Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 6:19 - ಕನ್ನಡ ಸಮಕಾಲಿಕ ಅನುವಾದ

19 ಆಗ ಎಲೀಷನು ಅವರಿಗೆ, “ಇದು ಆ ಮಾರ್ಗವಲ್ಲ, ಇದು ಆ ಪಟ್ಟಣವಲ್ಲ, ನನ್ನ ಹಿಂದೆ ಬನ್ನಿರಿ. ನೀವು ಹುಡುಕುವ ಮನುಷ್ಯರ ಬಳಿಗೆ ನಿಮ್ಮನ್ನು ಬರಮಾಡುವೆನು,” ಎಂದು ಹೇಳಿ ಅವರನ್ನು ಸಮಾರ್ಯಕ್ಕೆ ನಡೆಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆಗ ಎಲೀಷನು ಅವರಿಗೆ, “ನೀವು ಹೋಗಬೇಕೆಂದಿದ್ದ ಪಟ್ಟಣವೂ, ದಾರಿಯೂ ಇದಲ್ಲ, ನನ್ನ ಜೊತೆಯಲ್ಲಿ ಬನ್ನಿರಿ, ನೀವು ಹುಡುಕುತ್ತಿರುವ ಮನುಷ್ಯನ ಬಳಿಗೆ ನಿಮ್ಮನ್ನು ಕರೆದುಕೊಂಡು ಹೋಗುತ್ತೇನೆ” ಎಂದು ಹೇಳಿ ಅವರನ್ನು ಸಮಾರ್ಯಕ್ಕೆ ಕರೆದುಕೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಆಗ ಎಲೀಷನು, “ನೀವು ಹೋಗಬೇಕೆಂದಿದ್ದ ಪಟ್ಟಣವೂ ದಾರಿಯೂ ಇದಲ್ಲ; ನನ್ನ ಜೊತೆಯಲ್ಲೇ ಬನ್ನಿ, ನೀವು ಹುಡುಕುತ್ತಿರುವ ವ್ಯಕ್ತಿಯ ಬಳಿಗೆ ನಿಮ್ಮನ್ನು ಕರೆದುಕೊಂಡು ಹೋಗುತ್ತೇನೆ,” ಎಂದು ಹೇಳಿ ಅವರನ್ನು ಸಮಾರಿಯಕ್ಕೆ ಕರೆದುಕೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆಗ ಎಲೀಷನು ಅವರಿಗೆ - ನೀವು ಹೋಗಬೇಕೆಂದಿದ್ದ ಪಟ್ಟಣವೂ ದಾರಿಯೂ ಇದಲ್ಲ; ನನ್ನ ಜೊತೆಯಲ್ಲಿ ಬನ್ನಿರಿ, ನೀವು ಹುಡುಕುತ್ತಿರುವ ಮನುಷ್ಯನ ಬಳಿಗೆ ನಿಮ್ಮನ್ನು ಕರಕೊಂಡು ಹೋಗುತ್ತೇನೆ ಎಂದು ಹೇಳಿ ಅವರನ್ನು ಸಮಾರ್ಯಕ್ಕೆ ಕರಕೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಎಲೀಷನು ಅರಾಮ್ಯರ ಸೇನೆಗೆ, “ಇದು ಸರಿಯಾದ ಮಾರ್ಗವಲ್ಲ, ಇದು ಸರಿಯಾದ ನಗರವೂ ಅಲ್ಲ. ನನ್ನನ್ನು ಹಿಂಬಾಲಿಸಿ. ನೀವು ಹುಡುಕುತ್ತಿರುವ ಮನುಷ್ಯನ ಬಳಿಗೆ ನಾನು ನಿಮ್ಮನ್ನು ಕರೆದೊಯ್ಯುತ್ತೇನೆ” ಎಂದು ಹೇಳಿದನು. ನಂತರ ಎಲೀಷನು ಅರಾಮ್ಯರ ಸೇನೆಯನ್ನು ಸಮಾರ್ಯಕ್ಕೆ ನಡೆಸಿಕೊಂಡು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 6:19
7 ತಿಳಿವುಗಳ ಹೋಲಿಕೆ  

ಆದರೆ ಅವರಿಗೆ ತಿಳಿಯದ ಹಾಗೆ ಕಣ್ಣಿಗೆ ಮರೆಯಾಗಿದ್ದರಿಂದ ಅವರು ಯೇಸುವಿನ ಗುರುತು ಹಿಡಿಯಲಿಲ್ಲ.


ಯೇಸು ಅವರೆಲ್ಲರಿಗೆ: “ಯಾರಾದರೂ ನನ್ನ ಶಿಷ್ಯರಾಗುವುದಕ್ಕೆ ಬಯಸಿದರೆ, ಅವರು ತಮ್ಮನ್ನು ನಿರಾಕರಿಸಿ ತಮ್ಮ ಶಿಲುಬೆಯನ್ನು ಪ್ರತಿದಿನ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.


ಯೇಸು ಜನರನ್ನೂ ಶಿಷ್ಯರನ್ನೂ ತಮ್ಮ ಬಳಿಗೆ ಕರೆದು ಅವರಿಗೆ, “ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ, ಅವರು ತಮ್ಮನ್ನು ನಿರಾಕರಿಸಿ ತಮ್ಮ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.


ತರುವಾಯ ಯೇಸು ತಮ್ಮ ಶಿಷ್ಯರಿಗೆ, “ಯಾರಾದರೂ ನನ್ನ ಶಿಷ್ಯರಾಗುವುದಕ್ಕೆ ಬಯಸಿದರೆ, ಅವರು ತಮ್ಮನ್ನು ತಾವೇ ನಿರಾಕರಿಸಿ ತಮ್ಮ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.


ಶತ್ರುಗಳು ಸಮೀಪಕ್ಕೆ ಬಂದಾಗ ಎಲೀಷನು, “ಯೆಹೋವ ದೇವರೇ, ನೀವು ದಯಮಾಡಿ ಈ ಜನರನ್ನು ಕುರುಡರನ್ನಾಗಿ ಮಾಡಿರಿ,” ಎಂದು ಪ್ರಾರ್ಥಿಸಿದನು. ಎಲೀಷನ ಮಾತಿನ ಹಾಗೆಯೇ ದೇವರು ಅವರನ್ನು ಕುರುಡರನ್ನಾಗಿ ಮಾಡಿದರು.


ಅವರು ಸಮಾರ್ಯಕ್ಕೆ ಬಂದಾಗ, ಎಲೀಷನು, “ಯೆಹೋವ ದೇವರೇ, ಇವರು ಕಾಣುವಂತೆ ಇವರ ಕಣ್ಣುಗಳನ್ನು ತೆರೆಯಿರಿ,” ಎಂದನು. ಆಗ ಯೆಹೋವ ದೇವರು ಅವರ ಕಣ್ಣುಗಳನ್ನು ತೆರೆದರು. ಅವರು ನೋಡಿದಾಗ ಸಮಾರ್ಯದ ಮಧ್ಯದಲ್ಲಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು