Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 19:12 - ಕನ್ನಡ ಸಮಕಾಲಿಕ ಅನುವಾದ

12 ನನ್ನ ಪಿತೃಗಳು ಹಾಳುಮಾಡಿದ ಗೋಜಾನ್, ಹಾರಾನ್, ರೆಜೆಫ್ ಮುಂತಾದ ದೇವರುಗಳು ಅವರನ್ನು ಬಿಡುಗಡೆ ಮಾಡಲಿಲ್ಲ. ತೆಲ್ ಅಸ್ಸಾರ್ ಎಂಬಲ್ಲಿದ್ದ ಏದೆನಿನ ಜನರನ್ನು ಈ ದೇವರುಗಳು ಅವರನ್ನು ರಕ್ಷಿಸಲು ಸಾಧ್ಯವಾಯಿತೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನನ್ನ ಪೂರ್ವಿಕರು ಗೋಜಾನ್, ಖಾರಾನ್, ರೆಚೆಫ್ ಎಂಬ ಪಟ್ಟಣಗಳ ಜನರನ್ನೂ ತೆಲಸ್ಸಾರ್ ಪ್ರಾಂತ್ಯದಲ್ಲಿರುವ ಎದೆನಿನ ಜನರನ್ನೂ ನಾಶಮಾಡುವುದಕ್ಕೆ ಹೋದಾಗ ಅವರ ದೇವತೆಗಳು ಅವರನ್ನು ಕಾಪಾಡಿದವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನನ್ನ ತಂದೆತಾತಂದಿರು ಗೋಜಾನ್, ಖಾರನ್, ರೆಚೆಫ್ ಎಂಬ ನಗರಗಳ ಜನರನ್ನು ಮತ್ತು ತೆಲಸ್ಸಾರ್ ಪ್ರಾಂತ್ಯದಲ್ಲಿರುವ ಎದೆನಿನ ಜನರನ್ನು ನಾಶಮಾಡಿದರು. ಆಗ ಅವರ ದೇವರುಗಳು ಅವರನ್ನು ರಕ್ಷಿಸಲಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನನ್ನ ತಂದೆ ತಾತಂದಿರು ಗೋಜಾನ್, ಖಾರಾನ್, ರೆಚೆಫ್ ಎಂಬ ಪಟ್ಟಣಗಳ ಜನರನ್ನೂ ತೆಲಸ್ಸಾರ್ ಪ್ರಾಂತದಲ್ಲಿರುವ ಎದೆನಿನ ಜನರನ್ನೂ ನಾಶಮಾಡುವದಕ್ಕೆ ಹೋದಾಗ ಅವರ ದೇವತೆಗಳು ಅವರನ್ನು ಕಾಪಾಡಿದವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆ ರಾಜ್ಯಗಳ ದೇವರುಗಳು ತಮ್ಮ ಜನರನ್ನು ರಕ್ಷಿಸಲಾಗಲಿಲ್ಲ. ನನ್ನ ಪೂರ್ವಿಕರು ಅವರನ್ನೆಲ್ಲ ನಾಶಗೊಳಿಸಿದರು. ಅವರು ಗೋಜಾನ್, ಖಾರಾನ್, ರೆಚೆಫ್ ಮತ್ತು ತೆಲಸ್ಸಾರ್‌ನ ಎದೆನಿನ ಜನರನ್ನು ನಾಶಗೊಳಿಸಿದರು!

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 19:12
11 ತಿಳಿವುಗಳ ಹೋಲಿಕೆ  

ಹೋಶೇಯನ ಒಂಬತ್ತನೆಯ ವರ್ಷದಲ್ಲಿ ಅಸ್ಸೀರಿಯದ ಅರಸನು ಸಮಾರ್ಯವನ್ನು ವಶಪಡಿಸಿಕೊಂಡನು. ಅವನು ಇಸ್ರಾಯೇಲನ್ನು ಅಸ್ಸೀರಿಯ ದೇಶಕ್ಕೆ ಸೆರೆಯಾಗಿ ಒಯ್ದು ಹಲಹ ಪ್ರಾಂತದಲ್ಲಿಯೂ, ಹಾಬೋರ್ ನದಿಯಿರುವ ಗೋಜಾನ್ ಪ್ರಾಂತದಲ್ಲಿಯೂ ಮತ್ತು ಮೇದ್ಯರ ಪಟ್ಟಣಗಳಲ್ಲಿಯೂ ಇರಿಸಿದನು.


“ ‘ಹಾರಾನ್, ಕನ್ನೆ, ಏದೆನ್, ಶೆಬ, ಅಸ್ಸೀರಿಯ ಮತ್ತು ಕಿಲ್ಮದ್ ನಿನ್ನ ವ್ಯಾಪಾರಿಗಳಾಗಿದ್ದರು.


ತೆರಹನು ತನ್ನ ಮಗನಾದ ಅಬ್ರಾಮನನ್ನು ಮತ್ತು ತನಗೆ ಮೊಮ್ಮಗನೂ ಹಾರಾನನಿಗೆ ಮಗನೂ ಆದ ಲೋಟನನ್ನೂ ಹಾಗೂ ತನಗೆ ಸೊಸೆಯೂ ಅಬ್ರಾಮನಿಗೆ ಹೆಂಡತಿಯೂ ಆದ ಸಾರಯಳನ್ನೂ ಕರೆದುಕೊಂಡು ಕಾನಾನ್ ದೇಶಕ್ಕೆ ಹೋಗುವುದಕ್ಕಾಗಿ ಕಸ್ದೀಯರ ಊರ್ ಪಟ್ಟಣವನ್ನು ಬಿಟ್ಟು, ಹಾರಾನ್ ಎಂಬ ಪಟ್ಟಣಕ್ಕೆ ಬಂದು ಅಲ್ಲಿ ವಾಸವಾಗಿದ್ದನು.


ನನ್ನ ಪಿತೃಗಳು ಹಾಳುಮಾಡಿದ ಗೋಜಾನ್, ಹಾರಾನ್, ರೆಜೆಫ್ ಮುಂತಾದ ದೇವರುಗಳು ಅವರನ್ನು ಬಿಡುಗಡೆ ಮಾಡಲಿಲ್ಲ. ತೆಲ್ ಅಸ್ಸಾರ್ ಎಂಬಲ್ಲಿದ್ದ ಏದೆನಿನ ಜನರನ್ನು ಈ ದೇವರುಗಳು ಅವರನ್ನು ರಕ್ಷಿಸಲು ಸಾಧ್ಯವಾಯಿತೇ?


“ಅದರಂತೆ ಅಬ್ರಹಾಮನು ಕಸ್ದೀಯರ ನಾಡನ್ನು ಬಿಟ್ಟು ಹಾರಾನಿನಲ್ಲಿ ಬಂದು ನೆಲೆಸಿದನು. ಅವನ ತಂದೆಯ ಮರಣದ ನಂತರ ನೀವು ಈಗ ವಾಸಿಸುತ್ತಿರುವ ಈ ನಾಡಿಗೆ ದೇವರು ಅವನನ್ನು ಬರಮಾಡಿದರು.


ಆದಕಾರಣ ಇಸ್ರಾಯೇಲಿನ ದೇವರು ಅಸ್ಸೀರಿಯದ ಅರಸನಾದ ಪೂಲನ ಆತ್ಮವನ್ನೂ ಅಸ್ಸೀರಿಯದ ಅರಸನಾದ ತಿಗ್ಲತ್ಪಿಲೆಸರನ ಆತ್ಮವನ್ನೂ ಪ್ರೇರಿಸಿದ್ದರಿಂದ, ಅವರು ಅವರನ್ನು ಸೆರೆಯಾಗಿ ಒಯ್ದರು. ಆ ರೂಬೇನ್ಯರನ್ನೂ, ಗಾದ್ಯರನ್ನೂ, ಮನಸ್ಸೆಯ ಅರ್ಧ ಗೋತ್ರದವರನ್ನೂ ಹಲಹ, ಹಾಬೋರ್, ಹಾರ, ಎಂಬ ಪ್ರಾಂತಗಳಿಗೂ ಗೋಜಾನ್ ನದಿಯ ಪ್ರದೇಶಗಳಿಗೂ ತೆಗೆದುಕೊಂಡು ಹೋದರು. ಅವರು ಇಂದಿನವರೆಗೂ ಅಲ್ಲಿಯೇ ಇದ್ದಾರೆ.


ಯಾಕೋಬನು ಅವರಿಗೆ, “ನನ್ನ ಸಹೋದರರೇ, ನೀವು ಎಲ್ಲಿಯವರು?” ಎಂದಾಗ. ಅವರು, “ನಾವು ಹಾರಾನಿನವರು,” ಎಂದರು.


ಯೆಹೋವ ದೇವರು ಪೂರ್ವದಿಕ್ಕಿಗಿರುವ ಏದೆನ್ ಸೀಮೆಯಲ್ಲಿ ತೋಟವನ್ನು ಮಾಡಿ, ತಾವು ರೂಪಿಸಿದ ಮನುಷ್ಯನನ್ನು ಅದರಲ್ಲಿ ಇರಿಸಿದರು.


ಇಗೋ, ಅಸ್ಸೀರಿಯದ ಅರಸರು ಸಮಸ್ತ ದೇಶಗಳನ್ನು ಸಂಪೂರ್ಣವಾಗಿ ನಾಶಮಾಡಿದರೆಂದು ನೀನು ಕೇಳಿದಿಯಲ್ಲಾ. ಹೀಗಿದ್ದ ಮೇಲೆ ನೀನು ಬಿಡುಗಡೆಯಾಗುವೆಯೋ?


ತೆರಹನು ಇನ್ನೂರ ಐದು ವರ್ಷ ಜೀವಿಸಿ, ಹಾರಾನಿನಲ್ಲಿ ಮರಣಹೊಂದಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು