Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 20:5 - ಕನ್ನಡ ಸಮಕಾಲಿಕ ಅನುವಾದ

5 ದೇವರು ಅವನಿಗೆ, “ನೀನು ಹಿಂದಿರುಗಿ ಹೋಗಿ ನನ್ನ ಜನರ ನಾಯಕನಾದ ಹಿಜ್ಕೀಯನಿಗೆ, ‘ನಿನ್ನ ತಂದೆಯಾದ ದಾವೀದನ ದೇವರಾದ ಯೆಹೋವ ದೇವರು ಹೇಳಿದ್ದೇನೆಂದರೆ: ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನೂ ಕಂಡಿದ್ದೇನೆ. ನಾನು ನಿನ್ನನ್ನು ಸ್ವಸ್ಥಮಾಡುತ್ತೇನೆ. ಮೂರನೆಯ ದಿವಸದಲ್ಲಿ ಯೆಹೋವ ದೇವರ ಆಲಯಕ್ಕೆ ಹೋಗುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 “ನೀನು ಹಿಂದಿರುಗಿ ಹೋಗಿ, ನನ್ನ ಜನಗಳ ಪ್ರಭುವಾಗಿರುವ ಹಿಜ್ಕೀಯನಿಗೆ, ‘ನಿನ್ನ ಪಿತೃವಾದ ದಾವೀದನ ದೇವರಾದ ಯೆಹೋವನು ಹೇಳಿದ್ದೇನೆಂದರೆ, ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನು ನೋಡಿದ್ದೇನೆ. ನೀನು ಗುಣಹೊಂದಿ ಮೂರನೆಯ ದಿನ ನನ್ನ ಆಲಯಕ್ಕೆ ಬರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 “ನೀನು ಹಿಂದಿರುಗಿ ಹೋಗಿ ನನ್ನ ಪ್ರಜೆಗಳ ಒಡೆಯನಾಗಿರುವ ಹಿಜ್ಕೀಯನಿಗೆ, “ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ; ನಿನ್ನ ಕಣ್ಣೀರನ್ನು ನೋಡಿದ್ದೇನೆ; ನೀನು ಗುಣಹೊಂದಿ ಮೂರನೆಯ ದಿನ ನನ್ನ ಆಲಯಕ್ಕೆ ಬರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನೀನು ಹಿಂದಿರುಗಿ ಹೋಗಿ ನನ್ನ ಪ್ರಜೆಗಳ ಪ್ರಭುವಾಗಿರುವ ಹಿಜ್ಕೀಯನಿಗೆ - ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ; ನಿನ್ನ ಕಣ್ಣೀರನ್ನು ನೋಡಿದ್ದೇನೆ; ನೀನು ಗುಣಹೊಂದಿ ನಾಡದು ನನ್ನ ಆಲಯಕ್ಕೆ ಬರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “ಹಿಂದಿರುಗಿ ಹೋಗಿ, ನನ್ನ ಜನರ ನಾಯಕನಾದ ಹಿಜ್ಕೀಯನಿಗೆ ಇದನ್ನು ಹೇಳು: ‘ನಿನ್ನ ಪೂರ್ವಿಕನಾದ ದಾವೀದನ ದೇವರಾದ ಯೆಹೋವನು ಹೀಗೆನ್ನುತ್ತಾನೆ: ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದೆನು; ನಿನ್ನ ಕಣ್ಣೀರನ್ನು ನೋಡಿದೆನು. ಆದ್ದರಿಂದ ನಾನು ನಿನ್ನನ್ನು ಗುಣಪಡಿಸುತ್ತೇನೆ. ಮೂರನೆಯ ದಿನ, ನೀನು ದೇವಾಲಯಕ್ಕೆ ಹೋಗುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 20:5
44 ತಿಳಿವುಗಳ ಹೋಲಿಕೆ  

“ನಾಳೆ ಇಷ್ಟು ಹೊತ್ತಿಗೆ ಬೆನ್ಯಾಮೀನನ ದೇಶದವನಾದ ಒಬ್ಬ ಮನುಷ್ಯನನ್ನು ನಿನ್ನ ಬಳಿಗೆ ಕಳುಹಿಸುವೆನು. ನೀನು ಅವನನ್ನು ನನ್ನ ಜನರಾದ ಇಸ್ರಾಯೇಲಿನ ಮೇಲೆ ನಾಯಕನಾಗಿರಲು ಅಭಿಷೇಕಿಸಬೇಕು. ಅವನು ನನ್ನ ಜನರನ್ನು ಫಿಲಿಷ್ಟಿಯರ ಕೈಯಿಂದ ತಪ್ಪಿಸಿ ರಕ್ಷಿಸುವನು. ಏಕೆಂದರೆ ನನ್ನ ಜನರ ಕೂಗು ನನ್ನ ಬಳಿಗೆ ಬಂದು ಮುಟ್ಟಿತು,” ಎಂಬುದೆ.


“ನೀನು ಹೋಗಿ ಹಿಜ್ಕೀಯನಿಗೆ ಹೀಗೆ ಹೇಳು, ‘ನಿನ್ನ ತಂದೆಯಾದ ದಾವೀದನ ದೇವರಾದ ಯೆಹೋವ ದೇವರು ಹೇಳಿದ್ದೇನೆಂದರೆ: ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನೂ ಕಂಡಿದ್ದೇನೆ. ನಿನ್ನ ಆಯುಷ್ಯಕ್ಕೆ ಹದಿನೈದು ವರ್ಷಗಳನ್ನು ಹೆಚ್ಚಾಗಿ ಕೂಡಿಸುತ್ತೇನೆ.


“ಯೆಹೋವ ದೇವರೇ, ನನ್ನ ಪ್ರಾರ್ಥನೆಯನ್ನು ಕೇಳಿರಿ; ನನ್ನ ಮೊರೆಗೆ ಕಿವಿಗೊಡಿರಿ; ನನ್ನ ಕಣ್ಣೀರನ್ನು ನೋಡಿರಿ ಮೌನವಾಗಿರಬೇಡಿರಿ; ಏಕೆಂದರೆ, ನಾನು ನನ್ನ ಪಿತೃಗಳೆಲ್ಲರ ಹಾಗೆ ನಿಮ್ಮ ಸಂಗಡ ಪರದೇಶಸ್ಥನಂತೆ ವಾಸಿಸುತ್ತೇನೆ; ನಾನೂ ಪ್ರವಾಸಿಯಾಗಿದ್ದೇನೆ.


ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿ ಕಳುಹಿಸಿದ್ದೇನೆಂದರೆ: “ಇಸ್ರಾಯೇಲಿನ ಯೆಹೋವ ದೇವರ ಮಾತಿದು: ನೀನು ಅಸ್ಸೀರಿಯದ ಅರಸನಾದ ಸನ್ಹೇರೀಬನನ್ನು ಕುರಿತು ಮಾಡಿದ ಪ್ರಾರ್ಥನೆಯನ್ನು ಕೇಳಿದ್ದೇನೆ.


ಕಣ್ಣೀರಿನಿಂದ ಬಿತ್ತುವವರು, ಆನಂದ ಗೀತದೊಡನೆ ಕೊಯ್ಯುವರು;


ದೇವರು ಮುರಿದ ಹೃದಯದವರನ್ನು ಸ್ವಸ್ಥಮಾಡಿ, ಅವರ ಗಾಯಗಳನ್ನು ಕಟ್ಟುತ್ತಾರೆ.


ನನ್ನ ಗೋಳಾಟವನ್ನು ಎಣಿಕೆ ಮಾಡಿರಿ, ನಿಮ್ಮ ಸುರುಳಿಯಲ್ಲಿ ನನ್ನ ಕಣ್ಣೀರ ಲೆಕ್ಕಮಾಡಿರಿ, ಅವು ನಿಮ್ಮ ಗ್ರಂಥದಲ್ಲಿ ಬರೆದಿದೆಯಲ್ಲವೇ?


ಏಕೆಂದರೆ, ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿ ಆಗಿರುವವರು ಇವರನ್ನು ಮೇಯಿಸಿ; ‘ಜೀವಜಲದ ಒರತೆಗಳ ಬಳಿ ನಡೆಸುವರು.’ ‘ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವರು,’” ಎಂದು ಹೇಳಿದನು.


ತರುವಾಯ ಯೇಸು ಅವನನ್ನು ದೇವಾಲಯದಲ್ಲಿ ಕಂಡು ಅವನಿಗೆ, “ಇಗೋ, ನೀನು ಸ್ವಸ್ಥನಾಗಿರುವೆ, ಹೆಚ್ಚಿನ ಕೇಡು ಬಾರದಂತೆ ಇನ್ನು ಮೇಲೆ ಪಾಪ ಮಾಡಬೇಡ,” ಎಂದರು.


ಆದರೆ ದೂತನು ಅವನಿಗೆ, “ಜಕರೀಯನೇ; ಭಯಪಡಬೇಡ, ದೇವರು ನಿನ್ನ ವಿಜ್ಞಾಪನೆಯನ್ನು ಕೇಳಿದ್ದಾರೆ. ನಿನ್ನ ಹೆಂಡತಿ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು, ನೀನು ಅವನಿಗೆ, ‘ಯೋಹಾನ’ ಎಂದು ಹೆಸರನ್ನಿಡಬೇಕು.


‘ನಾನು ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು ಆಗಿದ್ದೇನೆ,’ ಎಂದು ದೇವರು ನಿಮಗೆ ಹೇಳಿದ್ದನ್ನು ನೀವು ಓದಲಿಲ್ಲವೋ? ದೇವರು ಜೀವಿತರಿಗೆ ದೇವರಾಗಿದ್ದಾರೆ ಹೊರತು ಸತ್ತವರಿಗಲ್ಲ,” ಎಂದು ಹೇಳಿದರು.


ದೇವರು, “ನೀವು ನಿಮ್ಮ ದೇವರಾದ ಯೆಹೋವ ದೇವರ ಮಾತಿಗೆ ಶ್ರದ್ಧೆಯಿಂದ ಕಿವಿಗೊಟ್ಟು, ಅವರ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ, ಅವರ ಆಜ್ಞೆಗಳಿಗೆ ಕಿವಿಗೊಟ್ಟು, ಅವರ ನಿಯಮಗಳನ್ನು ಕೈಗೊಂಡರೆ, ಈಜಿಪ್ಟಿನ ಮೇಲೆ ಬರಮಾಡಿದ ಯಾವ ವ್ಯಾಧಿಯನ್ನೂ ನಿಮ್ಮ ಮೇಲೆ ಬರಮಾಡುವುದಿಲ್ಲ. ನಿಮ್ಮನ್ನು ಸ್ವಸ್ಥಪಡಿಸುವ ಯೆಹೋವ ದೇವರು ನಾನೇ ಆಗಿದ್ದೇನೆ,” ಎಂದು ಪ್ರಕಟಪಡಿಸಿದರು.


ಆಗ ಸಮುಯೇಲನು ಎಣ್ಣೆಕುಪ್ಪಿಯಿಂದ ಅವನ ತಲೆಯ ಮೇಲೆ ಸುರಿದು, ಅವನನ್ನು ಮುದ್ದಿಟ್ಟು ಅವನಿಗೆ, “ಯೆಹೋವ ದೇವರು ನಿನ್ನನ್ನು ತಮ್ಮ ಆಸ್ತಿಯಾಗಿರುವ ಜನರ ಮೇಲೆ ನಾಯಕನಾಗಿರಲು ಅಭಿಷೇಕ ಮಾಡಿದ್ದಾರೆ.


ದೇವರು ಸಮಸ್ತವನ್ನೂ ತಮಗೋಸ್ಕರವೂ ತಮ್ಮ ಮೂಲಕವೂ ಉಂಟುಮಾಡಿ ಬಹುಮಂದಿ ಮಕ್ಕಳನ್ನು ಮಹಿಮೆಗೆ ತರುವಂತೆ ಅವರ ರಕ್ಷಣಾ ನಾಯಕರಾದ ಕ್ರಿಸ್ತ ಯೇಸುವನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವುದು ದೇವರಿಗೆ ಯುಕ್ತವಾಗಿತ್ತು.


ಪ್ರಾರ್ಥನೆಯನ್ನು ಕೇಳುವವರೇ, ಎಲ್ಲಾ ಜನರು ನಿಮ್ಮ ಬಳಿಗೆ ಬರುವರು.


ಕಿವಿಯನ್ನು ಇತ್ತ ತಿರುಗಿಸಿರಿ, ನನ್ನ ಬಳಿಗೆ ಬನ್ನಿರಿ, ಆಲಿಸಿದರೆ ಬದುಕಿ ಬಾಳುವಿರಿ. ದಾವೀದನಿಗೆ ಖಂಡಿತವಾಗಿ ವಾಗ್ದಾನ ಮಾಡಿದ ಕೃಪಾವರಗಳನ್ನು ನಿಮಗೆ ಕೊಡುತ್ತೇನೆಂಬ ಶಾಶ್ವತವಾದ ಒಡಂಬಡಿಕೆಯನ್ನು ನಿಮ್ಮೊಂದಿಗೆ ಮಾಡಿಕೊಳ್ಳುವೆನು.


ಇದಲ್ಲದೆ ಹಿಜ್ಕೀಯನು, “ನಾನು ಯೆಹೋವ ದೇವರ ಆಲಯಕ್ಕೆ ಹೋಗುವೆನೆಂಬುದಕ್ಕೆ ನನಗೆ ಗುರುತೇನು?” ಎಂದು ಕೇಳಿದ್ದನು.


ಇದಲ್ಲದೆ ಪೂರ್ವದಲ್ಲಿ ಸೌಲನು ನಮ್ಮ ಮೇಲೆ ಅರಸನಾಗಿದ್ದಾಗ, ನೀನು ದಳಪತಿಯಾಗಿ ಇಸ್ರಾಯೇಲನ್ನು ಹೊರಗೆ ನಡೆಸುವವನಾಗಿಯೂ ಒಳಗೆ ತರುವವನಾಗಿಯೂ ಇದ್ದವನು. ಆದ್ದರಿಂದ ಯೆಹೋವ ದೇವರು ನಿನಗೆ, ‘ನೀನು ನನ್ನ ಜನರಾದ ಇಸ್ರಾಯೇಲರ ನಾಯಕನೂ ಪಾಲಕನೂ ಆಗಿರುವೆ ಎಂದು ಹೇಳಿದರು,’ ” ಎಂದರು.


“ನಾನು ಇರುವಾತನೇ ಆಗಿದ್ದೇನೆ! ನನ್ನ ಹಾಗೆ ಬೇರೆ ದೇವರು ಇಲ್ಲವೆಂದು ಈಗ ನೋಡಿರಿ. ನಾನೇ ಸಾಯಿಸುತ್ತೇನೆ, ಬದುಕಿಸುತ್ತೇನೆ, ಗಾಯಮಾಡುತ್ತೇನೆ, ನಾನೇ ಗುಣಪಡಿಸುತ್ತೇನೆ. ನನ್ನ ಕೈಯಿಂದ ತಪ್ಪಿಸುವವನು ಯಾರೂ ಇಲ್ಲ.


ಅವನು ಇನ್ನೂ ಬಾಲಕನಾಗಿರುವಾಗ, ತನ್ನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ ತನ್ನ ಪೂರ್ವಜನಾದ ದಾವೀದನ ದೇವರನ್ನು ಹುಡುಕಲು ಆರಂಭಿಸಿದನು. ಅವನ ಆಳ್ವಿಕೆಯ ಹನ್ನೆರಡನೆಯ ವರ್ಷದಲ್ಲಿ ಉನ್ನತ ಪೂಜಾಸ್ಥಳಗಳನ್ನೂ, ಅಶೇರ ಸ್ತಂಭಗಳನ್ನೂ, ಕೆತ್ತಿದ ವಿಗ್ರಹಗಳನ್ನೂ ತೆಗೆದುಹಾಕಿ, ಯೆಹೂದ ಮತ್ತು ಯೆರೂಸಲೇಮನ್ನು ಶುಚಿಮಾಡಲು ಆರಂಭಿಸಿದನು.


ದೇವರು ತಾವೇ ಅಧಿಪತಿಯಾಗಿ ನಮ್ಮ ಸಂಗಡ ಇದ್ದಾರೆ. ಇದಲ್ಲದೆ ನಿಮಗೆ ವಿರೋಧವಾಗಿ ಜಯಧ್ವನಿ ಮಾಡುವ ತುತೂರಿಗಳನ್ನು ಹಿಡಿದುಕೊಂಡ ಅವರ ಯಾಜಕರು ನಮಗಿದ್ದಾರೆ. ಇಸ್ರಾಯೇಲರೇ, ನೀವು ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಯುದ್ಧಮಾಡಬೇಡಿರಿ. ನೀವು ಜಯಹೊಂದುವುದಿಲ್ಲ,” ಎಂದನು.


“ಇಬ್ಬರು ಪ್ರಾರ್ಥನೆಮಾಡುವುದಕ್ಕೆ ದೇವಾಲಯಕ್ಕೆ ಹೋದರು. ಅವರಲ್ಲಿ ಒಬ್ಬನು ಫರಿಸಾಯನು ಮತ್ತೊಬ್ಬನು ಸುಂಕದವನು.


ಯೆಹೋವ ದೇವರು ಅವನಿಗೆ, “ನೀನು ನನ್ನ ಮುಂದೆ ಮಾಡಿದ ನಿನ್ನ ಪ್ರಾರ್ಥನೆಯನ್ನೂ ನಿನ್ನ ವಿಜ್ಞಾಪನೆಯನ್ನೂ ಕೇಳಿ ನನ್ನ ನಾಮವು ಯುಗಯುಗಾಂತರಕ್ಕೂ ಅಲ್ಲಿರುವ ಹಾಗೆ ನೀನು ಕಟ್ಟಿಸಿದ ಈ ಆಲಯವನ್ನು ಪರಿಶುದ್ಧ ಮಾಡಿದ್ದೇನೆ. ನನ್ನ ಕಣ್ಣುಗಳೂ, ನನ್ನ ಹೃದಯವೂ ನಿತ್ಯವಾಗಿ ಅಲ್ಲಿರುವುವು.


ಯೆಶಾಯನು ಅರಮನೆಯ ಆವರಣದ ಮಧ್ಯಕ್ಕೆ ಹೋಗುವ ಮುಂಚೆ ಯೆಹೋವ ದೇವರ ವಾಕ್ಯವು ಅವನಿಗೆ ಬಂದಿತು,


ದೇವರು ತಮ್ಮ ವಾಕ್ಯವನ್ನು ಕಳುಹಿಸಿ, ಅವರನ್ನು ಸ್ವಸ್ಥಮಾಡಿದರು; ನಾಶನದಿಂದಲೂ ಅವರನ್ನು ತಪ್ಪಿಸಿದರು.


ಆಗ ಯೆಹೋವ ದೇವರು, “ಈಜಿಪ್ಟಿನಲ್ಲಿರುವ ನನ್ನ ಜನರ ವ್ಯಥೆಯನ್ನು ವಾಸ್ತವವಾಗಿಯೂ ಕಂಡಿದ್ದೇನೆ. ಬಿಟ್ಟೀ ಮಾಡಿಸುವವರ ವಿಷಯದಲ್ಲಿ ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನು ಬಲ್ಲೆನು.


ಈಗ ಇಸ್ರಾಯೇಲರ ಕೂಗು ನನಗೆ ಮುಟ್ಟಿದೆ. ಈಜಿಪ್ಟಿನವರು ಅವರಿಗೆ ಕೊಡುತ್ತಿರುವ ಉಪದ್ರವವನ್ನು ನಾನು ನೋಡಿದ್ದೇನೆ.


ಈ ಸ್ಥಳವೂ ಅದರ ನಿವಾಸಿಗಳೂ ನಾಶಕ್ಕೂ ಶಾಪಕ್ಕೂ ಗುರಿಯಾಗುವರೆಂದು ನಾನು ಹೇಳಿದ್ದನ್ನು ನೀನು ಕೇಳಿದಾಗ, ನಿನ್ನ ಹೃದಯವು ಮೃದುವಾಗಿ ನೀನು ನಿನ್ನನ್ನು ಯೆಹೋವ ದೇವರ ಮುಂದೆ ತಗ್ಗಿಸಿಕೊಂಡೆ. ನಿನ್ನ ವಸ್ತ್ರಗಳನ್ನು ಹರಿದುಕೊಂಡು ನನ್ನ ಸಮ್ಮುಖದಲ್ಲಿ ಕಣ್ಣೀರು ಸುರಿಸಿದ್ದರಿಂದ ನಾನು ನಿನ್ನ ಮೊರೆಯನ್ನು ಕೇಳಿದೆನು.


ನನ್ನ ಶತ್ರುಗಳೆಲ್ಲರೂ ನಾಚಿಕೆಪಟ್ಟು ತತ್ತರಿಸುವರು; ಕ್ಷಣಮಾತ್ರದಲ್ಲಿ ಅವರು ಅವಮಾನಗೊಂಡು ಹಿಂದಿರುಗಿ ಹೋಗುವರು.


ಮುರಿದ ಹೃದಯದವರಿಗೆ ಯೆಹೋವ ದೇವರು ಸಮೀಪವಾಗಿದ್ದಾರೆ; ಜಜ್ಜಿದ ಆತ್ಮವುಳ್ಳವರನ್ನು ರಕ್ಷಿಸುತ್ತಾರೆ.


ನಾನು ನಿಮಗೆ ಮೊರೆಯಿಟ್ಟಾಗ, ನನ್ನ ಶತ್ರುಗಳು ಹಿಂದಿರುಗುವರು. ಇದರಿಂದ ದೇವರು ನನಗಿದ್ದಾರೆ ಎಂಬುದನ್ನು ತಿಳಿದುಕೊಳ್ಳುವೆನು.


ನಾವು ನಮ್ಮ ಪಾಪಗಳಿಂದ ತುಂಬಿಹೋಗಿರುವಾಗ ನೀವೇ ನಮ್ಮ ದ್ರೋಹಗಳಿಗಾಗಿ ದೋಷಪರಿಹಾರಕರು.


ನಾನು ನನ್ನ ಮಾರ್ಗಗಳನ್ನು ಲೆಕ್ಕ ಒಪ್ಪಿಸಲು, ನೀವು ನನಗೆ ಸದುತ್ತರವನ್ನು ಕೊಟ್ಟಿರುವಿರಿ; ನಿಮ್ಮ ತೀರ್ಪುಗಳನ್ನು ನನಗೆ ಕಲಿಸಿಕೊಡಿರಿ.


ಇದಲ್ಲದೆ ಯೆಹೋವ ದೇವರು ಈಜಿಪ್ಟಿನವರನ್ನು ಹೊಡೆಯುವರು; ಗಾಯಮಾಡಿ ಸ್ವಸ್ಥ ಮಾಡುವರು. ಅವರು ಯೆಹೋವ ದೇವರ ಕಡೆಗೆ ತಿರುಗಿಕೊಳ್ಳುವರು, ದೇವರು ಅವರನ್ನು ಆಲೈಸಿ ಸ್ವಸ್ಥ ಮಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು