Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 4:10 - ಕನ್ನಡ ಸಮಕಾಲಿಕ ಅನುವಾದ

10 ನಾವು ಮಾಳಿಗೆಯ ಮೇಲೆ ಒಂದು ಚಿಕ್ಕ ಕೊಠಡಿಯನ್ನು ಕಟ್ಟಿಸಿ, ಅದರಲ್ಲಿ ಅವನಿಗೋಸ್ಕರ ಮಂಚವನ್ನೂ, ಮೇಜನ್ನೂ, ಕುರ್ಚಿಯನ್ನೂ, ದೀಪವನ್ನೂ ಇಡೋಣ. ಅವನು ನಮ್ಮ ಬಳಿಗೆ ಬರುವಾಗ ಅಲ್ಲಿ ಇರಲಿ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆದುದರಿಂದ ನಾವು ಅವನಿಗಾಗಿ ಮಾಳಿಗೆಯ ಮೇಲೆ ಒಂದು ಸಣ್ಣ ಕೋಣೆಯನ್ನು ಕಟ್ಟಿಸಿ ಅದರಲ್ಲಿ ಒಂದು ಮಂಚ, ಮೇಜು, ಕುರ್ಚಿ, ದೀಪಸ್ತಂಭ ಇವುಗಳನ್ನು ಇಡೋಣ. ಅವನು ಇಲ್ಲಿ ಬಂದಾಗಲೆಲ್ಲಾ ಅದರಲ್ಲಿ ಹೋಗಿ ಉಳಿದುಕೊಳ್ಳಲಿ” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆದುದರಿಂದ ನಾವು ಅವನಿಗಾಗಿ ಮಾಳಿಗೆಯ ಮೇಲೆ ಒಂದು ಸಣ್ಣ ಕೋಣೆಯನ್ನು ಕಟ್ಟಿಸೋಣ. ಅದರಲ್ಲಿ ಒಂದು ಮಂಚ, ಮೇಜು, ಕುರ್ಚಿ, ದೀಪಸ್ತಂಭ ಇವುಗಳನ್ನು ಇಡೋಣ; ಅವನು ಇಲ್ಲಿಗೆ ಬಂದಾಗೆಲ್ಲಾ ಅದರಲ್ಲಿ ವಾಸಮಾಡಲಿ,” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆದದರಿಂದ ನಾವು ಅವನಿಗೋಸ್ಕರ ಮಾಳಿಗೆಯ ಮೇಲೆ ಒಂದು ಸಣ್ಣ ಕೋಣೆಯನ್ನು ಕಟ್ಟಿಸಿ ಅದರಲ್ಲಿ ಒಂದು ಮಂಚ, ಮೇಜು, ಕುರ್ಚಿ, ದೀಪಸ್ತಂಭ, ಇವುಗಳನ್ನು ಇಡೋಣ; ಅವನು ಇಲ್ಲಿ ಬಂದಾಗೆಲ್ಲಾ ಅದರಲ್ಲಿ ವಾಸಮಾಡಲಿ ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ದಯವಿಟ್ಟು ಎಲೀಷನಿಗಾಗಿ ಮಾಳಿಗೆಯ ಮೇಲೆ ಚಿಕ್ಕದೊಂದು ಕೊಠಡಿಯನ್ನು ಕಟ್ಟೋಣ. ಆ ಕೊಠಡಿಯಲ್ಲಿ ಹಾಸಿಗೆಯೊಂದನ್ನು ಹಾಕೋಣ. ಅಲ್ಲಿ ಒಂದು ಮೇಜು, ಕುರ್ಚಿ ಮತ್ತು ದೀಪಸ್ತಂಭವನ್ನು ಇಡೋಣ. ಅವನು ನಮ್ಮ ಮನೆಗೆ ಬಂದಾಗ, ಈ ಕೊಠಡಿಯನ್ನು ತನಗಾಗಿ ಉಪಯೋಗಿಸಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 4:10
11 ತಿಳಿವುಗಳ ಹೋಲಿಕೆ  

ಕೊರತೆ ಇರುವ ದೇವಜನರೊಂದಿಗೆ ನಿಮಗೆ ಇರುವುದನ್ನು ಹಂಚಿಕೊಳ್ಳಿರಿ, ಅತಿಥಿ ಸತ್ಕಾರವನ್ನು ಮಾಡುತ್ತಾ ಇರಿ.


ನಾವು ಒಬ್ಬರನ್ನೊಬ್ಬರು ಪ್ರೀತಿಸುವುದಕ್ಕಾಗಿಯೂ ಸತ್ಕಾರ್ಯ ಮಾಡುವುದಕ್ಕಾಗಿಯೂ ಹೇಗೆ ಒಬ್ಬರನ್ನೊಬ್ಬರು ಪ್ರೋತ್ಸಾಹಿಸಬೇಕೆಂದು ಯೋಚಿಸೋಣ.


“ಅದಕ್ಕೆ ನಾನು ಉತ್ತರವಾಗಿ ಅವರಿಗೆ, ‘ನಾನು ನಿಮಗೆ ನಿಜವಾಗಿ ಹೇಳುತ್ತೇನೆ: ನೀವು ಈ ನನ್ನ ಸಹೋದರರಲ್ಲಿ ಅತ್ಯಲ್ಪನಾದವನೊಬ್ಬನಿಗೆ, ಮಾಡಿದ್ದು ನನಗೇ ಮಾಡಿದಂತಾಯಿತು,’ ಎನ್ನುವೆನು.


ಪರಕೀಯರಿಗೆ ಸತ್ಕಾರ ಮಾಡುವುದನ್ನು ಅಲಕ್ಷ್ಯ ಮಾಡಬೇಡಿರಿ. ಏಕೆಂದರೆ ಅದನ್ನು ಮಾಡುವುದರ ಮೂಲಕ, ಕೆಲವರು ತಿಳಿಯದೆ ದೇವದೂತರನ್ನೂ ಸತ್ಕರಿಸಿದ್ದಾರೆ.


ಹೆರೋದನ ಅರಮನೆಯ ಗೃಹ ನಿರ್ವಾಹಕನಾದ ಕೂಜನ ಪತ್ನಿ ಯೋಹಾನಳು, ಸುಸನ್ನಳು ಮತ್ತು ಬೇರೆ ಅನೇಕರು ತಮ್ಮ ಆಸ್ತಿಯಿಂದ ಯೇಸುವಿಗೂ ಅವರ ಶಿಷ್ಯರಿಗೂ ಉಪಚಾರಮಾಡುತ್ತಿದ್ದರು.


ಇದಲ್ಲದೆ ನೀವು ಕ್ರಿಸ್ತನಲ್ಲಿ ಸೇರಿದವರಾದ್ದರಿಂದ ಯಾರಾದರೂ ನನ್ನ ಹೆಸರಿನಲ್ಲೆ ನಿಮಗೆ ಒಂದು ಲೋಟ ನೀರನ್ನು ಕೊಟ್ಟರೂ ಅವರು ತಮ್ಮ ಪ್ರತಿಫಲವನ್ನು ಕಳೆದುಕೊಳ್ಳುವುದೇ ಇಲ್ಲವೆಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ,” ಎಂದರು.


ಘನವಂತನಾದರೋ, ಘನಕಾರ್ಯಗಳನ್ನು ಕಲ್ಪಿಸುವನು. ಅವನು ಘನವಾದವುಗಳಲ್ಲಿಯೇ ನಿರತನಾಗಿರುವನು.


ಅವನು ಅವಳಿಗೆ, “ನಿನ್ನ ಮಗನನ್ನು ನನಗೆ ಕೊಡು,” ಎಂದು ಹೇಳಿ, ಅವನನ್ನು ಅವಳ ಮಡಿಲಿನಿಂದ ಎತ್ತಿಕೊಂಡು, ತಾನು ವಾಸವಾಗಿದ್ದ ಮಾಳಿಗೆಯ ಕೋಣೆಗೆ ಹೋಗಿ, ಅವನನ್ನು ಮಂಚದ ಮೇಲೆ ಮಲಗಿಸಿದನು.


ಒಂದು ದಿವಸ ಎಲೀಷನು ಅಲ್ಲಿಗೆ ಬಂದು, ಆ ಕೊಠಡಿಯಲ್ಲಿ ಪ್ರವೇಶಿಸಿ ಮಲಗಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು