Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 5:11 - ಕನ್ನಡ ಸಮಕಾಲಿಕ ಅನುವಾದ

11 ಆಗ ನಾಮಾನನು ಕೋಪಗೊಂಡು ಹೊರಟುಹೋಗಿ, “ಅವನು ನಿಶ್ಚಯವಾಗಿ ನನ್ನ ಬಳಿಗೆ ಹೊರಟುಬಂದು, ತನ್ನ ದೇವರಾದ ಯೆಹೋವ ದೇವರ ಹೆಸರನ್ನು ಕರೆದು, ನನ್ನ ಚರ್ಮದ ಮೇಲೆ ತನ್ನ ಕೈಯನ್ನಾಡಿಸಿ, ಕುಷ್ಠರೋಗವನ್ನು ವಾಸಿಮಾಡುವನೆಂದು, ನಾನು ನೆನಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನಾಮಾನನು ಇದನ್ನು ಕೇಳಿ ಕೋಪಗೊಂಡು, “ಇದೇನು? ಅವನು ಹೊರಗೆ ಬಂದು ತನ್ನ ದೇವರಾದ ಯೆಹೋವನ ಹೆಸರನ್ನು ಹೇಳಿ ನನ್ನ ಕುಷ್ಠದ ಮೇಲೆ ಕೈಯಾಡಿಸಿ ವಾಸಿಮಾಡುವನೆಂದು ನೆನಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ನಾಮಾನನು ಇದನ್ನು ಕೇಳಿ ಕೋಪಗೊಂಡನು . “ಇದೇನು ! ಇವನು ಖಂಡಿತ ವಾಗಿ ಹೊರಗೆಬಂದು ನಿಂತು, ತನ್ನ ದೇವರಾದ ಸರ್ವೇಶ್ವರ ನ ಹೆಸರು ಹೇಳಿ, ನನ್ನ ಚರ್ಮ ದ ಮೇಲೆ ಕೈಯಾಡಿಸಿ , ರೋಗ ವಾಸಿ ಮಾಡುವನೆಂದು ನೆನಸಿದೆ .

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನಾಮಾನನು ಇದನ್ನು ಕೇಳಿ ಕೋಪಗೊಂಡು - ಇದೇನು! ಅವನು ಹೇಗೂ ಹೊರಗೆ ಬಂದು ನಿಂತು ತನ್ನ ದೇವರಾದ ಯೆಹೋವನ ಹೆಸರು ಹೇಳಿ ಕುಷ್ಠದ ಮೇಲೆ ಕೈಯಾಡಿಸಿ ವಾಸಿಮಾಡುವನೆಂದು ನೆನಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನಾಮಾನನು ಕೋಪಗೊಂಡು, “ಎಲೀಷನು ಕೊನೆಯ ಪಕ್ಷ ಬಂದು, ನನ್ನೆದುರು ನಿಂತು, ತನ್ನ ದೇವರಾದ ಯೆಹೋವನ ಹೆಸರಿನಲ್ಲಿ ನನ್ನನ್ನು ಕರೆಯುತ್ತಿದ್ದನೆಂದು ನಾನು ಭಾವಿಸಿದ್ದೆನು. ಅವನು ತನ್ನ ಕೈಗಳನ್ನು ನನ್ನ ದೇಹದ ಮೇಲೆ ಸವರಿ, ನನ್ನ ಕುಷ್ಠರೋಗವನ್ನು ಗುಣಪಡಿಸುವನೆಂದು ನಾನು ಭಾವಿಸಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 5:11
19 ತಿಳಿವುಗಳ ಹೋಲಿಕೆ  

ಮಾತನಾಡುವ ದೇವರನ್ನು ನೀವು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಭೂಮಿಯ ಮೇಲೆ ಎಚ್ಚರಿಸಿದವರನ್ನು ಅಸಡ್ಡೆ ಮಾಡಿದ್ದಕ್ಕೆ ಅವರು ತಪ್ಪಿಸಿಕೊಳ್ಳದಿದ್ದರೆ, ಪರಲೋಕದಿಂದ ಎಚ್ಚರಿಸುವ ದೇವರಿಂದ ನಾವು ತೊಲಗಿ ಹೋದರೆ, ಹೇಗೆ ತಾನೆ ದಂಡನೆಯಿಂದ ನಾವು ತಪ್ಪಿಸಿಕೊಳ್ಳಬಲ್ಲೆವು?


ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನನ್ನು ಕಳುಹಿಸಿದ ತಂದೆಯನ್ನು ಸ್ವೀಕರಿಸುವವನು ನನ್ನನ್ನು ಸ್ವೀಕರಿಸುತ್ತಾನೆ; ನನ್ನನ್ನು ಸ್ವೀಕರಿಸುವವನು ನನ್ನನ್ನು ಕಳುಹಿಸಿದ ತಂದೆಯನ್ನೇ ಸ್ವೀಕರಿಸುತ್ತಾನೆ.”


ಯೇಸು ಅವನಿಗೆ, “ನೀವು ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಕಾಣದ ಹೊರತು ನಂಬುವುದೇ ಇಲ್ಲ,” ಎಂದರು.


ಏಕೆಂದರೆ, ಯಾರಾದರೂ ತಮ್ಮನ್ನು ತಾವೇ ಹೆಚ್ಚಿಸಿಕೊಳ್ಳುವರೋ ಅವರು ತಗ್ಗಿಸಲಾಗುವರು ಮತ್ತು ತಮ್ಮನ್ನು ತಾವೇ ತಗ್ಗಿಸಿಕೊಳ್ಳುವವರು ಹೆಚ್ಚಿಸಲಾಗುವರು,” ಎಂದರು.


ಆದರೆ ಆ ಯುವಕನು ಯೇಸು ಹೇಳಿದ್ದನ್ನು ಕೇಳಿ, ದುಃಖದಿಂದ ಹೊರಟುಹೋದನು. ಏಕೆಂದರೆ ಅವನಿಗೆ ಬಹಳ ಆಸ್ತಿ ಇತ್ತು.


ಆಗ ಆಕೆಯು, “ಸ್ವಾಮೀ, ಅದು ನಿಜವೇ, ಆದರೂ ತಮ್ಮ ಯಜಮಾನರ ಮೇಜಿನಿಂದ ಬೀಳುವ ರೊಟ್ಟಿತುಂಡುಗಳನ್ನು ನಾಯಿಮರಿಗಳು ತಿನ್ನುತ್ತವಲ್ಲಾ,” ಎಂದಳು.


ಅದಕ್ಕೆ ಶತಾಧಿಪತಿಯು, “ಸ್ವಾಮೀ, ನನ್ನ ಮನೆಯೊಳಗೆ ನೀವು ಬರುವಷ್ಟು ಯೋಗ್ಯತೆ ನನಗಿಲ್ಲ. ಆದರೆ, ನೀವು ಒಂದು ಮಾತು ಮಾತ್ರ ಹೇಳಿರಿ, ಆಗ ನನ್ನ ಸೇವಕ ಗುಣಹೊಂದುವನು.


ಎಲ್ಲಿ ಗರ್ವವೋ ಅಲ್ಲಿ ಕಲಹ; ಆದರೆ ಒಳ್ಳೆಯ ಸಲಹೆಯನ್ನು ತೆಗೆದುಕೊಳ್ಳುವವರಲ್ಲಿ ಜ್ಞಾನವು ಕಂಡುಬರುತ್ತದೆ.


ನಿನ್ನ ದೃಷ್ಟಿಯಲ್ಲಿ ನೀನೇ ಜ್ಞಾನಿ ಎಂದು ಇರಬೇಡ; ಯೆಹೋವ ದೇವರಿಗೆ ಭಯಪಟ್ಟು, ಕೆಟ್ಟದ್ದನ್ನು ತೊರೆದುಬಿಡು.


ಮುಗ್ಧರ ದಾರಿತಪ್ಪುವಿಕೆಯು ಅವರನ್ನು ಕೊಲ್ಲುವುದು. ಜ್ಞಾನಹೀನರ ನಿಶ್ಚಿಂತೆಯು ಅವರನ್ನು ನಾಶಮಾಡುವುದು.


ಈಗ ಆ ಮನುಷ್ಯನ ಹೆಂಡತಿಯನ್ನು ನೀನು ಹಿಂದಕ್ಕೆ ಕಳುಹಿಸಿಬಿಡು. ಏಕೆಂದರೆ ಅವನು ಪ್ರವಾದಿಯಾಗಿದ್ದಾನೆ. ನೀನು ಬದುಕುವಂತೆ ಅವನು ನಿನಗೋಸ್ಕರ ಪ್ರಾರ್ಥಿಸುವನು. ನೀನು ಆಕೆಯನ್ನು ಹಿಂದಕ್ಕೆ ಕಳುಹಿಸದಿದ್ದರೆ, ನೀನೂ ನಿನ್ನವರೆಲ್ಲರೂ ಖಂಡಿತವಾಗಿ ಸಾಯುವಿರಿ ಎಂದು ತಿಳಿದುಕೋ,” ಎಂದರು.


ಆಗ ಎಲೀಷನು, “ನೀನು ಹೋಗಿ ಯೊರ್ದನಿನಲ್ಲಿ ಏಳು ಸಾರಿ ಸ್ನಾನಮಾಡು, ಆಗ ನಿನ್ನ ಶರೀರವು ಮೊದಲಿನಂತೆ ಮಾರ್ಪಡುವುದು, ನೀನು ಶುದ್ಧನಾಗುವೆ,” ಎಂದು ಹೇಳಲು, ಅವನ ಬಳಿಗೆ ಸೇವಕನನ್ನು ಕಳುಹಿಸಿದನು.


ನಾನು ಹೊಳೆಗಳಲ್ಲಿ ಸ್ನಾನಮಾಡಿ ಶುದ್ಧನಾಗುವಂತೆ ದಮಸ್ಕದ ನದಿಗಳಾದ ಅಬಾನಾವೂ, ಪಾರ್ಪರೂ ಇಸ್ರಾಯೇಲಿನ ಸಮಸ್ತ ನೀರುಗಳಿಗಿಂತ ಉತ್ತಮವಾಗಿಲ್ಲವೋ?” ಎಂದು ಹೇಳಿ ತಿರುಗಿಕೊಂಡು ಕೋಪದಿಂದ ಹೋದನು.


ಹೀಗೆ ಅವಳು ಅವನನ್ನು ಬಿಟ್ಟು ಹೋಗಿ, ತಾನೂ, ತನ್ನ ಪುತ್ರರೂ ಬಾಗಿಲು ಮುಚ್ಚಿದರು. ಇವರು ಅವಳ ಬಳಿಗೆ ಪಾತ್ರೆಗಳನ್ನು ತೆಗೆದುಕೊಂಡು ಬಂದರು. ಅವಳು ಎಣ್ಣೆಯನ್ನು ಅವುಗಳಲ್ಲಿ ಹೊಯ್ದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು