Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 4:31 - ಕನ್ನಡ ಸಮಕಾಲಿಕ ಅನುವಾದ

31 ಗೇಹಜಿಯು ಅವರಿಗೆ ಮುಂದಾಗಿ ಹೋಗಿ, ಆ ಕೋಲನ್ನು ಆ ಹುಡುಗನ ಮುಖದ ಮೇಲೆ ಇಟ್ಟನು. ಆದರೆ ಶಬ್ದವಾದರೂ, ಆಲೈಸುವುದಾದರೂ ಇರಲಿಲ್ಲ. ಆದ್ದರಿಂದ ಗೇಹಜಿಯು ಎಲೀಷನನ್ನು ಎದುರುಗೊಳ್ಳಲು ತಿರುಗಿ ಹೋಗಿ ಅವನಿಗೆ, “ಹುಡುಗನು ಎಚ್ಚರವಾಗಲಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಅವರ ಮುಂದಾಗಿ ಹೋದ ಗೇಹಜಿಯು ಕೋಲನ್ನು ಹುಡುಗನ ಮುಖದ ಮೇಲಿಟ್ಟರೂ ಹುಡುಗನು ಮಾತನಾಡಲಿಲ್ಲ, ಎಚ್ಚರಗೊಳ್ಳಲೂ ಇಲ್ಲ. ಆದುದರಿಂದ ಅವನು ಹಿಂದಿರುಗಿ ಹೋಗಿ ಎಲೀಷನನ್ನು ಎದುರುಗೊಂಡು ಅವನಿಗೆ, “ಹುಡುಗನು ಎಚ್ಚರವಾಗಲಿಲ್ಲ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಅವರ ಮುಂದಾಗಿ ಹೋದ ಗೇಹಜಿಯು ಕೋಲನ್ನು ಹುಡುಗನ ಮುಖದ ಮೇಲಿಟ್ಟರೂ ಶಬ್ದವಿರಲಿಲ್ಲ, ಜೀವದ ಲಕ್ಷಣವಿರಲಿಲ್ಲ. ಆದುದರಿಂದ ಅವನು ಹಿಂದಿರುಗಿ ಬಂದು ಎಲೀಷನನ್ನು ಎದುರುಗೊಂಡು, “ಹುಡುಗನು ಎಚ್ಚರವಾಗಲಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಅವರ ಮುಂದಾಗಿ ಹೋದ ಗೇಹಜಿಯು ಕೋಲನ್ನು ಹುಡುಗನ ಮುಖದ ಮೇಲಿಟ್ಟರೂ ಶಬ್ದವಿಲ್ಲ, ಜೀವದ ಲಕ್ಷಣವಿಲ್ಲ. ಆದದರಿಂದ ಅವನು ಹಿಂದಿರುಗಿ ಹೋಗಿ ಎಲೀಷನನ್ನು ಎದುರುಗೊಂಡು ಅವನಿಗೆ - ಹುಡುಗನು ಎಚ್ಚರವಾಗಲಿಲ್ಲ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಶೂನೇಮಿನ ಆ ಸ್ತ್ರೀಯ ಮನೆಗೆ, ಎಲೀಷನು ಮತ್ತು ಶೂನೇಮಿನ ಸ್ತ್ರೀಯು ಬರುವುದಕ್ಕೆ ಮುಂಚೆಯೇ ಗೇಹಜಿಯು ಬಂದನು. ಗೇಹಜಿಯು ಮಗುವಿನ ಮುಖದ ಮೇಲೆ ಆ ಕೋಲನ್ನಿಟ್ಟನು. ಆದರೆ ಆ ಮಗು ಮಾತನಾಡಲಿಲ್ಲ; ಅಲುಗಾಡಲಿಲ್ಲ. ಆಗ ಗೇಹಜಿಯು ಎಲೀಷನನ್ನು ಸಂಧಿಸಲು ಹಿಂದಿರುಗಿ ಬಂದು ಎಲೀಷನಿಗೆ, “ಮಗು ಎಚ್ಚರಗೊಳ್ಳಲಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 4:31
17 ತಿಳಿವುಗಳ ಹೋಲಿಕೆ  

ಇದನ್ನು ಹೇಳಿದ ತರುವಾಯ ಯೇಸು ಅವರಿಗೆ, “ನಮ್ಮ ಸ್ನೇಹಿತ ಲಾಜರನು ನಿದ್ರೆ ಮಾಡುತ್ತಿದ್ದಾನೆ. ಆದರೆ ನಾನು ಹೋಗಿ ಅವನನ್ನು ಎಬ್ಬಿಸಬೇಕು,” ಎಂದರು.


ಆದ್ದರಿಂದ ಹೀಗೆ ಹೇಳಲಾಗಿದೆ: “ನಿದ್ರೆ ಮಾಡುವವನೇ, ಎಚ್ಚರವಾಗು, ಸತ್ತವರಿಂದ ಎದ್ದೇಳು, ಕ್ರಿಸ್ತನು ನಿನ್ನ ಮೇಲೆ ಪ್ರಕಾಶಿಸುವನು.”


ಯೇಸು ಮನೆಯೊಳಗೆ ಹೋಗಿ, “ನೀವು ಗೋಳಾಡಿ ಅಳುವುದೇಕೆ? ಮಗು ಸತ್ತಿಲ್ಲ, ಅವಳು ನಿದ್ದೆ ಮಾಡುತ್ತಿದ್ದಾಳೆ,” ಎಂದರು.


ಭೂಮಿಯ ಧೂಳಿನೊಳಗೆ ನಿದ್ರೆ ಮಾಡುವವರಲ್ಲಿ ಅನೇಕರು ಎಚ್ಚತ್ತು, ಕೆಲವರು ನಿತ್ಯಜೀವವನ್ನೂ ಮತ್ತು ಕೆಲವರು ತಿರಸ್ಕೃತರಾಗಿ ನಿತ್ಯ ನಿಂದನೆಗೆ ಗುರಿಯಾಗುವರು.


“ಮನುಷ್ಯಪುತ್ರನೇ, ಈ ಮನುಷ್ಯರು ತಮ್ಮ ವಿಗ್ರಹಗಳನ್ನು ತಮ್ಮ ಹೃದಯಗಳಲ್ಲೇ ಸ್ಥಾಪಿಸಿ, ತಮ್ಮ ಅಕ್ರಮವಾದ ವಿಘ್ನಗಳನ್ನು ತಮ್ಮ ಮುಖದ ಮುಂದೆಯೇ ಇಟ್ಟುಕೊಂಡಿದ್ದಾರೆ. ಇವೆಲ್ಲವುಗಳಿಗಾಗಿ ನಾನು ಅವರನ್ನು ವಿಚಾರಿಸಬೇಕೇ?


ಮನುಷ್ಯನು ಸತ್ತು ಮಲಗಿದರೆ ಏಳುವುದೇ ಇಲ್ಲ; ಆಕಾಶಗಳು ಅಳಿದು ಹೋಗುವವರೆಗೆ ಅವನು ಎಚ್ಚರಗೊಳ್ಳುವುದಿಲ್ಲ; ನಿದ್ರೆಯಿಂದ ಎಬ್ಬಿಸಲಾಗುವುದೂ ಇಲ್ಲ.


ಮಧ್ಯಾಹ್ನವಾದ ತರುವಾಯ ಸಾಯಂಕಾಲದ ಬಲಿ ಅರ್ಪಿಸುವ ವೇಳೆಯವರೆಗೂ ಪರವಶರಾಗಿ ಕೂಗುತ್ತಾ ಇದ್ದರು. ಆದರೆ ಶಬ್ದವಾದರೂ, ಉತ್ತರ ಕೊಡುವವನಾದರೂ, ಲಕ್ಷಿಸುವವನಾದರೂ ಇರಲಿಲ್ಲ.


ಅವರು ತಮಗೆ ಕೊಟ್ಟ ಹೋರಿಯನ್ನು ತೆಗೆದುಕೊಂಡು ಸಿದ್ಧಪಡಿಸಿದರು. “ಬಾಳನೇ, ನಮಗೆ ಕಿವಿಗೊಡು,” ಎಂದು ಉದಯದಿಂದ ಮಧ್ಯಾಹ್ನದವರೆಗೂ ಬಾಳನ ಹೆಸರನ್ನು ಕರೆಯುತ್ತಿದ್ದರು. ಆದರೆ ಒಂದು ಶಬ್ದವಾಗಲಿ, ಉತ್ತರ ಕೊಡುವವನಾಗಲಿ ಇರಲಿಲ್ಲ. ಅವರು ಮಾಡಿದ ಬಲಿಪೀಠದ ಹತ್ತಿರ ಕುಣಿದಾಡಿದರು.


ಸೌಲನು ಯೆಹೋವ ದೇವರನ್ನು ಕೇಳಿಕೊಂಡಾಗ, ಯೆಹೋವ ದೇವರು ಅವನಿಗೆ ಸ್ವಪ್ನಗಳಿಂದಲಾದರೂ, ಊರೀಮಿನಿಂದಲಾದರೂ, ಪ್ರವಾದಿಗಳಿಂದಲಾದರೂ ಉತ್ತರ ಕೊಡಲಿಲ್ಲ.


ಅದಕ್ಕೆ ಸೌಲನು, “ನಾನು ಫಿಲಿಷ್ಟಿಯರನ್ನು ಹಿಂಬಾಲಿಸಿ ಹೋಗಲೋ? ನೀವು ಅವರನ್ನು ಇಸ್ರಾಯೇಲರ ಕೈಗೆ ಒಪ್ಪಿಸಿಕೊಡುವಿರೋ?” ಎಂದು ದೇವರ ಆಲೋಚನೆಯನ್ನು ಕೇಳಿದನು. ಆದರೆ ಅವರು ಅವನಿಗೆ ಆ ದಿವಸದಲ್ಲಿ ಉತ್ತರ ಕೊಡದೆ ಹೋದರು.


ಎಲೀಷನು ಆ ಮನೆಯನ್ನು ಮುಟ್ಟಿದಾಗ, ಸತ್ತ ಹುಡುಗನನ್ನು ತನ್ನ ಮಂಚದ ಮೇಲೆ ಇಟ್ಟಿರುವುದನ್ನು ಕಂಡನು.


ದೇವರ ಮನುಷ್ಯನಾದ ಎಲೀಷನ ಸೇವಕನಾಗಿರುವ ಗೇಹಜಿಯು, “ನನ್ನ ಯಜಮಾನನು ಈ ಅರಾಮ್ಯನಾದ ನಾಮಾನನು ತೆಗೆದುಕೊಂಡು ಬಂದದ್ದನ್ನು ಅವನ ಕೈಯಿಂದ ತೆಗೆದುಕೊಳ್ಳದೆ ಸುಮ್ಮನೆ ಕಳುಹಿಸಿದ್ದಾನೆ. ಆದರೆ ಯೆಹೋವ ದೇವರ ಜೀವದಾಣೆ, ನಾನು ಅವನ ಹಿಂದೆ ಓಡಿಹೋಗಿ, ಅವನ ಕೈಯಿಂದ ಏನಾದರೂ ತೆಗೆದುಕೊಳ್ಳುವೆನು,” ಅಂದುಕೊಂಡನು.


ಎಲೀಷನು ತಾನು ಬದುಕಿಸಿದ ಹುಡುಗನ ತಾಯಿಗೆ, “ನೀನು, ನಿನ್ನ ಮನೆಯವರು ಎದ್ದು ಎಲ್ಲಿ ಇಳಿದುಕೊಳ್ಳುವ ಸ್ಥಳ ಉಂಟೋ ಅಲ್ಲಿ ಹೋಗಿ ವಾಸಿಸಿರಿ. ಏಕೆಂದರೆ ಯೆಹೋವ ದೇವರು ಬರವನ್ನು ಕಳುಹಿಸಲಿದ್ದಾರೆ. ಅದು ದೇಶದ ಮೇಲೆ ಏಳು ವರ್ಷದವರೆಗೂ ಬರುವುದು,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು