Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 3:15 - ಕನ್ನಡ ಸಮಕಾಲಿಕ ಅನುವಾದ

15 ಆದರೆ ಈಗ ವಾದ್ಯಗಾರನನ್ನು ನನ್ನ ಬಳಿಗೆ ಕರೆದುಕೊಂಡು ಬಾ,” ಎಂದನು. ಆ ವಾದ್ಯ ಬಾರಿಸುವವನು ಬಾರಿಸಿದಾಗ, ಯೆಹೋವ ದೇವರ ಕೈ ಎಲೀಷನ ಮೇಲೆ ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಈಗ, ಒಬ್ಬ ವಾದ್ಯಗಾರನನ್ನು ನನ್ನ ಹತ್ತಿರ ಕರೆದುಕೊಂಡು ಬನ್ನಿರಿ” ಎಂದು ಹೇಳಿದನು. ವಾದ್ಯಗಳ ಸ್ವರವನ್ನು ಕೇಳುವಾಗಲೆಲ್ಲಾ ಎಲೀಷನಲ್ಲಿ ಯೆಹೋವನ ಬಲವು ಬರುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಈಗ ಒಬ್ಬ ವಾದ್ಯಗಾರನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿ,” ಎಂದು ಹೇಳಿದನು. (ವಾದ್ಯಗಳ ಸ್ವರವನ್ನು ಕೇಳುವಾಗಲೆಲ್ಲಾ ಎಲೀಷನಲ್ಲಿ ಸರ್ವೇಶ್ವರನ ಶಕ್ತಿ ಪ್ರಾಪ್ತವಾಗುತ್ತಿತ್ತು).

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಈಗ ಒಬ್ಬ ವಾದ್ಯಗಾರನನ್ನು ನನ್ನ ಹತ್ತಿರ ಕರಕೊಂಡು ಬನ್ನಿರಿ ಎಂದು ಹೇಳಿದನು. (ವಾದ್ಯಗಳ ಸ್ವರವನ್ನು ಕೇಳುವಾಗೆಲ್ಲಾ ಎಲೀಷನಲ್ಲಿ ಯೆಹೋವನ ಬಲವು ಬರುತ್ತಿತ್ತು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆದರೆ ಈಗ ಕಿನ್ನರಿ ಬಾರಿಸುವ ಒಬ್ಬನನ್ನು ನನ್ನ ಬಳಿಗೆ ಕರೆತನ್ನಿ” ಎಂದು ಹೇಳಿದನು. ಅವನು ಕಿನ್ನರಿಯನ್ನು ಬಾರಿಸಿದಾಗ ಯೆಹೋವನ ಶಕ್ತಿಯು ಎಲೀಷನ ಮೇಲೆ ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 3:15
14 ತಿಳಿವುಗಳ ಹೋಲಿಕೆ  

ಹಾಗೆಯೇ ದೇವರಿಂದ ಬಂದ ದುರಾತ್ಮವು ಸೌಲನ ಮೇಲೆ ಬಂದಾಗ, ದಾವೀದನು ಕಿನ್ನರಿಯನ್ನು ತೆಗೆದುಕೊಂಡು, ತನ್ನ ಕೈಯಿಂದ ಬಾರಿಸುವನು. ಅದರಿಂದ ಸೌಲನು ಉಪಶಮನ ಹೊಂದಿ ಚೆನ್ನಾಗಿರುವನು; ದುರಾತ್ಮವು ಅವನನ್ನು ಬಿಟ್ಟು ಹೋಗುವುದು.


ಯೆಹೋವ ದೇವರ ವಾಕ್ಯವು ಬಾಬಿಲೋನಿಯರ ದೇಶದ ಕೆಬಾರ್ ನದಿಯ ಬಳಿಯಲ್ಲಿ, ಬೂಜಿಯ ಮಗ ಹಾಗೂ ಯಾಜಕ ಆಗಿರುವ ಯೆಹೆಜ್ಕೇಲನಿಗೆ ಸ್ಪಷ್ಟವಾಗಿ ಬಂದಿತು ಮತ್ತು ಅಲ್ಲಿ ಯೆಹೋವ ದೇವರ ಕೈ ಅವನ ಮೇಲಿತ್ತು.


“ತರುವಾಯ ಫಿಲಿಷ್ಟಿಯರ ತಾಣವಿರುವ ದೇವರ ಗಿಬೆಯ ಗುಡ್ಡಕ್ಕೆ ಹೋಗುವಿ. ಅಲ್ಲಿಂದ ನೀನು ಪಟ್ಟಣಕ್ಕೆ ಪ್ರವೇಶಿಸುವಾಗ, ನಿನಗೆದುರಾಗಿ ವೀಣೆ, ದಮ್ಮಡಿ, ಕೊಳಲು, ಕಿನ್ನರಿಗಳನ್ನು ತಮ್ಮ ಮುಂದೆ ಇಟ್ಟುಕೊಂಡು ಮೇಲಿನಿಂದ ಇಳಿದು ಬರುವ ಪ್ರವಾದಿಗಳ ಗುಂಪು ಬರುವುದು. ಅವರು ಪ್ರವಾದಿಸುವರು.


ಯೆಹೋವ ದೇವರ ಕೈ ಎಲೀಯನ ಮೇಲೆ ಇದ್ದುದರಿಂದ ಅವನು ತನ್ನ ಸಡಿಲವಾದ ಬಟ್ಟೆಗಳನ್ನು ನಡುಕಟ್ಟಿಕೊಂಡು ಇಜ್ರೆಯೇಲ್ ಪಟ್ಟಣದವರೆಗೂ ಅಹಾಬನಿಗೆ ಮುಂದಾಗಿ ಓಡಿದನು.


ಕರ್ತ ಯೇಸುವಿನ ಹಸ್ತವು ಅವರೊಂದಿಗಿತ್ತು ಬಹಳಷ್ಟು ಜನರು ನಂಬಿ ಕರ್ತ ಯೇಸುವಿನ ಕಡೆಗೆ ತಿರುಗಿಕೊಂಡರು.


ಆರನೆಯ ವರ್ಷದ ಆರನೆಯ ತಿಂಗಳಿನ, ಐದನೆಯ ದಿನದಲ್ಲಿ ನಾನೂ, ಯೆಹೂದದ ಹಿರಿಯರೂ ನನ್ನ ಮನೆಯಲ್ಲಿ ಕುಳಿತುಕೊಂಡಿರುವಾಗ, ಅಲ್ಲಿ ಸಾರ್ವಭೌಮ ಯೆಹೋವ ದೇವರ ಹಸ್ತ ನನ್ನ ಮೇಲೆ ಸ್ಪರ್ಶವಾಯಿತು.


ಆಗ ಅಲ್ಲಿ ಯೆಹೋವ ದೇವರ ಹಸ್ತವು ನನ್ನ ಮೇಲಿತ್ತು. ನನಗೆ ಅವರು ಹೇಳಿದ್ದೇನೆಂದರೆ, “ಎದ್ದೇಳು, ಬಯಲು ಸೀಮೆಗೆ ಹೋಗು ಮತ್ತು ಅಲ್ಲಿ ನಾನು ನಿನ್ನ ಸಂಗಡ ಮಾತನಾಡುವೆನು.”


ಹೀಗೆ ದೇವರಾತ್ಮರು ನನ್ನನ್ನು ಎತ್ತಿಕೊಂಡು ಹೋದರು. ನಾನು ಕಹಿತನ ಮತ್ತು ಕೋಪದ ಆತ್ಮದಿಂದ ಮುನ್ನಡೆದೆನು. ಆದರೆ ಯೆಹೋವ ದೇವರ ಕೈ ನನ್ನ ಮೇಲೆ ಬಲವಾಗಿತ್ತು.


ಮಾರನೆಯ ದಿವಸದಲ್ಲಿ ದೇವರಿಂದ ಅನುಮತಿಸಿದ ದುರಾತ್ಮವು ಸೌಲನ ಮೇಲೆ ಇಳಿಯಿತು. ಅವನು ಬುದ್ಧಿಗೆಟ್ಟು ಮನೆಯಲ್ಲಿ ಕೂಗಾಡತೊಡಗಿದನು. ಆಗ ದಾವೀದನು ಪ್ರತಿದಿನ ಮಾಡುತ್ತಿದ್ದ ಹಾಗೆಯೇ ತನ್ನ ಕೈಯಿಂದ ಕಿನ್ನರಿಯನ್ನು ಬಾರಿಸುತ್ತಿದ್ದನು. ಆದರೆ ಸೌಲನ ಕೈಯಲ್ಲಿ ಈಟಿಯು ಇತ್ತು.


ಕಿನ್ನರಿಯನ್ನು ಬಾರಿಸಲು ನಿಪುಣನಾದ ಒಬ್ಬನನ್ನು ಹುಡುಕುವ ಹಾಗೆ ನಮ್ಮ ಒಡೆಯನಾದ ನೀನು ನಿನ್ನ ಸನ್ನಿಧಿಯಲ್ಲಿರುವ ನಿನ್ನ ಸೇವಕರಿಗೆ ಹೇಳಬೇಕು. ದೇವರಿಂದ ಬಂದ ದುರಾತ್ಮವು ನಿನ್ನ ಮೇಲೆ ಬಂದಿರುವಾಗ, ಅವನು ತನ್ನ ಕೈಯಿಂದ ವಾದ್ಯ ಬಾರಿಸಿದರೆ, ನಿನಗೆ ಒಳ್ಳೆಯದಾಗಿರುವುದು,” ಎಂದರು.


ಆಗ ಅವನು, “ಈ ತಗ್ಗನ್ನು ಹಳ್ಳಕೊಳ್ಳಗಳಾಗಿ ಮಾಡಿರೆಂದು ಯೆಹೋವ ದೇವರು ಹೇಳುತ್ತಾರೆ.


ಸಾಮ್ಯಕ್ಕೆ ನನ್ನ ಕಿವಿಗೊಟ್ಟು ಒಗಟನ್ನು ಕಿನ್ನರಿಯಿಂದ ಬಿಚ್ಚುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು