Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 20:8 - ಕನ್ನಡ ಸಮಕಾಲಿಕ ಅನುವಾದ

8 ಹಿಜ್ಕೀಯನು ಯೆಶಾಯನಿಗೆ, “ಯೆಹೋವ ದೇವರು ನನ್ನನ್ನು ಸ್ವಸ್ಥಮಾಡುವರೆಂಬುದಕ್ಕೆ ಮತ್ತು ನಾನು ಮೂರನೆಯ ದಿವಸದಲ್ಲಿ ಯೆಹೋವ ದೇವರ ಆಲಯಕ್ಕೆ ಹೋಗುವೆನೆಂಬುದಕ್ಕೆ ನನಗೆ ಗುರುತೇನು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಹಿಜ್ಕೀಯನು ಯೆಶಾಯನಿಗೆ, “ಯೆಹೋವನು ನನ್ನನ್ನು ಗುಣಪಡಿಸುವನೆಂಬುವುದಕ್ಕೂ, ನಾನು ಮೂರನೆಯ ದಿನ ಆತನ ಆಲಯಕ್ಕೆ ಹೋಗುವೆನೆಂಬುವುದಕ್ಕೂ, ಇರುವ ಗುರುತು ಏನು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಹಿಜ್ಕೀಯನು ಯೆಶಾಯನನ್ನು, “ಸರ್ವೇಶ್ವರ ನನ್ನನ್ನು ಗುಣಪಡಿಸುವರೆಂಬುದಕ್ಕೂ ನಾನು ಮೂರನೆ ದಿನ ಅವರ ಆಲಯಕ್ಕೆ ಹೋಗುವೆನೆಂಬುದಕ್ಕೂ ಗುರುತೇನು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಹಿಜ್ಕೀಯನು ಯೆಶಾಯನನ್ನು - ಯೆಹೋವನು ನನ್ನನ್ನು ಗುಣಪಡಿಸುವನೆಂಬದಕ್ಕೂ ನಾನು ನಾಡದು ಆತನ ಆಲಯಕ್ಕೆ ಹೋಗುವೆನೆಂಬದಕ್ಕೂ ಗುರುತೇನು ಎಂದು ಕೇಳಿದ್ದಕ್ಕೆ ಅವನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಹಿಜ್ಕೀಯನು ಯೆಶಾಯನಿಗೆ, “ಯೆಹೋವನು ನನ್ನನ್ನು ಗುಣಪಡಿಸುತ್ತಾನೆಂಬುದಕ್ಕೆ ಮತ್ತು ಮೂರನೆಯ ದಿನ ನಾನು ದೇವಾಲಯದವರೆಗೆ ಹೋಗುವೆನೆಂಬುದಕ್ಕೆ ಏನು ಗುರುತು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 20:8
14 ತಿಳಿವುಗಳ ಹೋಲಿಕೆ  

“ನಿನ್ನ ದೇವರಾದ ಯೆಹೋವ ದೇವರಿಂದ ಒಂದು ಗುರುತನ್ನು ಕೇಳು. ಅದು ಕೆಳಗೆ ಆಳದಲ್ಲಿದ್ದರೂ, ಮೇಲೆ ಎತ್ತರಲ್ಲಿದ್ದರೂ ಅದನ್ನು ಕೇಳಿಕೋ,” ಎಂದು ಹೇಳಿದರು.


ಅದಕ್ಕವನು, “ಈಗ ನಿಮ್ಮ ಸಮ್ಮುಖದಲ್ಲಿ ನನಗೆ ದಯೆ ದೊರಕಿದ್ದರೆ, ನನ್ನ ಸಂಗಡ ಮಾತನಾಡುವವರು ನೀವು ಎಂಬುದಕ್ಕೆ ನನಗೆ ಒಂದು ಗುರುತನ್ನು ತೋರಿಸಬೇಕು.


ಅವರು ಎರಡು ದಿವಸಗಳಾದ ಮೇಲೆ ನಮ್ಮನ್ನು ಪುನರ್ಜೀವಿಸ ಮಾಡುವನು. ಮೂರನೆಯ ದಿವಸದಲ್ಲಿ ಆತನೇ ನಮ್ಮನ್ನು ಪುನಃಸ್ಥಾಪಿಸುವರು. ನಾವು ಅವರ ದೃಷ್ಟಿಯಲ್ಲಿ ಜೀವಿಸುವೆವು.


ದೇವರು ಅವನಿಗೆ, “ನೀನು ಹಿಂದಿರುಗಿ ಹೋಗಿ ನನ್ನ ಜನರ ನಾಯಕನಾದ ಹಿಜ್ಕೀಯನಿಗೆ, ‘ನಿನ್ನ ತಂದೆಯಾದ ದಾವೀದನ ದೇವರಾದ ಯೆಹೋವ ದೇವರು ಹೇಳಿದ್ದೇನೆಂದರೆ: ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನೂ ಕಂಡಿದ್ದೇನೆ. ನಾನು ನಿನ್ನನ್ನು ಸ್ವಸ್ಥಮಾಡುತ್ತೇನೆ. ಮೂರನೆಯ ದಿವಸದಲ್ಲಿ ಯೆಹೋವ ದೇವರ ಆಲಯಕ್ಕೆ ಹೋಗುವೆ.


“ಹಿಜ್ಕೀಯನೇ, ಇದು ನಿಮಗೆ ಸಂಕೇತವಾಗಿರುವದು, “ಈ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ, ಎರಡನೆಯ ವರ್ಷದಲ್ಲಿ ಅದರಿಂದ ಮೊಳೆತದ್ದನ್ನೂ ತಿನ್ನುವಿರಿ. ಆದರೆ ಮೂರನೆಯ ವರ್ಷದಲ್ಲಿ ನೀವು ಬೀಜವನ್ನು ಬಿತ್ತಿ ಕೊಯ್ಯುವಿರಿ. ದ್ರಾಕ್ಷಿತೋಟಗಳಲ್ಲಿ ವ್ಯವಸಾಯಮಾಡಿ, ಅವುಗಳ ಫಲಗಳನ್ನು ತಿನ್ನುವಿರಿ.


ಇದಲ್ಲದೆ ಹಿಜ್ಕೀಯನು, “ನಾನು ಯೆಹೋವ ದೇವರ ಆಲಯಕ್ಕೆ ಹೋಗುವೆನೆಂಬುದಕ್ಕೆ ನನಗೆ ಗುರುತೇನು?” ಎಂದು ಕೇಳಿದ್ದನು.


ಆದಕಾರಣ ಯೆಹೋವ ದೇವರು ತಾವೇ ಒಂದು ಗುರುತನ್ನು ನಿನಗೆ ಕೊಡುವರು. ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು. ಆ ಮಗುವಿಗೆ, ‘ಇಮ್ಮಾನುಯೇಲ್’ ಎಂದು ಹೆಸರಿಡುವರು.


ಅಲ್ಲಿ ಬಟ್ಟೆಯಿಂದ ಸುತ್ತಿರುವ ಶಿಶುವು ಕೊಟ್ಟಿಗೆಯಲ್ಲಿ ಮಲಗಿರುವುದನ್ನು ನೀವು ಕಾಣುವಿರಿ. ಇದೇ ನಿಮಗೆ ಗುರುತು,” ಎಂದು ಹೇಳಿದನು.


“ಇಬ್ಬರು ಪ್ರಾರ್ಥನೆಮಾಡುವುದಕ್ಕೆ ದೇವಾಲಯಕ್ಕೆ ಹೋದರು. ಅವರಲ್ಲಿ ಒಬ್ಬನು ಫರಿಸಾಯನು ಮತ್ತೊಬ್ಬನು ಸುಂಕದವನು.


ಆಗ ಯೆಶಾಯನು ಅಂಜೂರದ ಹಣ್ಣುಗಳ ಉಂಡೆಯನ್ನು ತೆಗೆದುಕೊಂಡು ಬರಲು ಹೇಳಿದ್ದನು. ಅವರು ಹಾಗೆಯೇ ತೆಗೆದುಕೊಂಡು ಬಂದು ಹುಣ್ಣಿನ ಮೇಲೆ ಹಾಕಿದ್ದರಿಂದ ಅವನು ಗುಣಹೊಂದಿದನು.


ಯೆಶಾಯನು, “ಯೆಹೋವ ದೇವರು, ತಾವು ಹೇಳಿದ ಕಾರ್ಯವನ್ನು ಮಾಡುವರೆಂಬುದಕ್ಕೆ ಯೆಹೋವ ದೇವರ ಕಡೆಯಿಂದ ನಿನಗೆ ಉಂಟಾಗುವ ಗುರುತು, ನೆರಳು ಹತ್ತು ಮೆಟ್ಟಲು ಮುಂದಕ್ಕೆ ಹೋಗಬೇಕೋ? ಇಲ್ಲವೆ ಹತ್ತು ಮೆಟ್ಟಲು ಹಿಂದಕ್ಕೆ ಬರಬೇಕೋ?” ಎಂದು ಕೇಳಿದನು.


“ಅಂಜೂರದ ಹಣ್ಣುಗಳ ಉಂಡೆಯನ್ನು ತರಿಸಿ, ಹುಣ್ಣಿನ ಮೇಲೆ ಇಟ್ಟರೆ, ಅವನು ಗುಣಹೊಂದುವನು,” ಎಂದು ಯೆಶಾಯನು ಹೇಳಿದನು.


ಅದಕ್ಕೆ ಅವನು, “ಸಾರ್ವಭೌಮ ಯೆಹೋವ ದೇವರೇ ನಾನು ಅದನ್ನು ನನ್ನ ಸೊತ್ತಾಗಿ ಹೊಂದುವೆನೆಂದು ಯಾವುದರಿಂದ ತಿಳಿದುಕೊಳ್ಳಲಿ?” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು