Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 23:3 - ಕನ್ನಡ ಸಮಕಾಲಿಕ ಅನುವಾದ

3 ಅರಸನು ಸ್ತಂಭದ ಬಳಿಯಲ್ಲಿ ನಿಂತುಕೊಂಡು ಯೆಹೋವ ದೇವರನ್ನು ಹಿಂಬಾಲಿಸುವುದಕ್ಕೂ, ದೇವರ ಆಜ್ಞೆಗಳನ್ನೂ, ನಿಯಮಗಳನ್ನೂ, ಕಟ್ಟಳೆಗಳನ್ನೂ ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ಕೈಗೊಳ್ಳುವುದಕ್ಕೂ, ಈ ಗ್ರಂಥದಲ್ಲಿ ಬರೆದಿರುವ ಒಡಂಬಡಿಕೆಯ ವಾಕ್ಯಗಳನ್ನು ಸ್ಥಿರಪಡಿಸುವುದಕ್ಕೂ ಯೆಹೋವ ದೇವರ ಮುಂದೆ ಒಡಂಬಡಿಕೆಯನ್ನು ಮಾಡಿದನು. ಜನರೆಲ್ಲರು ಹಾಗೆಯೇ ಒಡಂಬಡಿಕೆಗೆ ಒಪ್ಪಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅರಸನು ಕಂಬದ ಬಳಿಯಲ್ಲಿ ನಿಂತು, ತಾನು ಯೆಹೋವನ ಮಾರ್ಗದಲ್ಲಿ ನಡೆಯುವುದಾಗಿಯೂ, ಆತನ ಆಜ್ಞಾನಿಯಮ, ವಿಧಿಗಳನ್ನು ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ, ಕೈಕೊಳ್ಳುವುದಾಗಿಯೂ ಆ ಒಡಂಬಡಿಕೆಯ ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲಾ ವಾಕ್ಯಗಳನ್ನು ನೆರವೇರಿಸುವುದಾಗಿಯೂ ಯೆಹೋವನಿಗೆ ಎಲ್ಲಾ ಜನರ ಎದುರು ಪ್ರಮಾಣ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಕಂಬದ ಬಳಿಯಲ್ಲಿ ನಿಂತು ತಾನು ಸರ್ವೇಶ್ವರನ ಮಾರ್ಗದಲ್ಲಿ ನಡೆಯುವುದಾಗಿಯೂ ಆತನ ಆಜ್ಞಾನಿಯಮವಿಧಿಗಳನ್ನು ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ಕೈಕೊಳ್ಳುವುದಾಗಿಯೂ ಮತ್ತು ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲ ವಾಕ್ಯಗಳನ್ನು ನೆರವೇರಿಸುವುದಾಗಿಯೂ ಸರ್ವೇಶ್ವರನಿಗೆ ಪ್ರಮಾಣ ಮಾಡಿದನು. ಎಲ್ಲಾ ಜನರೂ ಹಾಗೆಯೇ ಪ್ರಮಾಣ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಕಂಬದ ಬಳಿಯಲ್ಲಿ ನಿಂತು ತಾನು ಯೆಹೋವನ ಮಾರ್ಗದಲ್ಲಿ ನಡೆಯುವದಾಗಿಯೂ ಆತನ ಆಜ್ಞಾನಿಯಮವಿಧಿಗಳನ್ನು ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ಕೈಕೊಳ್ಳುವದಾಗಿಯೂ ನಿಬಂಧನಗ್ರಂಥದಲ್ಲಿ ಬರೆದಿರುವ ಎಲ್ಲಾ ವಾಕ್ಯಗಳನ್ನು ನೆರವೇರಿಸುವದಾಗಿಯೂ ಯೆಹೋವನಿಗೆ ಪ್ರಮಾಣಮಾಡಿದನು. ಎಲ್ಲಾ ಜನರೂ ಹಾಗೆಯೇ ಪ್ರಮಾಣಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ರಾಜನು ಸ್ತಂಭದ ಬಳಿ ನಿಂತು ತಾನು ಯೆಹೋವನ ಮಾರ್ಗದಲ್ಲಿ ನಡೆಯುವುದಾಗಿಯೂ ಆತನ ಆಜ್ಞೆಗಳಿಗೆ, ಒಡಂಬಡಿಕೆಗೆ ಮತ್ತು ಆತನ ನಿಯಮಗಳಿಗೆ ಪೂರ್ಣಹೃದಯದಿಂದಲೂ ಪೂರ್ಣಆತ್ಮದಿಂದಲೂ ವಿಧೇಯನಾಗಿರುವುದಾಗಿಯೂ ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲಾ ವಾಕ್ಯಗಳನ್ನು ನೆರವೇರಿಸುವುದಾಗಿಯೂ ಯೆಹೋವನಿಗೆ ಪ್ರಮಾಣಮಾಡಿದನು. ರಾಜನ ಪ್ರಮಾಣಕ್ಕೆ ಬೆಂಬಲ ನೀಡಲು ಜನರೆಲ್ಲರೂ ಎದ್ದುನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 23:3
36 ತಿಳಿವುಗಳ ಹೋಲಿಕೆ  

ಅಲ್ಲಿ ಅರಸನು ಪದ್ಧತಿಯ ಪ್ರಕಾರ ಕಂಬದ ಬಳಿಯಲ್ಲಿ ನಿಂತಿದ್ದನು. ಪ್ರಧಾನರೂ, ತುತೂರಿ ಊದುವವರೂ ಅರಸನ ಬಳಿಯಲ್ಲಿ ನಿಂತಿದ್ದರು. ಇದಲ್ಲದೆ ದೇಶದ ಜನರೆಲ್ಲರೂ ಸಂತೋಷಪಟ್ಟು ತುತೂರಿಗಳನ್ನು ಊದುತ್ತಿದ್ದರು. ಇದನ್ನು ಕಂಡ ಕೂಡಲೆ ಅತಲ್ಯಳು ತನ್ನ ವಸ್ತ್ರಗಳನ್ನು ಹರಿದುಕೊಂಡು, “ದ್ರೋಹ! ದ್ರೋಹ!” ಎಂದು ಕೂಗಿದಳು.


ಅನಂತರ ಯೆಹೋವ ದೇವರ ಜನರಾಗಿರುವಂತೆ ಯೆಹೋಯಾದಾವನು ಯೆಹೋವ ದೇವರಿಗೂ, ಅರಸನಿಗೂ, ಜನರಿಗೂ ಮಧ್ಯೆ ಒಡಂಬಡಿಕೆ ಮಾಡಿದನು. ಹಾಗೆಯೇ ಅರಸನಿಗೂ, ಜನರಿಗೂ ಮಧ್ಯದಲ್ಲಿ ಒಡಂಬಡಿಕೆ ಮಾಡಿಸಿದನು.


ನಿಮ್ಮ ದೇವರಾದ ಯೆಹೋವ ದೇವರನ್ನೇ ಅನುಸರಿಸಿ, ಅವರಿಗೆ ಭಯಪಟ್ಟು, ಅವರ ಆಜ್ಞೆಗಳನ್ನು ಕಾಪಾಡಿ, ಅವರ ಮಾತನ್ನು ಕೇಳಿ, ಅವರ ಸೇವೆಮಾಡುತ್ತಾ ಅವರನ್ನೇ ಅಂಟಿಕೊಳ್ಳಬೇಕು.


ಕುರಿ ಹಿಂಡಿಗೆ ಮಹಾಕುರುಬ ಆಗಿರುವ ನಮ್ಮ ಕರ್ತ ಯೇಸುವನ್ನು ನಿತ್ಯಒಡಂಬಡಿಕೆಯ ರಕ್ತದ ಮೂಲಕ ಸಮಾಧಾನದ ದೇವರು ಸತ್ತವರೊಳಗಿಂದ ಜೀವಂತವಾಗಿ ಬರಮಾಡಿದರು.


ಹೊಸ ಒಡಂಬಡಿಕೆಗೆ ಮಧ್ಯಸ್ಥರಾಗಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಉತ್ತಮವಾಗಿ ಮಾತನಾಡುವ, ಪ್ರೋಕ್ಷಿಸಿದ ರಕ್ತದ ಬಳಿಗೂ ಬಂದಿದ್ದೀರಿ.


ಚೀಯೋನಿನ ಕಡೆಗೆ ಅಭಿಮುಖರಾಗಿ ಅದರ ಮಾರ್ಗವನ್ನು ವಿಚಾರಿಸಿ ಬನ್ನಿ; ಮರೆತು ಹೋಗದ ನಿತ್ಯವಾದ ಒಡಂಬಡಿಕೆಯಿಂದ ಯೆಹೋವ ದೇವರನ್ನು ಸೇರಿಕೊಳ್ಳೋಣ, ಅನ್ನುವರು.


ನೀನು ಸತ್ಯದಿಂದಲೂ ನ್ಯಾಯದಿಂದಲೂ ನೀತಿಯಿಂದಲೂ, ‘ಯೆಹೋವ ದೇವರ ಜೀವದಾಣೆ,’ ಎಂದು ಪ್ರಮಾಣ ಮಾಡುವೆ. ಆಗ ರಾಷ್ಟ್ರಗಳೆಲ್ಲ ನನ್ನಿಂದ ಆಶೀರ್ವಾದ ಪಡೆಯ ಬಯಸುವರು. ನನ್ನಲ್ಲಿಯೇ ಹೆಮ್ಮೆಪಡುವರು.”


ನೀವು ದೇವರ ಮುಂದೆ ಪ್ರಮಾಣ ಮಾಡಿದ್ದರಿಂದ, ಅರಸನ ಆಜ್ಞೆಯನ್ನು ಕೈಕೊಳ್ಳಿರಿ ಎಂದು ಹೇಳುತ್ತೇನೆ.


“ಇದೆಲ್ಲದರ ನಿಮಿತ್ತ ನಾವು ಒಡಂಬಡಿಕೆಯನ್ನು ಸ್ಥಿರಮಾಡಿ ಬರೆಯುತ್ತೇವೆ. ನಮ್ಮ ಪ್ರಧಾನರೂ, ಲೇವಿಯರೂ, ಯಾಜಕರೂ ಅದಕ್ಕೆ ಮುದ್ರೆ ಹಾಕುತ್ತಾರೆ,” ಎಂದು ಪ್ರಾರ್ಥಿಸಿದರು.


ಆದಕಾರಣ ನಮ್ಮ ಒಡೆಯನಾದ ನಿನ್ನ ಯೋಚನೆಯ ಪ್ರಕಾರವಾಗಿಯೂ, ನಮ್ಮ ದೇವರ ಆಜ್ಞೆಗೆ ಭಯಪಡುವವರ ಯೋಚನೆಯ ಪ್ರಕಾರವಾಗಿಯೂ ಆ ಸಮಸ್ತ ಸ್ತ್ರೀಯರನ್ನೂ, ಅವರಿಂದ ಹುಟ್ಟಿದವರನ್ನೂ ಕಳುಹಿಸಿಬಿಡಲು, ಈಗಲೇ ನಮ್ಮ ದೇವರ ಮುಂದೆ ಒಡಂಬಡಿಕೆ ಮಾಡಿಕೊಂಡು, ದೇವರ ನಿಯಮದ ಪ್ರಕಾರ ನಡೆಯೋಣ.


ಈಗ ಇಸ್ರಾಯೇಲಿನ ದೇವರಾದ ಯೆಹೋವ ದೇವರ ಉಗ್ರಕೋಪವು ನಮ್ಮನ್ನು ಬಿಟ್ಟುಹೋಗುವ ಹಾಗೆ, ನಾನು ಅವರ ಸಂಗಡ ಒಡಂಬಡಿಕೆಯನ್ನು ಮಾಡಲು ಮನಸ್ಸುಳ್ಳವನಾಗಿದ್ದೇನೆ.


ಅನಂತರ ಯೆಹೋವ ದೇವರ ಜನರಾಗಿರುವಂತೆ ಯೆಹೋಯಾದಾವನು ತನಗೂ, ಸಮಸ್ತ ಜನರಿಗೂ, ಅರಸನಿಗೂ ಒಡಂಬಡಿಕೆ ಮಾಡಿಸಿದನು.


ಅರಸನು ಪ್ರವೇಶಿಸುವ ಸ್ಥಳದಲ್ಲಿ ತನ್ನ ಸ್ತಂಭದ ಬಳಿಯಲ್ಲಿ ನಿಂತಿದ್ದನು. ಪ್ರಧಾನರೂ, ತುತೂರಿ ಊದುವವರೂ, ಅರಸನ ಬಳಿಯಲ್ಲಿ ನಿಂತಿದ್ದರು. ಇದಲ್ಲದೆ ದೇಶದ ಜನರೆಲ್ಲರೂ ಸಂತೋಷಪಟ್ಟು ತುತೂರಿಗಳನ್ನು ಊದುತ್ತಿದ್ದರು. ಹಾಗೆಯೇ ಹಾಡುಗಾರರು ಗೀತವಾದ್ಯಗಳನ್ನು ಹಿಡಿದು ಸ್ತುತಿಸುವವರೂ ಬೋಧಿಸುವವರೂ ಇದ್ದರು. ಇದನ್ನು ಕಂಡ ಕೂಡಲೆ ಅತಲ್ಯಳು ತನ್ನ ವಸ್ತ್ರಗಳನ್ನು ಹರಿದುಕೊಂಡು, “ದ್ರೋಹ, ದ್ರೋಹ,” ಎಂದು ಕೂಗಿದಳು.


ಯೆಹೋವ ದೇವರು ಹೋರೇಬಿನಲ್ಲಿ ಇಸ್ರಾಯೇಲರ ಸಂಗಡ ಮಾಡಿದ ಒಡಂಬಡಿಕೆ ಅಲ್ಲದೆ ಅವರು ಮೋವಾಬ್ ದೇಶದಲ್ಲಿ ಇಸ್ರಾಯೇಲರೊಡನೆ ಮಾಡಬೇಕೆಂದು ಮೋಶೆಗೆ ಆಜ್ಞಾಪಿಸಿದ ಒಡಂಬಡಿಕೆಯ ಮಾತುಗಳು ಇವೇ:


ಹಾಗಾದರೆ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ನನ್ನ ಆಜ್ಞೆಗಳನ್ನು ನೀವು ಲಕ್ಯಕೊಟ್ಟು ಕೇಳಿ, ನಿಮ್ಮ ದೇವರಾದ ಯೆಹೋವ ದೇವರನ್ನು ನಿಮ್ಮ ಪೂರ್ಣಹೃದಯದಿಂದಲೂ, ನಿಮ್ಮ ಪೂರ್ಣಪ್ರಾಣದಿಂದಲೂ ಪ್ರೀತಿಸಿ ಅವರಿಗೆ ಸೇವೆ ಮಾಡಿದರೆ,


ಈಗ ಇಸ್ರಾಯೇಲರೇ, ನಿಮ್ಮ ದೇವರಾದ ಯೆಹೋವ ದೇವರಿಗೆ ಭಯಪಟ್ಟು, ಅವರ ಎಲ್ಲಾ ಮಾರ್ಗಗಳಲ್ಲಿ ನಡೆದುಕೊಂಡು, ಅವರನ್ನು ಪ್ರೀತಿಸಿ, ನಿಮ್ಮ ದೇವರಾದ ಯೆಹೋವ ದೇವರಿಗೆ ನಿಮ್ಮ ಪೂರ್ಣಹೃದಯದಿಂದಲೂ, ನಿಮ್ಮ ಪೂರ್ಣಪ್ರಾಣದಿಂದಲೂ ಸೇವೆಮಾಡಿರಿ.


ಒಂದು ವೇಳೆ ನೀವು ನಿಮ್ಮ ಯೆಹೋವ ದೇವರನ್ನು ಮರೆತು, ಬೇರೆ ದೇವರುಗಳನ್ನು ಹಿಂಬಾಲಿಸಿ, ಅವುಗಳನ್ನು ಸೇವಿಸಿ, ಅವುಗಳಿಗೆ ಅಡ್ಡಬಿದ್ದರೆ, ನಿಶ್ಚಯವಾಗಿ ನಾಶವಾಗುವಿರೆಂದು ನಿಮಗೆ ವಿರೋಧವಾಗಿ ಈ ಹೊತ್ತು ಸಾಕ್ಷಿ ಹೇಳುತ್ತೇನೆ.


ನೀವು ನಿಮ್ಮ ದೇವರಾದ ಯೆಹೋವ ದೇವರನ್ನು ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ, ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು.


ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಬೋಧಿಸಲು ನನಗೆ ನಡೆಸಿದ ಈ ಆಜ್ಞೆಗಳನ್ನೂ, ತೀರ್ಪುಗಳನ್ನೂ, ನಿಯಮಗಳನ್ನೂ ನೀವು ಸ್ವತಂತ್ರಿಸಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ಅನುಸರಿಸಬೇಕಾದವುಗಳು ಇವೇ.


ಇಸ್ರಾಯೇಲರು ಈಜಿಪ್ಟಿನೊಳಗಿಂದ ಹೊರಟ ಮೇಲೆ ಮೋಶೆಯು ಇಸ್ರಾಯೇಲರಿಗೆ ನುಡಿದ ಸಾಕ್ಷಿಗಳೂ, ನಿಯಮಗಳೂ, ನ್ಯಾಯಗಳೂ ಇವೇ.


ಮೋಶೆಯು ಬಂದು ಯೆಹೋವ ದೇವರ ಎಲ್ಲಾ ಮಾತುಗಳನ್ನೂ ಎಲ್ಲಾ ನ್ಯಾಯವಿಧಿಗಳನ್ನು ಜನರಿಗೆ ತಿಳಿಸಿದನು. ಆಗ ಜನರೆಲ್ಲಾ ಒಂದೇ ಸ್ವರದಿಂದ, “ಯೆಹೋವ ದೇವರು ಹೇಳಿದ ಎಲ್ಲಾ ಮಾತುಗಳ ಪ್ರಕಾರ ಮಾಡುತ್ತೇವೆ,” ಎಂದು ಉತ್ತರಕೊಟ್ಟರು.


ಗುಲಾಮರಿಗೆ ಸ್ವಾತಂತ್ರ್ಯವನ್ನು ಘೋಷಿಸಲು ಅರಸನಾದ ಚಿದ್ಕೀಯನು ಯೆರೂಸಲೇಮಿನ ಎಲ್ಲಾ ಜನರೊಂದಿಗೆ ಒಡಂಬಡಿಕೆಯನ್ನು ಮಾಡಿದ ನಂತರ ಯೆಹೋವ ದೇವರಿಂದ ಯೆರೆಮೀಯನಿಗೆ ಈ ಮಾತು ಬಂದಿತು.


ನೀವೋ ಕೂಡಲೆ ಮನಮರುಗಿ ನಿಮ್ಮ ನಿಮ್ಮ ನೆರೆಹೊರೆಯವರಿಗೆ ಬಿಡುಗಡೆಯನ್ನು ಪ್ರಕಟಿಸಿ, ನನ್ನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿದಿರಿ. ನನ್ನ ಹೆಸರಿನಿಂದ ಖ್ಯಾತಗೊಂಡಿರುವ ದೇವಾಲಯದಲ್ಲಿ, ನನ್ನ ಸಮ್ಮುಖದಲ್ಲಿ ಒಪ್ಪಂದ ಮಾಡಿಕೊಂಡಿರಿ.


ಯೆಹೂದದವರೆಲ್ಲರು ಪ್ರಮಾಣಕ್ಕೆ ಸಂತೋಷಪಟ್ಟರು. ಏಕೆಂದರೆ ಅವರು ತಮ್ಮ ಪೂರ್ಣಹೃದಯದಿಂದ ಆಣೆ ಇಟ್ಟು, ತಮ್ಮ ಪೂರ್ಣ ಇಷ್ಟಪೂರ್ವಕವಾಗಿ ದೇವರನ್ನು ಹುಡುಕಿದರು; ದೇವರು ಅವರಿಗೆ ಸಿಕ್ಕಿದರು. ಯೆಹೋವ ದೇವರು ಅವರಿಗೆ ಸುತ್ತಲೂ ವಿಶ್ರಾಂತಿಕೊಟ್ಟರು.


ನಾನು ನನ್ನ ಬಟ್ಟೆಯನ್ನು ಝಾಡಿಸಿ, “ಈ ಮಾತಿನ ಪ್ರಕಾರ ಮಾಡದೆ ಇರುವ ಪ್ರತಿಯೊಬ್ಬನನ್ನು ದೇವರು ಅವನ ಮನೆಯಿಂದಲೂ, ಅವನ ಆಸ್ತಿಪಾಸ್ತಿಯಿಂದಲೂ ಝಾಡಿಸಲಿ. ಅವನು ಇದೇ ಪ್ರಕಾರ ಝಾಡಿಸಿ, ಬರಿದಾಗಲಿ,” ಎಂದೆನು. ಅದಕ್ಕೆ ಸಭೆಯವರೆಲ್ಲರೂ, “ಆಮೆನ್” ಎಂದು ಹೇಳಿ ಯೆಹೋವ ದೇವರನ್ನು ಸ್ತುತಿಸಿದರು. ಜನರು ತಾವು ಕೊಟ್ಟ ಮಾತಿನ ಪ್ರಕಾರ ನಡೆದುಕೊಂಡರು.


ಮುದ್ರೆ ಹಾಕಿದವರು ಯಾರೆಂದರೆ: ಅಧಿಪತಿಯಾದ ಹಕಲ್ಯನ ಮಗ ನೆಹೆಮೀಯನು. ಚಿದ್ಕೀಯ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು