Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 4:41 - ಕನ್ನಡ ಸಮಕಾಲಿಕ ಅನುವಾದ

41 ಆಗ ಎಲೀಷನು ಹಿಟ್ಟನ್ನು ತೆಗೆದುಕೊಂಡು ಬರಲು ಹೇಳಿ, ಅದನ್ನು ಗಡಿಗೆಯಲ್ಲಿ ಹಾಕಿ, “ಈಗ ಇದನ್ನು ಜನರಿಗೆ ಬಡಿಸಿರಿ,” ಎಂದನು. ಆಗ ಆ ಗಡಿಗೆಯಲ್ಲಿನ ವಿಷವೆಲ್ಲಾ ಹೋಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಆಗ ಎಲೀಷನು, “ಹಿಟ್ಟನ್ನು ತಂದು ಕೊಡಿರಿ” ಎಂದು ಹೇಳಿದನು. ಅವರು ತಂದಾಗ, ಅದನ್ನು ಆ ಪಾತ್ರೆಯೊಳಗೆ ಹಾಕಿ, “ಈಗ ಇದನ್ನು ಬಡಿಸಬಹುದು. ಜನರು ಇದನ್ನು ಊಟಮಾಡಲಿ” ಎಂದನು. ಕೂಡಲೇ ಪಾತ್ರೆಯಲ್ಲಿದ್ದ ವಿಷವೆಲ್ಲಾ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ಆಗ ಅವನು, “ಹಿಟ್ಟನ್ನು ತಂದುಕೊಡಿ,” ಎಂದು ಹೇಳಿದನು; ಅವರು ತರಲು ಅದನ್ನು ಆ ಪಾತ್ರೆಯೊಳಗೆ ಹಾಕಿ, “ಈಗ ಇದನ್ನು ಬಡಿಸಬಹುದು,” ಎಂದನು. ಕೂಡಲೆ ಪಾತ್ರೆಯಲ್ಲಿದ್ದ ವಿಷವೆಲ್ಲಾ ಹೋಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ಆಗ ಅವನು - ಹಿಟ್ಟನ್ನು ತಂದುಕೊಡಿರಿ ಎಂದು ಹೇಳಿದನು; ಅವರು ತರಲು ಅದನ್ನು ಆ ಪಾತ್ರೆಯೊಳಗೆ ಹಾಕಿ ಈಗ ಇದನ್ನು ಬಡಿಸಬಹುದು ಅಂದನು. ಕೂಡಲೆ ಪಾತ್ರೆಯಲ್ಲಿದ್ದ ವಿಷವೆಲ್ಲಾ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ಆದರೆ ಎಲೀಷನು, “ಸ್ವಲ್ಪ ಹಿಟ್ಟನ್ನು ತನ್ನಿ” ಎಂದು ಹೇಳಿದನು. ಅವರು ಎಲೀಷನ ಬಳಿಗೆ ಹಿಟ್ಟನ್ನು ತಂದರು. ಅವನು ಅದನ್ನು ಪಾತ್ರೆಯೊಳಗೆ ಹಾಕಿದನು. ನಂತರ ಎಲೀಷನು, “ಜನರಿಗೆ ಸಾರನ್ನು ಬಡಿಸಿ, ಅವರು ಊಟಮಾಡಲಿ” ಎಂದು ಹೇಳಿದನು. ಆಗ ಆ ಸಾರಿನಲ್ಲಿ ಯಾವ ದೋಷವೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 4:41
7 ತಿಳಿವುಗಳ ಹೋಲಿಕೆ  

ಅವನು ನೀರಿನ ಬುಗ್ಗೆಯ ಬಳಿಗೆ ಹೊರಟುಹೋಗಿ, ನೀರಿನಲ್ಲಿ ಉಪ್ಪು ಹಾಕಿ, “ ‘ಆ ನೀರನ್ನು ಶುದ್ಧಮಾಡಿದೆನು. ಇನ್ನು ಮೇಲೆ ಅದರಿಂದ ಮರಣವೂ, ಬಂಜೆತನವೂ ಆಗದಿರಲಿ,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದನು.


ಅವನು ಯೆಹೋವ ದೇವರಿಗೆ ಮೊರೆಯಿಟ್ಟನು. ಯೆಹೋವ ದೇವರು ಅವನಿಗೆ ಒಂದು ಗಿಡವನ್ನು ತೋರಿಸಿದರು. ಅವನು ಅದನ್ನು ನೀರಿನಲ್ಲಿ ಹಾಕಿದಾಗ, ನೀರು ಸಿಹಿಯಾಗಿ ಬಿಟ್ಟಿತು. ಅಲ್ಲಿ ದೇವರು ಅವರಿಗಾಗಿ ಒಂದು ನಿಯಮವನ್ನೂ ಒಂದು ಶಾಸನವನ್ನೂ ಮಾಡಿದರು. ಅಲ್ಲಿಯೇ ದೇವರು ಅವರನ್ನು ಪರೀಕ್ಷಿಸಿದರು.


ಏಕೆಂದರೆ ದೇವರ ಬುದ್ಧಿಹೀನತೆ ಮನುಷ್ಯರ ಜ್ಞಾನಕ್ಕಿಂತಲೂ ಶ್ರೇಷ್ಠವಾಗಿದೆ. ದೇವರ ಬಲಹೀನತೆ ಮನುಷ್ಯರ ಬಲಕ್ಕಿಂತಲೂ ಬಲವುಳ್ಳದ್ದಾಗಿದೆ.


ಆದರೆ ಪೌಲನು ಸರ್ಪವನ್ನು ಬೆಂಕಿಯೊಳಗೆ ಝಾಡಿಸಿ ಬಿಟ್ಟನು. ಅವನಿಗೆ ಯಾವ ಕೇಡೂ ಆಗಲಿಲ್ಲ.


ಯೇಸು ಹೀಗೆ ಹೇಳಿ ನೆಲದ ಮೇಲೆ ಉಗುಳಿ ಆ ಉಗುಳಿನಿಂದ ಮಣ್ಣಿನ ಲೇಪಮಾಡಿ ಆ ಲೇಪವನ್ನು ಅವನ ಕಣ್ಣುಗಳಿಗೆ ಹಚ್ಚಿದರು.


ದೇವರ ಮನುಷ್ಯನು, “ಅದು ಎಲ್ಲಿ ಬಿತ್ತು?” ಎಂದನು. ಅವನು ಎಲೀಷನಿಗೆ ಸ್ಥಳವನ್ನು ತೋರಿಸಿದ ತರುವಾಯ, ಎಲೀಷನು ಒಂದು ಕಟ್ಟಿಗೆಯನ್ನು ಕಡಿದು ಅಲ್ಲಿ ಹಾಕಿದ್ದರಿಂದ ಆ ಕಬ್ಬಿಣವು ತೇಲಿತು.


ಆಗ ಎಲೀಷನು, “ನೀನು ಹೋಗಿ ಯೊರ್ದನಿನಲ್ಲಿ ಏಳು ಸಾರಿ ಸ್ನಾನಮಾಡು, ಆಗ ನಿನ್ನ ಶರೀರವು ಮೊದಲಿನಂತೆ ಮಾರ್ಪಡುವುದು, ನೀನು ಶುದ್ಧನಾಗುವೆ,” ಎಂದು ಹೇಳಲು, ಅವನ ಬಳಿಗೆ ಸೇವಕನನ್ನು ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು