Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 25:11 - ಕನ್ನಡ ಸಮಕಾಲಿಕ ಅನುವಾದ

11 ಕಾವಲಿನ ಅಧಿಪತಿಯಾದ ನೆಬೂಜರದಾನನು ಪಟ್ಟಣದಲ್ಲಿ ಉಳಿದ ಜನರನ್ನೂ, ಬಾಬಿಲೋನಿನ ಅರಸನಿಗೆ ಮರೆಹೊಕ್ಕವರನ್ನೂ, ಬೇರೆ ಎಲ್ಲಾ ಜನರನ್ನೂ ಸೆರೆಯಾಗಿ ಒಯ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಪಟ್ಟಣದಲ್ಲಿ ಉಳಿದವರನ್ನೂ ಮೊದಲೇ ಬಾಬೆಲಿನ ಅರಸನ ಮರೆಹೊಕ್ಕವರನ್ನೂ ಒಟ್ಟಾರೆ ಎಲ್ಲಾ ಜನರನ್ನು ಸೆರೆಹಿಡಿದೊಯ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ರಕ್ಷಾದಳದ ಅಧಿಪತಿಯಾದ ನೆಬೂಜರದಾನನು ನಗರದಲ್ಲಿ ಉಳಿದವರನ್ನು, ಮೊದಲೇ ಬಾಬಿಲೋನಿನ ಅರಸನಿಗೆ ಮರೆಹೊಕ್ಕವರನ್ನು ಹಾಗು ಬೇರೆ ಜನರೆಲ್ಲರನ್ನು ಸೆರೆಗೆ ಒಯ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಪಟ್ಟಣದಲ್ಲಿ ಉಳಿದವರನ್ನೂ ಮೊದಲೇ ಬಾಬೆಲಿನ ಅರಸನ ಮರೆಹೊಕ್ಕವರನ್ನೂ ಬೇರೆ ಎಲ್ಲಾ ಜನರನ್ನೂ ಸೆರೆಯೊಯ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆ ನಗರದಲ್ಲಿ ಉಳಿದಿದ್ದ ಜನರನ್ನೆಲ್ಲಾ ನೆಬೂಜರದಾನನು ಸೆರೆಹಿಡಿದನು. ರಾಜನಾದ ನೆಬೂಕದ್ನೆಚ್ಚರನಿಗೆ ವಿಧೇಯರಾಗಿರಲು ಕೆಲವು ಜನರು ಒಪ್ಪಿದರು. ಆದರೆ ನೆಬೂಜರದಾನನು ಆ ಜನರನ್ನೆಲ್ಲಾ ಸೆರೆಹಿಡಿದನು. ಅವನು ನಗರದಲ್ಲಿದ್ದ ಪ್ರತಿಯೊಬ್ಬರನ್ನೂ ಕರೆದೊಯ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 25:11
15 ತಿಳಿವುಗಳ ಹೋಲಿಕೆ  

ಅದರ ಮೂರನೆಯ ಒಂದು ಪಾಲನ್ನು ನಗರದ ಮಧ್ಯದಲ್ಲಿ ಮುತ್ತಿಗೆಯ ದಿವಸಗಳು ಮುಗಿದ ಮೇಲೆ ಬೆಂಕಿಯಿಂದ ಸುಡಬೇಕು. ಮೂರನೆಯ ಒಂದು ಪಾಲನ್ನು ತೆಗೆದುಕೊಂಡು ಖಡ್ಗದಿಂದ ಸುತ್ತಲೂ ಕಡಿಯಬೇಕು. ಉಳಿದ ಮೂರನೆಯ ಪಾಲನ್ನು ಗಾಳಿಗೆ ಚೆಲ್ಲಬೇಕು ಮತ್ತು ನಾನು ಅವುಗಳ ಹಿಂದೆ ಖಡ್ಗವನ್ನು ಬೀಸುವೆನು.


ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಹತ್ತೊಂಬತ್ತನೆಯ ವರ್ಷದ ಐದನೆಯ ತಿಂಗಳಿನ, ಹತ್ತನೆಯ ದಿನದಲ್ಲಿ ಬಾಬಿಲೋನಿನ ಅರಸನ ಸೇವಕನೂ, ಕಾವಲಿನ ಅಧಿಪತಿಯೂ ಆಗಿದ್ದ ನೆಬೂಜರದಾನನು ಯೆರೂಸಲೇಮಿಗೆ ಬಂದು,


ಆಗ ಪಟ್ಟಣದೊಳಗೆ ಉಳಿದವರನ್ನೂ, ಮೊದಲೇ ತನ್ನನ್ನು ಮೊರೆ ಹೋದವರನ್ನೂ, ಇತರ ಸಮಸ್ತ ಜನರನ್ನೂ ಕಾವಲಿನವರ ಅಧಿಪತಿಯಾದ ನೆಬೂಜರದಾನನು ಬಾಬಿಲೋನಿಗೆ ಸೆರೆಹಿಡಿದು ಕರೆದುಕೊಂಡು ಹೋದನು.


ಇದಲ್ಲದೆ ಖಡ್ಗದಿಂದ ತಪ್ಪಿಸಿಕೊಂಡವರನ್ನು ಅವನು ಬಾಬಿಲೋನಿಗೆ ಸೆರೆಹಿಡಿದು ಕರೆದುಕೊಂಡು ಹೋದನು. ಅವರು ಅಲ್ಲಿ ಪಾರಸಿಯ ಸಾಮ್ರಾಜ್ಯ ಸ್ಥಾಪಿತವಾಗುವವರೆಗೆ ಅವರು ಅವನಿಗೂ ಅವನ ಮಕ್ಕಳಿಗೂ ಸೇವಕರಾಗಿದ್ದರು.


ಯೆಹೋವ ದೇವರು ನಿಮ್ಮನ್ನೂ, ನೀವು ನಿಮ್ಮ ಮೇಲೆ ನೇಮಿಸಿಕೊಳ್ಳುವ ಅರಸನನ್ನೂ, ನೀವೂ, ನಿಮ್ಮ ಪಿತೃಗಳೂ ಅರಿಯದ ಜನಾಂಗದ ಬಳಿಗೆ ಹೋಗುವಂತೆ ಮಾಡುವರು. ಅಲ್ಲಿ ಮರವೂ, ಕಲ್ಲೂ ಆಗಿರುವ ಬೇರೆ ದೇವರುಗಳನ್ನೂ ನೀವು ಪೂಜಿಸುವಿರಿ.


ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಂದ, ಬಾಬಿಲೋನಿಗೆ ಸೆರೆಯಾಗಿ ಹೋಗಿ, ಅನಂತರ ಬಂಧನದಿಂದ ಬಿಡುಗಡೆಯಾಗಿ ಯೆರೂಸಲೇಮಿಗೂ, ಯೆಹೂದಕ್ಕೂ, ತಮ್ಮ ತಮ್ಮ ಪಟ್ಟಣಗಳಿಗೂ


ನಮ್ಮ ಎತ್ತುಗಳು ಪ್ರಯಾಸ ಪಡುವುದಕ್ಕೆ ಬಲವುಳ್ಳವುಗಳಾಗಲಿ; ವೈರಿಗಳು ಒಳಗೆ ನುಗ್ಗುವುದಾಗಲಿ, ನಮ್ಮವರನ್ನು ಸೆರೆ ಹಿಡಿಯುವುದಾಗಲಿ ಇರುವುದಿಲ್ಲ. ನಮ್ಮ ಬೀದಿಗಳಲ್ಲಿ ಗೋಳಾಟವು ಇಲ್ಲದಿರಲಿ.


ಆದ್ದರಿಂದ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ಈ ಪಟ್ಟಣವನ್ನು ಬಾಬಿಲೋನಿಯರ ಕೈಯಲ್ಲಿಯೂ, ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿಯೂ ಒಪ್ಪಿಸುತ್ತೇನೆ. ಅವನು ಅದನ್ನು ವಶಪಡಿಸಿಕೊಳ್ಳುವನು.


ಕಾವಲಿನ ಅಧಿಪತಿಯಾದ ನೆಬೂಜರದಾನನು ಜನರಲ್ಲಿ ಬಡವರಾದ ಕೆಲವರನ್ನೂ, ಪಟ್ಟಣದಲ್ಲಿ ಉಳಿದ ಜನರನ್ನೂ, ಬಾಬಿಲೋನಿನ ಅರಸನಿಗೆ ಮರೆಹೊಕ್ಕವರನ್ನೂ, ಬೇರೆ ಎಲ್ಲಾ ಜನರನ್ನೂ ಸೆರೆಯಾಗಿ ಒಯ್ದನು.


ನೆಬೂಕದ್ನೆಚ್ಚರನು ಇಪ್ಪತ್ತು ಮೂರನೆಯ ವರ್ಷದಲ್ಲಿ ಕಾವಲಿನ ಅಧಿಪತಿಯಾದ ನೆಬೂಜರದಾನನು 745 ಮಂದಿ ಯೆಹೂದ್ಯರನ್ನು ಸೆರೆಗೊಯ್ದನು. ಹೀಗೆ ಸೆರೆಯಾದವರ ಮೊತ್ತ 4,600 ಮಂದಿ.


ಅವನ ಸೈನ್ಯಗಳೆಲ್ಲಾ ಖಡ್ಗದಿಂದ ಬೀಳುವುದು; ಉಳಿದವರು ಎಲ್ಲಾ ದಿಕ್ಕುಗಳಿಗೆ ಚದರಿಹೋಗುವರು. ಆಗ ಯೆಹೋವ ದೇವರಾದ ನಾನೇ ಅದನ್ನು ಹೇಳಿದೆನೆಂದು ನಿಮಗೆ ತಿಳಿಯುವುದು.


ಅವರಿಗೆ ಹೀಗೆ ಹೇಳು, ‘ನಾನು ನಿಮಗೆ ಗುರುತಾಗಿದ್ದೇನೆ.’ “ನಾನು ಮಾಡಿದ ಹಾಗೆ ಅವರಿಗೆ ಮಾಡಲಾಗುವುದು. ಅವರು ಗುಲಾಮರಾಗಿ ಸೆರೆಗೆ ಹೋಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು