Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 5:22 - ಕನ್ನಡ ಸಮಕಾಲಿಕ ಅನುವಾದ

22 ಅದಕ್ಕೆ ಗೇಹಜಿಯು, “ಎಲ್ಲಾ ಕ್ಷೇಮ. ಪ್ರವಾದಿಗಳ ಮಂಡಳಿಯಲ್ಲಿಯ ಇಬ್ಬರು ಯುವಕರು ಎಫ್ರಾಯೀಮ್ ಬೆಟ್ಟದಿಂದ ಈಗಲೇ ನನ್ನ ಬಳಿಗೆ ಬಂದಿದ್ದಾರೆ. ನೀನು ದಯಮಾಡಿ ಅವರಿಗೆ ಮೂರು ಸಾವಿರ ಬೆಳ್ಳಿ ನಾಣ್ಯಗಳನ್ನೂ, ಎರಡು ಜೊತೆ ಬಟ್ಟೆಗಳನ್ನೂ ಕೊಡಬೇಕೆಂದು ನಿನಗೆ ಹೇಳು ಎಂದು ನನ್ನ ಯಜಮಾನನು ಕಳುಹಿಸಿದ್ದಾನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅದಕ್ಕೆ ಗೇಹಜಿಯು, “ಕ್ಷೇಮ, ಎಫ್ರಾಯೀಮ್ ಪರ್ವತ ಪ್ರದೇಶದಿಂದ ಪ್ರವಾದಿಮಂಡಳಿಯವರಾದ ಇಬ್ಬರು ಯೌವನಸ್ಥರು ಬಂದಿರುತ್ತಾರೆ. ಆದುದರಿಂದ ಅವರಿಗೋಸ್ಕರ ಬೇಗನೇ ಒಂದು ತಲಾಂತು ಬೆಳ್ಳಿಯನ್ನೂ, ಎರಡು ಜೋಡಿ ಬಟ್ಟೆಗಳನ್ನೂ ತೆಗೆದುಕೊಂಡು ಬರಬೇಕೆಂದು ನನ್ನ ಯಜಮಾನನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದನು” ಎಂದು ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅವನು, “ಕ್ಷೇಮ; ಎಫ್ರಯಿಮ್ ಗುಡ್ಡಪ್ರದೇಶದಿಂದ ಪ್ರವಾದಿಮಂಡಲಿಯವರಾದ ಇಬ್ಬರು ಯೌವನಸ್ಥರು ಬಂದಿರುತ್ತಾರೆ. ಆದುದರಿಂದ ಅವರಿಗಾಗಿ ಬೇಗನೆ ಮೂರುಸಾವಿರ ಬೆಳ್ಳಿಯ ನಾಣ್ಯಗಳನ್ನೂ ಎರಡು ದುಸ್ತು ಬಟ್ಟೆಗಳನ್ನೂ ತೆಗೆದುಕೊಂಡು ಬರಬೇಕೆಂಬುದಾಗಿ ನನ್ನ ಯಜಮಾನ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದರು,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅವನು - ಕ್ಷೇಮ, ಎಫ್ರಾಯೀಮ್ ಪರ್ವತ ಪ್ರದೇಶದಿಂದ ಪ್ರವಾದಿಮಂಡಲಿಯವರಾದ ಇಬ್ಬರು ಯೌವನಸ್ಥರು ಬಂದಿರುತ್ತಾರೆ. ಆದದರಿಂದ ಅವರಿಗೋಸ್ಕರ ಬೇಗನೆ ಒಂದು ತಲಾಂತು ಬೆಳ್ಳಿಯನ್ನೂ ಎರಡು ದುಸ್ತುಬಟ್ಟೆಗಳನ್ನೂ ತೆಗೆದುಕೊಂಡು ಬರಬೇಕೆಂಬದಾಗಿ ನನ್ನ ಯಜಮಾನನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದನು ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಗೇಹಜಿಯು, “ಹೌದು, ಎಲ್ಲವೂ ಕ್ಷೇಮವಾಗಿದೆ. ನನ್ನ ಒಡೆಯನಾದ ಎಲೀಷನು ನನಗೆ, ‘ನೋಡು, ಎಫ್ರಾಯೀಮ್ ಬೆಟ್ಟಪ್ರಾಂತ್ಯದ ಪ್ರವಾದಿಗಳ ಗುಂಪಿನಿಂದ ನನ್ನ ಬಳಿಗೆ ಇಬ್ಬರು ತರುಣರು ಬಂದಿದ್ದಾರೆ. ದಯವಿಟ್ಟು ಅವರಿಗೆ ಮೂವತ್ತೈದು ಕಿಲೋ.ಗ್ರಾಂ. ಬೆಳ್ಳಿಯನ್ನು ಮತ್ತು ಎರಡು ಥಾನು ಬಟ್ಟೆಯನ್ನು ತೆಗೆದುಕೊಂಡು ಬಾ’ ಎಂದು ನನ್ನನ್ನು ಕಳುಹಿಸಿದನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 5:22
21 ತಿಳಿವುಗಳ ಹೋಲಿಕೆ  

ಅರಾಮ್ಯರ ಅರಸನು, “ನೀನು ಹೋಗಿ ಬಾ. ನಾನು ಇಸ್ರಾಯೇಲಿನ ಅರಸನಿಗೆ ಪತ್ರವನ್ನು ಕಳುಹಿಸುವೆನು,” ಎಂದನು. ಅದರಂತೆ ನಾಮಾನನು 340 ಕಿಲೋಗ್ರಾಂ ಬೆಳ್ಳಿ, 64 ಕಿಲೋಗ್ರಾಂ ಬಂಗಾರ, ಹತ್ತು ಜೊತೆ ಬಟ್ಟೆಗಳನ್ನೂ ತೆಗೆದುಕೊಂಡು ಹೋದನು.


ಆದರೆ ಹೇಡಿಗಳು, ನಂಬದವರು, ಅಸಹ್ಯವಾದದ್ದರಲ್ಲಿ ಸೇರಿದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ, ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು!” ಎಂದು ನನಗೆ ಹೇಳಿದರು.


ನೀವು ನಿಮ್ಮ ತಂದೆಯಾದ ಪಿಶಾಚನಿಗೆ ಸೇರಿದವರಾಗಿದ್ದೀರಿ. ನಿಮ್ಮ ತಂದೆಯ ಆಶೆಗಳನ್ನೇ ನೀವು ಮಾಡಬಯಸುತ್ತೀರಿ. ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯದಲ್ಲಿ ನಿಲ್ಲಲಿಲ್ಲ. ಏಕೆಂದರೆ ಅವನಲ್ಲಿ ಸತ್ಯವೇ ಇಲ್ಲ. ಅವನು ಸುಳ್ಳಾಡುವಾಗ ತನ್ನ ಸ್ವಭಾವಾನುಸಾರವಾಗಿ ಆಡುತ್ತಾನೆ. ಅವನು ಸುಳ್ಳುಗಾರನೂ ಸುಳ್ಳಿನ ತಂದೆಯೂ ಆಗಿದ್ದಾನೆ.


ತಮ್ಮ ತಮ್ಮ ನೆರೆಯವರಿಗೆ ವಂಚನೆಮಾಡಿ ಸತ್ಯವನ್ನು ಮಾತನಾಡರು. ಸುಳ್ಳುಗಳನ್ನು ಹೇಳುವುದಕ್ಕೆ ಅವರು ತಮ್ಮ ನಾಲಿಗೆಗೆ ಬೋಧಿಸಿದ್ದಾರೆ. ಪಾಪದಿಂದ ತಮ್ಮನ್ನು ಸುಸ್ತಾಗಿಸಿಕೊಳ್ಳುತ್ತಾರೆ.


“ಅವರು ತಮ್ಮ ನಾಲಿಗೆಗಳನ್ನು ಬಿಲ್ಲಿನಂತೆ ಸುಳ್ಳುಗಳಿಗಾಗಿ ಬಗ್ಗಿಸುತ್ತಾರೆ. ಆದರೆ ಭೂಮಿಯಲ್ಲಿ ಸತ್ಯಕ್ಕಾಗಿ ಬಲಿಷ್ಠರಾಗುವುದಿಲ್ಲ. ಏಕೆಂದರೆ ಅವರು ಒಂದು ಪಾಪದಿಂದ ಇನ್ನೊಂದು ಪಾಪಕ್ಕೆ ಹೋಗುತ್ತಾ, ನನ್ನನ್ನು ಅರಿಯದೆ ಇದ್ದಾರೆ,” ಎಂದು ಯೆಹೋವ ದೇವರು ಹೇಳುತ್ತಾರೆ.


ಏಕೆಂದರೆ ನಿಮ್ಮ ಕೈಗಳು ರಕ್ತದಿಂದಲೂ, ನಿಮ್ಮ ಬೆರಳುಗಳು ಅಕ್ರಮದಿಂದಲೂ ಮೈಲಿಗೆಯಾಗಿವೆ. ನಿಮ್ಮ ತುಟಿಗಳು ಸುಳ್ಳನ್ನು ಆಡುತ್ತವೆ. ನಿಮ್ಮ ನಾಲಿಗೆ ಅನ್ಯಾಯವನ್ನು ನುಡಿಯುತ್ತದೆ.


ಆಗ ಬೇತೇಲಿನಲ್ಲಿರುವ ಪ್ರವಾದಿಗಳ ಗುಂಪು ಎಲೀಷನ ಬಳಿಗೆ ಬಂದು ಅವನಿಗೆ, “ಇಂದು ಯೆಹೋವ ದೇವರು ನಿನ್ನ ಯಜಮಾನನನ್ನು ನಿನ್ನಿಂದ ತೆಗೆದುಕೊಳ್ಳುವರೆಂದು ತಿಳಿದಿದ್ದೀಯೋ?” ಎಂದರು. ಅದಕ್ಕವನು, “ಹೌದು, ನಾನು ಕೂಡಾ ಬಲ್ಲೆ, ಸುಮ್ಮನೆ ಇರಿ,” ಎಂದನು.


ಅರಸನು ಹಾದು ಹೋಗುತ್ತಿರುವಾಗ, ಪ್ರವಾದಿಯು ಅರಸನಿಗೆ ಕೂಗಿ ಹೇಳಿದ್ದೇನೆಂದರೆ, “ನಿನ್ನ ಸೇವಕನು ಯುದ್ಧಕ್ಕೆ ಹೋಗಿರುವಾಗ ಇಗೋ, ಒಬ್ಬ ಮನುಷ್ಯನು ಸೆರೆಯವನನ್ನು ನನ್ನ ಬಳಿಗೆ ಹಿಡಿದುಕೊಂಡು ಬಂದು, ‘ಈ ಮನುಷ್ಯನನ್ನು ಕಾಯಿ. ಇವನು ತಪ್ಪಿಸಿಕೊಂಡುಹೋದರೆ ನಿನ್ನ ಪ್ರಾಣವು ಇವನ ಪ್ರಾಣಕ್ಕೆ ಬದಲಾಗಿರುವುದು. ಇಲ್ಲವೆ ನೀನು ಮೂರು ಸಾವಿರ ಬೆಳ್ಳಿ ನಾಣ್ಯಗಳನ್ನು ಕೊಡಬೇಕು,’ ಎಂದನು.


ಆದರೆ ಪ್ರವಾದಿಗಳ ಮಂಡಲಿಯಲ್ಲಿ ಒಬ್ಬನು ಯೆಹೋವ ದೇವರ ಮಾತಿನಿಂದ ತನ್ನ ಜೊತೆಗಾರನಿಗೆ, “ನೀನು ನಿನ್ನ ಆಯುಧದಿಂದ ನನ್ನನ್ನು ಹೊಡೆ,” ಎಂದನು. ಆದರೆ ಆ ಜೊತೆಗಾರನನ್ನು ಹೊಡೆಯಲೊಲ್ಲದೆ ಇದ್ದನು.


ಆಗ ವೃದ್ಧನು, “ನಾನು ನಿನ್ನ ಹಾಗೆಯೇ ಪ್ರವಾದಿಯಾಗಿದ್ದೇನೆ. ಒಬ್ಬ ದೇವದೂತನ ಮುಖಾಂತರ ನನಗೆ ಯೆಹೋವ ದೇವರ ವಾಕ್ಯವು ಉಂಟಾಗಿ, ನಿನ್ನನ್ನು ಹಿಂದಕ್ಕೆ ಕರಕೊಂಡು ಬರಬೇಕೆಂದೂ ನಿನಗೆ ಅನ್ನಪಾನಗಳನ್ನು ಕೊಡಬೇಕೆಂದೂ ಆಜ್ಞೆಯಾಗಿದೆ ಎಂದು ಹೇಳಿದನು.” ಆದರೆ ವೃದ್ಧನು ಅವನಿಗೆ ಸುಳ್ಳು ಹೇಳಿದನು.


ಆರೋನನ ಮಗ ಎಲಿಯಾಜರನೂ ಮರಣಹೊಂದಿದನು. ಅವನನ್ನು ಅವನ ಮಗ ಫೀನೆಹಾಸನಿಗೆ ಎಫ್ರಾಯೀಮ್ ಬೆಟ್ಟದ ದೇಶದಲ್ಲಿ ಕೊಡಲಾದ ಗಿಬೆಯದಲ್ಲಿ ಸಮಾಧಿಮಾಡಿದರು.


ಅವರಿಗೆ ಸಂಸೋನನು, “ನಾನು ನಿಮಗೆ ಒಂದು ಒಗಟನ್ನು ಹೇಳುವೆನು; ನೀವು ಅದನ್ನು ಔತಣದ ಈ ಏಳು ದಿವಸಗಳಲ್ಲಿ ಗ್ರಹಿಸಿಕೊಂಡು ಹೇಳಿದರೆ, ನಾನು ನಿಮಗೆ ಮೂವತ್ತು ದುಪ್ಪಟಿಗಳನ್ನು, ಮೂವತ್ತು ಜೊತೆ ಬಟ್ಟೆಗಳನ್ನು ಕೊಡುವೆನು.


ನೀನು ಅವಳನ್ನು ಎದುರುಗೊಳ್ಳಲು ಓಡಿಹೋಗಿ, ಅವಳಿಗೆ, ‘ನಿನಗೂ, ನಿನ್ನ ಗಂಡನಿಗೂ ಮಗನಿಗೂ ಕ್ಷೇಮವೇ? ಎಂದು ಕೇಳು,’ ” ಎಂದನು. ಅವಳು, “ಕ್ಷೇಮ” ಎಂದಳು.


ಅದರಂತೆ ಗೇಹಜಿಯು ನಾಮಾನನ ಹಿಂದೆ ಹೋದನು. ನಾಮಾನನು ತನ್ನ ಹಿಂದೆ ಓಡಿ ಬರುವವನನ್ನು ಕಂಡಾಗ, ಅವನನ್ನು ಎದುರುಗೊಳ್ಳಲು ರಥದಿಂದ ಇಳಿದು ಅವನಿಗೆ, “ಎಲ್ಲಾ ಕ್ಷೇಮವೋ?” ಎಂದನು.


ಆಗ ಗೇಹಜಿಯು ಒಳಗೆ ಪ್ರವೇಶಿಸಿ, ತನ್ನ ಯಜಮಾನನ ಮುಂದೆ ನಿಂತನು. ಎಲೀಷನು ಅವನಿಗೆ, “ಗೇಹಜಿಯೇ, ಎಲ್ಲಿಗೆ ಹೋಗಿ ಬಂದೆ?” ಎಂದನು. ಅದಕ್ಕೆ ಗೇಹಜಿಯು, “ನಿನ್ನ ಸೇವಕನು ಎಲ್ಲಿಗೂ ಹೋಗಲಿಲ್ಲ,” ಎಂದನು.


ಆಗ ಯೆರಿಕೋವಿನಲ್ಲಿರುವ ಪ್ರವಾದಿಗಳ ಗುಂಪು ಎಲೀಷನ ಬಳಿಗೆ ಬಂದು ಅವನಿಗೆ, “ಯೆಹೋವ ದೇವರು ಇಂದು ನಿನ್ನ ಯಜಮಾನನನ್ನು ನಿನ್ನ ಬಳಿಯಿಂದ ತೆಗೆದುಕೊಳ್ಳುವನೆಂದು ತಿಳಿದಿದ್ದೀಯೋ?” ಎಂದರು. ಅದಕ್ಕವನು, “ನಾನು ಕೂಡಾ ಬಲ್ಲೆ, ಸುಮ್ಮನೆ ಇರಿ,” ಎಂದನು.


ಪ್ರವಾದಿಗಳ ಗುಂಪಿನಲ್ಲಿ ಐವತ್ತು ಮಂದಿ ಹೋಗಿ ದೂರದಲ್ಲಿ ಎದುರಾಗಿ ನಿಂತರು. ಆದರೆ ಆ ಇಬ್ಬರು ಯೊರ್ದನ್ ನದಿ ಬಳಿಯಲ್ಲಿ ನಿಂತರು.


ಯೆರಿಕೋವಿನ ಬಳಿಯಲ್ಲಿ ಎದುರಾಗಿದ್ದ ಪ್ರವಾದಿಗಳ ಗುಂಪು ಅವನನ್ನು ಕಂಡಾಗ, “ಎಲೀಯನ ಆತ್ಮವು ಎಲೀಷನ ಮೇಲೆ ನಿಂತಿರುವುದು,” ಎಂದು ಹೇಳಿ, ಎದುರುಗೊಳ್ಳಲು ಬಂದು, ಅವನ ಮುಂದೆ ನೆಲದವರೆಗೂ ಅಡ್ಡಬಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು