Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 23:8 - ಕನ್ನಡ ಸಮಕಾಲಿಕ ಅನುವಾದ

8 ಯೋಷೀಯನು ಯೆಹೂದದ ಪಟ್ಟಣಗಳಿಂದ ಯಾಜಕರೆಲ್ಲರನ್ನು ಬರಮಾಡಿ, ಗಿಬೆಯ ಪಟ್ಟಣದಿಂದ ಬೇರ್ಷೆಬದವರೆಗೂ, ಯಾಜಕರು ಧೂಪ ಸುಡುತ್ತಿದ್ದ ಉನ್ನತ ಪೂಜಾಸ್ಥಳಗಳನ್ನೂ ಅಶುದ್ಧ ಮಾಡಿದನು. ಅನಂತರ ಪುರಾಧಿಕಾರಿಯಾದ ಯೆಹೋಶುವನ ಬಾಗಿಲಿನ ದ್ವಾರದಲ್ಲಿದ್ದ ಬಾಗಿಲುಗಳ ಉನ್ನತ ಸ್ಥಳಗಳನ್ನು ಕೆಡವಿ ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅನಂತರ ಗೆಬದಿಂದ ಬೇರ್ಷೆಬದವರೆಗಿರುವ ಯೆಹೂದ ಪಟ್ಟಣಗಳ ಎಲ್ಲಾ ಯಾಜಕರನ್ನು ಕರೆಯಿಸಿಕೊಂಡು ಅವರು ಧೂಪಹಾಕುತ್ತಿದ್ದ ಪೂಜಾಸ್ಥಳಗಳನ್ನು ನಾಶಮಾಡಿಸಿದನು. ಪುರಾಧಿಕಾರಿಯಾದ ಯೆಹೋಶುವನ ಬಾಗಿಲಿನ ಎಡಗಡೆಯಲ್ಲಿದ್ದ ದ್ವಾರಗಳ ದೇವತೆಯ ಪೂಜಾಸ್ಥಳಗಳನ್ನು ಕೆಡವಿ ಹಾಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅನಂತರ ಗೆಬದಿಂದ ಬೇರ್ಷೆಬದವರೆಗಿರುವ ಜುದೇಯದ ಪಟ್ಟಣಗಳ ಯಾಜಕರನ್ನೆಲ್ಲಾ ಕರೆಯಿಸಿಕೊಂಡು ಅವರು ಧೂಪಸುಡುತ್ತಿದ್ದ ಪೂಜಾಸ್ಥಳಗಳನ್ನು ಹೊಲೆಮಾಡಿದನು. ಪುರಾಧಿಕಾರಿ ಯೆಹೋಶುವನ ಬಾಗಿಲಿನ ಎಡಗಡೆಯಲ್ಲಿದ್ದ ದ್ವಾರದೇವತೆಗಳ ಪೂಜಾ ಸ್ಥಳಗಳನ್ನು ಕೆಡವಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅನಂತರ ಗೆಬದಿಂದ ಬೇರ್ಷೆಬದವರೆಗಿರುವ ಯೆಹೂದ ಪಟ್ಟಣಗಳ ಎಲ್ಲಾ ಯಾಜಕರನ್ನು ಕರಿಸಿಕೊಂಡು ಅವರು ಧೂಪಸುಡುತ್ತಿದ್ದ ಪೂಜಾಸ್ಥಳಗಳನ್ನು ಹೊಲೆಮಾಡಿದನು. ಪುರಾಧಿಕಾರಿಯಾದ ಯೆಹೋಶುವನ ಬಾಗಲಿನ ಎಡಗಡೆಯಲ್ಲಿದ್ದ ದ್ವಾರಗಳ ದೇವತೆಯ ಪೂಜಾಸ್ಥಳಗಳನ್ನು ಕೆಡವಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8-9 ಆ ಸಮಯದಲ್ಲಿ ಯಾಜಕರು ಯಜ್ಞಗಳನ್ನು ಜೆರುಸಲೇಮಿಗೆ ತರಲಿಲ್ಲ ಮತ್ತು ದೇವಾಲಯದಲ್ಲಿನ ಯಜ್ಞವೇದಿಕೆಯ ಮೇಲೆ ಅವುಗಳನ್ನು ಅರ್ಪಿಸಲಿಲ್ಲ. ಯಾಜಕರು ಯೆಹೂದದ ಎಲ್ಲಾ ನಗರಗಳಲ್ಲಿಯೂ ವಾಸಿಸುತ್ತಿದ್ದರು. ಅವರು ಆ ನಗರಗಳಲ್ಲಿನ ಉನ್ನತಸ್ಥಳಗಳಲ್ಲಿ ಧೂಪವನ್ನು ಸುಡುತ್ತಿದ್ದರು ಮತ್ತು ಯಜ್ಞಗಳನ್ನು ಅರ್ಪಿಸುತ್ತಿದ್ದರು. ಆ ಉನ್ನತಸ್ಥಳಗಳು ಗೆಬದಿಂದ ಬೇರ್ಷೆಬದವರೆಗೆ ಎಲ್ಲಾ ಕಡೆಗಳಲ್ಲಿದ್ದವು. ಯಾಜಕರು ತಮ್ಮ ಹುಳಿಯಿಲ್ಲದ ರೊಟ್ಟಿಗಳನ್ನು ಜೆರುಸಲೇಮಿನ ದೇವಾಲಯದಲ್ಲಿ ಯಾಜಕರಾಗಿದ್ದ ವಿಶೇಷ ಸ್ಥಳಗಳಲ್ಲಿ ತಿನ್ನದೆ ಆ ಊರುಗಳಲ್ಲಿ ಸಾಮಾನ್ಯ ಜನರೊಂದಿಗೆ ತಿನ್ನುತ್ತಿದ್ದರು. ಆದರೆ ರಾಜನಾದ ಯೋಷೀಯನು ಆ ಉನ್ನತಸ್ಥಳಗಳನ್ನು ನಾಶಗೊಳಿಸಿ ಆ ಯಾಜಕರನ್ನು ಜೆರುಸಲೇಮಿಗೆ ಕರೆತಂದನು. ನಗರಾಧಿಕಾರಿಯಾದ ಯೆಹೋಶುವನ ದ್ವಾರದ ಎಡಗಡೆಯಲ್ಲಿದ್ದ ಉನ್ನತಸ್ಥಳಗಳನ್ನು ಯೋಷೀಯನು ನಾಶಗೊಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 23:8
13 ತಿಳಿವುಗಳ ಹೋಲಿಕೆ  

ಆಗ ಅರಸನಾದ ಆಸನು ಯೆಹೂದರಲ್ಲಿ ಒಬ್ಬನನ್ನೂ ಬಿಡದೆ ಎಲ್ಲರನ್ನೂ ಕರೆಯಿಸಿ, ಬಾಷನು ಕಟ್ಟಿಸುತ್ತಾ ಇದ್ದ ರಾಮ ಪಟ್ಟಣದ ಕಲ್ಲುಗಳನ್ನೂ, ಅದರ ತೊಲೆಗಳನ್ನೂ ತೆಗೆದುಕೊಂಡುಹೋಗಿ ಅವುಗಳಿಂದ ಬೆನ್ಯಾಮೀನನ ಗಿಬೆಯ ಮತ್ತು ಮಿಚ್ಪೆ ಎಂಬ ನಗರಗಳನ್ನು ಕಟ್ಟಿಸಿದನು.


ಇದಲ್ಲದೆ ಬೆನ್ಯಾಮೀನನ ಗೋತ್ರದಲ್ಲಿ ಗಿಬ್ಯೋನನ್ನೂ ಗೆಬಾನನ್ನೂ


ಗೆಬ ಮೊದಲುಗೊಂಡು ಯೆರೂಸಲೇಮಿನ ದಕ್ಷಿಣದಲ್ಲಿರುವ ರಿಮ್ಮೋನಿನವರೆಗೂ ದೇಶವೆಲ್ಲಾ ಅರಾಬಾದ ಹಾಗೆ ಮಾರ್ಪಡುವುದು. ಯೆರೂಸಲೇಮ್ ತನ್ನ ಸ್ಥಳದಲ್ಲಿ ಬೆನ್ಯಾಮೀನನ ಬಾಗಿಲು ಮೊದಲುಗೊಂಡು, ಮೊದಲನೆಯ ಬಾಗಿಲಿನ ಸ್ಥಳದವರೆಗೂ, ಮೂಲೆ ಬಾಗಿಲಿನವರೆಗೂ, ಹನನೇಲನ ಗೋಪುರ ಮೊದಲುಗೊಂಡು ಅರಸನ ದ್ರಾಕ್ಷಿ ಆಲೆಗಳವರೆಗೂ ಎತ್ತರದಲ್ಲಿ ನಿವಾಸವಾಗುವುದು.


ಅವರು ಕಣಿವೆಯನ್ನು ದಾಟಿದ್ದಾರೆ; ಗಿಬೆಯದಲ್ಲಿ ಇಳುಕೊಂಡಿದ್ದಾರೆ. ರಾಮಾ ಜನತೆ ಹೆದರುತ್ತಿದೆ; ಸೌಲನ ಗಿಬೆಯದ ಜನತೆ ಓಡಿಹೋಗಿದೆ.


ಬೆನ್ಯಾಮೀನನ ಗೋತ್ರದಿಂದ ಕೊಟ್ಟವುಗಳು, ಗಿಬ್ಯೋನ್, ಗೆಬಾ, ಆಲೆಮೆತೂ, ಅನಾತೋತೂ, ಅದರ ಗೋಮಾಳುಗಳು. ಇವರ ಕುಟುಂಬಗಳಿಗೆ ದೊರಕಿದ ಎಲ್ಲಾ ಪಟ್ಟಣಗಳು ಹದಿಮೂರು.


ಅವನು ಅದನ್ನು ಕೇಳಿ ಎದ್ದು, ತನ್ನ ಪ್ರಾಣಕ್ಕೋಸ್ಕರ ಯೆಹೂದಕ್ಕೆ ಸೇರಿದ ಬೇರ್ಷೆಬಕ್ಕೆ ಹೊರಟುಹೋಗಿ, ಅಲ್ಲಿ ತನ್ನ ಸೇವಕನನ್ನು ಕಳುಹಿಸಿಬಿಟ್ಟನು.


ಆಗ ಇಸ್ರಾಯೇಲರೆಲ್ಲರು ಹೊರಟು ಗಿಲ್ಯಾದ್ ಸಹಿತವಾಗಿ ದಾನ್ ಪಟ್ಟಣ ಮೊದಲುಗೊಂಡು ಬೇರ್ಷೆಬದ ಮಟ್ಟಿಗೂ ಒಬ್ಬ ಮನುಷ್ಯನಂತೆ ಮಿಚ್ಪೆಯಲ್ಲಿ ಯೆಹೋವ ದೇವರ ಮುಂದೆ ಕೂಡಿಬಂದರು.


ಅಲ್ಲಿಂದ ಅವನು ಬೇರ್ಷೆಬಕ್ಕೆ ಹೋದನು.


ಹೀಗೆ ಅವರಿಬ್ಬರೂ ಅಲ್ಲಿ ಪ್ರಮಾಣ ಮಾಡಿದ್ದರಿಂದ ಆ ಸ್ಥಳಕ್ಕೆ ಬೇರ್ಷೆಬ ಎಂದು ಅಬ್ರಹಾಮನು ಹೆಸರಿಟ್ಟನು.


ಅಬ್ರಹಾಮನು ಬೆಳಿಗ್ಗೆ ಎದ್ದು ರೊಟ್ಟಿಯನ್ನೂ, ನೀರಿನ ತಿತ್ತಿಯನ್ನೂ ತೆಗೆದುಕೊಂಡು ಹಾಗರಳಿಗೆ ಕೊಟ್ಟು, ಅವುಗಳನ್ನು ಆಕೆಯ ಹೆಗಲಿನ ಮೇಲೆ ಇರಿಸಿ, ಆ ಹುಡುಗನ ಸಂಗಡ ಅವಳನ್ನು ಕಳುಹಿಸಿಬಿಟ್ಟನು. ಆಕೆಯು ಹೋಗಿ ಬೇರ್ಷೆಬದ ಮರುಭೂಮಿಯಲ್ಲಿ ಅಲೆದಾಡುತ್ತಿದ್ದಳು.


“ ‘ಇಸ್ರಾಯೇಲರು ತಪ್ಪಿಸಿಕೊಂಡು ನನ್ನಿಂದ ಅಗಲಿ, ತಮ್ಮ ವಿಗ್ರಹಗಳ ಕಡೆಗೆ ತಿರುಗಿಕೊಂಡ ವೇಳೆಯಲ್ಲಿ ನನಗೆ ದೂರವಾಗಿ ಹೋದ ಲೇವಿಯರೂ ಸಹ ತಮ್ಮ ಪಾಪಗಳನ್ನು ಹೊರುವರು.


ಕೆಫೆರ್ ಅಮ್ಮೋನಿ, ಒಫ್ನೀ, ಗೆಬಾ ಎಂಬ ಹನ್ನೆರಡು ಪಟ್ಟಣಗಳೂ ಅವುಗಳ ಗ್ರಾಮಗಳೂ ಆಗಿರುತ್ತವೆ.


ಆದರೆ ಬೇತೇಲನ್ನು ಹುಡುಕಬೇಡಿರಿ. ಗಿಲ್ಗಾಲಿಗೆ ಹೋಗಬೇಡಿರಿ. ಬೇರ್ಷೆಬಕ್ಕೆ ಯಾತ್ರೆ ಹೋಗಬೇಡಿರಿ. ಏಕೆಂದರೆ ಗಿಲ್ಗಾಲು ಸೆರೆಗೆ ನಿಶ್ವಯವಾಗಿ ಹೋಗುವುದು, ಬೇತೇಲಿನ ಬಾಧೆಗಳು ಕೊನೆಗೊಳ್ಳುವುದಿಲ್ಲ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು