Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 2:24 - ಕನ್ನಡ ಸಮಕಾಲಿಕ ಅನುವಾದ

24 ಅವನು ಹಿಂದಿರುಗಿ ಅವರನ್ನು ನೋಡಿ, ಯೆಹೋವ ದೇವರ ಹೆಸರಿನಲ್ಲಿ ಅವರನ್ನು ಶಪಿಸಿದನು. ಆಗ ಅಡವಿಯಿಂದ ಎರಡು ಕರಡಿಗಳು ಹೊರಟು, ಅವರಲ್ಲಿ ನಾಲ್ವತ್ತೆರಡು ಹುಡುಗರನ್ನು ಸೀಳಿಬಿಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅವನು ಅವರ ಕಡೆಗೆ ತಿರುಗಿಕೊಂಡು ಯೆಹೋವನ ಹೆಸರಿನಲ್ಲಿ ಅವರನ್ನು ಶಪಿಸಿದನು. ಕೂಡಲೆ ಕಾಡಿನಿಂದ ಎರಡು ಹೆಣ್ಣು ಕರಡಿಗಳು ಬಂದು ಆ ಹುಡುಗರಲ್ಲಿ ನಲ್ವತ್ತೆರಡು ಮಂದಿಯನ್ನು ಹರಿದುಬಿಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಎಲೀಷನು ಅವರ ಕಡೆಗೆ ತಿರುಗಿ, ಸರ್ವೇಶ್ವರನ ಹೆಸರಿನಲ್ಲಿ ಅವರನ್ನು ಶಪಿಸಿದನು. ಕೂಡಲೆ ಕಾಡಿನಿಂದ ಎರಡು ಹೆಣ್ಣುಕರಡಿಗಳು ಬಂದು ಆ ಹುಡುಗರಲ್ಲಿ ನಾಲ್ವತ್ತೆರಡು ಮಂದಿಯನ್ನು ಸೀಳಿಬಿಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅವನು ಅವರ ಕಡೆಗೆ ತಿರುಗಿಕೊಂಡು ಯೆಹೋವನ ಹೆಸರಿನಲ್ಲಿ ಅವರನ್ನು ಶಪಿಸಿದನು. ಕೂಡಲೆ ಕಾಡಿನಿಂದ ಎರಡು ಹೆಣ್ಣು ಕರಡಿಗಳು ಬಂದು ಆ ಹುಡುಗರಲ್ಲಿ ನಾಲ್ವತ್ತೆರಡು ಮಂದಿಯನ್ನು ಹರಿದುಬಿಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಎಲೀಷನು ಹಿಂದಕ್ಕೆ ತಿರುಗಿ ಅವರನ್ನು ನೋಡಿ ಅವರಿಗೆ ಕೇಡಾಗುವಂತೆ ಯೆಹೋವನನ್ನು ಕೇಳಿಕೊಂಡನು. ಆಗ ಕಾಡಿನಿಂದ ಎರಡು ಕರಡಿಗಳು ಹೊರಗೆ ಬಂದು ಅವರ ಮೇಲೆರಗಿ ನಲವತ್ತೆರಡು ಮಂದಿ ಬಾಲಕರನ್ನು ಸೀಳಿಹಾಕಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 2:24
28 ತಿಳಿವುಗಳ ಹೋಲಿಕೆ  

“ನೀವಿಬ್ಬರೂ ಕರ್ತದೇವರ ಆತ್ಮವನ್ನು ಪರೀಕ್ಷಿಸಲು ಒಪ್ಪಿಕೊಂಡದ್ದೇಕೆ? ಇಗೋ! ನಿನ್ನ ಗಂಡನ ಶವವನ್ನು ಹೂಣಿಟ್ಟು ಬಂದವರು ಬಾಗಿಲ ಬಳಿಯಲ್ಲೇ ಇದ್ದಾರೆ. ಅವರು ನಿನ್ನನ್ನೂ ಹೊತ್ತುಕೊಂಡು ಹೋಗುವರು,” ಎಂದು ಆಕೆಗೆ ಪೇತ್ರನು ಹೇಳಿದನು.


ಇದನ್ನು ಅನನೀಯನು ಕೇಳಿಸಿಕೊಂಡಾಗ, ಕೆಳಗೆ ಬಿದ್ದು ಸತ್ತುಹೋದನು. ನಡೆದ ಸಂಗತಿಯನ್ನು ಕೇಳಿದವರೆಲ್ಲರಿಗೂ ಮಹಾ ಭಯವು ಉಂಟಾಯಿತು.


ಆದ್ದರಿಂದ ಯೆಹೋವ ದೇವರು ಹೇಳುವುದೇನೆಂದರೆ: “ ‘ನಿನ್ನ ಹೆಂಡತಿ ಪಟ್ಟಣದಲ್ಲಿ ವ್ಯಭಿಚಾರಿಣಿಯಾಗುವಳು. ನಿನ್ನ ಪುತ್ರ ಪುತ್ರಿಯರೂ ಖಡ್ಗದಿಂದ ಬೀಳುವರು. ನಿನ್ನ ದೇಶವನ್ನು ಅಳೆಯಲಾಗುತ್ತದೆ ಮತ್ತು ವಿಭಾಗಿಸಲಾಗುತ್ತದೆ. ನೀನು ಅಪವಿತ್ರವಾದ ದೇಶದಲ್ಲಿ ಸಾಯುವಿ. ಇಸ್ರಾಯೇಲ್ ನಿಶ್ಚಯವಾಗಿ ತನ್ನ ದೇಶದಿಂದ ಸೆರೆಯಾಗಿ ಕರೆದೊಯ್ಯಲಾಗುವುದು.’ ”


ನಾನು ಮರಿಯನ್ನು ಕಳೆದುಕೊಂಡ ಕರಡಿಯಂತೆ ಅವರನ್ನು ಎದುರುಗೊಳ್ಳುವೆನು. ಅವರ ಹೃದಯದ ಪೊರೆಯನ್ನು ಹರಿದುಬಿಡುವೆನು. ನಾನು ಸಿಂಹದ ಹಾಗೆ ಅವರನ್ನು ನುಂಗುವೆನು. ಕಾಡುಮೃಗವು ಅವರನ್ನು ಸೀಳಿ ಹಾಕುವುದು.


ಅದಕ್ಕೆ ಪೇತ್ರನು, “ದೇವರ ವರವನ್ನು ಹಣಕೊಟ್ಟು ಕೊಂಡುಕೊಳ್ಳಬಹುದೆಂದು ನೀನು ಭಾವಿಸಿದ್ದರಿಂದ ನೀನು ನಿನ್ನ ಹಣದೊಂದಿಗೆ ನಾಶವಾಗಿಹೋಗು!


ಆಗ ಪೇತ್ರನು ಜ್ಞಾಪಕಮಾಡಿಕೊಂಡು ಯೇಸುವಿಗೆ, “ಗುರುವೇ, ಇಗೋ! ನೀನು ಶಪಿಸಿದ ಅಂಜೂರದ ಮರವು ಒಣಗಿಹೋಗಿದೆ!” ಎಂದು ಹೇಳಿದನು.


ಯೇಸು ಅದಕ್ಕೆ, “ಇನ್ನೆಂದಿಗೂ ಯಾರೂ ನಿನ್ನಿಂದ ಹಣ್ಣನ್ನು ತಿನ್ನದಿರಲಿ,” ಎಂದರು. ಅದನ್ನು ಅವರ ಶಿಷ್ಯರು ಕೇಳಿಸಿಕೊಂಡರು.


ಅವರಿಗೆ ದುಃಖಕರವಾದ ಹೃದಯವನ್ನೂ, ನಿಮ್ಮ ಶಾಪವನ್ನೂ ಕೊಡಿ.


ಆದ್ದರಿಂದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಇಗೋ, ನಾನು ನಿನ್ನನ್ನು ಭೂಮಿಯ ಮೇಲಿನಿಂದ ಬಿಸಾಡಿಬಿಡುತ್ತೇನೆ. ಈ ವರ್ಷವೇ ನೀನು ಸಾಯುವೆ. ಏಕೆಂದರೆ ನೀನು ಯೆಹೋವ ದೇವರಿಗೆ ವಿರೋಧವಾಗಿ ದ್ರೋಹ ಬಗೆದಿದ್ದೀ,’ ” ಎಂದನು.


ಆಗ ಪ್ರವಾದಿಯು ಇವನಿಗೆ, “ನೀನು ಯೆಹೋವ ದೇವರ ಮಾತನ್ನು ಕೇಳದೆ ಹೋದದ್ದರಿಂದ, ನೀನು ನನ್ನನ್ನು ಬಿಟ್ಟು ಹೋಗುವಾಗ ಸಿಂಹವು ನಿನ್ನನ್ನು ಕೊಲ್ಲುವುದು,” ಎಂದನು. ಅವನು ಪ್ರವಾದಿಯನ್ನು ಬಿಟ್ಟು ಹೋದಾಗಲೇ ಸಿಂಹವು ಅವನನ್ನು ಕಂಡು ಕೊಂದುಹಾಕಿತು.


ಹಜಾಯೇಲನ ಖಡ್ಗಕ್ಕೆ ತಪ್ಪಿಸಿಕೊಂಡವರನ್ನು ಯೇಹುವು ಕೊಲ್ಲುವನು; ಯೇಹುವಿನ ಖಡ್ಗಕ್ಕೆ ತಪ್ಪಿಸಿಕೊಂಡವರನ್ನು ಎಲೀಷನು ಕೊಂದುಹಾಕುವನು.


ಅವನು ಹೋದ ತರುವಾಯ, ಸಿಂಹವು ಅವನನ್ನು ದಾರಿಯಲ್ಲಿ ಹಿಡಿದು ಕೊಂದುಹಾಕಿತು. ಅವನ ಹೆಣ ದಾರಿಯಲ್ಲಿ ಬಿದ್ದಿತ್ತು. ಕತ್ತೆಯೂ ಮತ್ತು ಸಿಂಹವೂ ಹೆಣದ ಬಳಿಯಲ್ಲಿ ನಿಂತಿದ್ದವು.


ಹೂಷೈ, “ನಿನ್ನ ತಂದೆಯೂ, ಅವನ ಮನುಷ್ಯರೂ ಪರಾಕ್ರಮಶಾಲಿಗಳು. ಅವರು ಅಡವಿಯಲ್ಲಿ ಮರಿಗಳನ್ನು ಕಳೆದುಕೊಂಡ ಕರಡಿಯ ಹಾಗೆಯೇ ಕೋಪವುಳ್ಳವರಾಗಿದ್ದಾರೆಂದು ನೀನು ಬಲ್ಲೆ. ಇದಲ್ಲದೆ ನಿನ್ನ ತಂದೆಯು ಶೂರನು. ಅವನು ರಾತ್ರಿಯಲ್ಲಿ ಜನರ ಸಂಗಡ ತಂಗುವುದಿಲ್ಲ.


ಇದಲ್ಲದೆ ಶೆಕೆಮಿನವರು ಮಾಡಿದ ಸಮಸ್ತ ಕೆಟ್ಟತನವನ್ನು ಅವರ ತಲೆಗಳ ಮೇಲೆ ದೇವರು ಬರಮಾಡಿದರು. ಹೀಗೆ ಯೆರುಬ್ಬಾಳನ ಮಗನಾದ ಯೋತಾಮನ ಶಾಪವು ಅವರ ಮೇಲೆ ಬಂದಿತು.


ನೀನು ಅವುಗಳಿಗೆ ಅಡ್ಡ ಬೀಳಬಾರದು ಮತ್ತು ಆರಾಧಿಸಲೂಬಾರದು. ಏಕೆಂದರೆ ನಿನ್ನ ದೇವರಾದ ನಾನು, ನನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದ ಸ್ವಾಮ್ಯಾಸಕ್ತನಾದ ಯೆಹೋವ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆತಾಯಿಗಳ ಅಪರಾಧವನ್ನು ಮಕ್ಕಳ ಮೇಲೆಯೂ ಮೂರನೆಯ ನಾಲ್ಕನೆಯ ತಲೆಗಳವರೆಗೂ ಬರಮಾಡುವೆನು.


ನಂತರ ಅವನು ಹೀಗೆಂದನು, “ಕಾನಾನನು ಶಾಪಗ್ರಸ್ತನಾಗಲಿ, ಅವನು ತನ್ನ ಸಹೋದರರಿಗೆ ದಾಸಾನುದಾಸನಾಗಿರಲಿ.”


ನಿಮ್ಮ ವಿಧೇಯತ್ವವು ಪರಿಪೂರ್ಣವಾದಾಗ, ನಾವು ಪ್ರತಿಯೊಂದು ಅವಿಧೇಯತ್ವವನ್ನೂ ಶಿಕ್ಷಿಸಲು ಸಿದ್ಧರಾಗಿದ್ದೇವೆ.


ಗರ್ಜಿಸುವ ಸಿಂಹದಂತೆಯೂ ಅಲೆದಾಡುವ ಕರಡಿಯಂತೆಯೂ, ಬಡವರನ್ನು ದುಷ್ಟನು ಆಳುವನು.


ತನ್ನ ಮೂಢತೆಯಲ್ಲಿರುವ ಬುದ್ಧಿಹೀನನನ್ನು ಸಂಧಿಸುವುದಕ್ಕಿಂತ ಮರಿಗಳನ್ನು ಕಳೆದುಕೊಂಡ ಕರಡಿಯನ್ನು ಸಂಧಿಸುವುದು ಮೇಲು.


ಇಲ್ಲದಿದ್ದರೆ ಅಬೀಮೆಲೆಕನಿಂದ ಬೆಂಕಿ ಹೊರಟು ಶೆಕೆಮಿನ ಹಿರಿಯರನ್ನೂ, ಮಿಲ್ಲೋನಿನ ಮನೆಯವರನ್ನೂ ದಹಿಸಿಬಿಡಲಿ. ಶೆಕೆಮಿನ ಜನರಿಂದಲೂ, ಮಿಲ್ಲೋನಿನ ಮನೆಯವರಿಂದಲೂ ಬೆಂಕಿ ಹೊರಟು ಅಬೀಮೆಲೆಕನನ್ನು ದಹಿಸಿಬಿಡಲಿ,” ಎಂದನು.


ಅವನು ಆ ಸ್ಥಳವನ್ನು ಬಿಟ್ಟು ಕರ್ಮೆಲ್ ಬೆಟ್ಟಕ್ಕೆ ಹೋದನು. ಅಲ್ಲಿಂದ ಸಮಾರ್ಯಕ್ಕೆ ಇಳಿದು ಹೋದನು.


ಕಾಡುಮೃಗಗಳು ನಿಮ್ಮ ಮೇಲೆ ಬರುವಂತೆ ಮಾಡುವೆನು. ಅವು ನಿಮ್ಮನ್ನು ಮಕ್ಕಳಿಲ್ಲದವರನ್ನಾಗಿ ಮಾಡಿ, ನಿಮ್ಮ ದನಗಳನ್ನು ತಿಂದುಬಿಡುವವು. ನಿಮ್ಮನ್ನು ಸ್ವಲ್ಪ ಮಂದಿಯಾಗಿ ಮಾಡುವುವು. ನಿಮ್ಮ ಮಾರ್ಗಗಳು ಹಾಳಾಗಿ ಹೋಗುವುವು.


ಪರಿಹಾಸ್ಯಗಾರರಿಗೆ ನ್ಯಾಯ ತೀರ್ಪುಗಳೂ, ಬುದ್ಧಿಹೀನರ ಬೆನ್ನಿಗೆ ಪೆಟ್ಟುಗಳೂ ಸಿದ್ಧವಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು