Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 6:18 - ಕನ್ನಡ ಸಮಕಾಲಿಕ ಅನುವಾದ

18 ಶತ್ರುಗಳು ಸಮೀಪಕ್ಕೆ ಬಂದಾಗ ಎಲೀಷನು, “ಯೆಹೋವ ದೇವರೇ, ನೀವು ದಯಮಾಡಿ ಈ ಜನರನ್ನು ಕುರುಡರನ್ನಾಗಿ ಮಾಡಿರಿ,” ಎಂದು ಪ್ರಾರ್ಥಿಸಿದನು. ಎಲೀಷನ ಮಾತಿನ ಹಾಗೆಯೇ ದೇವರು ಅವರನ್ನು ಕುರುಡರನ್ನಾಗಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಶತ್ರುಗಳಾದ ಅರಾಮ್ಯರು ಸಮೀಪಕ್ಕೆ ಬಂದಾಗ ಎಲೀಷನು, “ಸ್ವಾಮಿ, ಈ ಜನರನ್ನು ಕುರುಡರನ್ನಾಗಿ ಮಾಡು” ಎಂದು ಯೆಹೋವನನ್ನು ಪ್ರಾರ್ಥಿಸಿದನು. ಯೆಹೋವನು ಅವನ ಮೊರೆಯನ್ನು ಲಾಲಿಸಿ ಅವರನ್ನು ಕುರುಡರನ್ನಾಗಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಶತ್ರುಗಳು ಸಮೀಪಕ್ಕೆ ಬಂದಾಗ ಎಲೀಷನು, “ಸ್ವಾಮೀ, ಈ ಜನರನ್ನು ಕುರುಡರನ್ನಾಗಿ ಮಾಡಿ,” ಎಂದು ಸರ್ವೇಶ್ವರನನ್ನು ಪ್ರಾರ್ಥಿಸಿದನು. ಅವರು ಅವನ ಮೊರೆಯನ್ನು ಆಲಿಸಿ ಆ ಜನರನ್ನು ಕುರುಡರನ್ನಾಗಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಶತ್ರುಗಳು ಸಮೀಪಕ್ಕೆ ಬಂದಾಗ ಎಲೀಷನು - ಸ್ವಾಮೀ, ಈ ಜನರನ್ನು ಕುರುಡರನ್ನಾಗಿಮಾಡು ಎಂದು ಯೆಹೋವನನ್ನು ಪ್ರಾರ್ಥಿಸಿದನು. ಆತನು ಅವನ ಮೊರೆಯನ್ನು ಲಾಲಿಸಿ ಅವರನ್ನು ಕುರುಡರನ್ನಾಗಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆ ಬೆಂಕಿಯಂತಿರುವ ಕುದುರೆಗಳು ಮತ್ತು ರಥಗಳು ಎಲೀಷನ ಬಳಿಗೆ ಇಳಿದುಬಂದವು. ಎಲೀಷನು ಯೆಹೋವನನ್ನು ಪ್ರಾರ್ಥಿಸಿ, “ಈ ಜನರನ್ನು ಕುರುಡರನ್ನಾಗಿ ಮಾಡಬೇಕೆಂದು ನಾನು ನಿನ್ನಲ್ಲಿ ಪ್ರಾರ್ಥಿಸುತ್ತೇನೆ” ಎಂದು ಹೇಳಿದನು. ಆಗ ಯೆಹೋವನು ಎಲೀಷನ ಪ್ರಾರ್ಥನೆಯಂತೆ ಅರಾಮ್ಯರ ಸೇನೆಯು ಕುರುಡರಾಗುವಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 6:18
10 ತಿಳಿವುಗಳ ಹೋಲಿಕೆ  

ಇಗೋ ಕರ್ತದೇವರ ಹಸ್ತ ನಿನಗೆ ವಿರೋಧವಾಗಿದೆ. ಈಗ ನೀನು ಕುರುಡನಾಗಿ, ಸ್ವಲ್ಪ ಕಾಲ ಸೂರ್ಯನ ಬೆಳಕನ್ನು ಕಾಣದೇ ಹೋಗುವೆ,” ಎಂದನು. ತಕ್ಷಣವೇ ಅವನ ಮೇಲೆ ಮಂಜು ಮುಸುಕಿ ಕತ್ತಲೆ ಆವರಿಸಿತು. ಅವನು ತಡವರಿಸುತ್ತಾ ತನ್ನನ್ನು ಯಾರಾದರೂ ಕೈಹಿಡಿದು ನಡೆಸುವರೋ ಎಂದು ಹುಡುಕಾಡಿದನು.


“ಅವರು ಕಣ್ಣಿನಿಂದ ಕಾಣದೆ, ಹೃದಯದಿಂದ ಗ್ರಹಿಸದೆ ಮತ್ತು ತಿರುಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೊಂದದೆ ಇರುವಂತೆ ದೇವರು ಅವರ ಕಣ್ಣುಗಳನ್ನು ಕುರುಡುಮಾಡಿ ಅವರ ಹೃದಯವನ್ನು ಕಠಿಣ ಮಾಡಿದರು.”


ಬಾಗಿಲಲ್ಲಿದ್ದವರನ್ನು ಕಿರಿಯರಿಂದ ಹಿರಿಯರವರೆಗೆ ಕುರುಡಾಗುವಂತೆ ಮಾಡಿದರು. ಆಗ ಆ ಊರಿನವರು ಬಾಗಿಲನ್ನು ಕಂಡುಕೊಳ್ಳದೆ ಬೇಸರಗೊಂಡರು.


ಯೇಸು, “ಕುರುಡರು ನೋಡುವಂತೆಯೂ ನೋಡುವವರು ಕುರುಡರಾಗುವಂತೆಯೂ ನಾನು ನ್ಯಾಯತೀರ್ಪು ಮಾಡುವುದಕ್ಕಾಗಿ ಈ ಲೋಕಕ್ಕೆ ಬಂದಿದ್ದೇನೆ,” ಎಂದರು.


ಹಾಗಾದರೆ ಏನು? ಇಸ್ರಾಯೇಲ್ ಹುಡುಕಿದ್ದನ್ನು ಹೊಂದಲಿಲ್ಲ. ಆದರೆ ಅವರಲ್ಲಿ ಆಯ್ಕೆಯಾದವರು ಹೊಂದಿದರು, ಮಿಕ್ಕವರು ಕಠಿಣ ಹೃದಯಿಗಳಾದರು.


ಆ ದಿನದಲ್ಲಿ, ನಾನು ಅವರ ಕುದುರೆಗಳಿಗೆಲ್ಲಾ ತಬ್ಬಿಬ್ಬನ್ನು ಉಂಟುಮಾಡುವೆನು, ಅದರ ರಾಹುತರನ್ನು ಭ್ರಮೆಗೊಳಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. ಯೆಹೂದ ವಂಶವನ್ನು ಕಟಾಕ್ಷಿಸಿ ಜನಾಂಗಗಳ ಕುದುರೆಗಳನ್ನೆಲ್ಲಾ ಕುರುಡು ಮಾಡುವೆನು.


ಕುತಂತ್ರರು ಹಗಲಿನಲ್ಲಿಯೇ ಕತ್ತಲೆಯನ್ನು ಸಂಧಿಸುತ್ತಾರೆ; ಮಧ್ಯಾಹ್ನದಲ್ಲಿ ರಾತ್ರಿಯಂತೆ ತಡಕಾಡುತ್ತಾರೆ.


ಯೆಹೋವ ದೇವರು ನಿಮ್ಮನ್ನು ಹುಚ್ಚುತನದಿಂದಲೂ ಕುರುಡುತನದಿಂದಲೂ ಹೃದಯದ ವಿಸ್ಮಯದಿಂದಲೂ ಕಾಡುವರು.


ಆಗ ಎಲೀಷನು ಅವರಿಗೆ, “ಇದು ಆ ಮಾರ್ಗವಲ್ಲ, ಇದು ಆ ಪಟ್ಟಣವಲ್ಲ, ನನ್ನ ಹಿಂದೆ ಬನ್ನಿರಿ. ನೀವು ಹುಡುಕುವ ಮನುಷ್ಯರ ಬಳಿಗೆ ನಿಮ್ಮನ್ನು ಬರಮಾಡುವೆನು,” ಎಂದು ಹೇಳಿ ಅವರನ್ನು ಸಮಾರ್ಯಕ್ಕೆ ನಡೆಸಿದನು.


ಆದರೆ ನಾನು ಯೆಹೂದದ ಮನೆತನದವರನ್ನು ಪ್ರೀತಿಸಿ ಅವರನ್ನು ಬಿಲ್ಲುಬಾಣ, ಖಡ್ಗ, ಕಾಳಗ, ಕುದುರೆ ರಾಹುತರು ಇವುಗಳಿಂದಲ್ಲ, ಅವರನ್ನು ಅವರ ದೇವರಾದ ನಾನೇ ಯೆಹೋವ ದೇವರೇ ರಕ್ಷಿಸುವೆನು,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು