Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 21:3 - ಕನ್ನಡ ಸಮಕಾಲಿಕ ಅನುವಾದ

3 ಅವನು ತನ್ನ ತಂದೆಯಾದ ಹಿಜ್ಕೀಯನು ನಾಶಮಾಡಿದ ಉನ್ನತ ಪೂಜಾಸ್ಥಳಗಳನ್ನು ಮತ್ತೆ ಸ್ಥಾಪಿಸಿ, ಬಾಳನಿಗೆ ಬಲಿಪೀಠಗಳನ್ನು ಕಟ್ಟಿಸಿ, ಇಸ್ರಾಯೇಲಿನ ಅರಸನಾದ ಅಹಾಬನು ಮಾಡಿದ ಅಶೇರ ವಿಗ್ರಹಸ್ತಂಭಗಳನ್ನು ನಿಲ್ಲಿಸಿ, ಸಮಸ್ತ ನಕ್ಷತ್ರಮಂಡಲಕ್ಕೆ ಅಡ್ಡಬಿದ್ದು ಅವುಗಳನ್ನು ಪೂಜಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ತನ್ನ ತಂದೆಯಾದ ಹಿಜ್ಕೀಯನು ತೆಗೆದು ಹಾಕಿದ ಪೂಜಾಸ್ಥಳಗಳನ್ನು ತಿರುಗಿ ಸ್ಥಾಪಿಸಿ ಇಸ್ರಾಯೇಲರ ಅರಸನಾದ ಅಹಾಬನಂತೆ ಬಾಳದೇವತೆಗೋಸ್ಕರ ಯಜ್ಞವೇದಿಗಳನ್ನು ಕಟ್ಟಿಸಿ ಅಶೇರ ವಿಗ್ರಹ ಸ್ತಂಭಗಳನ್ನು ನಿಲ್ಲಿಸಿ ನಕ್ಷತ್ರಮಂಡಲಕ್ಕೆ ಕೈಮುಗಿದು ಆರಾಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ತನ್ನ ತಂದೆ ಹಿಜ್ಕೀಯನು ತೆಗೆದುಹಾಕಿದ್ದ ಪೂಜಾಸ್ಥಳಗಳನ್ನು ಮತ್ತೆ ಸ್ಥಾಪಿಸಿ ಇಸ್ರಯೇಲರ ಅರಸನಾದ ಅಹಾಬನಂತೆ ಬಾಳ್ ದೇವತೆಗಾಗಿ ಬಲಿಪೀಠಗಳನ್ನು ಕಟ್ಟಿಸಿ, ಅಶೇರ ವಿಗ್ರಹಸ್ತಂಭವನ್ನು ನಿಲ್ಲಿಸಿ, ನಕ್ಷತ್ರಮಂಡಲಕ್ಕೆ ಕೈಮುಗಿದು, ಆರಾಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ತನ್ನ ತಂದೆಯಾದ ಹಿಜ್ಕೀಯನು ತೆಗೆದುಹಾಕಿದ ಪೂಜಾಸ್ಥಾನಗಳನ್ನು ತಿರಿಗಿ ಸ್ಥಾಪಿಸಿ ಇಸ್ರಾಯೇಲ್ಯರ ಅರಸನಾದ ಅಹಾಬನಂತೆ ಬಾಳನಿಗೋಸ್ಕರ ಯಜ್ಞವೇದಿಗಳನ್ನು ಕಟ್ಟಿಸಿ ಅಶೇರ ವಿಗ್ರಹಸ್ತಂಭವನ್ನು ನಿಲ್ಲಿಸಿ ನಕ್ಷತ್ರಮಂಡಲಕ್ಕೆ ಕೈಮುಗಿದು ಆರಾಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಮನಸ್ಸೆಯು ತನ್ನ ತಂದೆಯಾದ ಹಿಜ್ಕೀಯನು ನಾಶಪಡಿಸಿದ್ದ ಉನ್ನತಸ್ಥಳಗಳನ್ನು ಮತ್ತೆ ನಿರ್ಮಿಸಿದನು. ಮನಸ್ಸೆಯು ಇಸ್ರೇಲಿನ ರಾಜನಾದ ಅಹಾಬನಂತೆ ಬಾಳನಿಗಾಗಿ ಯಜ್ಞವೇದಿಕೆಯನ್ನು ಮತ್ತು ಅಶೇರಸ್ತಂಭಗಳನ್ನು ನಿರ್ಮಿಸಿದನು. ಮನಸ್ಸೆಯು ಪರಲೋಕದ ನಕ್ಷತ್ರಗಳನ್ನು ಆರಾಧಿಸಿ ಅವುಗಳ ಸೇವೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 21:3
23 ತಿಳಿವುಗಳ ಹೋಲಿಕೆ  

ಹಿಜ್ಕೀಯನು ಉನ್ನತ ಪೂಜಾಸ್ಥಳಗಳನ್ನು ತೆಗೆದುಹಾಕಿ, ವಿಗ್ರಹಗಳನ್ನು ಒಡೆದುಬಿಟ್ಟು, ಅಶೇರ ಸ್ತಂಭಗಳನ್ನು ಕಡಿದುಹಾಕಿದನು. ಮೋಶೆಯು ಮಾಡಿದ ತಾಮ್ರದ ಸರ್ಪವನ್ನು ಮುರಿದುಬಿಟ್ಟನು. ಏಕೆಂದರೆ ಆ ದಿವಸಗಳವರೆಗೂ ಇಸ್ರಾಯೇಲರು ಅದಕ್ಕೆ ಧೂಪ ಸುಡುತ್ತಿದ್ದರು. ಅದನ್ನು ನೆಹುಷ್ಟಾನ್ ಎಂದು ಕರೆಯುತ್ತಿದ್ದರು.


ಇದಲ್ಲದೆ ಅವರು ತಮ್ಮ ದೇವರಾದ ಯೆಹೋವ ದೇವರ ಸಮಸ್ತ ಆಜ್ಞೆಗಳನ್ನು ಬಿಟ್ಟುಬಿಟ್ಟು, ತಮಗೆ ತಾವೇ ಎರಡು ಎರಕದ ಕರುಗಳ ಮೂರ್ತಿಗಳನ್ನು ಮಾಡಿಕೊಂಡರು. ಅವರು ಅಶೇರ ಸ್ತಂಭವನ್ನು ನಿಲ್ಲಿಸಿ, ಆಕಾಶದ ಸೈನ್ಯಕ್ಕೆಲ್ಲಾ ಅಡ್ಡಬಿದ್ದು, ಬಾಳನನ್ನು ಸೇವಿಸಿ ತಮ್ಮ ಪುತ್ರಪುತ್ರಿಯರನ್ನೂ ಬೆಂಕಿಯಲ್ಲಿ ಬಲಿಕೊಟ್ಟರು.


ಅಂದರೆ, ಸೂರ್ಯನನ್ನಾಗಲಿ, ಚಂದ್ರನನ್ನಾಗಲಿ, ಆಕಾಶದ ನಕ್ಷತ್ರಗಳನ್ನಾಗಲಿ, ಬೇರೆ ದೇವರುಗಳನ್ನಾಗಲಿ, ನನ್ನ ಆಜ್ಞೆಗೆ ವಿರೋಧವಾಗಿ ಅವುಗಳನ್ನು ಆರಾಧಿಸಿದರೆ,


ನೀವು ನಿಮ್ಮ ಕಣ್ಣುಗಳನ್ನು ಆಕಾಶಕ್ಕೆ ಎತ್ತಿ, ಸೂರ್ಯ, ಚಂದ್ರ, ನಕ್ಷತ್ರಗಳ ಆಕಾಶ ಸೈನ್ಯವನ್ನೆಲ್ಲಾ ನೋಡಲಾಗಿ, ನಿಮ್ಮ ದೇವರಾದ ಯೆಹೋವ ದೇವರು ಆಕಾಶದ ಕೆಳಗಿರುವ ಎಲ್ಲಾ ಜನಾಂಗಗಳಿಗೆ ಕೊಟ್ಟಿದ್ದಾರೆ. ನೀವು ಅವುಗಳಿಗೆ ಅಡ್ಡಬಿದ್ದು, ಮರುಳುಗೊಂಡು ಅವುಗಳನ್ನು ಪೂಜಿಸದಂತೆಯೂ ನೋಡಿಕೊಳ್ಳಿರಿ.


ಏಕೆಂದರೆ ಒಮ್ರಿಯ ನಿಯಮಗಳನ್ನೂ ಕೈಕೊಳ್ಳುತ್ತೀರಿ. ಅಹಾಬ್ ಮನೆತನದ ದುರಾಚಾರಗಳನ್ನೂ ಅವರ ಸಂಪ್ರದಾಯಗಳನ್ನೂ ಅನುಸರಿಸುತ್ತಾ ಬಂದಿದ್ದೀರಿ. ಆದ್ದರಿಂದ ನೀವು ನಾಶವಾಗುವಂತೆ ಮಾಡುವೆನು. ನಿಮ್ಮ ಜನರನ್ನು ಅಪಹಾಸ್ಯಕ್ಕೆ ಗುರಿಮಾಡುವೆನು. ಆದ್ದರಿಂದ ನೀವು ನನ್ನ ಜನರ ನಿಂದೆಯನ್ನು ಹೊರುವಿರಿ.


ನಾನು ಸೂರ್ಯನು ಹೊಳೆಯುವುದನ್ನು ಗಮನಿಸಿ, ಚಂದ್ರನು ಪ್ರಭೆಯಲ್ಲಿ ಚಲಿಸುವುದನ್ನು ನೋಡಿ,


ಅವನು ಇನ್ನೂ ಬಾಲಕನಾಗಿರುವಾಗ, ತನ್ನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ ತನ್ನ ಪೂರ್ವಜನಾದ ದಾವೀದನ ದೇವರನ್ನು ಹುಡುಕಲು ಆರಂಭಿಸಿದನು. ಅವನ ಆಳ್ವಿಕೆಯ ಹನ್ನೆರಡನೆಯ ವರ್ಷದಲ್ಲಿ ಉನ್ನತ ಪೂಜಾಸ್ಥಳಗಳನ್ನೂ, ಅಶೇರ ಸ್ತಂಭಗಳನ್ನೂ, ಕೆತ್ತಿದ ವಿಗ್ರಹಗಳನ್ನೂ ತೆಗೆದುಹಾಕಿ, ಯೆಹೂದ ಮತ್ತು ಯೆರೂಸಲೇಮನ್ನು ಶುಚಿಮಾಡಲು ಆರಂಭಿಸಿದನು.


ಈ ಹಿಜ್ಕೀಯನು ಅವನ ಪೂಜಾಸ್ಥಳಗಳನ್ನೂ, ಬಲಿಪೀಠಗಳನ್ನೂ ತೆಗೆದುಹಾಕಿ ಯೆಹೂದ್ಯರಿಗೆ ಮತ್ತು ಯೆರೂಸಲೇಮಿನವರಿಗೆ, ‘ನೀವು ಒಂದೇ ಬಲಿಪೀಠದ ಮುಂದೆ ಅಡ್ಡಬಿದ್ದು, ಅದರ ಮೇಲೆ ಧೂಪವನ್ನರ್ಪಿಸಬೇಕು,’ ಎಂದು ಹೇಳಿದ್ದಾನಲ್ಲವೇ?


ಬಹುಶಃ ನೀವು, “ನಮ್ಮ ದೇವರಾದ ಯೆಹೋವ ದೇವರನ್ನೇ ನಂಬಿಕೊಂಡಿದ್ದೇವೆ,” ಎಂದು ಹೇಳಬಹುದು. “ಯೆರೂಸಲೇಮಿನ ಬಲಿಪೀಠದ ಮುಂದೆಯೇ ಆರಾಧನೆ ಮಾಡಬೇಕು,” ಎಂದು ಯೆಹೂದ್ಯರಿಗೆ ಮತ್ತು ಯೆರೂಸಲೇಮಿನವರಿಗೆ ಹಿಜ್ಕೀಯನು ಆಜ್ಞಾಪಿಸಿ, ಆ ಯೆಹೋವ ದೇವರ ಪೂಜಾಸ್ಥಳಗಳನ್ನೂ, ಬೇರೆ ಎಲ್ಲಾ ಬಲಿಪೀಠಗಳನ್ನೂ ಹಾಳುಮಾಡಿದನಲ್ಲವೇ?


ಇವನು ಅಹಾಬನ ಮನೆಯವರ ಮಾರ್ಗಗಳಲ್ಲಿ ನಡೆದು, ಅಹಾಬನ ಮನೆಯವರ ಹಾಗೆ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು. ಏಕೆಂದರೆ ಇವನು ಅಹಾಬನ ಅಳಿಯನಾಗಿದ್ದನು.


ಅಹಾಬನ ಮಗಳು ಅವನಿಗೆ ಹೆಂಡತಿಯಾಗಿದ್ದರಿಂದ ಅವನು ಅಹಾಬನ ಮನೆಯವರು ನಡೆದ ಹಾಗೆ ಇಸ್ರಾಯೇಲರ ಅರಸರ ಮಾರ್ಗವನ್ನು ಅನುಸರಿಸಿ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.


ಅವರು ತಮಗೆ ಕೊಟ್ಟ ಹೋರಿಯನ್ನು ತೆಗೆದುಕೊಂಡು ಸಿದ್ಧಪಡಿಸಿದರು. “ಬಾಳನೇ, ನಮಗೆ ಕಿವಿಗೊಡು,” ಎಂದು ಉದಯದಿಂದ ಮಧ್ಯಾಹ್ನದವರೆಗೂ ಬಾಳನ ಹೆಸರನ್ನು ಕರೆಯುತ್ತಿದ್ದರು. ಆದರೆ ಒಂದು ಶಬ್ದವಾಗಲಿ, ಉತ್ತರ ಕೊಡುವವನಾಗಲಿ ಇರಲಿಲ್ಲ. ಅವರು ಮಾಡಿದ ಬಲಿಪೀಠದ ಹತ್ತಿರ ಕುಣಿದಾಡಿದರು.


ಆಗ ಎಲೀಯನು ಸಕಲ ಜನರ ಬಳಿಗೆ ಬಂದು, “ನೀವು ಎರಡು ಅಭಿಪ್ರಾಯಗಳ ಮಧ್ಯದಲ್ಲಿ ಎಷ್ಟರವರೆಗೂ ನಿಂತುಕೊಂಡಿರುವಿರಿ? ಯೆಹೋವ ದೇವರು ದೇವರಾಗಿದ್ದರೆ, ಅವರನ್ನೇ ಹಿಂಬಾಲಿಸಿರಿ; ಬಾಳನು ದೇವರಾಗಿದ್ದರೆ, ಅವನನ್ನೇ ಹಿಂಬಾಲಿಸಿರಿ,” ಎಂದನು. ಜನರು ಅವನಿಗೆ ಒಂದು ಮಾತಾದರೂ ಹೇಳಲಿಲ್ಲ.


ನಿಮ್ಮ ಯೆಹೋವ ದೇವರಿಗಾಗಿ ಕಟ್ಟುವ ಬಲಿಪೀಠದ ಸಮೀಪದಲ್ಲಿ ಮರದಿಂದ ಮಾಡಿದ ಯಾವುದೇ ಅಶೇರ ಸ್ತಂಭವನ್ನು ನಿಲ್ಲಿಸಬಾರದು.


ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ಯಾವುದೇ ಊರಿನಲ್ಲಿ, ಯಾವ ಪುರುಷನಾಗಲಿ, ಸ್ತ್ರೀಯಾಗಲಿ ಯೆಹೋವ ದೇವರ ಒಡಂಬಡಿಕೆಯನ್ನು ಮೀರಿ ಅವರ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವುದನ್ನು ನಡೆಸಲು ಸಾಧ್ಯ.


ಇಲ್ಲವಾದರೆ ಅವರು ತಮ್ಮ ದೇವರುಗಳನ್ನು ಆರಾಧಿಸುವಾಗ ಮಾಡಿದ ಎಲ್ಲಾ ಅಸಹ್ಯಕರವಾದ ಆಚಾರಗಳನ್ನು ನಿಮಗೆ ಕಲಿಸಿಕೊಡಬಹುದು ಮತ್ತು ನೀವು ನಿಮ್ಮ ದೇವರಾದ ಯೆಹೋವ ದೇವರಿಗೆ ದ್ರೋಹಿಗಳಾಗಬಹುದು.


“ ‘ಯೆಹೂದನ ಮಕ್ಕಳು ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದ್ದಾರೆಂದು ಯೆಹೋವ ದೇವರು ಹೇಳುತ್ತಾರೆ. ನನ್ನ ಹೆಸರನ್ನು ಹೊಂದಿರುವ ಆಲಯದಲ್ಲಿ ಅದನ್ನು ಅಪವಿತ್ರ ಮಾಡುವುದಕ್ಕೆ ತಮ್ಮ ಅಸಹ್ಯವಾದವುಗಳನ್ನು ಇಟ್ಟಿದ್ದಾರೆ.


ಆದರೆ ಅವರು ಇಸ್ರಾಯೇಲರನ್ನು ಪಾಪಮಾಡಲು ಪ್ರೇರೇಪಿಸಿದ ಯಾರೊಬ್ಬಾಮನ ಮನೆಯ ಪಾಪಗಳನ್ನು ಬಿಟ್ಟುಬಿಡದೆ ಅವುಗಳಲ್ಲಿ ಮುಂದುವರಿದರು. ಇದಲ್ಲದೆ ಸಮಾರ್ಯದಲ್ಲಿ ಅಶೇರ ಸ್ತಂಭ ಇನ್ನೂ ಉಳಿದಿತ್ತು.


“ಆದರೆ ಯೆಹೋವನಾದ ನನ್ನನ್ನು ತೊರೆದು, ನನ್ನ ಪವಿತ್ರ ಪರ್ವತವನ್ನು ಮರೆತು, ಶುಭದಾಯಕ ದೇವತೆಗೆ ಔತಣವನ್ನು ಅಣಿಮಾಡಿ, ಗಾದ್ ಎಂಬ ಅದೃಷ್ಟ ದೇವತೆಗೆ ಮದ್ಯವನ್ನು ತುಂಬಾ ಬೆರೆಸಿದ ನಿಮಗೆ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು