Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 20:9 - ಕನ್ನಡ ಸಮಕಾಲಿಕ ಅನುವಾದ

9 ಯೆಶಾಯನು, “ಯೆಹೋವ ದೇವರು, ತಾವು ಹೇಳಿದ ಕಾರ್ಯವನ್ನು ಮಾಡುವರೆಂಬುದಕ್ಕೆ ಯೆಹೋವ ದೇವರ ಕಡೆಯಿಂದ ನಿನಗೆ ಉಂಟಾಗುವ ಗುರುತು, ನೆರಳು ಹತ್ತು ಮೆಟ್ಟಲು ಮುಂದಕ್ಕೆ ಹೋಗಬೇಕೋ? ಇಲ್ಲವೆ ಹತ್ತು ಮೆಟ್ಟಲು ಹಿಂದಕ್ಕೆ ಬರಬೇಕೋ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅದಕ್ಕೆ ಯೆಶಾಯನು, “ಯೆಹೋವನು ನುಡಿದಿದ್ದನ್ನು ನೆರವೇರಿಸುವನು ಎಂಬುದಕ್ಕೆ ಯೆಹೋವನಿಂದ ಉಂಟಾದ ಗುರುತು ಕೇಳುತ್ತಿರುವೆ, ಹಾಗಾದರೆ ನೆರಳು ಹತ್ತು ಮೆಟ್ಟಲು ಮುಂದೆ ಹೋಗಬೇಕೋ? ಹಿಂದೆ ಬರಬೇಕೋ? ಹೇಳು ಹಿಂದೆ ಹೋಗಬೇಕೋ ಹೇಳು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅವನು, “ಸರ್ವೇಶ್ವರ ನುಡಿದದ್ದನ್ನು ನೆರವೇರಿಸುವರು ಎಂಬುದಕ್ಕೆ ಸರ್ವೇಶ್ವರನಿಂದ ಗುರುತು ಕೇಳುತ್ತಿರುವೆ; ಹಾಗಾದರೆ ನೆರಳು ಹತ್ತು ಮೆಟ್ಟಲು ಮುಂದೆ ಹೋಗಬೇಕೋ ಹಿಂದೆ ಬರಬೇಕೋ ಹೇಳು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಯೆಹೋವನು ನುಡಿದದ್ದನ್ನು ನೆರವೇರಿಸುವನು ಎಂಬದಕ್ಕೆ ಯೆಹೋವನಿಂದ ಗುರುತು ಕೇಳುತ್ತೀ; ಹಾಗಾದರೆ ನೆರಳು ಹತ್ತು ಮೆಟ್ಲು ಮುಂದೆ ಹೋಗಬೇಕೋ ಹಿಂದೆ ಬರಬೇಕೋ ಹೇಳು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೆಶಾಯನು, “ನೆರಳು ಹತ್ತು ಮೆಟ್ಟಲು ಮುಂದಕ್ಕೆ ಹೋಗಬೇಕೋ ಅಥವಾ ಹತ್ತು ಮೆಟ್ಟಲು ಹಿಂದಕ್ಕೆ ಹೋಗಬೇಕೋ? ನಿನಗೆ ಯಾವುದು ಬೇಕಾಗಿದೆ? ಯೆಹೋವನು ತಾನು ಹೇಳಿದ್ದನ್ನು ಮಾಡುತ್ತಾನೆಂಬುದಕ್ಕೆ ಇದೇ ನಿನಗೆ ಗುರುತು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 20:9
10 ತಿಳಿವುಗಳ ಹೋಲಿಕೆ  

“ಹಿಜ್ಕೀಯನೇ, ಇದು ನಿಮಗೆ ಸಂಕೇತವಾಗಿರುವದು, “ಈ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ, ಎರಡನೆಯ ವರ್ಷದಲ್ಲಿ ಅದರಿಂದ ಮೊಳೆತದ್ದನ್ನೂ ತಿನ್ನುವಿರಿ. ಆದರೆ ಮೂರನೆಯ ವರ್ಷದಲ್ಲಿ ನೀವು ಬೀಜವನ್ನು ಬಿತ್ತಿ ಕೊಯ್ಯುವಿರಿ. ದ್ರಾಕ್ಷಿತೋಟಗಳಲ್ಲಿ ವ್ಯವಸಾಯಮಾಡಿ, ಅವುಗಳ ಫಲಗಳನ್ನು ತಿನ್ನುವಿರಿ.


ಹಿಜ್ಕೀಯನು ಯೆಶಾಯನಿಗೆ, “ಯೆಹೋವ ದೇವರು ನನ್ನನ್ನು ಸ್ವಸ್ಥಮಾಡುವರೆಂಬುದಕ್ಕೆ ಮತ್ತು ನಾನು ಮೂರನೆಯ ದಿವಸದಲ್ಲಿ ಯೆಹೋವ ದೇವರ ಆಲಯಕ್ಕೆ ಹೋಗುವೆನೆಂಬುದಕ್ಕೆ ನನಗೆ ಗುರುತೇನು?” ಎಂದು ಕೇಳಿದನು.


ಅದಕ್ಕೆ ಹಿಜ್ಕೀಯನು, “ನೆರಳು ಹತ್ತು ಮೆಟ್ಟಲು ಮುಂದೆ ಹೋಗುವುದು ಸಾಮಾನ್ಯ, ನೆರಳು ಹತ್ತು ಮೆಟ್ಟಲು ಹಿಂದಕ್ಕೆ ಬರುವಂತೆ ಮಾಡು,” ಎಂದನು.


ಆ ದಿವಸಗಳಲ್ಲಿ ಹಿಜ್ಕೀಯನು ರೋಗದಿಂದ ಮರಣಾವಸ್ಥೆಯಲ್ಲಿದ್ದನು. ಆಗ ಆಮೋಚನ ಮಗನಾದ ಪ್ರವಾದಿ ಯೆಶಾಯನು ಅವನ ಬಳಿಗೆ ಬಂದು ಅವನಿಗೆ, “ನೀನು ನಿನ್ನ ಮನೆಯನ್ನು ವ್ಯವಸ್ಥೆ ಮಾಡಿಕೋ, ಏಕೆಂದರೆ ನೀನು ಬದುಕದೆ ಸಾಯುವೆ, ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದು ಹೇಳಿದನು.


ಯೆಹೋವ ದೇವರು ಅಮೋರಿಯರನ್ನು ಇಸ್ರಾಯೇಲರ ಕೈಯಲ್ಲಿ ಒಪ್ಪಿಸಿದ ಆ ದಿನದಲ್ಲಿ ಯೆಹೋಶುವನು ಯೆಹೋವ ದೇವರ ಸಂಗಡ ಮಾತನಾಡಿ ಇಸ್ರಾಯೇಲಿನ ಮುಂದೆ ಹೀಗೆ ಹೇಳಿದನು, “ಸೂರ್ಯನೇ ನೀನು ಗಿಬ್ಯೋನಿನ ಮೇಲೆ ನಿಲ್ಲು; ಚಂದ್ರನೇ, ನೀನು ಅಯ್ಯಾಲೋನ್ ಕಣಿವೆಯಲ್ಲಿ ಸ್ಥಿರವಾಗಿ ನಿಲ್ಲು.”


ಆದರೆ ಅವರು, ‘ಮೇಲೆ ಹತ್ತಿ ನಮ್ಮ ಬಳಿಗೆ ಬನ್ನಿರಿ,’ ಎಂದು ಹೇಳಿದರೆ ನಾವು ಮೇಲೆ ಹತ್ತಿ ಹೋಗೋಣ. ಏಕೆಂದರೆ ಯೆಹೋವ ದೇವರು ಅವರನ್ನು ನಮ್ಮ ಕೈಗೆ ಒಪ್ಪಿಸಿಕೊಟ್ಟರೆಂಬುದಕ್ಕೆ ಇದೇ ನಮಗೆ ಗುರುತಾಗಿರುವುದು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು