Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 2:7 - ಕನ್ನಡ ಸಮಕಾಲಿಕ ಅನುವಾದ

7 ಪ್ರವಾದಿಗಳ ಗುಂಪಿನಲ್ಲಿ ಐವತ್ತು ಮಂದಿ ಹೋಗಿ ದೂರದಲ್ಲಿ ಎದುರಾಗಿ ನಿಂತರು. ಆದರೆ ಆ ಇಬ್ಬರು ಯೊರ್ದನ್ ನದಿ ಬಳಿಯಲ್ಲಿ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಪ್ರವಾದಿ ಮಂಡಳಿಯವರಲ್ಲಿ ಐವತ್ತು ಜನರು ಇವರ ಹಿಂದಿನಿಂದಲೇ ಬಂದು ಯೊರ್ದನಿಗೆ ಸ್ವಲ್ಪ ದೂರದಲ್ಲಿಯೇ ನಿಂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಪ್ರವಾದಿಮಂಡಲಿಯವರಲ್ಲಿ ಐವತ್ತುಮಂದಿ ಇವರ ಹಿಂದಿನಿಂದಲೇ ಬಂದು ಸ್ವಲ್ಪ ದೂರದಲ್ಲಿ ನಿಂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಪ್ರವಾದಿ ಮಂಡಲಿಯವರಲ್ಲಿ ಐವತ್ತು ಜನರು ಇವರ ಹಿಂದಿನಿಂದಲೇ ಬಂದು ಸ್ವಲ್ಪ ದೂರದಲ್ಲಿ ನಿಂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅವರನ್ನು ಹಿಂಬಾಲಿಸಿಕೊಂಡು ಬಂದ ಪ್ರವಾದಿಗಳ ಗುಂಪಿನಲ್ಲಿ ಐವತ್ತು ಮಂದಿ ಅಲ್ಲಿದ್ದರು. ಎಲೀಯ ಮತ್ತು ಎಲೀಷರು ಜೋರ್ಡನ್ ನದಿಯ ಹತ್ತಿರ ನಿಂತುಕೊಂಡರು. ಆ ಐವತ್ತು ಮಂದಿ ಜನರು ಎಲೀಯ ಮತ್ತು ಎಲೀಷರಿಗಿಂತ ಬಹುದೂರದಲ್ಲಿ ನಿಂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 2:7
12 ತಿಳಿವುಗಳ ಹೋಲಿಕೆ  

ಆದರೆ ಅವರು ಅವನನ್ನು ಬೇಸರಪಡುವವರೆಗೂ ಬಲವಂತ ಮಾಡಿದ್ದರಿಂದ ಅವನು, “ಕಳುಹಿಸಿರಿ,” ಎಂದನು. ಅವರು ಐವತ್ತು ಮಂದಿಯನ್ನು ಕಳುಹಿಸಿದರು. ಇವರು ಮೂರು ದಿವಸ ಹುಡುಕಿ ಅವನನ್ನು ಕಾಣದೆ ಹೋದರು.


ಈಜೆಬೆಲಳು ಪ್ರವಾದಿಗಳನ್ನು ಕೊಲ್ಲುತ್ತಿದ್ದ ಸಮಯದಲ್ಲಿ ಯೆಹೋವ ದೇವರ ಪ್ರವಾದಿಗಳನ್ನು ನೂರು ಮಂದಿಯನ್ನು, ಐವತ್ತು ಐವತ್ತು ಮಂದಿಯಾಗಿ ಗವಿಯಲ್ಲಿ ಬಚ್ಚಿಟ್ಟು, ಅವರಿಗೆ ಆಹಾರವನ್ನೂ, ನೀರನ್ನೂ ಕೊಟ್ಟು ಸಂರಕ್ಷಿಸಿದ್ದು ನನ್ನ ಯಜಮಾನನಾದ ನೀನು ಕೇಳಿಸಿಕೊಳ್ಳಲಿಲ್ಲವೇ?


ಈಜೆಬೆಲಳು ಯೆಹೋವ ದೇವರ ಪ್ರವಾದಿಗಳನ್ನು ಕೊಲ್ಲುತ್ತಿದ್ದಾಗ, ಓಬದ್ಯನು ನೂರು ಮಂದಿ ಪ್ರವಾದಿಗಳನ್ನು ತೆಗೆದುಕೊಂಡು, ಐವತ್ತು ಮಂದಿಯಾಗಿ ಅವರನ್ನು ಗವಿಯಲ್ಲಿ ಬಚ್ಚಿಟ್ಟು, ಅವರಿಗೆ ಆಹಾರವನ್ನೂ, ನೀರನ್ನೂ ಕೊಟ್ಟು, ಅವರನ್ನು ಸಂರಕ್ಷಣೆ ಮಾಡುತ್ತಾ ಇದ್ದನು.


ಯೆರಿಕೋವಿನ ಬಳಿಯಲ್ಲಿ ಎದುರಾಗಿದ್ದ ಪ್ರವಾದಿಗಳ ಗುಂಪು ಅವನನ್ನು ಕಂಡಾಗ, “ಎಲೀಯನ ಆತ್ಮವು ಎಲೀಷನ ಮೇಲೆ ನಿಂತಿರುವುದು,” ಎಂದು ಹೇಳಿ, ಎದುರುಗೊಳ್ಳಲು ಬಂದು, ಅವನ ಮುಂದೆ ನೆಲದವರೆಗೂ ಅಡ್ಡಬಿದ್ದರು.


ಇದಲ್ಲದೆ ಅವರು ಅವನಿಗೆ, “ಇಗೋ, ನಿನ್ನ ಸೇವಕರ ಸಂಗಡ ಐವತ್ತು ಮಂದಿ ಬಲಿಷ್ಠರಾದವರಿದ್ದಾರೆ. ಅವರು ಹೋಗಿ ನಿನ್ನ ಯಜಮಾನನನ್ನು ಹುಡುಕಲು ಅಪ್ಪಣೆ ಆಗಲಿ. ಒಂದು ವೇಳೆ ಯೆಹೋವ ದೇವರ ಆತ್ಮರು ಅವನನ್ನು ಎತ್ತಿಕೊಂಡು ಹೋಗಿ ಬೆಟ್ಟದ ಮೇಲಾದರೂ, ತಗ್ಗಿನಲ್ಲಾದರೂ ಇಟ್ಟಿರಬಹುದು,” ಎಂದರು. ಅದಕ್ಕೆ ಅವನು, “ಕಳುಹಿಸಬೇಡಿರಿ,” ಎಂದನು.


“ತರುವಾಯ ಫಿಲಿಷ್ಟಿಯರ ತಾಣವಿರುವ ದೇವರ ಗಿಬೆಯ ಗುಡ್ಡಕ್ಕೆ ಹೋಗುವಿ. ಅಲ್ಲಿಂದ ನೀನು ಪಟ್ಟಣಕ್ಕೆ ಪ್ರವೇಶಿಸುವಾಗ, ನಿನಗೆದುರಾಗಿ ವೀಣೆ, ದಮ್ಮಡಿ, ಕೊಳಲು, ಕಿನ್ನರಿಗಳನ್ನು ತಮ್ಮ ಮುಂದೆ ಇಟ್ಟುಕೊಂಡು ಮೇಲಿನಿಂದ ಇಳಿದು ಬರುವ ಪ್ರವಾದಿಗಳ ಗುಂಪು ಬರುವುದು. ಅವರು ಪ್ರವಾದಿಸುವರು.


ಆದರೆ ಪ್ರವಾದಿಗಳ ಮಂಡಲಿಯಲ್ಲಿ ಒಬ್ಬನು ಯೆಹೋವ ದೇವರ ಮಾತಿನಿಂದ ತನ್ನ ಜೊತೆಗಾರನಿಗೆ, “ನೀನು ನಿನ್ನ ಆಯುಧದಿಂದ ನನ್ನನ್ನು ಹೊಡೆ,” ಎಂದನು. ಆದರೆ ಆ ಜೊತೆಗಾರನನ್ನು ಹೊಡೆಯಲೊಲ್ಲದೆ ಇದ್ದನು.


ಪ್ರವಾದಿಗಳ ಗುಂಪಿನಲ್ಲಿದ್ದ ಒಬ್ಬ ಪ್ರವಾದಿಯ ಹೆಂಡತಿ ಎಲೀಷನಿಗೆ ಕೂಗಿ, “ನಿನ್ನ ದಾಸನಾದ ನನ್ನ ಗಂಡನು ಮರಣಹೊಂದಿದನು. ನಿನ್ನ ದಾಸನು ಯೆಹೋವ ದೇವರಿಗೆ ಭಯಪಡುವವನಾಗಿದ್ದನೆಂದು ನೀನು ಬಲ್ಲೆ. ಈಗ ಸಾಲಗಾರನು ನನ್ನ ಇಬ್ಬರು ಮಕ್ಕಳನ್ನು ತನಗೆ ದಾಸರಾಗಿ ತೆಗೆದುಕೊಳ್ಳಲು ಬಂದಿದ್ದಾನೆ,” ಎಂದಳು.


ಅದಕ್ಕೆ ಗೇಹಜಿಯು, “ಎಲ್ಲಾ ಕ್ಷೇಮ. ಪ್ರವಾದಿಗಳ ಮಂಡಳಿಯಲ್ಲಿಯ ಇಬ್ಬರು ಯುವಕರು ಎಫ್ರಾಯೀಮ್ ಬೆಟ್ಟದಿಂದ ಈಗಲೇ ನನ್ನ ಬಳಿಗೆ ಬಂದಿದ್ದಾರೆ. ನೀನು ದಯಮಾಡಿ ಅವರಿಗೆ ಮೂರು ಸಾವಿರ ಬೆಳ್ಳಿ ನಾಣ್ಯಗಳನ್ನೂ, ಎರಡು ಜೊತೆ ಬಟ್ಟೆಗಳನ್ನೂ ಕೊಡಬೇಕೆಂದು ನಿನಗೆ ಹೇಳು ಎಂದು ನನ್ನ ಯಜಮಾನನು ಕಳುಹಿಸಿದ್ದಾನೆ,” ಎಂದನು.


ಪ್ರವಾದಿಗಳ ಮಂಡಳಿಯು ಎಲೀಷನಿಗೆ, “ಇಗೋ, ಈಗ ನಾವು ನಿನ್ನ ಸಂಗಡ ವಾಸವಾಗಿರುವ ಸ್ಥಳವು ನಮಗೆ ಇಕ್ಕಟ್ಟಾಗಿದೆ. ಅಪ್ಪಣೆಕೊಡು,


ಪ್ರವಾದಿಯಾದ ಎಲೀಷನು ಪ್ರವಾದಿಗಳ ಮಂಡಳಿಯಲ್ಲಿ ಒಬ್ಬನನ್ನು ಕರೆದು ಅವನಿಗೆ, “ನಡುವನ್ನು ಕಟ್ಟಿಕೊಂಡು ಈ ಎಣ್ಣೆಯ ಪಾತ್ರೆಯನ್ನು ನಿನ್ನ ಕೈಯಲ್ಲಿ ತೆಗೆದುಕೊಂಡು ಗಿಲ್ಯಾದಿನ ರಾಮೋತಿಗೆ ಹೋಗು.


ಆಗ ಆಮೋಸನು ಅಮಚ್ಯನಿಗೆ ಉತ್ತರವಾಗಿ, “ನಾನು ಪ್ರವಾದಿಯಲ್ಲ, ಪ್ರವಾದಿಯ ಮಗನೂ ಅಲ್ಲ. ಆದರೆ ನಾನು ಕುರುಬನೂ ಅತ್ತಿಹಣ್ಣುಗಳನ್ನು ಕೂಡಿಸುವವನೂ ಆಗಿದ್ದೆನು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು