Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 24:12 - ಕನ್ನಡ ಸಮಕಾಲಿಕ ಅನುವಾದ

12 ಆಗ ಯೆಹೂದದ ಅರಸನಾದ ಯೆಹೋಯಾಖೀನನೂ, ಅವನ ತಾಯಿಯೂ, ಅವನ ಸೇವಕರೂ, ಅವನ ಪ್ರಧಾನರೂ, ಅವನ ಕಂಚುಕಿಯರೂ ಅಧಿಕಾರಿಗಳ ಸಹಿತವಾಗಿ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಗೆ ಶರಣಾದರು. ಬಾಬಿಲೋನಿನ ಅರಸನು ತನ್ನ ಆಳಿಕೆಯ ಎಂಟನೆಯ ವರ್ಷದಲ್ಲಿ ಯೆಹೋಯಾಕೀನನನ್ನು ಸೆರೆಹಿಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆಗ ಯೆಹೂದದ ಅರಸನಾದ ಯೆಹೋಯಾಖೀನನು ತನ್ನ ತಾಯಿಯ ಪರಿವಾರದವರು, ಸೇನಾಪತಿಗಳು, ಕಂಚುಕಿಗಳು ಇವರೊಡನೆ ಬಾಬೆಲಿನ ಅರಸನ ಬಳಿಗೆ ಹೋದನು. ಬಾಬೆಲಿನ ಅರಸನು ಇವನನ್ನು ತನ್ನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ ಸೆರೆಹಿಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆಗ ಜುದೇಯದ ಅರಸ ಯೆಹೋಯಾಖೀನನು, ತನ್ನ ತಾಯಿ, ಪರಿವಾರದವರು, ಸೇನಾಪತಿಗಳು, ಕಂಚುಕಿಗಳು ಇವರೊಡನೆ ಅವನ ಬಳಿಗೆ ಹೋದನು. ಅವನು ಇವನನ್ನು ತನ್ನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ ಸೆರೆಹಿಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆಗ ಯೆಹೂದದ ಅರಸನಾದ ಯೆಹೋಯಾಖೀನನು ತನ್ನ ತಾಯಿ ಪರಿವಾರದವರು ಸೇನಾಪತಿಗಳು ಕಂಚುಕಿಗಳು ಇವರೊಡನೆ ಅವನ ಬಳಿಗೆ ಹೋದನು; ಅವನು ಇವನನ್ನು ತನ್ನ ಆಳಿಕೆಯ ಎಂಟನೆಯ ವರುಷದಲ್ಲಿ ಸೆರೆಹಿಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯೆಹೂದದ ರಾಜನಾದ ಯೆಹೋಯಾಖೀನನು ಬಾಬಿಲೋನ್ ರಾಜನನ್ನು ಭೇಟಿಮಾಡಲು ಹೋದನು. ಯೆಹೋಯಾಖೀನನ ತಾಯಿ, ಅವನ ಅಧಿಕಾರಿಗಳು, ನಾಯಕರು ಮತ್ತು ಸಿಬ್ಬಂದಿಯೆಲ್ಲವೂ ಅವನೊಂದಿಗೆ ಹೋದರು. ಆಗ ಬಾಬಿಲೋನ್ ರಾಜ ಯೆಹೋಯಾಖೀನನನ್ನು ಸೆರೆಹಿಡಿದನು. ಇದು ಸಂಭವಿಸಿದ್ದು ನೆಬೂಕದ್ನೆಚ್ಚರನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 24:12
26 ತಿಳಿವುಗಳ ಹೋಲಿಕೆ  

ನೆಬೂಕದ್ನೆಚ್ಚರನು ಸೆರೆಯಾಗಿ ಒಯ್ದ ಜನರ ಪಟ್ಟಿ ಹೀಗಿದೆ: ಅವನು ತನ್ನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಸೆರೆಗೊಯ್ದದ್ದು 3,023 ಮಂದಿ ಯೆಹೂದ್ಯರನ್ನು;


ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು, ಯೆಹೂದದ ಅರಸನಾದ ಯೆಹೋಯಾಕೀಮನ ಮಗನಾದ ಯೆಕೊನ್ಯನನ್ನೂ, ಯೆಹೂದದ ಪ್ರಧಾನರನ್ನೂ, ಬಡಗಿಯರನ್ನೂ, ಕಮ್ಮಾರರನ್ನೂ ಯೆರೂಸಲೇಮಿನಿಂದ ಬಾಬಿಲೋನಿಗೆ ಸೆರೆಗೆ ಒಯ್ದನು. ಯೆಹೋವ ದೇವರ ದೇವಾಲಯದ ಮುಂದೆ ಇಟ್ಟಿರುವ ಎರಡು ಬುಟ್ಟಿ ಅಂಜೂರದ ಹಣ್ಣುಗಳನ್ನು ಯೆಹೋವ ದೇವರು ನನಗೆ ತೋರಿಸಿದರು.


ಆದರೆ ಒಂದು ವರ್ಷವು ತೀರಿದ ಮೇಲೆ ಅರಸನಾದ ನೆಬೂಕದ್ನೆಚ್ಚರನು ಜನರನ್ನು ಕಳುಹಿಸಿ, ಅವನನ್ನೂ ಮತ್ತು ಯೆಹೋವ ದೇವರ ಆಲಯದ ಬೆಲೆಯುಳ್ಳ ಪಾತ್ರೆಗಳನ್ನೂ ಬಾಬಿಲೋನಿಗೆ ತೆಗೆದುಕೊಂಡು ಬರಮಾಡಿ, ಅವನ ಸಹೋದರನಾದ ಚಿದ್ಕೀಯನನ್ನು ಯೆಹೂದ ಮತ್ತು ಯೆರೂಸಲೇಮಿನ ಮೇಲೆ ಅರಸನನ್ನಾಗಿ ಮಾಡಿದನು.


ಯೆಹೂದದ ಅರಸನಾದ ಯೆಹೋಯಾಖೀನನ ಸೆರೆಯ ಮೂವತ್ತೇಳನೆಯ ವರ್ಷದ ಹನ್ನೆರಡನೆಯ ತಿಂಗಳಿನ ಇಪ್ಪತ್ತೇಳನೆಯ ದಿವಸದಲ್ಲಿ, ಬಾಬಿಲೋನಿನ ಅರಸನಾದ ಎವೀಲ್ಮೆರೋದಕನು ತನ್ನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ, ಅವನು ಯೆಹೂದದ ಅರಸನಾದ ಯೆಹೋಯಾಖೀನನನ್ನು ಸೆರೆಮನೆಯಿಂದ ಬಿಡಿಸಿದನು.


“ ‘ಇದರ ಅಭಿಪ್ರಾಯ ನಿಮಗೆ ತಿಳಿಯುವುದಿಲ್ಲವೋ?’ ಎಂದು ತಿರುಗಿಬೀಳುವ ಮನೆಯವರಿಗೆ ಹೇಳು ಮತ್ತು ಅವರಿಗೆ, ‘ಇಗೋ, ಬಾಬಿಲೋನಿನ ಅರಸನು ಯೆರೂಸಲೇಮಿಗೆ ಬಂದು ಅದರ ಅರಸನನ್ನೂ, ಅದರ ಪ್ರಧಾನರನ್ನೂ ಕರೆದುಕೊಂಡು ತನ್ನ ಬಳಿಗೆ ಒಯ್ದಿದ್ದಾನೆ.


ಯೋಷೀಯನ ಮಗನೂ, ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ಅಂದರೆ, ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ, ಪ್ರವಾದಿ ಯೆರೆಮೀಯನಿಗೆ ಯೆಹೂದ್ಯರೆಲ್ಲರ ವಿಷಯವಾಗಿ ದೈವೋಕ್ತಿಯೊಂದು ಉಂಟಾಯಿತು.


ಯೆಹೂದದ ಅರಸನಾದ ಯೆಹೋಯಾಖೀನನ ಸೆರೆಯ ಮೂವತ್ತೇಳನೆಯ ವರ್ಷದ ಹನ್ನೆರಡನೆಯ ತಿಂಗಳಿನ ಇಪ್ಪತ್ತೈದನೆಯ ದಿವಸದಲ್ಲಿ ಆದದ್ದೇನೆಂದರೆ, ಬಾಬಿಲೋನಿನ ಅರಸನಾದ ಎವೀಲ್ಮೆರೋದಕನು ತನ್ನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ, ಅವನು ಯೆಹೂದದ ಅರಸನಾದ ಯೆಹೋಯಾಖೀನನನ್ನು ಸೆರೆಮನೆಯಿಂದ ಬಿಡಿಸಿದನು.


ಯೆಹೋವ ದೇವರು ನಿಮ್ಮನ್ನೂ, ನೀವು ನಿಮ್ಮ ಮೇಲೆ ನೇಮಿಸಿಕೊಳ್ಳುವ ಅರಸನನ್ನೂ, ನೀವೂ, ನಿಮ್ಮ ಪಿತೃಗಳೂ ಅರಿಯದ ಜನಾಂಗದ ಬಳಿಗೆ ಹೋಗುವಂತೆ ಮಾಡುವರು. ಅಲ್ಲಿ ಮರವೂ, ಕಲ್ಲೂ ಆಗಿರುವ ಬೇರೆ ದೇವರುಗಳನ್ನೂ ನೀವು ಪೂಜಿಸುವಿರಿ.


ಬಾಬಿಲೋನಿನವರು ನಿನ್ನಿಂದ ಹುಟ್ಟುವಂಥ, ನಿನ್ನ ಮಕ್ಕಳಲ್ಲಿ ಕೆಲವರನ್ನು ತೆಗೆದುಕೊಂಡು ಹೋಗುವರು, ಅವರು ಬಾಬಿಲೋನಿನ ರಾಜನ ಅರಮನೆಯಲ್ಲಿ ಕಂಚುಕಿಗಳಾಗಿರುವರು,” ಎಂದನು.


ಅಷ್ಟರಲ್ಲಿ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ತಾನೇ ಆ ಪಟ್ಟಣಕ್ಕೆ ಬಂದನು.


ರಾಜನಿಗೂ ರಾಜಮಾತೆಗೂ ಹೀಗೆ ಹೇಳಿರಿ, “ನೆಲದಲ್ಲಿ ಕೂತುಕೊಳ್ಳಿರಿ, ನಿಮ್ಮ ಅಂದದ ಕಿರೀಟವು ನಿಮ್ಮ ತಲೆಯಿಂದ ಕೆಳಗೆ ಬಿದ್ದಿದೆ.”


ಆದ್ದರಿಂದ ಯೆಹೂದದ ಅರಸನಾದ ಯೆಹೋಯಾಕೀಮನನ್ನು ಕುರಿತು ಯೆಹೋವ ದೇವರು ಹೇಳುವುದೇನೆಂದರೆ: ದಾವೀದನ ಸಿಂಹಾಸನದಲ್ಲಿ ಕುಳಿತುಕೊಳ್ಳುವವನು ಅವನಿಗೆ ಇರುವುದಿಲ್ಲ. ಅವನ ಹೆಣವು ಹಗಲಿನಲ್ಲಿ ಬಿಸಿಲಿಗೂ, ರಾತ್ರಿಯಲ್ಲಿ ಹಿಮಕ್ಕೂ ಬಿಸಾಡಲಾಗುವುದು.


ಯೋಷೀಯನ ಮಗ ಚಿದ್ಕೀಯನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಂದ ಯೆಹೂದ ದೇಶದ ಅರಸನನ್ನಾಗಿ ಮಾಡಿದನು. ಅವನು ಯೆಹೋಯಾಕೀಮನ ಮಗ ಕೊನ್ಯನಿಗೆ ಬದಲಾಗಿ, ಅರಸನಾಗಿ ಆಳಿದನು.


ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಹತ್ತೊಂಬತ್ತನೆಯ ವರ್ಷದ ಐದನೆಯ ತಿಂಗಳಿನ, ಹತ್ತನೆಯ ದಿನದಲ್ಲಿ ಬಾಬಿಲೋನಿನ ಅರಸನ ಸೇವಕನೂ, ಕಾವಲಿನ ಅಧಿಪತಿಯೂ ಆಗಿದ್ದ ನೆಬೂಜರದಾನನು ಯೆರೂಸಲೇಮಿಗೆ ಬಂದು,


ತಿಂಗಳಿನ ಐದನೆಯ ದಿನದಲ್ಲಿ ಅರಸನಾದ ಯೆಹೋಯಾಕೀನನ ಸೆರೆಯ ಐದನೆಯ ವರ್ಷದಲ್ಲಿ,


“ಇದಲ್ಲದೆ ನೀನು ಇಸ್ರಾಯೇಲಿನ ಪ್ರಧಾನರ ವಿಷಯವಾಗಿ ಈ ಪ್ರಲಾಪವನ್ನೆತ್ತಿ,


ಈಗ ಅದು ಮರುಭೂಮಿಯಲ್ಲಿ ಒಣಗಿ, ನೀರಿಲ್ಲದಂಥ ಪ್ರದೇಶದಲ್ಲಿ ನೆಡಲಾಗಿದೆ.


ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಹತ್ತೊಂಬತ್ತನೆಯ ವರ್ಷದ ಐದನೆಯ ತಿಂಗಳಿನ, ಏಳನೆಯ ದಿನದಲ್ಲಿ ಬಾಬಿಲೋನಿನ ಅರಸನ ಸೇವಕನೂ, ಕಾವಲಿನ ಅಧಿಪತಿಯೂ ಆಗಿದ್ದ ನೆಬೂಜರದಾನನು ಯೆರೂಸಲೇಮಿಗೆ ಬಂದು,


ಶೂಷನಿನ ಅರಮನೆಯಲ್ಲಿ ಬೆನ್ಯಾಮೀನ್ ಕುಲದ ಕೀಷನ ಮರಿಮಗನೂ, ಶಿಮ್ಮೀಯ ಮೊಮ್ಮಗನೂ, ಯಾಯೀರನ ಮಗನೂ ಆದ ಮೊರ್ದೆಕೈ ಎಂಬ ಹೆಸರುಳ್ಳ ಒಬ್ಬ ಯೆಹೂದ್ಯನಿದ್ದನು.


ಅವನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಸೆರೆಯಾಗಿ ತಂದ ಯೆಹೂದದ ಅರಸನಾಗಿರುವ ಯೆಹೋಯಾಕೀನನ ಸಂಗಡ ಯೆರೂಸಲೇಮಿನಿಂದ ಸೆರೆಹಿಡಿಯಲಾದವರಲ್ಲಿ ಒಬ್ಬನಾಗಿದ್ದನು.


ಆದಕಾರಣ ಶಾಪವು ಲೋಕವನ್ನು ನುಂಗಿಬಿಟ್ಟಿದೆ. ಅದರಲ್ಲಿ ವಾಸವಾಗಿರುವವರು ದಂಡನೆಗೆ ಒಳಗಾಗಿದ್ದಾರೆ. ಆದ್ದರಿಂದ ಭೂನಿವಾಸಿಗಳು ಸುಟ್ಟು ಹೋಗಿ, ಕೆಲವರು ಮಾತ್ರ ಉಳಿದಿದ್ದಾರೆ.


ಅದರ ಚಿಗುರುಗಳ ಕೊನೆಯನ್ನು ಕಿತ್ತು, ವ್ಯಾಪಾರದ ದೇಶಕ್ಕೆ ತೆಗೆದುಕೊಂಡುಹೋಗಿ ವರ್ತಕರಿರುವ ನಗರದಲ್ಲಿ ಇಟ್ಟಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು