Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 21:16 - ಕನ್ನಡ ಸಮಕಾಲಿಕ ಅನುವಾದ

16 ಇದಲ್ಲದೆ ಮನಸ್ಸೆಯು ಯೆಹೋವ ದೇವರ ದೃಷ್ಟಿಯಲ್ಲಿ ಕೇಡನ್ನು ಮಾಡಿದ್ದರಲ್ಲಿ ಯೆಹೂದವು ಪಾಪವನ್ನು ಮಾಡಲು ಪ್ರೇರೇಪಿಸಿದ ತನ್ನ ಪಾಪದ ಹೊರತು ಅವನು ಯೆರೂಸಲೇಮನ್ನು ಒಂದು ಕೊನೆಯಿಂದ ಮತ್ತೊಂದು ಕೊನೆಯವರೆಗೂ ತಾನು ಬಹು ಹೆಚ್ಚಾಗಿ ಚೆಲ್ಲಿದ ನಿರಪರಾಧದ ರಕ್ತದಿಂದ ತುಂಬಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಮನಸ್ಸೆಯು ಯೆಹೂದ್ಯರನ್ನು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಲು ಪ್ರೇರೇಪಿಸಿದ್ದಲ್ಲದೆ ಯೆರೂಸಲೇಮನ್ನೆಲ್ಲಾ ನಿರಪರಾಧಿಗಳ ರಕ್ತದಿಂದ ತುಂಬಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಮನಸ್ಸೆಯು ಯೆಹೂದ್ಯರನ್ನು ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವುದನ್ನು ಮಾಡಲು ಪ್ರೇರಿಸಿದ್ದಲ್ಲದೆ, ನಿರಪರಾಧಿಗಳ ವಧೆಯಿಂದ ಜೆರುಸಲೇಮನ್ನೆಲ್ಲಾ ರಕ್ತಮಯವಾಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಮನಸ್ಸೆಯು ಯೆಹೂದ್ಯರನ್ನು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವದನ್ನು ಮಾಡ ಪ್ರೇರಿಸಿದ್ದಲ್ಲದೆ ಯೆರೂಸಲೇಮನ್ನೆಲ್ಲಾ ನಿರಪರಾಧ ರಕ್ತದಿಂದ ತುಂಬಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಮನಸ್ಸೆಯು ಅನೇಕ ನಿರಪರಾಧಿಗಳನ್ನು ಕೊಂದುಹಾಕಿದನು; ಜೆರುಸಲೇಮನ್ನು ಒಂದು ಕೊನೆಯಿಂದ ಮತ್ತೊಂದು ಕೊನೆಯವರೆಗೆ ರಕ್ತದಿಂದ ತುಂಬಿಸಿದನು. ಯೆಹೂದವನ್ನು ಪಾಪಕ್ಕೆ ಪ್ರೇರೇಪಿಸಿದ್ದರ ಜೊತೆಗೆ ಅವನ ಈ ಪಾಪಗಳು ಕೂಡಿಕೊಂಡವು. ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನು ಯೆಹೂದವು ಮಾಡುವಂತೆ ಮನಸ್ಸೆಯು ಪ್ರೇರೇಪಿಸಿದನು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 21:16
26 ತಿಳಿವುಗಳ ಹೋಲಿಕೆ  

ಆದರೆ ಯೆಹೂದದವರೂ ಯೆರೂಸಲೇಮಿನ ನಿವಾಸಿಗಳೂ ಇಸ್ರಾಯೇಲರ ಮುಂದೆಯೇ ಯೆಹೋವ ದೇವರಿಂದ ನಾಶಹೊಂದಿದ ಇತರ ಜನಾಂಗಗಳಿಗಿಂತ ಅಧಿಕವಾಗಿ ಕೆಟ್ಟದ್ದನ್ನು ಮಾಡಲು ಮನಸ್ಸೆಯು ಅವರನ್ನು ಪ್ರೇರೇಪಿಸಿದನು.


“ಯೆಹೂದದ ಅರಸನಾದ ಮನಸ್ಸೆಯು ತನ್ನ ಮುಂದೆ ಇದ್ದ ಅಮೋರಿಯರು ಮಾಡಿದ ಕೆಟ್ಟವುಗಳಿಗಿಂತಲೂ ಅಸಹ್ಯವಾದವುಗಳನ್ನು ಮಾಡಿದ್ದರಿಂದಲೂ, ಯೆಹೂದವನ್ನು ತನ್ನ ವಿಗ್ರಹಗಳಿಂದ ಪಾಪಕ್ಕೆ ಪ್ರೇರೇಪಿಸಿದ್ದರಿಂದಲೂ,


“ ‘ಹೀಗೆ ನೀವು ವಾಸಿಸುವ ದೇಶವನ್ನು ನೀವು ಅಪವಿತ್ರ ಮಾಡಬೇಡಿರಿ. ಏಕೆಂದರೆ ದೇಶವನ್ನು ಅಪವಿತ್ರ ಮಾಡುವಂಥಾದ್ದು ರಕ್ತವೇ. ಹತರಾದವರ ರಕ್ತಕ್ಕಾಗಿ ಕೊಂದವನ ರಕ್ತದಿಂದಲೇ ಹೊರತು ಬೇರೆ ಪ್ರಾಯಶ್ಚಿತ್ತವಿಲ್ಲ.


ಕೆಲವರ ಮೇಲೆ ಕಲ್ಲೆಸೆದರು, ಕೆಲವರನ್ನು ಗರಗಸದಿಂದ ಎರಡು ಭಾಗವಾಗಿ ಕೊಯ್ದು ಸಾಯಿಸಿದರು, ಕೆಲವರನ್ನು ಶೋಧಿಸಿದರು, ಕೆಲವರನ್ನು ಕತ್ತಿಯಿಂದ ಕೊಂದರು, ಕೆಲವರು ಕೊರತೆ, ಹಿಂಸೆ, ಬಾಧೆ ಇವುಗಳನ್ನು ಅನುಭವಿಸುವವರಾಗಿದ್ದು ಕುರಿಮೇಕೆಗಳ ಚರ್ಮಗಳನ್ನು ಉಟ್ಟುಕೊಂಡವರಾಗಿ


“ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸಿದವರನ್ನು ಕಲ್ಲೆಸೆಯುವವಳೇ, ಕೋಳಿಯು ತನ್ನ ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಾನು ನಿನ್ನ ಮಕ್ಕಳನ್ನು ಕೂಡಿಸುವುದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು. ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು.


ಆಗ ಮುಖ್ಯಯಾಜಕರು ಆ ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಂಡು, “ಇವುಗಳನ್ನು ಕಾಣಿಕೆ ಪೆಟ್ಟಿಗೆಯಲ್ಲಿ ಹಾಕುವುದು ನ್ಯಾಯವಲ್ಲ. ಅದು ರಕ್ತದ ಕ್ರಯವಾಗಿದೆ,” ಎಂದರು.


ಏಕೆಂದರೆ ಅವರು ನನ್ನನ್ನು ಬಿಟ್ಟು ಈ ಸ್ಥಳವನ್ನು ಅಶುದ್ಧಮಾಡಿ; ಅವರೂ, ಅವರ ತಂದೆಗಳೂ, ಯೆಹೂದದ ಅರಸರೂ ಅರಿಯದ ಬೇರೆ ದೇವರುಗಳಿಗೆ ಅಲ್ಲಿ ಧೂಪ ಸುಟ್ಟು, ಈ ಸ್ಥಳವನ್ನು ಅಪರಾಧವಿಲ್ಲದವರ ರಕ್ತದಿಂದ ತುಂಬಿಸಿ,


ಅವರನ್ನು ಹಿಜ್ಕೀಯನ ಮಗನಾದ ಯೆಹೂದದ ಅರಸನಾದ ಮನಸ್ಸೆಯು ಯೆರೂಸಲೇಮಿನಲ್ಲಿ ನಡಿಸಿದ್ದಕ್ಕೆ ಪ್ರತಿಫಲವಾಗಿ ನಾನು ಭೂಮಿಯ ಎಲ್ಲಾ ರಾಜ್ಯಗಳಿಗೆ ಚದರಿ ಹೋಗುವಂತೆ ಮಾಡುವೆನು.


ಪರದೇಶಿಯನ್ನೂ, ದಿಕ್ಕಿಲ್ಲದವನನ್ನೂ, ವಿಧವೆಯನ್ನೂ ಸಂಕಟ ಪಡಿಸದಿದ್ದರೆ; ಈ ಸ್ಥಳದಲ್ಲಿ ಅಪರಾಧವಿಲ್ಲದ ರಕ್ತವನ್ನು ಚೆಲ್ಲದಿದ್ದರೆ; ಇಲ್ಲವೆ ನಿಮ್ಮ ಕೇಡಿಗಾಗಿ ಬೇರೆ ದೇವರುಗಳನ್ನು ಹಿಂಬಾಲಿಸದಿದ್ದರೆ;


ಇದಲ್ಲದೆ ನಿನ್ನ ಸೆರಗುಗಳಲ್ಲಿ ಅಪರಾಧವಿಲ್ಲದ ಬಡವರ ರಕ್ತವು ಸಿಕ್ಕಿದೆ. ಅಂತರಂಗದ ಶೋಧನೆಯಿಂದಲ್ಲ, ಆದರೆ ಇವರೆಲ್ಲರ ಮೇಲೆಯೇ ಅದನ್ನು ಕಂಡಿದ್ದೀ.


“ಈ ಆಲಯದಲ್ಲಿಯೂ, ಇಸ್ರಾಯೇಲಿನ ಸಕಲ ಗೋತ್ರಗಳಲ್ಲಿಯೂ, ನಾನು ಆಯ್ದುಕೊಂಡ ಯೆರೂಸಲೇಮಿನಲ್ಲಿಯೂ, ನನ್ನ ನಾಮವನ್ನು ಯುಗಯುಗಕ್ಕೂ ಇರುವಂತೆ ಮಾಡುವೆನು,” ಎಂದು ಯೆಹೋವ ದೇವರು ದಾವೀದನಿಗೂ, ಅವನ ಮಗನಾದ ಸೊಲೊಮೋನನಿಗೂ ಯಾವುದನ್ನು ಕುರಿತು ಹೇಳಿದ್ದರೋ, ಆ ಆಲಯದಲ್ಲಿ ತಾನು ಮಾಡಿದ ಅಶೇರ ವಿಗ್ರಹಸ್ತಂಭವನ್ನು ಇಟ್ಟನು.


ಮೋಶೆಯು ಆರೋನನಿಗೆ, “ಈ ಜನರ ಮೇಲೆ ದೊಡ್ಡ ಪಾಪವನ್ನು ನೀನು ಬರಮಾಡುವಂತೆ ಅವರು ನಿನಗೆ ಏನು ಮಾಡಿದರು?” ಎಂದು ಕೇಳಿದನು.


ಏಕೆಂದರೆ ಅವರ ತಂದೆಗಳು ಈಜಿಪ್ಟಿನಿಂದ ಹೊರಟ ದಿವಸ ಮೊದಲುಗೊಂಡು, ಇಂದಿನವರೆಗೂ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿ ನನಗೆ ಕೋಪವನ್ನು ಎಬ್ಬಿಸಿದ್ದಾರೆ, ಎಂದು ಹೇಳುತ್ತಾರೆ,” ಎಂಬುದೇ.


ಈ ಪಟ್ಟಣವು ಕಟ್ಟಿದ ದಿನದಿಂದ ಈ ದಿನದವರೆಗೂ ನನ್ನ ಕೋಪಕ್ಕೂ, ನನ್ನ ಉಗ್ರಕ್ಕೂ ಗುರಿಯಾಗಿತ್ತು. ನಾನು ಆ ಪಟ್ಟಣವನ್ನು ನನ್ನ ಸನ್ನಿಧಿಯಿಂದ ತೆಗೆದುಹಾಕಬೇಕು.


ಆಗ ಅವರು ನನಗೆ, “ಇಸ್ರಾಯೇಲಿನ ಮತ್ತು ಯೆಹೂದ ಮನೆತನದವರ ಅಕ್ರಮವು ಅತಿ ದೊಡ್ಡದಾಗಿದೆ. ದೇಶವು ರಕ್ತದಿಂದ ತುಂಬಿದೆ, ಪಟ್ಟಣವು ಅಧರ್ಮದಿಂದ ತುಂಬಿದೆ. ‘ಯೆಹೋವ ದೇವರು ದೇಶವನ್ನು ತೊರೆದುಬಿಟ್ಟಿದ್ದಾರೆ, ಯೆಹೋವ ದೇವರು ನೋಡುವುದಿಲ್ಲ,’ ಎಂದು ಅವರು ಹೇಳುತ್ತಾರೆ.


ನೀನು ಚೆಲ್ಲಿದ ನಿನ್ನ ರಕ್ತದಿಂದ ನೀನು ಅಪರಾಧಿಯಾದೆ; ನೀನು ಮಾಡಿದ ನಿನ್ನ ವಿಗ್ರಹಗಳಿಂದ ನೀನು ಅಶುದ್ಧನಾದೆ; ನಿನ್ನ ದಿನಗಳನ್ನು ಸಮೀಪಿಸಿರುವೆ; ಮತ್ತು ನಿಮ್ಮ ವರ್ಷಗಳ ಅಂತ್ಯವು ಬಂದಿದೆ. ಆದ್ದರಿಂದ ನಿನ್ನನ್ನು ಇತರ ಜನಾಂಗಗಳಿಗೆ ನಾಚಿಕೆಯಾಗಿಯೂ, ಎಲ್ಲಾ ದೇಶಗಳಿಗೂ ನಿಂದೆಯಾಗಿಯೂ ಮಾಡಿದ್ದೇನೆ.


ಆದರೂ ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳಿಗೆ ಅವನು ಅಂಟಿಕೊಂಡು ಅವುಗಳನ್ನು ಬಿಟ್ಟು ತೊಲಗದೆ ಇದ್ದನು.


ಆದರೆ ಯೆಹೋವ ದೇವರು ಇಸ್ರಾಯೇಲರ ಮುಂದೆ ಹೊರಡಿಸಿಬಿಟ್ಟ ಜನಾಂಗಗಳ ಅಸಹ್ಯವಾದವುಗಳನ್ನು ಅವನು ಅನುಸರಿಸಿ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.


ಈ ಆರು ವಿಷಯಗಳನ್ನು ಯೆಹೋವ ದೇವರು ಹಗೆ ಮಾಡುತ್ತಾರೆ; ಹೌದು, ಏಳು ದೇವರಿಗೆ ಅಸಹ್ಯವಾಗಿವೆ, ಅವು ಯಾವವೆಂದರೆ:


ಹೆಮ್ಮೆಯ ದೃಷ್ಟಿ, ಸುಳ್ಳಾಡುವ ನಾಲಿಗೆ, ನಿರಪರಾಧಿಯ ರಕ್ತವನ್ನು ಸುರಿಸುವ ಕೈಗಳು,


“ಮನುಷ್ಯಪುತ್ರನೇ, ಈಗ ನೀನು ನ್ಯಾಯತೀರಿಸುವೆಯಾ? ರಕ್ತಾಪರಾಧವುಳ್ಳ ಪಟ್ಟಣಕ್ಕೆ ನ್ಯಾಯತೀರಿಸುವೆಯಾ? ಹಾಗಾದರೆ ಅದರ ಅಸಹ್ಯವಾದವುಗಳನ್ನೆಲ್ಲಾ ಅದಕ್ಕೆ ತಿಳಿಸುವೆ.


ನೀತಿಯುಳ್ಳ ನ್ಯಾಯಾಧೀಶರು ಅವರಿಗೆ ನ್ಯಾಯತೀರಿಸಿ ವ್ಯಭಿಚಾರಿಣಿಯರಿಗೂ ರಕ್ತಸುರಿಸುವ ಹೆಂಗಸರಿಗೂ ತಕ್ಕ ದಂಡನೆಯನ್ನು ವಿಧಿಸುವರು. ಏಕೆಂದರೆ ಅವರು ವ್ಯಭಿಚಾರಿಣಿಯರು, ಅವರ ಕೈ ರಕ್ತವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು