Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 24:17 - ಕನ್ನಡ ಸಮಕಾಲಿಕ ಅನುವಾದ

17 ಬಾಬಿಲೋನಿನ ಅರಸನು ಯೆಹೋಯಾಖೀನನ ಚಿಕ್ಕಪ್ಪನಾದ ಮತ್ತನ್ಯನನ್ನು ಅವನಿಗೆ ಬದಲಾಗಿ ಅರಸನನ್ನಾಗಿ ಮಾಡಿ, ಅವನಿಗೆ ಚಿದ್ಕೀಯನೆಂದು ಬೇರೆ ಹೆಸರನ್ನಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಬಾಬೆಲಿನ ಅರಸನು ಯೆಹೋಯಾಖೀನನಿಗೆ ಬದಲಾಗಿ ಅವನ ಚಿಕ್ಕಪ್ಪನಾದ ಮತ್ತನ್ಯ ಎಂಬುವವನನ್ನು ಅರಸನನ್ನಾಗಿ ನೇಮಿಸಿ ಅವನಿಗೆ ಚಿದ್ಕೀಯನೆಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಬಾಬಿಲೋನಿನ ಅರಸನು ಯೆಹೋಯಾಖೀನನಿಗೆ ಬದಲಾಗಿ ಅವನ ಚಿಕ್ಕಪ್ಪನಾದ ಮತ್ತನ್ಯ ಎಂಬುವನನ್ನು ಅರಸನನ್ನಾಗಿ ನೇಮಿಸಿ ಅವನಿಗೆ ‘ಚಿದ್ಕೀಯ’ ಎಂಬ ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಬಾಬೆಲಿನ ಅರಸನು ಯೆಹೋಯಾಖೀನನಿಗೆ ಬದಲಾಗಿ ಅವನ ಚಿಕ್ಕಪ್ಪನಾದ ಮತ್ತನ್ಯ ಎಂಬವನನ್ನು ಅರಸನನ್ನಾಗಿ ನೇವಿುಸಿ ಅವನಿಗೆ ಚಿದ್ಕೀಯ ಎಂಬ ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಬಾಬಿಲೋನ್ ರಾಜನು ಮತ್ತನ್ಯನನ್ನು ಹೊಸ ರಾಜನನ್ನಾಗಿ ನೇಮಿಸಿದನು. ಅವನು ಯೆಹೋಯಾಖೀನನ ಸ್ಥಳವನ್ನು ಪಡೆದನು. ಮತ್ತನ್ಯನು ಯೆಹೋಯಾಖೀನನ ಚಿಕ್ಕಪ್ಪ. ಬಾಬಿಲೋನ್ ರಾಜನು ಮತ್ತನ್ಯನ ಹೆಸರನ್ನು ಚಿದ್ಕೀಯ ಎಂದು ಬದಲಾಯಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 24:17
13 ತಿಳಿವುಗಳ ಹೋಲಿಕೆ  

ಯೋಷೀಯನ ಮಗ ಚಿದ್ಕೀಯನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಂದ ಯೆಹೂದ ದೇಶದ ಅರಸನನ್ನಾಗಿ ಮಾಡಿದನು. ಅವನು ಯೆಹೋಯಾಕೀಮನ ಮಗ ಕೊನ್ಯನಿಗೆ ಬದಲಾಗಿ, ಅರಸನಾಗಿ ಆಳಿದನು.


ಇದಲ್ಲದೆ ಈಜಿಪ್ಟ್ ಅರಸನು ಯೆಹೋವಾಹಾಜನ ಸಹೋದರನಾದ ಎಲ್ಯಾಕೀಮನನ್ನು ಯೆಹೂದದ ಮತ್ತು ಯೆರೂಸಲೇಮಿನ ಮೇಲೆ ಅರಸನನ್ನಾಗಿ ಮಾಡಿ, ಅವನಿಗೆ ಯೆಹೋಯಾಕೀಮನೆಂಬ ಹೆಸರನ್ನಿಟ್ಟನು. ನೆಕೋವನು ಎಲ್ಯಾಕೀಮನ ಸಹೋದರನಾದ ಯೆಹೋವಾಹಾಜನನ್ನು ತೆಗೆದುಕೊಂಡು ಈಜಿಪ್ಟಿಗೆ ಒಯ್ದನು.


ಫರೋಹ ನೆಕೋವನು ಯೋಷೀಯನಿಗೆ ಬದಲಾಗಿ ಅವನ ಮಗನಾದ ಎಲ್ಯಾಕೀಮನನ್ನು ಅರಸನನ್ನಾಗಿ ಮಾಡಿ, ಅವನಿಗೆ ಯೆಹೋಯಾಕೀಮನೆಂಬ ಹೆಸರನ್ನಿಟ್ಟನು. ಯೆಹೋವಾಹಾಜನನ್ನು ತೆಗೆದುಕೊಂಡು ಈಜಿಪ್ಟಿಗೆ ಒಯ್ದನು. ಯೆಹೋವಾಹಾಜನು ಅಲ್ಲೇ ಮರಣಹೊಂದಿದನು.


ಚಿದ್ಕೀಯನು ಅರಸನಾದಾಗ ಇಪ್ಪತ್ತೊಂದು ವರ್ಷದವನಾಗಿದ್ದು; ಅವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಅವನ ತಾಯಿ ಲಿಬ್ನದ ಯೆರೆಮೀಯನ ಮಗಳಾದ ಹಮೂಟಲ್.


ಅಲ್ಲದೆ ಯೆಹೂದದ ಅರಸನೂ ಯೋಷೀಯನ ಮಗನೂ ಆದ ಯೆಹೋಯಾಕೀಮನ ಕಾಲದಿಂದ ಯೆಹೂದದ ಅರಸನೂ ಯೋಷೀಯನ ಮಗನೂ ಆದ ಚಿದ್ಕೀಯನ ಕಾಲದ ಆಳ್ವಿಕೆಯ ಹನ್ನೊಂದನೆಯ ವರ್ಷದ ಐದನೆಯ ತಿಂಗಳಿನಲ್ಲಿ ಯೆರೂಸಲೇಮಿನವರು ಸೆರೆ ಹೋಗುವ ತನಕ ಯೆಹೋವ ದೇವರ ವಾಕ್ಯವು ಒದಗುತ್ತಿತ್ತು.


ಅರಸನಾದ ಚಿದ್ಕೀಯನು ಮಲ್ಕೀಯನ ಮಗ ಪಷ್ಹೂರನನ್ನೂ, ಮಾಸೇಯನ ಮಗನಾದ ಯಾಜಕನಾದ ಚೆಫನ್ಯನನ್ನೂ ಯೆರೆಮೀಯನ ಬಳಿಗೆ ಕಳುಹಿಸಿ,


ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಆರಂಭದಲ್ಲಿ ಪ್ರವಾದಿಯಾದ ಯೆರೆಮೀಯನಿಗೆ ಯೆಹೋವ ದೇವರಿಂದ ಏಲಾಮಿಗೆ ವಿರೋಧವಾಗಿ ಉಂಟಾದ ವಾಕ್ಯವು:


ಅರಸನ ಸಂತಾನದವರನ್ನು ಕರೆದುಕೊಂಡು ಅವರ ಸಂಗಡ ಒಡಂಬಡಿಕೆ ಮಾಡಿ, ಅವನಿಂದ ಪ್ರಮಾಣ ಮಾಡಿಸಿ, ದೇಶದ ಬಲಿಷ್ಠರನ್ನು ತೆಗೆದುಕೊಂಡು ಹೋಗಿದ್ದಾನೆ.


“ ‘ನಿಶ್ಚಯವಾಗಿ ಯಾವನಿಂದ ಅರಸನಾಗಿ ಆಯ್ಕೆಗೊಂಡನೋ ಎಂದರೆ ಯಾವನ ಪ್ರಮಾಣವನ್ನು ತಿರಸ್ಕರಿಸಿದನೋ, ಯಾವನ ಒಡಂಬಡಿಕೆಯನ್ನು ಮೀರಿದನೋ, ನನ್ನ ಜೀವದಾಣೆ ಅವನು ಇರುವಲ್ಲಿಯೇ ಬಾಬಿಲೋನಿನ ಮಧ್ಯದಲ್ಲಿ ಇವನು ಸಾಯುವನು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ಆಗ ಬಾಬಿಲೋನಿನವರು ಅವರ ಪ್ರೀತಿಯ ಹಾಸಿಗೆಯ ಮೇಲೆ ಬಂದು ಆಕೆಯನ್ನು ವ್ಯಭಿಚಾರದಿಂದ ಅಪವಿತ್ರಪಡಿಸಿದರು. ಅವಳು ಅವರಿಂದ ಅಪವಿತ್ರಳಾದ ಮೇಲೆ ಅವರ ಬಗ್ಗೆ ಇವಳಿಗೇ ಜಿಗುಪ್ಸೆ ಹುಟ್ಟಿತು.


ಇವರಿಗೆ ಕಂಚುಕಿಯರ ಯಜಮಾನನು ದಾನಿಯೇಲನಿಗೆ ಬೇಲ್ತೆಶಚ್ಚರ್ ಎಂದೂ, ಹನನ್ಯನಿಗೆ ಶದ್ರಕ್ ಎಂದೂ, ಮೀಶಾಯೇಲನಿಗೆ ಮೇಶಕ್ ಎಂದೂ, ಅಜರ್ಯನಿಗೆ ಅಬೇದ್‌ನೆಗೋ ಎಂಬ ಹೆಸರಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು