Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 18:25 - ಕನ್ನಡ ಸಮಕಾಲಿಕ ಅನುವಾದ

25 ಈ ಸ್ಥಳವನ್ನು ನಾಶಮಾಡುವುದಕ್ಕೆ ಯೆಹೋವ ದೇವರ ಅಪ್ಪಣೆ ಇಲ್ಲದೆ ಬಂದಿದ್ದೇನೋ? ಈ ದೇಶದ ಮೇಲೆ ಹೋಗಿ ಅದನ್ನು ನಾಶಮಾಡೆಂದು ಯೆಹೋವ ದೇವರೇ ನನಗೆ ಹೇಳಿದರು,’ ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಈ ದೇಶವನ್ನು ಹಾಳುಮಾಡುವುದಕ್ಕೆ ಯೆಹೋವನ ಚಿತ್ತವಿಲ್ಲದೆ ಬಂದೆನೆಂದು ನೆನಸುತ್ತೀಯೋ? ‘ಈ ದೇಶಕ್ಕೆ ಬಂದು, ಇದನ್ನು ಹಾಳುಮಾಡಿಬಿಡು ಎಂದು ಯೆಹೋವನೇ ನನಗೆ ಆಜ್ಞಾಪಿಸಿದ್ದಾನೆ’” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಈ ನಾಡನ್ನು, ಹಾಳುಮಾಡುವುದಕ್ಕೆ ಸರ್ವೇಶ್ವರಸ್ವಾಮಿಯ ಒಪ್ಪಿಗೆಯಿಲ್ಲದೆ ಇಲ್ಲಿಗೆ ನಾನು ಬಂದೆನೆಂದು ನೆನಸುತ್ತೀಯೋ? ‘ಇಲ್ಲಿಗೆ ಬಂದು ಇದನ್ನು ಹಾಳುಮಾಡಿಬಿಡು’ ಎಂದು ಆ ಸರ್ವೇಶ್ವರಸ್ವಾಮಿಯೇ ನನಗೆ ಆಜ್ಞೆ ಮಾಡಿದ್ದಾರೆ, ಎಂಬ ಈ ಮಾತುಗಳು ಅರಸನವು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಈ ದೇಶವನ್ನು ಹಾಳುಮಾಡುವದಕ್ಕೆ ಯೆಹೋವನ ಚಿತ್ತವಿಲ್ಲದೆ ಬಂದೆನೆಂದು ನೆನಸುತ್ತೀಯೋ? ಇಲ್ಲಿಗೆ ಬಂದು ಇದನ್ನು ಹಾಳುಮಾಡಿಬಿಡು ಎಂದು ಯೆಹೋವನೇ ನನಗೆ ಆಜ್ಞಾಪಿಸಿದನು ಅನ್ನುತ್ತಾನೆ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ‘ನಾನು ಯೆಹೋವನ ಚಿತ್ತವಿಲ್ಲದೆ ಜೆರುಸಲೇಮನ್ನು ನಾಶಗೊಳಿಸಲು ಬಂದೆನೆಂದು ನೆನಸುತ್ತೀಯೋ? “ಈ ದೇಶದ ವಿರುದ್ಧವಾಗಿ ನುಗ್ಗಿ ನಾಶಗೊಳಿಸು” ಎಂದು ಯೆಹೋವನೇ ನನಗೆ ಆಜ್ಞಾಪಿಸಿದನು”’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 18:25
10 ತಿಳಿವುಗಳ ಹೋಲಿಕೆ  

ಯೆಶಾಯನು ಅವರಿಗೆ, “ನೀವು ನಿಮ್ಮ ಯಜಮಾನನಿಗೆ ಹೇಳಬೇಕಾದದ್ದೇನೆಂದರೆ, ‘ಯೆಹೋವ ದೇವರು ಹೀಗೆ ಹೇಳುತ್ತಾರೆ, ನೀನು ಕೇಳಿದಂಥ ಅಸ್ಸೀರಿಯದ ಅರಸನ ಸೇವಕರು ನನ್ನನ್ನು ದೂಷಿಸಿದಂಥ ಮಾತುಗಳನ್ನು ನೀವು ಕೇಳಿದ್ದಕ್ಕೋಸ್ಕರ ಭಯಪಡಬೇಡಿರಿ.


ಪಟ್ಟಣದಲ್ಲಿ ಕಹಳೆಯನ್ನು ಊದಿದರೆ, ಜನರು ಹೆದರುವುದಿಲ್ಲವೇ? ಯೆಹೋವ ದೇವರಿಂದಲ್ಲದೆ ಪಟ್ಟಣಕ್ಕೆ ಕೇಡು ತಟ್ಟುವುದುಂಟೇ?


ಆದರೆ ಇವನು ಯೋಷೀಯನ ಬಳಿಗೆ ಸೇವಕರನ್ನು ಕಳುಹಿಸಿ, “ಯೆಹೂದದ ಅರಸನೇ, ನನಗೆ ನೀನು ಏನು? ಈ ಹೊತ್ತು ನಿನ್ನ ಮೇಲೆ ಅಲ್ಲ. ನಾನು ಯುದ್ಧಮಾಡುವ ವೈರಿಯ ಮೇಲೆಯೇ ದಾಳಿಮಾಡುತ್ತೇನೆ. ತ್ವರೆಮಾಡು ಎಂದು ದೇವರು ನನಗೆ ಹೇಳಿದ್ದಾರೆ. ನನ್ನ ಸಂಗಡ ಇರುವ ದೇವರು ನಿನ್ನನ್ನು ನಾಶಮಾಡದ ಹಾಗೆ ನೀನು ದೇವರ ಮುಂದೆ ಸುಮ್ಮನಿರು.”


ಆಗ ವೃದ್ಧನು, “ನಾನು ನಿನ್ನ ಹಾಗೆಯೇ ಪ್ರವಾದಿಯಾಗಿದ್ದೇನೆ. ಒಬ್ಬ ದೇವದೂತನ ಮುಖಾಂತರ ನನಗೆ ಯೆಹೋವ ದೇವರ ವಾಕ್ಯವು ಉಂಟಾಗಿ, ನಿನ್ನನ್ನು ಹಿಂದಕ್ಕೆ ಕರಕೊಂಡು ಬರಬೇಕೆಂದೂ ನಿನಗೆ ಅನ್ನಪಾನಗಳನ್ನು ಕೊಡಬೇಕೆಂದೂ ಆಜ್ಞೆಯಾಗಿದೆ ಎಂದು ಹೇಳಿದನು.” ಆದರೆ ವೃದ್ಧನು ಅವನಿಗೆ ಸುಳ್ಳು ಹೇಳಿದನು.


ಇದಾಗದಿದ್ದರೆ ನನ್ನ ಯಜಮಾನನ ಸೇವಕರಲ್ಲಿ ಚಿಕ್ಕವನಾದ ಒಬ್ಬ ಸೈನ್ಯಾಧಿಪತಿಯನ್ನು ಹೇಗೆ ಎದುರಿಸುತ್ತೀ? ನೀನು ರಥಗಳಿಗೋಸ್ಕರವೂ, ರಾಹುತರಿಗೋಸ್ಕರವೂ ಈಜಿಪ್ಟಿನ ಮೇಲೆ ಭರವಸೆ ಇಟ್ಟಿದ್ದೀಯೋ?


ಆಗ ಹಿಲ್ಕೀಯನ ಮಗ ಎಲ್ಯಾಕೀಮ್, ಶೆಬ್ನ, ಯೋವ ಎಂಬುವರು ರಬ್ಷಾಕೆಗೆ, “ನೀನು ಮಾತನಾಡುವುದು ಗೋಡೆಯ ಮೇಲಿರುವವರಿಗೆ ಕೇಳಿಸುತ್ತದೆ ಆದ್ದರಿಂದ ದಯವಿಟ್ಟು ನಿನ್ನ ಸೇವಕರಾದ ನಮ್ಮೊಡನೆ ಅರಾಮ್ಯ ಭಾಷೆಯಲ್ಲಿ ಮಾತನಾಡು: ಅದು ನಮಗೆ ತಿಳಿಯುತ್ತದೆ ಆದರೆ ಹಿಬ್ರಿಯ ಭಾಷೆಯಲ್ಲಿ ಮಾತನಾಡಬೇಡ,” ಎಂದು ಹೇಳಿದರು.


ನಿಶ್ಚಯವಾಗಿ ಯೆಹೋವ ದೇವರ ಅಪ್ಪಣೆಯಿಂದ ಇದು ಯೆಹೂದದ ಮೇಲೆ ಆಯಿತು. ಮನಸ್ಸೆಯು ತನ್ನ ಸಮಸ್ತ ಕೃತ್ಯಗಳಿಂದ ಮಾಡಿದ ಪಾಪಗಳ ನಿಮಿತ್ತ, ಯೆಹೂದವನ್ನು ದೇವರು ತಮ್ಮ ಸಮ್ಮುಖದಿಂದ ತೆಗೆದುಹಾಕುವಂತೆ ಇದಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು