Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 6:12 - ಕನ್ನಡ ಸಮಕಾಲಿಕ ಅನುವಾದ

12 ಅವನ ಸೇವಕರಲ್ಲಿ ಒಬ್ಬನು, “ನನ್ನ ಒಡೆಯನೇ, ಅರಸನೇ, ಯಾವನೂ ಇಲ್ಲ. ಆದರೆ ಇಸ್ರಾಯೇಲಿನಲ್ಲಿರುವ ಪ್ರವಾದಿಯಾದ ಎಲೀಷನು ನಿನ್ನ ಮಲಗುವ ಕೋಣೆಯಲ್ಲಿ ನೀನು ಹೇಳುವ ಮಾತುಗಳನ್ನು ಸಹ ಇಸ್ರಾಯೇಲಿನ ಅರಸನಿಗೆ ಹೇಳುತ್ತಾನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆಗ ಅವರಲ್ಲೊಬ್ಬನು ಅವನಿಗೆ, “ನನ್ನ ಒಡೆಯನಾದ ಅರಸನೇ, ಹಾಗಲ್ಲ, ಇಸ್ರಾಯೇಲರಲ್ಲಿ ಎಲೀಷನೆಂಬ ಒಬ್ಬ ಪ್ರವಾದಿಯಿರುತ್ತಾನೆ. ನೀನು ನಿನ್ನ ಮಲಗುವ ಕೋಣೆಯಲ್ಲಿ ಆಡುವ ಮಾತುಗಳನ್ನು ಸಹ ಅವನು ಅರಿತುಕೊಂಡು ಎಲ್ಲವನ್ನೂ ಇಸ್ರಾಯೇಲರ ಅರಸನಿಗೆ ತಿಳಿಸುತ್ತಾನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆಗ ಅವರಲ್ಲೊಬ್ಬನು, “ನನ್ನ ಒಡೆಯರಾದ ಅರಸೇ, ಹಾಗಲ್ಲ; ಇಸ್ರಯೇಲರಲ್ಲಿ ಎಲೀಷನೆಂಬೊಬ್ಬ ಪ್ರವಾದಿಯಿದ್ದಾನೆ; ನೀವು ನಿಮ್ಮ ಮಲಗುವ ಕೋಣೆಯಲ್ಲಿ ಆಡುವ ಮಾತುಗಳನ್ನು ಸಹ ಅವನು ಅರಿತುಕೊಂಡು ಎಲ್ಲವನ್ನೂ ಇಸ್ರಯೇಲರ ಅರಸನಿಗೆ ತಿಳಿಸುತ್ತಾನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆಗ ಅವರಲ್ಲೊಬ್ಬನು ಅವನಿಗೆ - ನನ್ನ ಒಡೆಯನಾದ ಅರಸೇ, ಹಾಗಲ್ಲ; ಇಸ್ರಾಯೇಲ್ಯರಲ್ಲಿ ಎಲೀಷನೆಂಬೊಬ್ಬ ಪ್ರವಾದಿಯಿರುತ್ತಾನೆ; ನೀನು ನಿನ್ನ ಮಲಗುವ ಕೋಣೆಯಲ್ಲಿ ಆಡುವ ಮಾತುಗಳನ್ನು ಸಹ ಅವನು ಅರಿತುಕೊಂಡು ಎಲ್ಲವನ್ನೂ ಇಸ್ರಾಯೇಲ್ಯರ ಅರಸನಿಗೆ ತಿಳಿಸುತ್ತಾನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅರಾಮ್ಯರ ರಾಜನ ಅಧಿಕಾರಿಗಳಲ್ಲೊಬ್ಬನು, “ನನ್ನ ಒಡೆಯನೇ, ರಾಜನೇ, ನಮ್ಮಲ್ಲಿ ಯಾರೊಬ್ಬರೂ ಗೂಢಚಾರರಲ್ಲ. ಇಸ್ರೇಲಿನ ಪ್ರವಾದಿಯಾದ ಎಲೀಷನು ಅನೇಕ ರಹಸ್ಯ ಸಂಗತಿಗಳನ್ನು ಅಂದರೆ ನೀವು ನಿಮ್ಮ ಮಲಗುವ ಕೊಠಡಿಯಲ್ಲಿ ಮಾತನಾಡುವುದನ್ನೂ ಸಹ ಇಸ್ರೇಲಿನ ರಾಜನಿಗೆ ತಿಳಿಸಬಲ್ಲವನಾಗಿದ್ದಾನೆ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 6:12
19 ತಿಳಿವುಗಳ ಹೋಲಿಕೆ  

ನಿಶ್ಚಯವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ಯೋಜನೆಗಳನ್ನು ತಿಳಿಸದೆ, ಸಾರ್ವಭೌಮ ಯೆಹೋವ ದೇವರು ಏನನ್ನೂ ಮಾಡುವುದಿಲ್ಲ.


ಅರಸನು ದಾನಿಯೇಲನಿಗೆ ಉತ್ತರವಾಗಿ, “ನೀನು ಈ ರಹಸ್ಯವನ್ನು ಪ್ರಕಟಮಾಡಲು ಸಮರ್ಥನಾದ್ದರಿಂದ ನಿಶ್ಚಯವಾಗಿ ನಿಮ್ಮ ದೇವರು ದೇವರುಗಳಿಗೆ ದೇವರಾಗಿಯೂ, ಅರಸುಗಳ ಒಡೆಯರಾಗಿಯೂ, ರಹಸ್ಯಗಳನ್ನು ಪ್ರಕಟ ಮಾಡುವವರಾಗಿಯೂ ಇದ್ದಾರೆ,” ಎಂದನು.


ತಮ್ಮ ಆಲೋಚನೆಗಳನ್ನು ಯೆಹೋವ ದೇವರಿಗೆ ಮರೆಮಾಡುವುದಕ್ಕೆ ಅಗಾಧದಲ್ಲಿ ಹೋಗಿ, ನಮ್ಮನ್ನು ಯಾರು ನೋಡಿಯಾರು? ನಮ್ಮನ್ನು ಯಾರು ತಿಳಿದಾರು? ಎಂದುಕೊಂಡು, ಕತ್ತಲೆಯಲ್ಲೇ ತಮ್ಮ ಕೆಲಸವನ್ನು ನಡಿಸುವವರಿಗೆ ಕಷ್ಟ!


ನಿನ್ನ ಆಲೋಚನೆಯಲ್ಲಿಯೂ ಅರಸನನ್ನು ನಿಂದಿಸಬೇಡ. ನೀನು ಮಲಗುವ ಕೋಣೆಯಲ್ಲಿ ಐಶ್ವರ್ಯವಂತರನ್ನು ಶಪಿಸಬೇಡ. ಏಕೆಂದರೆ ಆಕಾಶದ ಪಕ್ಷಿಗಳು ನಿನ್ನ ಮಾತನ್ನು ತೆಗೆದುಕೊಂಡು ಹೋಗಬಹುದು. ಹಾರುವ ಪಕ್ಷಿ ನಿನ್ನ ಸುದ್ದಿಯನ್ನು ತಿಳಿಸಬಹುದು.


ಅವಳು ತನ್ನ ಯಜಮಾನನಿಗೆ, “ನನ್ನ ಧಣಿಯು ಸಮಾರ್ಯದಲ್ಲಿರುವ ಪ್ರವಾದಿಯ ಬಳಿಯಲ್ಲಿರುತ್ತಿದ್ದರೆ, ಅವನು ಧಣಿಯ ಕುಷ್ಠರೋಗವನ್ನು ವಾಸಿಮಾಡುತ್ತಿದ್ದನು,” ಎಂದಳು.


ಇಸ್ರಾಯೇಲಿನ ಅರಸನು ತನ್ನ ವಸ್ತ್ರಗಳನ್ನು ಹರಿದುಕೊಂಡನೆಂದು ದೇವರ ಮನುಷ್ಯನಾದ ಎಲೀಷನು ಕೇಳಿದಾಗ, “ನೀನು ನಿನ್ನ ವಸ್ತ್ರಗಳನ್ನು ಹರಿದುಕೊಂಡದ್ದೇನು? ಇಸ್ರಾಯೇಲಿನಲ್ಲಿ ಪ್ರವಾದಿ ಇದ್ದಾನೆಂದು ನಾಮಾನನು ತಿಳಿದುಕೊಳ್ಳುವಂತೆ ಅವನು ನನ್ನ ಬಳಿಗೆ ಬರಲಿ,” ಎಂದು ಅರಸನಿಗೆ ಹೇಳಿ ಕಳುಹಿಸಿದನು.


ನೈಲ್ ನದಿಯಲ್ಲಿ ಕಪ್ಪೆಗಳು ತುಂಬಿಹೋಗುವುವು. ಅವು ನಿನ್ನ ಅರಮನೆಯಲ್ಲಿಯೂ ನೀನು ಮಲಗುವ ಕೊಠಡಿಯಲ್ಲಿಯೂ ನಿನ್ನ ಹಾಸಿಗೆಯ ಮೇಲೂ ನಿನ್ನ ಸೇವಕರ ಮನೆಗಳಲ್ಲಿಯೂ ನಿನ್ನ ಜನರ ಮೇಲೆಯೂ ನಿನ್ನ ಒಲೆಗಳಲ್ಲಿಯೂ ನಿನ್ನ ಹಿಟ್ಟು ನಾದುವ ಹರಿವಾಣಗಳಲ್ಲಿಯೂ ಕಾಣಿಸಿಕೊಳ್ಳುವುವು.


ಆದ್ದರಿಂದ ಅರಾಮ್ಯರ ಅರಸನ ಹೃದಯವು ಇದರ ನಿಮಿತ್ತ ಕಳವಳಗೊಂಡು, ಅವನು ತನ್ನ ಸೇವಕರನ್ನು ಕರೆದು ಅವರಿಗೆ, “ನಮ್ಮಲ್ಲಿ ಇಸ್ರಾಯೇಲಿನ ಅರಸನ ಕಡೆಯವನು ಯಾರು? ನೀವು ನನಗೆ ತಿಳಿಸುವುದಿಲ್ಲವೋ?” ಎಂದನು.


ಆಗ ಅರಾಮ್ಯರ ಅರಸನು, “ನಾನು ಅವನನ್ನು ಹಿಡಿಯುವ ಹಾಗೆ ನೀವು ಹೋಗಿ ಅವನು ಎಲ್ಲಿದ್ದಾನೋ ನೋಡಿರಿ,” ಎಂದನು. ಅವನು ದೋತಾನಿನಲ್ಲಿದ್ದಾನೆಂದು ಅವನಿಗೆ ತಿಳಿಸಿದರು.


ಆದರೆ ಎಲೀಷನು ಅವನಿಗೆ, “ಆ ಮನುಷ್ಯನು ನಿನ್ನನ್ನು ಎದುರುಗೊಳ್ಳಲು ತನ್ನ ರಥದಿಂದ ಇಳಿದು ನಿನ್ನ ಬಳಿಗೆ ಬಂದಾಗ, ನನ್ನ ಹೃದಯವು ನಿನ್ನ ಸಂಗಡ ಹೋಗಲಿಲ್ಲವೋ? ಹಣವನ್ನೂ, ವಸ್ತ್ರಗಳನ್ನೂ, ದ್ರವ್ಯವನ್ನೂ, ಹಿಪ್ಪೆಯ ತೋಪುಗಳನ್ನೂ, ದ್ರಾಕ್ಷಿಯ ತೋಟಗಳನ್ನೂ, ಕುರಿದನಗಳನ್ನೂ, ದಾಸದಾಸಿಯರನ್ನೂ ಪಡೆದುಕೊಳ್ಳುವುದಕ್ಕೆ ಇದು ಸಮಯವೋ?


ಯೆಹೋವ ದೇವರಿಗೆ ವಿರೋಧವಾಗಿ ಯಾವ ಜ್ಞಾನವೂ, ವಿವೇಕವೂ, ಯೋಜನೆಯೂ ಇಲ್ಲ.


ಆಲೋಚನೆ ಮಾಡಿಕೊಳ್ಳಿರಿ, ಅದು ಮುರಿದು ಹೋಗುವುದು, ನಿಮ್ಮ ಯೋಜನೆಯನ್ನು ಪ್ರಸ್ತಾಪಿಸಿರಿ, ಆದರೆ ಅದು ನಿಲ್ಲುವುದಿಲ್ಲ, ಏಕೆಂದರೆ ದೇವರು ನಮ್ಮ ಸಂಗಡ ಇದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು