Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 23:15 - ಕನ್ನಡ ಸಮಕಾಲಿಕ ಅನುವಾದ

15 ಇದಲ್ಲದೆ ಬೇತೇಲಿನಲ್ಲಿ ಇದ್ದ ಬಲಿಪೀಠವನ್ನೂ, ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗ ಯಾರೊಬ್ಬಾಮನು ಮಾಡಿದ ಉನ್ನತ ಪೂಜಾಸ್ಥಳವನ್ನೂ ಸುಟ್ಟುಬಿಟ್ಟು, ಅದನ್ನು ಧೂಳಾಗಲು ಪುಡಿಮಾಡಿ ಅಶೇರ ಸ್ತಂಭವನ್ನು ಸುಟ್ಟುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಇದಲ್ಲದೆ, ಅವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನು ಬೇತೇಲಿನಲ್ಲಿ ನಿರ್ಮಿಸಿದ್ದ ಪೂಜಾಸ್ಥಳವನ್ನೂ, ಅದರಲ್ಲಿದ್ದ ಯಜ್ಞವೇದಿಯನ್ನೂ ಕೆಡವಿಬಿಟ್ಟನು. ಪೂಜಾಸ್ಥಳವನ್ನೂ ಅದರಲ್ಲಿದ್ದ ಅಶೇರ ವಿಗ್ರಹಸ್ತಂಭವನ್ನೂ ಸುಟ್ಟು ಬೂದಿಮಾಡಿನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಇದಲ್ಲದೆ ಇಸ್ರಯೇಲರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗ ಯಾರೊಬ್ಬಾಮನು ಬೇತೇಲಿನಲ್ಲಿ ಏರ್ಪಡಿಸಿದ ಪೂಜಾಸ್ಥಳವನ್ನೂ ಅದರಲ್ಲಿದ್ದ ಬಲಿಪೀಠವನ್ನೂ ಕೆಡವಿಬಿಟ್ಟನು. ಪೂಜಾಸ್ಥಳವನ್ನೂ ಅದರಲ್ಲಿದ್ದ ಅಶೇರ ವಿಗ್ರಹಸ್ತಂಭವನ್ನೂ ಸುಟ್ಟು ಬೂದಿಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಇದಲ್ಲದೆ ಅವನು ಇಸ್ರಾಯೇಲ್ಯರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗನಾದ ಯಾರೊಬ್ಬಾಮನು ಬೇತೇಲಿನಲ್ಲಿ ಏರ್ಪಡಿಸಿದ ಪೂಜಾಸ್ಥಳವನ್ನೂ ಅದರಲ್ಲಿದ್ದ ಯಜ್ಞವೇದಿಯನ್ನೂ ಕೆಡವಿಬಿಟ್ಟನು. ಪೂಜಾಸ್ಥಳವನ್ನೂ ಅದರಲ್ಲಿದ್ದ ಅಶೇರವಿಗ್ರಹಸ್ತಂಭವನ್ನೂ ಸುಟ್ಟು ಬೂದಿಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಯೋಷೀಯನು ಬೇತೇಲಿನ ಉನ್ನತಸ್ಥಳವನ್ನು ಮತ್ತು ಯಜ್ಞವೇದಿಕೆಯನ್ನು ಕೆಡವಿಬಿಟ್ಟನು. ನೆಬಾಟನ ಮಗನಾದ ಯಾರೊಬ್ಬಾಮನು ಈ ಯಜ್ಞವೇದಿಕೆಯನ್ನು ನಿರ್ಮಿಸಿದ್ದನು. ಇಸ್ರೇಲರು ಪಾಪಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದ್ದನು. ಯೋಷೀಯನು ಯಜ್ಞವೇದಿಕೆಯನ್ನು ಮತ್ತು ಉನ್ನತಸ್ಥಳವನ್ನು ಕೆಡವಿಬಿಟ್ಟನು. ಯೋಷೀಯನು ಯಜ್ಞವೇದಿಕೆಯ ಕಲ್ಲುಗಳನ್ನು ಪುಡಿಪುಡಿಮಾಡಿ ಧೂಳಿನಲ್ಲಿ ಬೆರಸಿದನು. ಅವನು ಅಶೇರಸ್ತಂಭವನ್ನು ಸುಟ್ಟುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 23:15
16 ತಿಳಿವುಗಳ ಹೋಲಿಕೆ  

ಅವನು ಅಶೇರ ಸ್ತಂಭವನ್ನು ಯೆಹೋವ ದೇವರ ಆಲಯದೊಳಗಿಂದ ಯೆರೂಸಲೇಮಿನ ಹೊರಗೆ ಕಿದ್ರೋನ್ ಹಳ್ಳಕ್ಕೆ ತರಿಸಿ, ಅದನ್ನು ಕಿದ್ರೋನ್ ಕಣಿವೆಯ ಬಳಿಯಲ್ಲಿ ಸುಟ್ಟು, ಅದನ್ನು ಧೂಳಾಗಿ ಪುಡಿಮಾಡಿ, ಆ ಧೂಳಿನ ಪುಡಿಯನ್ನು ಸಾಮಾನ್ಯ ಜನರ ಸಮಾಧಿಗಳ ಮೇಲೆ ಹಾಕಿದನು.


ಯೆಹೋವ ದೇವರು ಯಾರೊಬ್ಬಾಮನ ಪಾಪಗಳ ನಿಮಿತ್ತ ಇಸ್ರಾಯೇಲರನ್ನು ಶತ್ರುಗಳಿಗೆ ಒಪ್ಪಿಸಿಬಿಡುವರು. ಏಕೆಂದರೆ ಯಾರೊಬ್ಬಾಮನೇ ಪಾಪಮಾಡಿ, ಪಾಪವನ್ನು ಮಾಡಲು ಇಸ್ರಾಯೇಲರನ್ನು ಪ್ರೇರೇಪಿಸಿದನು,” ಎಂದನು.


ಯೇಹುವು ತನ್ನ ಪೂರ್ಣಹೃದಯದಿಂದ ಇಸ್ರಾಯೇಲಿನ ದೇವರಾದ ಯೆಹೋವ ದೇವರ ನಿಯಮದಲ್ಲಿ ನಡೆಯಲು ಪ್ರಯತ್ನಿಸಲಿಲ್ಲ. ಇಸ್ರಾಯೇಲರನ್ನು ಪಾಪಮಾಡಲು ಪ್ರೇರೇಪಿಸಿದ ಯಾರೊಬ್ಬಾಮನ ಪಾಪಗಳನ್ನು ತೊರೆದುಬಿಡಲಿಲ್ಲ.


ನೀನು ನನಗೆ ಎಬ್ಬಿಸಿದ ಕೋಪದ ನಿಮಿತ್ತವೂ, ಇಸ್ರಾಯೇಲನ್ನು ಪಾಪ ಮಾಡುವಂತೆ ಮಾಡಿದ್ದರ ನಿಮಿತ್ತವೂ, ನಾನು ನಿನ್ನ ಮನೆಯನ್ನು ನೆಬಾಟನ ಮಗನಾದ ಯಾರೊಬ್ಬಾಮನ ಮನೆಯ ಹಾಗೆಯೂ, ಅಹೀಯನ ಮಗ ಬಾಷನ ಮನೆಯ ಹಾಗೆಯೂ ಮಾಡುವೆನು, ಎಂದನು.’


ಯಾರೊಬ್ಬಾಮನು ತಾನು ಪಾಪಮಾಡಿದ್ದಲ್ಲದೆ ಇಸ್ರಾಯೇಲರನ್ನೂ ಪಾಪಕ್ಕೆ ಪ್ರೇರೇಪಿಸಿ, ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಕೋಪವನ್ನು ಪ್ರಚೋದಿಸಿದ ಕಾರಣ ಇದು ಸಂಭವಿಸಿತು.


ಅರಸನು ತನ್ನ ಸಲಹೆಗಾರರನ್ನು ಕೇಳಿ, ಎರಡು ಬಂಗಾರದ ಕರುಗಳನ್ನು ಮಾಡಿಸಿ ಜನರಿಗೆ, “ಯೆರೂಸಲೇಮಿನವರೆಗೂ ಜಾತ್ರೆಗೆ ಹೋಗುವುದು ನಿಮಗೆ ಕಷ್ಟವಾಗಿದೆ. ಇಸ್ರಾಯೇಲರೇ, ಇಗೋ ಈಜಿಪ್ಟಿನಿಂದ ನಿಮ್ಮನ್ನು ಬರಮಾಡಿದ ನಿಮ್ಮ ದೇವರುಗಳು,” ಎಂದನು.


ಯಾರೊಬ್ಬಾಮನು ಧೂಪವನ್ನರ್ಪಿಸಲು ಬಲಿಪೀಠದ ಬಳಿಯಲ್ಲಿ ನಿಂತಿರುವಾಗ, ಯೆಹೂದದಿಂದ ಬೇತೇಲಿಗೆ ಯೆಹೋವ ದೇವರ ಮಾತಿನಂತೆ ಒಬ್ಬ ದೇವರ ಮನುಷ್ಯ ಬಂದನು.


ಅವನು ಯೆಹೋವ ದೇವರ ಅಪ್ಪಣೆಯಿಂದ ಆ ಪೀಠವನ್ನು ಕುರಿತು: “ಪೀಠವೇ, ಪೀಠವೇ! ದಾವೀದನ ಸಂತಾನದಲ್ಲಿ ಯೋಷೀಯ ಎಂಬ ಹೆಸರುಳ್ಳ ಒಬ್ಬ ಮಗನು ಹುಟ್ಟುವನು. ಅವನು ನಿನ್ನ ಮೇಲೆ ಧೂಪವನ್ನರ್ಪಿಸುವ ಪೂಜಾಸ್ಥಳಗಳ ಯಾಜಕರನ್ನು ಹಿಡಿದು ಬಲಿಯಾಗಿ ಅರ್ಪಿಸುವನು. ಮನುಷ್ಯರ ಎಲುಬುಗಳನ್ನು ನಿನ್ನ ಮೇಲೆ ಸುಡಲಾಗುವವು,” ಎಂದು ಯೆಹೋವ ದೇವರು ಹೇಳುತ್ತಾರೆ ಎಂದನು.


ಅರಸನಾದ ಯೋಷೀಯನು ಬಾಳನಿಗೋಸ್ಕರವೂ, ಅಶೇರನಿಗೋಸ್ಕರವೂ, ಆಕಾಶದ ಸೈನ್ಯಕ್ಕೋಸ್ಕರವೂ ಉಪಯೋಗಿಸುತ್ತಿದ್ದ ಸಮಸ್ತ ಸಲಕರಣೆಗಳನ್ನು ಯೆಹೋವ ದೇವರ ಆಲಯದಿಂದ ಹೊರಗೆ ತೆಗೆದುಕೊಂಡು ಬರಬೇಕೆಂದು ಮಹಾಯಾಜಕನಾದ ಹಿಲ್ಕೀಯನಿಗೂ, ಮುಖ್ಯಯಾಜಕರಿಗೂ, ದ್ವಾರಪಾಲಕರಿಗೂ ಆಜ್ಞಾಪಿಸಿದನು. ಅರಸನು ಅವುಗಳನ್ನು ಯೆರೂಸಲೇಮಿನ ಹೊರಗೆ ಕಿದ್ರೋನ್ ಕಣಿವೆಯ ಬಯಲಿನಲ್ಲಿ ಸುಡಿಸಿ, ಅವುಗಳ ಬೂದಿಯನ್ನು ಬೇತೇಲಿಗೆ ತರುವಂತೆ ಮಾಡಿದನು.


ಹೀಗೆಯೇ ಅವರು ತಮ್ಮ ಗುದ್ದಲಿಗಳಿಂದ ಮನಸ್ಸೆ, ಎಫ್ರಾಯೀಮ್, ಸಿಮೆಯೋನ್, ನಫ್ತಾಲಿ ಪ್ರಾಂತ್ಯಗಳ ಪಟ್ಟಣಗಳ ಸುತ್ತಲೂ ಶುಚಿಮಾಡಿದರು.


“ನಾನು ಇಸ್ರಾಯೇಲಿನ ಪಾಪಗಳನ್ನು ವಿಚಾರಿಸುವ ದಿವಸದಲ್ಲಿ, ಬೇತೇಲಿನ ಬಲಿಪೀಠಗಳನ್ನು ನಾಶಮಾಡುವೆನು. ಬಲಿಪೀಠದ ಕೊಂಬುಗಳು ಕಡಿಯಲಾಗಿ, ನೆಲಕ್ಕೆ ಉರುಳುವುವು.


ಆಗ ಸಮುಯೇಲನು ಇಸ್ರಾಯೇಲ್ ಮನೆಯವರಿಗೆಲ್ಲಾ ಮಾತನಾಡಿ, “ನೀವು ನಿಮ್ಮ ಪೂರ್ಣಹೃದಯದಿಂದ ಯೆಹೋವ ದೇವರ ಕಡೆಗೆ ತಿರುಗಿ, ನಿಮ್ಮಲ್ಲಿರುವ ಅನ್ಯದೇವರುಗಳನ್ನೂ, ಅಷ್ಟೋರೆತನ್ನೂ ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಿ, ನಿಮ್ಮ ಹೃದಯವನ್ನು ಯೆಹೋವ ದೇವರಿಗೆ ಸಿದ್ಧಮಾಡಿ, ಅವರೊಬ್ಬರನ್ನೇ ಸೇವಿಸಿದರೆ ಅವರು ನಿಮ್ಮನ್ನು ಫಿಲಿಷ್ಟಿಯರ ಕೈಗಳೊಳಗಿಂದ ತಪ್ಪಿಸುವರು,” ಎಂದನು.


ಆಗ ಇಸ್ರಾಯೇಲರು ಬಾಳನನ್ನೂ, ಅಷ್ಟೋರೆತನ್ನೂ ತೆಗೆದುಹಾಕಿ, ಯೆಹೋವ ದೇವರೊಬ್ಬರನ್ನೇ ಸೇವಿಸಿದರು.


ಆದರೂ ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳಿಗೆ ಅವನು ಅಂಟಿಕೊಂಡು ಅವುಗಳನ್ನು ಬಿಟ್ಟು ತೊಲಗದೆ ಇದ್ದನು.


ಅವನು ಬಲಿಪೀಠಗಳನ್ನೂ, ಅಶೇರ ಸ್ತಂಭಗಳನ್ನೂ ಕೆಡವಿಹಾಕಿ, ಕೆತ್ತಿದ ವಿಗ್ರಹಗಳನ್ನು ಕುಟ್ಟಿ ಪುಡಿಪುಡಿಮಾಡಿ, ಇಸ್ರಾಯೇಲ್ ದೇಶದಲ್ಲೆಲ್ಲಿಯೂ ಇರುವ ಸಮಸ್ತ ವಿಗ್ರಹಗಳನ್ನು ಕೆಡವಿದ ತರುವಾಯ ಯೆರೂಸಲೇಮಿಗೆ ಹಿಂದಿರುಗಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು