Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 22:11 - ಕನ್ನಡ ಸಮಕಾಲಿಕ ಅನುವಾದ

11 ಅರಸನು ಮೋಶೆಯ ನಿಯಮದ ಪುಸ್ತಕದ ಮಾತುಗಳನ್ನು ಕೇಳಿದಾಗ, ತನ್ನ ವಸ್ತ್ರಗಳನ್ನು ಹರಿದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅರಸನು ಧರ್ಮೋಪದೇಶಗ್ರಂಥದ ವಾಕ್ಯಗಳನ್ನು ಕೇಳಿದಾಗ, ಬಟ್ಟೆಗಳನ್ನು ಹರಿದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅರಸನು ಧರ್ಮೋಪದೇಶ ಗ್ರಂಥವಾಕ್ಯಗಳನ್ನು ಕೇಳಿದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅರಸನು ಧರ್ಮೋಪದೇಶಗ್ರಂಥವಾಕ್ಯಗಳನ್ನು ಕೇಳಿದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ರಾಜನು ಧರ್ಮಶಾಸ್ತ್ರದ ವಾಕ್ಯಗಳನ್ನು ಕೇಳಿದಾಗ, ಗಲಿಬಿಲಿಗೊಂಡು ತನ್ನ ಬಟ್ಟೆಗಳನ್ನು ಹರಿದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 22:11
12 ತಿಳಿವುಗಳ ಹೋಲಿಕೆ  

ಅರಸನು ದೇವರ ನಿಯಮದ ವಾಕ್ಯಗಳನ್ನು ಕೇಳಿದಾಗ, ತನ್ನ ವಸ್ತ್ರಗಳನ್ನು ಹರಿದುಕೊಂಡನು.


ನಿಮ್ಮ ಬಟ್ಟೆಗಳನ್ನಲ್ಲ, ನಿಮ್ಮ ಹೃದಯಗಳನ್ನು ಹರಿದುಕೊಂಡು, ನಿಮ್ಮ ದೇವರಾದ ಯೆಹೋವ ದೇವರ ಕಡೆಗೆ ತಿರುಗಿಕೊಳ್ಳಿರಿ. ಅವರು ದಯೆಯೂ ಕರುಣೆಯೂ, ದೀರ್ಘಶಾಂತಿಯೂ ಮಹಾ ಪ್ರೀತಿಯೂ ಉಳ್ಳವರಾಗಿ ಮಾಡಬೇಕೆಂದಿರುವ ಕೇಡಿಗೆ ಮನಮರುಗುತ್ತಾರೆ.


ಈ ವಾಕ್ಯಗಳನ್ನೆಲ್ಲಾ ಕೇಳಿದ ಅರಸನಾದರೂ, ಅವರ ಸೇವಕರಾದ ಒಬ್ಬರಾದರೂ ಹೆದರಲಿಲ್ಲ.


ಈ ಸ್ಥಳವೂ ಅದರ ನಿವಾಸಿಗಳೂ ನಾಶಕ್ಕೂ ಶಾಪಕ್ಕೂ ಗುರಿಯಾಗುವರೆಂದು ನಾನು ಹೇಳಿದ್ದನ್ನು ನೀನು ಕೇಳಿದಾಗ, ನಿನ್ನ ಹೃದಯವು ಮೃದುವಾಗಿ ನೀನು ನಿನ್ನನ್ನು ಯೆಹೋವ ದೇವರ ಮುಂದೆ ತಗ್ಗಿಸಿಕೊಂಡೆ. ನಿನ್ನ ವಸ್ತ್ರಗಳನ್ನು ಹರಿದುಕೊಂಡು ನನ್ನ ಸಮ್ಮುಖದಲ್ಲಿ ಕಣ್ಣೀರು ಸುರಿಸಿದ್ದರಿಂದ ನಾನು ನಿನ್ನ ಮೊರೆಯನ್ನು ಕೇಳಿದೆನು.


ಆಗ ಯೆಹೋಶುವನು ತನ್ನ ವಸ್ತ್ರಗಳನ್ನು ಹರಿದುಕೊಂಡನು. ಇಸ್ರಾಯೇಲಿನ ಹಿರಿಯರೂ ತಮ್ಮ ತಲೆಗಳ ಮೇಲೆ ಧೂಳನ್ನು ಹಾಕಿಕೊಂಡು ಸಂಜೆಯವರೆಗೆ ಯೆಹೋವ ದೇವರ ಮಂಜೂಷದ ಮುಂದೆ ನೆಲದ ಮೇಲೆ ಬೋರಲು ಬಿದ್ದರು.


ಆಗ ಯಾಕೋಬನು ತನ್ನ ವಸ್ತ್ರಗಳನ್ನು ಹರಿದುಕೊಂಡು ತನ್ನ ನಡುವಿಗೆ ಗೋಣಿಯನ್ನು ಕಟ್ಟಿಕೊಂಡು ತನ್ನ ಮಗನಿಗೋಸ್ಕರ ಬಹುದಿನ ದುಃಖಪಟ್ಟನು.


ಇದಲ್ಲದೆ, “ಯಾಜಕನಾದ ಹಿಲ್ಕೀಯನು ನನಗೆ ಪುಸ್ತಕವನ್ನು ಒಪ್ಪಿಸಿದ್ದಾನೆ,” ಎಂದು ತೋರಿಸಿ, ಶಾಫಾನನು ಅದನ್ನು ಅರಸನ ಮುಂದೆ ಓದಿದನು.


ಯೆಹೋವ ದೇವರು ಹೀಗೆ ಹೇಳುತ್ತಾರೆ: “ಯೆಹೂದದವರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವರು ಯೆಹೋವ ದೇವರ ನಿಯಮವನ್ನು ನಿರಾಕರಿಸಿದರು. ಆತನ ಆಜ್ಞೆಗಳನ್ನು ಕೈಗೊಳ್ಳಲಿಲ್ಲ. ಅವರ ಪಿತೃಗಳು ಅನುಸರಿಸಿದ ಸುಳ್ಳು ದೇವರುಗಳೇ, ಇವರನ್ನು ದಾರಿ ತಪ್ಪುವವರನ್ನಾಗಿ ಮಾಡಿವೆ.


ನಿಮ್ಮ ಭಯದಿಂದ ನನ್ನ ಶರೀರವು ನಡುಗುತ್ತದೆ; ನಿಮ್ಮ ನಿಯಮಗಳಿಗೆ ನಾನು ಭಯಭಕ್ತಿಯುಳ್ಳವನಾಗಿದ್ದೇನೆ.


ಇವುಗಳನ್ನೆಲ್ಲಾ ನಿರ್ಮಿಸಿದ್ದು ನನ್ನ ಕೈಯೇ. ಹೌದು, ನನ್ನ ಕೈಯಿಂದಲೇ ಇವುಗಳೆಲ್ಲಾ ಉಂಟಾದವು,” ಎಂದು ಯೆಹೋವ ದೇವರು ಹೇಳುತ್ತಾರೆ. “ನಾನು ಕಟಾಕ್ಷಿಸುವವನು ಎಂಥವನೆಂದರೆ: ದೀನನೂ, ಮನಮುರಿದವನೂ, ನನ್ನ ಮಾತಿಗೆ ಭಯಪಡುವವನೂ ಆಗಿರುವವನೇ.


ಆಗ ಅವರು ಆ ವಾಕ್ಯಗಳನ್ನೆಲ್ಲಾ ಕೇಳಿದ ಮೇಲೆ ಒಬ್ಬರಿಗೊಬ್ಬರು ಹೆದರಿಕೊಂಡು, “ನಾವು ನಿಶ್ಚಯವಾಗಿ ಈ ವಾಕ್ಯಗಳನ್ನೆಲ್ಲಾ ಅರಸನಿಗೆ ತಿಳಿಸುತ್ತೇವೆ,” ಎಂದು ಬಾರೂಕನಿಗೆ ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು