Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 25:21 - ಕನ್ನಡ ಸಮಕಾಲಿಕ ಅನುವಾದ

21 ಬಾಬಿಲೋನಿನ ಅರಸನು ಹಮಾತಿನ ರಿಬ್ಲದಲ್ಲಿ ಅವರನ್ನು ಕೊಂದುಹಾಕಿಸಿದನು. ಈ ಪ್ರಕಾರ ಯೆಹೂದ್ಯರು ಸೆರೆಯಾಳುಗಳಾಗಿ ತಮ್ಮ ದೇಶವನ್ನು ಬಿಟ್ಟುಹೋಗಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಬಾಬೆಲಿನ ಅರಸನು ಹಮಾತ್ ಪ್ರದೇಶದ ಅವರನ್ನು ಕತ್ತಿಯಿಂದ ರಿಬ್ಲದಲ್ಲಿ ಕೊಲ್ಲಿಸಿದನು. ಹೀಗೆ ಯೆಹೂದ್ಯರು ಸೆರೆಯವರಾಗಿ ತಮ್ಮ ದೇಶವನ್ನು ಬಿಟ್ಟು ಹೋಗಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅವನು ಅವರನ್ನು ಅಲ್ಲಿಯೇ ಕೊಲ್ಲಿಸಿದನು. ಹೀಗೆ ಯೆಹೂದ್ಯರು ಸೆರೆಯಾಳುಗಳಾಗಿ ತಮ್ಮ ನಾಡನ್ನೇ ಬಿಟ್ಟು ಹೋಗಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅವನು ಇವರನ್ನು ಅಲ್ಲಿಯೇ ಕೊಲ್ಲಿಸಿದನು. ಹೀಗೆ ಯೆಹೂದ್ಯರು ಸೆರೆಯವರಾಗಿ ತಮ್ಮ ದೇಶವನ್ನು ಬಿಟ್ಟು ಹೋಗಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಬಾಬಿಲೋನ್ ರಾಜನು ಹಮಾತ್ ದೇಶದ ರಿಬ್ಲದಲ್ಲಿ ಅವರನ್ನೆಲ್ಲ ಕೊಂದುಹಾಕಿದನು. ಹೀಗೆ ಯೆಹೂದದ ಜನರನ್ನೆಲ್ಲ ಅವರ ದೇಶದಿಂದ ಸೆರೆಯಾಳುಗಳನ್ನಾಗಿಸಿ ಹಿಡಿದೊಯ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 25:21
18 ತಿಳಿವುಗಳ ಹೋಲಿಕೆ  

ಯೆಹೋವ ದೇವರು, “ನಾನು ಇಸ್ರಾಯೇಲನ್ನು ತೆಗೆದುಹಾಕಿದ ಹಾಗೆ ಯೆಹೂದವನ್ನು ಸಹ ನನ್ನ ಸಮ್ಮುಖದಿಂದ ತೆಗೆದುಹಾಕುವೆನು. ಇದಲ್ಲದೆ ನಾನು ಆಯ್ದುಕೊಂಡ ಯೆರೂಸಲೇಮ್ ಪಟ್ಟಣವನ್ನೂ, ‘ನನ್ನ ಹೆಸರು ಅಲ್ಲಿರುವುದು,’ ಎಂದು ನಾನು ಹೇಳಿದ ಆಲಯವನ್ನೂ ತೆಗೆದುಬಿಡುವೆನು,” ಎಂದು ಹೇಳಿದರು.


ಇದಲ್ಲದೆ ಯೆಹೋವ ದೇವರು ನಿಮ್ಮನ್ನು ಭೂಮಿಯ ಈ ಮೇರೆಯಿಂದ ಆ ಮೇರೆಯವರೆಗೂ ಎಲ್ಲಾ ಜನಾಂಗಗಳಲ್ಲಿ ಚದರಿಸುವರು. ಅಲ್ಲಿ ನೀವೂ ನಿಮ್ಮ ಪಿತೃಗಳು ತಿಳಿಯದಂಥ ಮರವೂ ಕಲ್ಲೂ ಆಗಿರುವಂಥ ಬೇರೆ ದೇವರುಗಳನ್ನು ಆರಾಧಿಸುವಿರಿ.


ಆದ್ದರಿಂದ ದಮಸ್ಕದ ಆಚೆ ನಿಮ್ಮನ್ನು ಸೆರೆಯಾಳುಗಳಾಗಿ ಕಳುಹಿಸುವೆ, ಎಂದು ಸರ್ವಶಕ್ತರಾದ ದೇವರೆಂದು ಹೆಸರುಗೊಂಡ ಯೆಹೋವ ದೇವರು ಹೇಳುತ್ತಾರೆ.


“ ‘ಯೆಹೋವ ದೇವರಾದ ನಾನೇ ಇದನ್ನು ಹೇಳಿದ್ದೇನೆ. ನಾನು ಕೆಲಸ ಮಾಡುವ ಸಮಯ ಬಂದಿದೆ. ನಾನು ಅದನ್ನು ಮಾಡದೆ ಬಿಡುವುದಿಲ್ಲ. ಕಟಾಕ್ಷ ತೋರಿಸುವುದಿಲ್ಲ. ಹಿಂದೆಗೆಯೆನು. ನಿನ್ನ ಮಾರ್ಗಗಳ ಪ್ರಕಾರವೂ ನಿನ್ನ ಕ್ರಿಯೆಗಳ ಪ್ರಕಾರವೂ ನಿನಗೆ ನ್ಯಾಯತೀರಿಸುವೆನೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ”


ಆದ್ದರಿಂದ ಯೆಹೋವ ದೇವರು ಇಸ್ರಾಯೇಲಿನ ಸಂತತಿಯನ್ನೆಲ್ಲಾ ಅಲಕ್ಷ್ಯಮಾಡಿ, ಅವರನ್ನು ಕುಂದಿಸಿ, ಅವರನ್ನು ತಮ್ಮ ಸಮ್ಮುಖದಿಂದ ತಳ್ಳಿಬಿಡುವವರೆಗೆ ಅವರನ್ನು ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟರು.


ಯೆಹೋವ ದೇವರು ನಿಮ್ಮನ್ನೂ, ನೀವು ನಿಮ್ಮ ಮೇಲೆ ನೇಮಿಸಿಕೊಳ್ಳುವ ಅರಸನನ್ನೂ, ನೀವೂ, ನಿಮ್ಮ ಪಿತೃಗಳೂ ಅರಿಯದ ಜನಾಂಗದ ಬಳಿಗೆ ಹೋಗುವಂತೆ ಮಾಡುವರು. ಅಲ್ಲಿ ಮರವೂ, ಕಲ್ಲೂ ಆಗಿರುವ ಬೇರೆ ದೇವರುಗಳನ್ನೂ ನೀವು ಪೂಜಿಸುವಿರಿ.


ನಾನು ಈ ದಿನ ಆಕಾಶವನ್ನೂ, ಭೂಮಿಯನ್ನೂ ಸಾಕ್ಷಿಗೆ ಕರೆದು, ನಿಮಗೆ ಹೇಳುವುದೇನೆಂದರೆ, ನೀವು ಯೊರ್ದನನ್ನು ದಾಟಿ ಸ್ವಾಧೀನಪಡಿಸಿಕೊಳ್ಳುವ ದೇಶದಲ್ಲಿಂದ ಬೇಗನೆ ಹಾಳಾಗಿ ಹೋಗುವಿರಿ. ನೀವು ಬಹು ದಿವಸ ಇರದೆ, ಸಂಪೂರ್ಣವಾಗಿ ನಶಿಸುವಿರಿ.


“ಪಾಪ ಮಾಡದವನು ಯಾವನೂ ಇಲ್ಲವಲ್ಲಾ. ಆದ್ದರಿಂದ ಅವರು ನಿಮಗೆ ವಿರೋಧವಾಗಿ ಪಾಪಮಾಡಲು, ನೀವು ಅವರ ಮೇಲೆ ಕೋಪಿಸಿಕೊಂಡು ದೂರವಾದರೂ, ಸಮೀಪವಾದರೂ ಶತ್ರುವಿನ ದೇಶಕ್ಕೆ ಅವರು ಸೆರೆಯಾಗಿ ಹೋಗುವಂತೆ ನೀವು ಅವರನ್ನು ಶತ್ರುವಿನ ಕೈಯಲ್ಲಿ ಒಪ್ಪಿಸಿದರೆ,


ಬಾಬಿಲೋನಿನ ಅರಸನು ಹಮಾತಿನ ರಿಬ್ಲದಲ್ಲಿ ಅವರನ್ನು ಕೊಂದುಹಾಕಿಸಿದನು. ಈ ಪ್ರಕಾರ ಯೆಹೂದ್ಯರು ಸೆರೆಯಾಳುಗಳಾಗಿ ತಮ್ಮ ದೇಶವನ್ನು ಬಿಟ್ಟುಹೋಗಬೇಕಾಯಿತು.


ಆದ್ದರಿಂದ ಯೆಹೋವ ದೇವರು ಇಸ್ರಾಯೇಲ್ ದೇಶದ ಮೇಲೆ ಕೋಪಗೊಂಡು ಈ ಗ್ರಂಥದಲ್ಲಿ ಬರೆದಿರುವ ಶಾಪಗಳನ್ನು ಅವರ ಮೇಲೆ ಬರಮಾಡಿದ್ದಾರೆ.


ಯೆಹೋವ ದೇವರು ಪ್ರವಾದಿಗಳಾದ ತಮ್ಮ ಸೇವಕರ ಮುಖಾಂತರ ಎಚ್ಚರಿಸಿದ ಹಾಗೆ, ಇಸ್ರಾಯೇಲನ್ನು ದೇವರು ತಮ್ಮ ಸಮ್ಮುಖದಿಂದ ತೆಗೆದುಹಾಕಿದರು. ಹೀಗೆ ಇಸ್ರಾಯೇಲರು ಬಹು ಕಾಲದವರೆಗೂ ತಮ್ಮ ದೇಶದಿಂದ ಅಸ್ಸೀರಿಯ ದೇಶಕ್ಕೆ ಸೆರೆಯಾಗಿ ಇರಬೇಕಾಯಿತು. ಅವರು ಇಂದಿನವರೆಗೂ ಅಲ್ಲಿಯೇ ಇದ್ದಾರೆ.


ನೆಬೂಕದ್ನೆಚ್ಚರನು ಯೆಹೋಯಾಖೀನನನ್ನು ಬಾಬಿಲೋನಿಗೆ ಸೆರೆಯಾಗಿ ಒಯ್ದನು. ಅರಸನ ತಾಯಿಯನ್ನೂ, ಅರಸನ ಹೆಂಡತಿಯರನ್ನೂ, ಅವನ ಅಧಿಕಾರಿಗಳನ್ನೂ, ದೇಶದ ಪ್ರತಿಷ್ಠಿತರನ್ನೂ ಯೆರೂಸಲೇಮಿನಿಂದ ಬಾಬಿಲೋನಿಗೆ ಸೆರೆಯಾಗಿ ಒಯ್ದನು.


ಆದ್ದರಿಂದ ನಾನು ನಿಮ್ಮನ್ನು ಈ ದೇಶದೊಳಗಿಂದ ಬಿಸಾಡಿ, ನಿಮಗೂ, ನಿಮ್ಮ ಪಿತೃಗಳಿಗೂ ತಿಳಿಯದ ದೇಶಕ್ಕೆ ಎಸೆಯುವೆನು. ಅಲ್ಲಿ ನೀವು ರಾತ್ರಿ ಹಗಲು ಬೇರೆ ದೇವರುಗಳಿಗೆ ಸೇವೆ ಮಾಡುವಿರಿ ಮತ್ತು ನಾನು ನಿಮಗೆ ಕನಿಕರ ತೋರಿಸುವುದಿಲ್ಲ.’


ಯೆಹೋವ ದೇವರ ಕೋಪವು ಅವರನ್ನು ಚದುರಿಸಿತು. ಅವರು ಇನ್ನು ಅವರನ್ನು ಲಕ್ಷಿಸುವುದಿಲ್ಲ. ಅವರು ಯಾಜಕರನ್ನು ಗೌರವಿಸಲಿಲ್ಲ. ಅವರು ಹಿರಿಯರಿಗೆ ದಯೆ ತೋರಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು