Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 23:30 - ಕನ್ನಡ ಸಮಕಾಲಿಕ ಅನುವಾದ

30 ಯೋಷೀಯನ ಸೇವಕರು ಅವನ ಶವವನ್ನು ಮೆಗಿದ್ದೋವಿನಿಂದ ಯೆರೂಸಲೇಮಿಗೆ ರಥದಲ್ಲಿ ತೆಗೆದುಕೊಂಡು ಬಂದು ಅವನ ಸ್ವಂತ ಸಮಾಧಿಯಲ್ಲಿ ಇಟ್ಟರು. ಆಗ ದೇಶದ ಜನರು ಯೋಷೀಯನ ಮಗನಾದ ಯೆಹೋವಾಹಾಜನನ್ನು ಅಭಿಷೇಕಿಸಿ, ಅವನ ತಂದೆಗೆ ಬದಲಾಗಿ ಅವನನ್ನು ಅರಸನನ್ನಾಗಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಯೋಷೀಯನ ಸೇವಕರು ಅವನ ಶವವನ್ನು ರಥದಲ್ಲಿ ಹಾಕಿಕೊಂಡು ಮೆಗಿದ್ದೋವಿನಿಂದ ಯೆರೂಸಲೇಮಿಗೆ ತಂದು ಅವನ ಸ್ವಂತ ಸಮಾಧಿಯಲ್ಲಿ ಇಟ್ಟರು. ಜನರು ಅವನ ನಂತರ ಅವನ ಮಗನಾದ ಯೆಹೋವಾಹಾಜನನ್ನು ಅಭಿಷೇಕಿಸಿ ಅರಸನನ್ನಾಗಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಅವನ ಸೇವಕರು ಅವನ ಶವವನ್ನು ರಥದಲ್ಲಿ ಹಾಕಿಕೊಂಡು ಮೆಗಿದ್ದೋವಿನಿಂದ ಜೆರುಸಲೇಮಿಗೆ ತಂದು ಅವನ ಸ್ವಂತ ಸಮಾಧಿಯಲ್ಲಿ ಇಟ್ಟರು. ಜನರು ಅವನ ಸ್ಥಾನದಲ್ಲಿ ಅವನ ಮಗ ಯೆಹೋವಾಹಾಜನನ್ನು ಅಭಿಷೇಕಿಸಿ ಅರಸನನ್ನಾಗಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಅವನ ಸೇವಕರು ಅವನ ಶವವನ್ನು ರಥದಲ್ಲಿ ಹಾಕಿಕೊಂಡು ಮೆಗಿದ್ದೋವಿನಿಂದ ಯೆರೂಸಲೇವಿುಗೆ ತಂದು ಅವನ ಸ್ವಂತ ಸಮಾಧಿಯಲ್ಲಿ ಇಟ್ಟರು. ಜನರು ಅವನಿಗೆ ಬದಲಾಗಿ ಅವನ ಮಗನಾದ ಯೆಹೋವಾಹಾಜನನ್ನು ಅಭಿಷೇಕಿಸಿ ಅರಸನನ್ನಾಗಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಯೋಷೀಯನ ಸೇವಕರು ಮೆಗಿದ್ದೋವಿನಿಂದ ರಥದಲ್ಲಿ ಯೋಷೀಯನ ದೇಹವನ್ನು ಜೆರುಸಲೇಮಿಗೆ ತೆಗೆದುಕೊಂಡು ಬಂದರು. ಅವರು ಯೋಷೀಯನನ್ನು ಅವನ ಸ್ವಂತ ಸ್ಮಶಾನದಲ್ಲಿ ಸಮಾಧಿಮಾಡಿದರು. ನಂತರ ಸಾಮಾನ್ಯ ಜನರು ಯೋಷೀಯನ ಮಗನಾದ ಯೆಹೋವಾಹಾಜನನ್ನು ಕರೆದು, ಅವನನ್ನು ಅಭಿಷೇಕಿಸಿ ಹೊಸ ರಾಜನನ್ನಾಗಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 23:30
11 ತಿಳಿವುಗಳ ಹೋಲಿಕೆ  

ಅವನ ಸೇವಕರು ಅವನನ್ನು ರಥದಲ್ಲಿ ಯೆರೂಸಲೇಮಿಗೆ ತೆಗೆದುಕೊಂಡುಹೋಗಿ, ದಾವೀದನ ಪಟ್ಟಣದೊಳಗೆ ಅವನ ಪಿತೃಗಳ ಬಳಿಯಲ್ಲಿ ಅವನ ಸಮಾಧಿಯಲ್ಲಿ ಅವನನ್ನು ಹೂಳಿಟ್ಟರು.


ಆದ್ದರಿಂದ ಅವನ ಸೇವಕರು ಆ ರಥದೊಳಗಿಂದ ಅವನನ್ನು ತೆಗೆದುಕೊಂಡು, ಅವನಿಗಿದ್ದ ಎರಡನೆಯ ರಥದಲ್ಲಿ ಅವನನ್ನು ಇರಿಸಿ ಯೆರೂಸಲೇಮಿಗೆ ತಂದರು. ಅವನು ಅಲ್ಲಿ ಮರಣ ಹೊಂದಲು, ಅವನ ಶವವನ್ನು ಅವನ ಪಿತೃಗಳ ಸ್ಮಶಾನದಲ್ಲಿ ಸಮಾಧಿಮಾಡಿದರು. ಸಮಸ್ತ ಯೆಹೂದ ಮತ್ತು ಯೆರೂಸಲೇಮಿನವರು ಯೋಷೀಯನಿಗೋಸ್ಕರ ದುಃಖಪಟ್ಟರು.


ಆದರೆ ದೇಶದ ಜನರು ಅರಸನಾದ ಆಮೋನನ ವಿರುದ್ಧ ಒಳಸಂಚು ಮಾಡಿದವರನ್ನೆಲ್ಲಾ ಕೊಂದುಹಾಕಿ, ಅವನ ಮಗ ಯೋಷೀಯನನ್ನು ಅವನಿಗೆ ಬದಲಾಗಿ ಅರಸನನ್ನಾಗಿ ಮಾಡಿದರು.


ಆಗ ಯೆಹೂದದ ಎಲ್ಲಾ ಜನರು ಹದಿನಾರು ವರ್ಷದವನಾದ ಅಜರ್ಯನನ್ನು ತೆಗೆದುಕೊಂಡು, ಅವನನ್ನು ಅವನ ತಂದೆಯಾದ ಅಮಚ್ಯನಿಗೆ ಬದಲಾಗಿ ಅರಸನಾಗಿ ಮಾಡಿದರು.


ಆದ್ದರಿಂದ ನಾನು ನಿನ್ನನ್ನು ನಿನ್ನ ಪಿತೃಗಳ ಬಳಿಯಲ್ಲಿ ಸೇರಿಸಿಕೊಳ್ಳುವೆನು; ನೀನು ಸಮಾಧಾನದಿಂದ ನಿನ್ನ ಸಮಾಧಿಗೆ ಸೇರುವೆ. ನಾನು ಈ ಸ್ಥಳದ ಮೇಲೆ ಬರಮಾಡುವ ಕೇಡನ್ನು ನಿನ್ನ ಕಣ್ಣುಗಳು ಕಾಣುವುದಿಲ್ಲ,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದಳು. ಅವರು ಹೋಗಿ ಈ ಉತ್ತರವನ್ನು ಅರಸನಿಗೆ ತಿಳಿಸಿದರು.


ಯೋಷೀಯನು ಮಹಾ ದೇವಾಲಯದ ವಿಷಯದಲ್ಲಿ ಈ ಎಲ್ಲಾ ವ್ಯವಸ್ಥೆಯನ್ನು ಮಾಡಿದ ನಂತರ, ಈಜಿಪ್ಟಿನ ಅರಸ ನೆಕೋ ಎಂಬವನು ಯುದ್ಧಮಾಡುವುದಕ್ಕಾಗಿ ಯೂಫ್ರೇಟೀಸ್ ನದಿಯ ತೀರದಲ್ಲಿದ್ದ ಕರ್ಕೆಮೀಷಿಗೆ ಬಂದನು. ಯೋಷೀಯನು ಅವನನ್ನು ಯುದ್ಧದಲ್ಲಿ ಎದುರಿಸಲು ಹೋದನು.


ಯೆಹೂದದ ಅರಸನಾದ ಯೋಷೀಯನ ಮಗನು ತನ್ನ ತಂದೆಯಾದ ಯೋಷೀಯನಿಗೆ ಬದಲಾಗಿ ಆಳಿದವನೂ, ಈ ಸ್ಥಳದಿಂದ ಸೆರೆಯಾಗಿ ಹೋದವನೂ ಆದ ಶಲ್ಲೂಮನನ್ನು ಕುರಿತು ಯೆಹೋವ ದೇವರು ಹೀಗೆ ಹೇಳುತ್ತಾರೆ: “ಅವನು ಇಲ್ಲಿಗೆ ಇನ್ನು ಹಿಂದಿರುಗಿ ಬರುವುದೇ ಇಲ್ಲ.


“ಇದಲ್ಲದೆ ನೀನು ಇಸ್ರಾಯೇಲಿನ ಪ್ರಧಾನರ ವಿಷಯವಾಗಿ ಈ ಪ್ರಲಾಪವನ್ನೆತ್ತಿ,


ಮರಣ ಹೊಂದಿದ ಅರಸನಿಗಾಗಿ ಅಳಬೇಡಿರಿ. ಅವನಿಗಾಗಿ ಗೋಳಾಡಬೇಡಿರಿ. ಹೊರಟು ಹೋದವನಿಗಾಗಿ ಬಹಳವಾಗಿ ಅಳಿರಿ. ಏಕೆಂದರೆ ಅವನು ತಿರುಗಿ ಬರುವುದೇ ಇಲ್ಲ. ತಾನು ಹುಟ್ಟಿದ ದೇಶವನ್ನು ಇನ್ನು ನೋಡುವುದೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು