Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 2:5 - ಕನ್ನಡ ಸಮಕಾಲಿಕ ಅನುವಾದ

5 ಆಗ ಯೆರಿಕೋವಿನಲ್ಲಿರುವ ಪ್ರವಾದಿಗಳ ಗುಂಪು ಎಲೀಷನ ಬಳಿಗೆ ಬಂದು ಅವನಿಗೆ, “ಯೆಹೋವ ದೇವರು ಇಂದು ನಿನ್ನ ಯಜಮಾನನನ್ನು ನಿನ್ನ ಬಳಿಯಿಂದ ತೆಗೆದುಕೊಳ್ಳುವನೆಂದು ತಿಳಿದಿದ್ದೀಯೋ?” ಎಂದರು. ಅದಕ್ಕವನು, “ನಾನು ಕೂಡಾ ಬಲ್ಲೆ, ಸುಮ್ಮನೆ ಇರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೆರಿಕೋವಿನಲ್ಲಿದ್ದ ಪ್ರವಾದಿ ಮಂಡಳಿಯವರು ಎಲೀಷನನ್ನು ಎದುರುಗೊಂಡು ಅವನಿಗೆ, “ಯೆಹೋವನು ಈ ಹೊತ್ತು ನಿನ್ನ ಯಜಮಾನನನ್ನು ನಿನ್ನ ಬಳಿಯಿಂದ ಮೇಲಕ್ಕೆ ತೆಗೆದುಕೊಳ್ಳುವನೆಂಬುದು ನಿನಗೆ ಗೊತ್ತುಂಟೋ?” ಎಂದು ಕೇಳಿದರು. ಅದಕ್ಕೆ ಅವನು, ನನಗೆ “ಗೊತ್ತುಂಟು ನೀವು ಸುಮ್ಮನಿರಿ” ಎಂದು ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅಲ್ಲಿನ ಪ್ರವಾದಿಮಂಡಲಿಯವರು ಎಲೀಷನನ್ನು ಭೇಟಿಯಾಗಿ, “ಸರ್ವೇಶ್ವರ ಈ ದಿನ ನಿಮ್ಮ ಗುರುವನ್ನು ನಿಮ್ಮ ಬಳಿಯಿಂದ ಮೇಲಕ್ಕೆ ತೆಗೆದುಕೊಳ್ಳುವರು ಎಂಬುದು ನಿಮಗೆ ತಿಳಿದಿದೆಯೊ?” ಎಂದು ಕೇಳಿದರು. ಅದಕ್ಕೆ ಅವನು, “ತಿಳಿದಿದೆ; ಆದರೆ ನೀವು ಸುಮ್ಮನಿರಿ,” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅಲ್ಲಿನ ಪ್ರವಾದಿಮಂಡಲಿಯವರು ಅವನನ್ನು ಎದುರುಗೊಂಡು - ಯೆಹೋವನು ಈಹೊತ್ತು ನಿನ್ನ ಯಜಮಾನನನ್ನು ನಿನ್ನ ಬಳಿಯಿಂದ ಮೇಲಕ್ಕೆ ಕರೆದುಕೊಳ್ಳುವನೆಂದು ನಿನಗೆ ಗೊತ್ತುಂಟೋ ಎಂದು ಕೇಳಿದರು. ಅದಕ್ಕೆ ಅವನು - ಗೊತ್ತುಂಟು, ಸುಮ್ಮನಿರ್ರಿ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಜೆರಿಕೊದಲ್ಲಿ ಪ್ರವಾದಿಗಳ ಗುಂಪೊಂದು ಎಲೀಷನ ಬಳಿಗೆ ಬಂದು ಅವನಿಗೆ, “ಯೆಹೋವನು ಈ ದಿನ ನಿನ್ನ ಒಡೆಯನನ್ನು ನಿನ್ನಿಂದ ತೆಗೆದುಕೊಳ್ಳುತ್ತಾನೆಂಬುದು ನಿನಗೆ ತಿಳಿದಿದೆಯೇ?” ಎಂದು ಕೇಳಿದರು. ಎಲೀಷನು, “ಹೌದು, ನನಗೆ ಅದು ತಿಳಿದಿದೆ. ಅದರ ಬಗ್ಗೆ ಮಾತನಾಡಬೇಡಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 2:5
18 ತಿಳಿವುಗಳ ಹೋಲಿಕೆ  

ಆಗ ಬೇತೇಲಿನಲ್ಲಿರುವ ಪ್ರವಾದಿಗಳ ಗುಂಪು ಎಲೀಷನ ಬಳಿಗೆ ಬಂದು ಅವನಿಗೆ, “ಇಂದು ಯೆಹೋವ ದೇವರು ನಿನ್ನ ಯಜಮಾನನನ್ನು ನಿನ್ನಿಂದ ತೆಗೆದುಕೊಳ್ಳುವರೆಂದು ತಿಳಿದಿದ್ದೀಯೋ?” ಎಂದರು. ಅದಕ್ಕವನು, “ಹೌದು, ನಾನು ಕೂಡಾ ಬಲ್ಲೆ, ಸುಮ್ಮನೆ ಇರಿ,” ಎಂದನು.


“ಗಲಿಲಾಯದವರೇ, ಆಕಾಶವನ್ನೇ ನೋಡುತ್ತಾ ಇಲ್ಲಿ ಏಕೆ ನಿಂತಿರುವಿರಿ? ನಿಮ್ಮ ಬಳಿಯಿಂದ ಪರಲೋಕಕ್ಕೆ ಏರಿಹೋದ ಈ ಯೇಸುವು ಪರಲೋಕಕ್ಕೆ ಹೋಗುವುದನ್ನು ನೀವು ನೋಡಿದ ರೀತಿಯಲ್ಲಿಯೇ ಹಿಂದಿರುಗಿ ಬರುವರು,” ಎಂದು ಹೇಳಿದರು.


ಅಂದರೆ, ಯೇಸು ಆರಿಸಿಕೊಂಡ ಅಪೊಸ್ತಲರಿಗೆ ಪವಿತ್ರಾತ್ಮ ದೇವರ ಮುಖಾಂತರ ಆಜ್ಞಾಪಿಸಿದ ದಿನ ಮೊದಲುಗೊಂಡು ಸ್ವರ್ಗಕ್ಕೆ ಏರಿಹೋಗುವ ದಿನದವರೆಗೆ ಮಾಡಿದ್ದೆಲ್ಲವನ್ನೂ ಬರೆದಿದ್ದೇನೆ.


ಯೇಸು ಅವರನ್ನು ಆಶೀರ್ವದಿಸುತ್ತಿರುವಾಗಲೇ ಅವರನ್ನು ಬಿಟ್ಟು ಮೇಲೆ ಪರಲೋಕಕ್ಕೆ ಏರಿದರು.


ಆದರೆ ಯೆಹೋವ ದೇವರು ತಮ್ಮ ಪರಿಶುದ್ಧ ಮಂದಿರದಲ್ಲಿ ಇದ್ದಾರೆ. ಅವರ ಮುಂದೆ ಭೂಮಿಯೆಲ್ಲಾ ಮೌನವಾಗಿರಲಿ.


ದ್ವೀಪಗಳೇ, ನನ್ನ ಮುಂದೆ ಮೌನದಿಂದಿರಿ. ರಾಷ್ಟ್ರಗಳು ತಮ್ಮ ಬಲವನ್ನು ನವೀಕರಿಸಲಿ! ಅವರು ನನ್ನ ಸಮೀಪಕ್ಕೆ ಬಂದು ಮಾತನಾಡಲಿ. ನ್ಯಾಯಸ್ಥಾನಕ್ಕೆ ಸಮೀಪಕ್ಕೆ ಒಟ್ಟಾಗಿ ಬರೋಣ.


ಹರಿಯುವುದಕ್ಕೆ ಒಂದು ಸಮಯ, ಹೊಲಿಯುವುದಕ್ಕೆ ಒಂದು ಸಮಯ. ಸುಮ್ಮನೆ ಇರುವುದಕ್ಕೆ ಒಂದು ಸಮಯ, ಮಾತಾಡುವುದಕ್ಕೆ ಒಂದು ಸಮಯ.


ಅದಕ್ಕೆ ಅವನ ತಂದೆಯು ಒಪ್ಪದೆ, “ನನಗೆ ಗೊತ್ತು. ನನ್ನ ಮಗನೇ, ನನಗೆ ತಿಳಿಯಿತು. ಅವನು ಸಹ ಜನಾಂಗವಾಗುವುದಲ್ಲದೆ ಅವನು ದೊಡ್ಡವನಾಗುವನು. ಆದರೂ ಅವನ ತಮ್ಮನು ನಿಶ್ಚಯವಾಗಿ ಅವನಿಗಿಂತ ದೊಡ್ಡವನಾಗುವನು. ಅವನ ಸಂತತಿಯು ಜನಾಂಗಗಳ ಸಮೂಹವಾಗುವುದು,” ಎಂದನು.


ಆದರೆ ಪೌಲನು, “ಬಹು ಗೌರವವುಳ್ಳ ಫೆಸ್ತರೇ, ನಾನು ಹುಚ್ಚನಲ್ಲ, ಆದರೆ ನಾನು ಸತ್ಯವನ್ನೇ ಸ್ವಸ್ಥಬುದ್ಧಿಯಿಂದ ಮಾತನಾಡುತ್ತಿರುವೆನು.


“ತರುವಾಯ ಫಿಲಿಷ್ಟಿಯರ ತಾಣವಿರುವ ದೇವರ ಗಿಬೆಯ ಗುಡ್ಡಕ್ಕೆ ಹೋಗುವಿ. ಅಲ್ಲಿಂದ ನೀನು ಪಟ್ಟಣಕ್ಕೆ ಪ್ರವೇಶಿಸುವಾಗ, ನಿನಗೆದುರಾಗಿ ವೀಣೆ, ದಮ್ಮಡಿ, ಕೊಳಲು, ಕಿನ್ನರಿಗಳನ್ನು ತಮ್ಮ ಮುಂದೆ ಇಟ್ಟುಕೊಂಡು ಮೇಲಿನಿಂದ ಇಳಿದು ಬರುವ ಪ್ರವಾದಿಗಳ ಗುಂಪು ಬರುವುದು. ಅವರು ಪ್ರವಾದಿಸುವರು.


ಆಗ ಆಮೋಸನು ಅಮಚ್ಯನಿಗೆ ಉತ್ತರವಾಗಿ, “ನಾನು ಪ್ರವಾದಿಯಲ್ಲ, ಪ್ರವಾದಿಯ ಮಗನೂ ಅಲ್ಲ. ಆದರೆ ನಾನು ಕುರುಬನೂ ಅತ್ತಿಹಣ್ಣುಗಳನ್ನು ಕೂಡಿಸುವವನೂ ಆಗಿದ್ದೆನು,” ಎಂದನು.


ಆದರೆ ಪ್ರವಾದಿಗಳ ಮಂಡಲಿಯಲ್ಲಿ ಒಬ್ಬನು ಯೆಹೋವ ದೇವರ ಮಾತಿನಿಂದ ತನ್ನ ಜೊತೆಗಾರನಿಗೆ, “ನೀನು ನಿನ್ನ ಆಯುಧದಿಂದ ನನ್ನನ್ನು ಹೊಡೆ,” ಎಂದನು. ಆದರೆ ಆ ಜೊತೆಗಾರನನ್ನು ಹೊಡೆಯಲೊಲ್ಲದೆ ಇದ್ದನು.


ಪ್ರವಾದಿಗಳ ಗುಂಪಿನಲ್ಲಿದ್ದ ಒಬ್ಬ ಪ್ರವಾದಿಯ ಹೆಂಡತಿ ಎಲೀಷನಿಗೆ ಕೂಗಿ, “ನಿನ್ನ ದಾಸನಾದ ನನ್ನ ಗಂಡನು ಮರಣಹೊಂದಿದನು. ನಿನ್ನ ದಾಸನು ಯೆಹೋವ ದೇವರಿಗೆ ಭಯಪಡುವವನಾಗಿದ್ದನೆಂದು ನೀನು ಬಲ್ಲೆ. ಈಗ ಸಾಲಗಾರನು ನನ್ನ ಇಬ್ಬರು ಮಕ್ಕಳನ್ನು ತನಗೆ ದಾಸರಾಗಿ ತೆಗೆದುಕೊಳ್ಳಲು ಬಂದಿದ್ದಾನೆ,” ಎಂದಳು.


ಅದಕ್ಕೆ ಗೇಹಜಿಯು, “ಎಲ್ಲಾ ಕ್ಷೇಮ. ಪ್ರವಾದಿಗಳ ಮಂಡಳಿಯಲ್ಲಿಯ ಇಬ್ಬರು ಯುವಕರು ಎಫ್ರಾಯೀಮ್ ಬೆಟ್ಟದಿಂದ ಈಗಲೇ ನನ್ನ ಬಳಿಗೆ ಬಂದಿದ್ದಾರೆ. ನೀನು ದಯಮಾಡಿ ಅವರಿಗೆ ಮೂರು ಸಾವಿರ ಬೆಳ್ಳಿ ನಾಣ್ಯಗಳನ್ನೂ, ಎರಡು ಜೊತೆ ಬಟ್ಟೆಗಳನ್ನೂ ಕೊಡಬೇಕೆಂದು ನಿನಗೆ ಹೇಳು ಎಂದು ನನ್ನ ಯಜಮಾನನು ಕಳುಹಿಸಿದ್ದಾನೆ,” ಎಂದನು.


ಪ್ರವಾದಿಗಳ ಮಂಡಳಿಯು ಎಲೀಷನಿಗೆ, “ಇಗೋ, ಈಗ ನಾವು ನಿನ್ನ ಸಂಗಡ ವಾಸವಾಗಿರುವ ಸ್ಥಳವು ನಮಗೆ ಇಕ್ಕಟ್ಟಾಗಿದೆ. ಅಪ್ಪಣೆಕೊಡು,


ಪ್ರವಾದಿಯಾದ ಎಲೀಷನು ಪ್ರವಾದಿಗಳ ಮಂಡಳಿಯಲ್ಲಿ ಒಬ್ಬನನ್ನು ಕರೆದು ಅವನಿಗೆ, “ನಡುವನ್ನು ಕಟ್ಟಿಕೊಂಡು ಈ ಎಣ್ಣೆಯ ಪಾತ್ರೆಯನ್ನು ನಿನ್ನ ಕೈಯಲ್ಲಿ ತೆಗೆದುಕೊಂಡು ಗಿಲ್ಯಾದಿನ ರಾಮೋತಿಗೆ ಹೋಗು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು