Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 25:10 - ಕನ್ನಡ ಸಮಕಾಲಿಕ ಅನುವಾದ

10 ಕಾವಲುಗಾರರ ಅಧಿಪತಿಯ ಸಂಗಡದಲ್ಲಿದ್ದ ಬಾಬಿಲೋನಿಯರ ಸೈನ್ಯದವರೆಲ್ಲರೂ ಯೆರೂಸಲೇಮಿನ ಸುತ್ತಲೂ ಇರುವ ಗೋಡೆಗಳನ್ನು ಕೆಡವಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವನ ಜೊತೆಯಲ್ಲಿ ಬಂದಿದ್ದ ಕಸ್ದೀಯರ ಸೈನ್ಯದವರು ಯೆರೂಸಲೇಮಿನ ಸುತ್ತುಗೋಡೆಗಳನ್ನು ಕೆಡವಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅವನ ಜೊತೆಯಲ್ಲಿ ಬಂದಿದ್ದ ಬಾಬಿಲೋನಿಯದ ಸೈನ್ಯದವರು ಜೆರುಸಲೇಮಿನ ಸುತ್ತುಗೋಡೆಗಳನ್ನೆಲ್ಲ ಕೆಡವಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅವನ ಜೊತೆಯಲ್ಲಿ ಬಂದಿದ್ದ ಕಸ್ದೀಯ ಸೈನ್ಯದವರು ಯೆರೂಸಲೇವಿುನ ಸುತ್ತುಗೋಡೆಗಳನ್ನು ಕೆಡವಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಂತರ ನೆಬೂಜರದಾನನೊಂದಿಗಿದ್ದ ಬಾಬಿಲೋನ್ ಸೈನ್ಯವು ಜೆರುಸಲೇಮಿನ ಸುತ್ತಲೂ ಇದ್ದ ಗೋಡೆಯನ್ನು ಕೆಡವಿಹಾಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 25:10
9 ತಿಳಿವುಗಳ ಹೋಲಿಕೆ  

ಅವರು ನನಗೆ, “ಸೆರೆಯಿಂದ ತಪ್ಪಿಸಿಕೊಂಡು ಈಗ ಆ ನಾಡಿನಲ್ಲಿ ವಾಸಿಸುತ್ತಿರುವವರು ಮಹಾ ಕಷ್ಟ ನಿಂದೆಗಳಿಗೆ ಒಳಗಾಗಿದ್ದಾರೆ. ಯೆರೂಸಲೇಮಿನ ಪೌಳಿಗೋಡೆಯನ್ನು ಕೆಡವಲಾಗಿದೆ. ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿವೆ,” ಎಂದು ಹೇಳಿದರು.


ಅರಮನೆಯನ್ನೂ, ಜನರ ಮನೆಗಳನ್ನೂ, ಬಾಬಿಲೋನಿಯರು ಬೆಂಕಿಯಿಂದ ಸುಟ್ಟರು. ಯೆರೂಸಲೇಮಿನ ಗೋಡೆಗಳನ್ನು ಕೆಡವಿಬಿಟ್ಟರು.


ಅವಳ ದ್ರಾಕ್ಷಿತೋಟಗಳ ಮೂಲಕ ಹೋಗಿ ಅವುಗಳನ್ನು ಹಾಳುಮಾಡಿರಿ. ಆದರೆ ಸಂಪೂರ್ಣವಾಗಿ ನಾಶಮಾಡಬೇಡಿರಿ. ಅದರ ರೆಂಬೆಗಳನ್ನು ತೆಗೆದುಹಾಕಿರಿ ಏಕೆಂದರೆ ಅವು ಯೆಹೋವ ದೇವರಿಗೆ ಸೇರಿದವುಗಳಲ್ಲ.


ಆಗ ಇಸ್ರಾಯೇಲಿನ ಅರಸನಾದ ಯೋವಾಷನು ಅಹಜ್ಯನ ಮೊಮ್ಮಗನೂ ಯೆಹೋವಾಷನ ಮಗನೂ ಯೆಹೂದದ ಅರಸನೂ ಆದ ಅಮಚ್ಯನನ್ನು ಬೇತ್ ಷೆಮೆಷ್ ಬಳಿಯಲ್ಲಿ ವಶಪಡಿಸಿಕೊಂಡನು. ಅನಂತರ ಅವನನ್ನು ಯೆರೂಸಲೇಮಿಗೆ ತೆಗೆದುಕೊಂಡು, ಎಫ್ರಾಯೀಮಿನ ಬಾಗಿಲು ಮೊದಲುಗೊಂಡು ಮೂಲೆಯ ಬಾಗಿಲವರೆಗೂ, ಆರುನೂರು ಅಡಿ ಉದ್ದದ ಯೆರೂಸಲೇಮಿನ ಗೋಡೆಯನ್ನು ಕೆಡವಿಬಿಟ್ಟನು.


ದೇವರೇ, ಜನಾಂಗಗಳು ನಿಮ್ಮ ಬಾಧ್ಯತೆಗೆ ಬಂದು, ನಿಮ್ಮ ಪರಿಶುದ್ಧ ಮಂದಿರವನ್ನು ಅಪವಿತ್ರ ಮಾಡಿ, ಯೆರೂಸಲೇಮನ್ನು ಹಾಳು ದಿಬ್ಬಗಳಾಗಿ ಮಾಡಿದ್ದಾರೆ.


ನಮ್ಮ ಎತ್ತುಗಳು ಪ್ರಯಾಸ ಪಡುವುದಕ್ಕೆ ಬಲವುಳ್ಳವುಗಳಾಗಲಿ; ವೈರಿಗಳು ಒಳಗೆ ನುಗ್ಗುವುದಾಗಲಿ, ನಮ್ಮವರನ್ನು ಸೆರೆ ಹಿಡಿಯುವುದಾಗಲಿ ಇರುವುದಿಲ್ಲ. ನಮ್ಮ ಬೀದಿಗಳಲ್ಲಿ ಗೋಳಾಟವು ಇಲ್ಲದಿರಲಿ.


ನಮ್ಮ ಸೆರೆಯ ಹನ್ನೆರಡನೆಯ ವರ್ಷದ ಹತ್ತನೆಯ ತಿಂಗಳಿನ ಐದನೆಯ ದಿನದಲ್ಲಿ, ಯೆರೂಸಲೇಮಿನಿಂದ ತಪ್ಪಿಸಿಕೊಂಡವನೊಬ್ಬನು ನನ್ನ ಬಳಿಗೆ ಬಂದು, “ಪಟ್ಟಣವು ನಾಶವಾಗಿದೆ,” ಎಂದು ಹೇಳಿದನು.


ಅವರು ನಿಮ್ಮ ಪಶುಗಳ ಫಲವನ್ನೂ ನಿಮ್ಮ ಭೂಮಿಯ ಫಲವನ್ನೂ ನೀವು ನಾಶವಾಗುವವರೆಗೆ ತಿಂದುಬಿಡುವರು. ಅವರು ಧಾನ್ಯವನ್ನೂ, ಹೊಸ ದ್ರಾಕ್ಷಾರಸವನ್ನೂ, ಓಲಿವ್ ಎಣ್ಣೆಯನ್ನೂ, ಪಶುಗಳ ಅಭಿವೃದ್ಧಿಯನ್ನೂ, ಕುರಿಗಳ ಮಂದೆಗಳನ್ನೂ ಉಳಿಸದೆ ನಿಮ್ಮನ್ನು ಸಂಪೂರ್ಣವಾಗಿ ನಾಶಮಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು