Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 18:31 - ಕನ್ನಡ ಸಮಕಾಲಿಕ ಅನುವಾದ

31 “ಹಿಜ್ಕೀಯನ ಮಾತುಗಳಿಗೆ ಕಿವಿಗೊಡಬೇಡಿರಿ. ಏಕೆಂದರೆ ಅಸ್ಸೀರಿಯದ ಅರಸನು ಹೇಳುವುದೇನೆಂದರೆ: ನನ್ನ ಸಂಗಡ ಒಡಂಬಡಿಕೆ ಮಾಡಿಕೊಂಡು, ನನ್ನ ಬಳಿಗೆ ಹೊರಟುಬನ್ನಿರಿ, ಆಗ ನಿಮ್ಮಲ್ಲಿ ಪ್ರತಿ ಮನುಷ್ಯನು ತನ್ನ ತನ್ನ ದ್ರಾಕ್ಷಾಫಲವನ್ನೂ, ಅಂಜೂರದ ಫಲವನ್ನೂ ತಿಂದು ತನ್ನ ತನ್ನ ಬಾವಿಯ ನೀರನ್ನು ಕುಡಿಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಹಿಜ್ಕೀಯನ ಮಾತನ್ನು ಕೇಳಬೇಡಿರಿ. ಅಶ್ಶೂರದ ಅರಸನಾದ ನನ್ನ ಮಾತನ್ನು ಕೇಳಿರಿ, “ನನ್ನೊಡನೆ ಒಡಂಬಡಿಕೆ ಮಾಡಿಕೊಂಡು ನನ್ನ ಬಳಿಗೆ ಬಂದು ನನ್ನೊಡನೆ ಒಪ್ಪಂದ ಮಾಡಿಕೊಂಡು ನನ್ನ ಆಶ್ರಯಕ್ಕೆ ಬನ್ನಿ ಆಗ ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಅಂಜೂರ ಮರ, ದ್ರಾಕ್ಷಾಲತೆ ಇವುಗಳ ಹಣ್ಣುಗಳನ್ನು ತಿಂದು ತನ್ನ ತನ್ನ ಬಾವಿಯ ನೀರನ್ನು ಕುಡಿಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಅಸ್ಸೀರಿಯದ ಅರಸನಾದ ನನ್ನ ಮಾತನ್ನು ಕೇಳಿ; ನನ್ನೊಡನೆ ಒಪ್ಪಂದಮಾಡಿಕೊಂಡು ನನ್ನ ಆಶ್ರಯವನ್ನು ಸೇರಿರಿ, ಆಗ ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಅಂಜೂರಮರದ ಹಾಗು ದ್ರಾಕ್ಷಾಲತೆಯ ಹಣ್ಣುಗಳನ್ನು ತಿನ್ನುವನು; ತನ್ನ ಬಾವಿಯ ನೀರನ್ನೇ ಕುಡಿಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಅಶ್ಶೂರದ ಅರಸನಾದ ನನ್ನ ಮಾತನ್ನು ಕೇಳಿರಿ; ನನ್ನೊಡನೆ ಒಡಂಬಡಿಕೆಮಾಡಿಕೊಂಡು ನನ್ನ ಆಶ್ರಯದಲ್ಲಿ ಸೇರಿರಿ. ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಅಂಜೂರಮರ, ದ್ರಾಕ್ಷಾಲತೆ ಇವುಗಳ ಹಣ್ಣುಗಳನ್ನು ತಿಂದು ತನ್ನ ತನ್ನ ಬಾವಿಯ ನೀರನ್ನು ಕುಡಿಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಆದರೆ ಹಿಜ್ಕೀಯನ ಮಾತುಗಳನ್ನು ಕೇಳಬೇಡಿ! ಎಂದು ಹೇಳಿದನು. ಅಶ್ಶೂರದ ರಾಜ ಹೀಗೆ ಹೇಳುತ್ತಾನೆ: “‘ನನ್ನೊಂದಿಗೆ ಶಾಂತಿಒಪ್ಪಂದ ಮಾಡಿಕೊಂಡು ನನ್ನ ಆಶ್ರಯಕ್ಕೆ ಬನ್ನಿರಿ. ನಂತರ ಪ್ರತಿಯೊಬ್ಬರೂ ತನ್ನ ಸ್ವಂತ ದ್ರಾಕ್ಷಿಯನ್ನು ತಿನ್ನಬಹುದು; ತನ್ನ ಸ್ವಂತ ಅಂಜೂರವನ್ನು ತಿನ್ನಬಹುದು; ತನ್ನ ಸ್ವಂತ ಬಾವಿಯಿಂದ ನೀರನ್ನು ಕುಡಿಯಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 18:31
10 ತಿಳಿವುಗಳ ಹೋಲಿಕೆ  

ಹೀಗೆಯೇ ದಾನ್ ಮೊದಲುಗೊಂಡು ಬೇರ್ಷೆಬದ ಮಟ್ಟಿಗೂ, ಸೊಲೊಮೋನನ ಸಮಸ್ತ ದಿವಸಗಳಲ್ಲಿ ಯೆಹೂದ ಮತ್ತು ಇಸ್ರಾಯೇಲಿನಲ್ಲಿರುವ ಪ್ರತಿಯೊಬ್ಬ ಮನುಷ್ಯನು ತನ್ನ ದ್ರಾಕ್ಷಿಬಳ್ಳಿಯ ಕೆಳಗೂ, ತನ್ನ ಅಂಜೂರದ ಮರದ ಕೆಳಗೂ ಸುರಕ್ಷಿತವಾಗಿ ವಾಸವಾಗಿದ್ದರು.


“ ‘ಆ ದಿವಸದಲ್ಲಿ ನೀವು ನಿಮ್ಮ ನಿಮ್ಮ ನೆರೆಯವರನ್ನು ದ್ರಾಕ್ಷಿಬಳ್ಳಿಯ ಕೆಳಗೂ, ಅಂಜೂರದ ಮರದ ಕೆಳಗೂ ಕರೆಯುವಿರಿ,’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ.”


ಯೆಹೂದ ಮತ್ತು ಇಸ್ರಾಯೇಲಿನ ಜನರು ಸಮುದ್ರದ ಮರಳಿನ ಹಾಗೆ ಅಸಂಖ್ಯಾತರಾದರು. ಅವರು ಉಂಡು ಕುಡಿದು ಸುಖದಿಂದ ಇದ್ದರು.


ಕಾಣಿಕೆಯನ್ನು ಕೊಡುವವನಿಗೆ ಬಾಗಿಲು ತೆರೆಯುತ್ತದೆ; ಅದು ದೊಡ್ಡವರ ಸನ್ನಿಧಾನಕ್ಕೂ ಅವನನ್ನು ಕರೆದುಕೊಂಡು ಹೋಗುತ್ತದೆ.


ನಿನಗೋಸ್ಕರ ತಂದಿರುವ ನನ್ನ ಕಾಣಿಕೆಯನ್ನು ಸ್ವೀಕರಿಸಬೇಕೆಂದು ಬೇಡುತ್ತೇನೆ. ದೇವರು ನನ್ನೊಂದಿಗೆ ಕೃಪೆಯಿಂದ ವರ್ತಿಸಿದ್ದರಿಂದ ನನಗೆ ಬೇಕಾದಷ್ಟು ಇವೆ,” ಎಂದು ಹೇಳಿ, ಅವನನ್ನು ಬಲವಂತ ಮಾಡಿದ್ದರಿಂದ ಏಸಾವನು ಅದನ್ನು ತೆಗೆದುಕೊಂಡನು.


ಇದಲ್ಲದೆ, ‘ನಿನ್ನ ದಾಸ ಯಾಕೋಬನು ನಮ್ಮ ಹಿಂದೆ ಬರುತ್ತಾನೆಂದು ಹೇಳಬೇಕು,’ ” ಎಂದು ಆಜ್ಞಾಪಿಸಿದನು. ಏಕೆಂದರೆ ನನ್ನ ಮುಂದೆ ಹೋಗುವ ಕಾಣಿಕೆಯಿಂದ ಅವನನ್ನು ಸಮಾಧಾನಪಡಿಸುವೆನು. ತರುವಾಯ ಅವನ ಮುಖವನ್ನು ಕಾಣುವೆನು. ಅವನು ನನ್ನನ್ನು ಅಂಗೀಕರಿಸುವನೇನೋ ಎಂದುಕೊಂಡನು.


ಇದಲ್ಲದೆ, ‘ಯೆಹೋವ ದೇವರು ನಮ್ಮನ್ನು ನಿಶ್ಚಯವಾಗಿ ರಕ್ಷಿಸುವರು, ಈ ಪಟ್ಟಣವು ಅಸ್ಸೀರಿಯದ ಅರಸನ ಕೈಯಲ್ಲಿ ಒಪ್ಪಿಸುವುದಿಲ್ಲ,’ ಎಂದು ಹೇಳಿ, ಹಿಜ್ಕೀಯನು ನಿಮಗೆ ಯೆಹೋವ ದೇವರಲ್ಲಿ ಭರವಸೆ ಇಡುವಂತೆ ಮಾಡುವನು.


ಅಂಜೂರದ ಮರವನ್ನು ಕಾಯುವವನು ಅದರ ಫಲವನ್ನು ತಿನ್ನುವನು; ಹಾಗೆಯೇ ಯಜಮಾನನಿಗಾಗಿ ಕಾಯುವವನು ಸನ್ಮಾನ ಹೊಂದುವನು.


ಶ್ರೇಷ್ಠರು ತಮ್ಮ ಚಿಕ್ಕವರನ್ನು ನೀರಿಗೆ ಕಳುಹಿಸುತ್ತಾರೆ. ಇವರು ಬಾವಿಗಳಿಗೆ ಬರುತ್ತಾರೆ. ಆದರೆ ನೀರು ಸಿಕ್ಕಲ್ಲ. ಬರೀ ಪಾತ್ರೆಗಳುಳ್ಳವರಾಗಿ ತಿರುಗಿಕೊಳ್ಳುತ್ತಾರೆ. ಅವರು ನಾಚಿಕೆಪಟ್ಟು ದಿಗ್ಭ್ರಮೆಗೊಂಡವರಾಗಿ, ತಮ್ಮ ತಲೆಗಳನ್ನು ಮುಚ್ಚಿಕೊಳ್ಳುತ್ತಾರೆ.


ಆದ್ದರಿಂದ, ನನ್ನ ದೇವರಾದ ಯೆಹೋವ ದೇವರ ಹೆಸರಿಗೆ ಆಲಯವನ್ನು ಕಟ್ಟಿಸಬೇಕೆಂದಿದ್ದೇನೆ. ಅದರ ವಿಷಯವಾಗಿ ಯೆಹೋವ ದೇವರು ನನ್ನ ತಂದೆಯಾದ ದಾವೀದನಿಗೆ, ‘ನಿನಗೆ ಬದಲಾಗಿ ನಿನ್ನ ಸಿಂಹಾಸನದ ಮೇಲೆ ನಾನು ಕುಳ್ಳಿರಿಸುವ ನಿನ್ನ ಮಗನೇ ನನ್ನ ಹೆಸರಿಗೆ ದೇವಾಲಯವನ್ನು ಕಟ್ಟಿಸುವನು,’ ಎಂದು ಹೇಳಿದ್ದಾರಲ್ಲವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು