ ನಿನಗೆ ಎರಡು ಸಾವಿರ ಕುದುರೆಸವಾರರನ್ನು ಬಳಸಲು ಸಾಮರ್ಥ್ಯವಿದ್ದರೆ ನಾನು ಎರಡು ಸಾವಿರ ಕುದುರೆಗಳನ್ನು ಕೊಡುತ್ತೇನೆ.
ಯೆಶಾಯನು ಅವರಿಗೆ, “ನೀವು ನಿಮ್ಮ ಯಜಮಾನನಿಗೆ ಹೇಳಬೇಕಾದದ್ದೇನೆಂದರೆ, ‘ಯೆಹೋವ ದೇವರು ಹೀಗೆ ಹೇಳುತ್ತಾರೆ, ನೀನು ಕೇಳಿದಂಥ ಅಸ್ಸೀರಿಯದ ಅರಸನ ಸೇವಕರು ನನ್ನನ್ನು ದೂಷಿಸಿದಂಥ ಮಾತುಗಳನ್ನು ನೀವು ಕೇಳಿದ್ದಕ್ಕೋಸ್ಕರ ಭಯಪಡಬೇಡಿರಿ.
ನಿಮ್ಮ ದೇವರಾದ ಯೆಹೋವ ದೇವರು ತಮ್ಮ ಹೆಸರನ್ನು ಸ್ಥಾಪಿಸಿಕೊಳ್ಳಲು ಹಾಗು ತಾವು ವಾಸಮಾಡಲು ನಿಮ್ಮ ಎಲ್ಲಾ ಗೋತ್ರಗಳಿಂದ ಆರಿಸಿಕೊಳ್ಳುವ ಸ್ಥಳದಲ್ಲೇ, ನೀವು ದೇವರ ದರ್ಶನಕ್ಕಾಗಿ ಸಭೆ ಸೇರಬೇಕು.
ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಕಾಣಿಕೆಗಳನ್ನು ಅಂದರೆ, ದಹನಬಲಿಗಳನ್ನು, ಅರ್ಪಣೆಗಳನ್ನು, ಬೆಳೆಯ ದಶಮಾಂಶಗಳನ್ನು, ಯೆಹೋವ ದೇವರಿಗಾಗಿ ವಿಶೇಷ ಉಡುಗೊರೆಗಳನ್ನು, ಹರಕೆಮಾಡಿದ ವಿಶೇಷ ಕಾಣಿಕೆಗಳನ್ನು, ನಿಮ್ಮ ದೇವರಾದ ಯೆಹೋವ ದೇವರು ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳಕ್ಕೇ ತರಬೇಕು.