Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 25:25 - ಕನ್ನಡ ಸಮಕಾಲಿಕ ಅನುವಾದ

25 ಆದರೆ ಏಳನೆಯ ತಿಂಗಳಲ್ಲಿ ಅರಸನ ಸಂತಾನದವನೂ, ಎಲೀಷಾಮನ ಮೊಮ್ಮಗನೂ, ನೆತನ್ಯನ ಮಗನೂ ಆದ ಇಷ್ಮಾಯೇಲನು ಅವನ ಸಂಗಡ ಹತ್ತು ಮಂದಿಯೂ ಬಂದು ಗೆದಲ್ಯನನ್ನೂ, ಅವನ ಸಂಗಡ ಮಿಚ್ಪದಲ್ಲಿದ್ದ ಯೆಹೂದ್ಯರನ್ನೂ, ಬಾಬಿಲೋನಿಯರನ್ನೂ ಕೊಂದುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆದರೆ ಏಳನೆಯ ತಿಂಗಳಿನಲ್ಲಿ ರಾಜವಂಶದವನೂ, ಎಲೀಷಾಮನ ಮೊಮ್ಮಗನೂ, ನೆತನ್ಯನ ಮಗನೂ ಆದ ಇಷ್ಮಾಯೇಲನು ಹತ್ತು ಮಂದಿ ಆಳುಗಳೊಡನೆ ಬಂದು ಗೆದಲ್ಯನನ್ನೂ, ಅವನ ಸಂಗಡ ಮಿಚ್ಪದಲ್ಲಿದ್ದ ಯೆಹೂದ್ಯರನ್ನೂ, ಕಸ್ದೀಯರನ್ನೂ ಸಂಹರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಆದರೆ ಏಳನೆಯ ತಿಂಗಳಿನಲ್ಲಿ ರಾಜವಂಶದವನೂ ಎಲೀಷಮನ ಮೊಮ್ಮಗನೂ ನೆತನ್ಯನ ಮಗನೂ ಆದ ಇಷ್ಮಾಯೇಲನು ಹತ್ತುಮಂದಿ ಆಳುಗಳೊಡನೆ ಬಂದು ಗೆದಲ್ಯನನ್ನು, ಅವನ ಸಂಗಡ ಮಿಚ್ಪದಲ್ಲಿದ್ದ ಯೆಹೂದ್ಯರನ್ನು ಹಾಗು ಬಾಬಿಲೋನಿಯಾದವರನ್ನು ಸಂಹರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆದರೆ ಏಳನೆಯ ತಿಂಗಳಿನಲ್ಲಿ ರಾಜವಂಶದವನೂ ಎಲೀಷಾಮನ ಮೊಮ್ಮಗನೂ ನೆತನ್ಯನ ಮಗನೂ ಆದ ಇಷ್ಮಾಯೇಲನು ಹತ್ತು ಮಂದಿ ಆಳುಗಳೊಡನೆ ಬಂದು ಗೆದಲ್ಯನನ್ನೂ ಅವನ ಸಂಗಡ ವಿುಚ್ಪದಲ್ಲಿದ್ದ ಯೆಹೂದ್ಯರನ್ನೂ ಕಸ್ದೀಯರನ್ನೂ ಸಂಹರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆದರೆ ಏಳನೆಯ ತಿಂಗಳಲ್ಲಿ, ರಾಜನ ಕುಲದವನೂ ಎಲೀಷಾಮನ ಮೊಮ್ಮಗನೂ ನೆತನ್ಯನ ಮಗನೂ ಆದ ಇಷ್ಮಾಯೇಲನು ಹತ್ತು ಜನರೊಂದಿಗೆ ಬಂದು ಗೆದಲ್ಯನನ್ನು ಕೊಂದುಹಾಕಿದನು. ಇಷ್ಮಾಯೇಲ ಮತ್ತು ಅವನ ಜನರು ಮಿಚ್ಛದಲ್ಲಿ ಗೆದಲ್ಯನ ಜೊತೆಗಿದ್ದ ಯೆಹೂದ್ಯರನ್ನು ಮತ್ತು ಬಾಬಿಲೋನಿನವರನ್ನು ಕೊಂದುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 25:25
8 ತಿಳಿವುಗಳ ಹೋಲಿಕೆ  

ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಾಲ್ಕನೆಯ, ಐದನೆಯ, ಏಳನೆಯ, ಹತ್ತನೆಯ ತಿಂಗಳಿನ ಉಪವಾಸವು ಯೆಹೂದದ ಮನೆತನದವರಿಗೆ ಸಂತೋಷಕರ, ಸಂಭ್ರಮ ಕಾಲವೂ, ಆನಂದಕರವಾದ ಹಬ್ಬಗಳೂ ಆಗುವುವು. ಆದರೆ ಸತ್ಯವನ್ನೂ, ಸಮಾಧಾನವನ್ನೂ ಪ್ರೀತಿಸಿರಿ.”


“ದೇಶದ ಜನರೆಲ್ಲರಿಗೂ, ಯಾಜಕರಿಗೂ ಹೀಗೆ ಹೇಳು: ‘ನೀವು ಈ ಎಪ್ಪತ್ತು ವರ್ಷಗಳು ಐದನೆಯ ಮತ್ತು ಏಳನೆಯ ತಿಂಗಳುಗಳಲ್ಲಿ ಉಪವಾಸ ಮಾಡಿ, ದುಃಖಿಸುತ್ತಿದ್ದಾಗ, ಆ ನಿಮ್ಮ ಉಪವಾಸವು ನಿಜವಾಗಿಯೂ ನನಗಾಗಿ ಮಾಡಿದ್ದೀರೋ?


ಆಗ ಕಾರೇಹನ ಮಗ ಯೋಹಾನಾನನು ಮಿಚ್ಪದಲ್ಲಿ ರಹಸ್ಯವಾಗಿ ಗೆದಲ್ಯನ ಸಂಗಡ ಮಾತನಾಡಿ, “ನನ್ನನ್ನು ಹೋಗಗೊಡಿಸು, ನಾನು ನೆತನ್ಯನ ಮಗ ಇಷ್ಮಾಯೇಲನನ್ನು ಯಾರಿಗೂ ತಿಳಿಯದ ಹಾಗೆ ಕೊಂದು ಹಾಕುತ್ತೇನೆ. ಅವನು ನಿನ್ನನ್ನು ಕೊಂದರೆ, ನಿನ್ನ ಬಳಿಗೆ ಕೂಡಿಕೊಳ್ಳುವ ಯೆಹೂದ್ಯರೆಲ್ಲರು ಚದರಿಹೋಗಿ, ಯೆಹೂದದಲ್ಲಿ ಉಳಿದವರು ನಾಶವಾಗುತ್ತಾರಲ್ಲಾ. ಏಕೆ ಹೀಗೆ ಆಗಬೇಕು?” ಎಂದು ವಿಜ್ಞಾಪಿಸಿದನು.


ಅಹಜ್ಯನ ತಾಯಿಯಾದ ಅತಲ್ಯಳು ತನ್ನ ಮಗನು ಸತ್ತು ಹೋದದ್ದನ್ನು ಕಂಡಾಗ, ಅವಳು ಎದ್ದು ರಾಜಸಂತಾನದವರನ್ನೆಲ್ಲಾ ನಾಶಮಾಡಲು ಆರಂಭಿಸಿದಳು.


ಆಗ ಗೆದಲ್ಯನು ಅವರಿಗೂ, ಅವರ ಜನರಿಗೂ ಪ್ರಮಾಣಮಾಡಿ, “ಬಾಬಿಲೋನಿಯದ ಸೈನಿಕರಿಗೆ ಭಯಪಡಬೇಡಿರಿ; ದೇಶದಲ್ಲಿ ವಾಸವಾಗಿದ್ದು, ಬಾಬಿಲೋನಿನ ಅರಸನಿಗೆ ಸೇವೆಮಾಡಿರಿ; ಆಗ ನಿಮಗೆ ಒಳ್ಳೆಯದಾಗುವುದು,” ಎಂದನು.


ಏಳನೆಯ ತಿಂಗಳಲ್ಲಿ ಅರಸನ ಸಂತಾನದವನೂ, ಅರಸನ ಪ್ರಧಾನರಲ್ಲಿ ಒಬ್ಬನೂ ಆದಂಥ ಎಲೀಷಾಮನ ಮೊಮ್ಮಗನೂ, ನೆತನ್ಯನ ಮಗನೂ ಆದ ಇಷ್ಮಾಯೇಲನು ಅವನ ಸಂಗಡ ಹತ್ತು ಮಂದಿಯೂ ಮಿಚ್ಪದಲ್ಲಿದ್ದ ಅಹೀಕಾಮನ ಮಗ ಗೆದಲ್ಯನ ಬಳಿಗೆ ಬಂದರು. ಅವರು ಮಿಚ್ಪದಲ್ಲಿಯೇ ಊಟಮಾಡುತ್ತಿದ್ದಾಗ,


ನೆತನ್ಯನ ಮಗ ಇಷ್ಮಾಯೇಲನು ತನ್ನ ಸಂಗಡ ಇದ್ದ ಹತ್ತು ಜನರಸಹಿತವಾಗಿ ಎದ್ದು, ಬಾಬಿಲೋನಿನ ಅರಸನು ದೇಶದ ಮೇಲೆ ನೇಮಿಸಿದ್ದ ಶಾಫಾನನ ಮೊಮ್ಮಗ ಅಹೀಕಾಮನ ಮಗನಾದ ಗೆದಲ್ಯನನ್ನು ಖಡ್ಗದಿಂದ ಹೊಡೆದು ಕೊಂದುಹಾಕಿದನು.


ಇದಲ್ಲದೆ ಗೆದಲ್ಯನ ಸಂಗಡ ಮಿಚ್ಪದಲ್ಲಿದ್ದ ಅಲ್ಲಿ ಸಿಕ್ಕಿದ ಯೆಹೂದ್ಯರೆಲ್ಲರನ್ನೂ, ಕಸ್ದೀಯರೆಲ್ಲರನ್ನೂ, ಸೈನಿಕರನ್ನೂ ಇಷ್ಮಾಯೇಲನು ಕೊಂದುಹಾಕಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು